Homeಮುಖಪುಟಕೊರೊನಾ ಲಾಕ್‌ಡೌನ್: 6 ರಾಜ್ಯಗಳ 67 ಲಕ್ಷ ವಲಸೆ ಕಾರ್ಮಿಕರು ತವರಿಗೆ ಮರಳಿದ್ದಾರೆ

ಕೊರೊನಾ ಲಾಕ್‌ಡೌನ್: 6 ರಾಜ್ಯಗಳ 67 ಲಕ್ಷ ವಲಸೆ ಕಾರ್ಮಿಕರು ತವರಿಗೆ ಮರಳಿದ್ದಾರೆ

- Advertisement -
- Advertisement -

ಮಾರ್ಚ್‌ನಲ್ಲಿ ಕೊರೊನಾ ಲಾಕ್‌ಡೌನ್ ವಿಧಿಸಿದಾಗಿನಿಂದ ವಲಸೆ ಕಾರ್ಮಿಕರ ಕುರಿತು ಕೇಂದ್ರ ಕೌಶಲ್ಯ ಅಭಿವೃದ್ಧಿ ಸಚಿವಾಲಯ ಸಂಗ್ರಹಿಸಿದ ಪ್ರಾಥಮಿಕ ಮಾಹಿತಿಯಂತೆ, ದೇಶದ ನಗರ ಕೇಂದ್ರಗಳಿಂದ ಆರು ರಾಜ್ಯಗಳ 116 ಜಿಲ್ಲೆಗಳಿಗೆ 67 ಲಕ್ಷ ವಲಸಿಗರು ವಾಪಾಸು ತಮ್ಮ ಮನೆಗಳಿಗೆ ಮರಳಿದ್ದಾರೆ.

ಈ ಪೈಕಿ ಸುಮಾರು 44 ಲಕ್ಷ ಅಥವಾ ಸುಮಾರು ಮೂರನೇ ಎರಡರಷ್ಟು ಜನರು 53 ಜಿಲ್ಲೆಗಳಿಗೆ ಮರಳಿದ್ದಾರೆ.

ಅತೀ ಹೆಚ್ಚು 23.6 ಲಕ್ಷ ವಲಸೆ ಕಾರ್ಮಿಕರು ಬಿಹಾರದ 32 ಜಿಲ್ಲೆಗಳಿಗೆ ಮರಳಿದ್ದು ಅದು ಅಗ್ರಸ್ಥಾನದಲ್ಲಿದ್ದರೆ, ಉತ್ತರ ಪ್ರದೇಶ 17.48 ಲಕ್ಷ ವಲಸೆ ಕಾರ್ಮಿಕರು 31 ಜಿಲ್ಲೆಗಳಿಗೆ ಹಿಂತಿರುಗಿದ್ದಾರೆ, ಇದು ಎರಡನೆ ಸ್ಥಾನದಲ್ಲಿದೆ.

ಈ ದತ್ತಾಂಶದಲ್ಲಿ ಪಶ್ಚಿಮ ಬಂಗಾಳ ಮತ್ತು ಚತ್ತಿಸ್ ಗಡ ಒಳಗೊಂಡಿಲ್ಲವಾದ್ದರಿಂದ, ಅಂತಿಮ ವರದಿಯ ಸಂಖ್ಯೆಗಳು ಇನ್ನೂ ಹೆಚ್ಚಾಗುವ ಸಾದ್ಯತೆಗಳಿವೆ. ಅಲ್ಲದೆ ಮುಂದಿನ 15 ದಿನಗಳಲ್ಲಿ ವಲಸಿಗರನ್ನು ತಮ್ಮ ರಾಜ್ಯಗಳಿಗೆ ಮರಳಲು ಅನುಕೂಲ ಮಾಡಿಕೊಡುವಂತೆ ಕೇಂದ್ರ ಮತ್ತು ರಾಜ್ಯಗಳಿಗೆ ಸುಪ್ರೀಂ ಕೋರ್ಟ್ ನಿರ್ದೇಶನ ನೀಡಿದೆ.

 

53 ಜಿಲ್ಲೆಗಳಿಗೆ ತಲಾ ಒಂದು ಲಕ್ಷಕ್ಕೂ ಹೆಚ್ಚು ವಲಸೆ ಕಾರ್ಮಿಕರು ಹಿಂತಿರುಗಿರುವುದು ದಾಖಲಾಗಿದೆ. 38 ಜಿಲ್ಲೆಗಳಲ್ಲಿ 50 ಸಾವಿರದಿಂದ 1 ಒಂದು ಲಕ್ಷದವರೆಗೆ ವಲಸಿಗರು ಹಿಂದಿರುಗಿದ್ದಯ ವರದಿಯಾಗಿದೆ.

ಅತೀ ಹೆಚ್ಚು ವಲಸಿಗರು ಹಿಂತಿರುಗಿದ 15 ಜಿಲ್ಲೆಗಳಲ್ಲಿ ಉತ್ತರ ಪ್ರದೇಶದ ಸಿದ್ದಾರ್ಥನಗರ ಜಿಲ್ಲೆ ಮೊದಲನೆ ಸ್ಥಾನದಲ್ಲಿದೆ. ಇಲ್ಲಿ 1.6 ಲಕ್ಷ ವಲಸೆ ಕಾರ್ಮಿಕರು ಹಿಂತಿರುಗಿದ್ದಾರೆ.

ಉಳಿದ ಜಿಲ್ಲೆಗಳೆಂದರೆ ಬಿಹಾರ್ ರಾಜ್ಯದ ಪೂರ್ವ ಚಂಪಾರನ್ (1.5 ಲಕ್ಷ), ಕತಿಹಾರ್ (1.4 ಲಕ್ಷ), ಮಧುಬಾನಿ (1.25 ಲಕ್ಷ), ಗಯಾ (1.2 ಲಕ್ಷ), ಪಶ್ಚಿಮ ಚಂಪಾರನ್ (1.2 ಲಕ್ಷ), ದರ್ಭಂಗಾ (1.03 ಲಕ್ಷ), ಅರಿಯಾ (1.01 ಲಕ್ಷ) ಮತ್ತು ಮುಜಾಫರ್ಪುರ ( 1.01 ಲಕ್ಷ).

ರಾಜಸ್ಥಾನ್ ರಾಜ್ಯದ ಪಾಲಿ (1.4 ಲಕ್ಷ), ಉದಯಪುರ (1.3 ಲಕ್ಷ) ಮತ್ತು ಜಲೋರ್ (1.1 ಲಕ್ಷ). ಒಡಿಸ್ಸಾದ ಗಂಜಾಂ (1.25 ಲಕ್ಷ); ಉತ್ತರ ಪ್ರದೇಶದ ಪ್ರಯಾಗರಾಜ್ (1.05 ಲಕ್ಷ); ಮತ್ತು ಮಧ್ಯ ಪ್ರದೇಶದ ಬಾಲಘಾಟ್ (1.03 ಲಕ್ಷ).


ಓದಿ: ಎಲ್ಲಾ ವಲಸೆ ಕಾರ್ಮಿಕರು ತಮ್ಮೂರು ತಲುಪಿದ್ದಾರೆಯೇ? ಎಷ್ಟು ಜನ ಉಳಿದುಕೊಂಡಿದ್ದಾರೆ? ಇಲ್ಲಿದೆ ಮಾಹಿತಿ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ವಲಸೆ ಕಾರ್ಮಿಕರು ಕಾಲ್ನಡಿಗೆಯಲ್ಲಿ ಹಿಂದಿರುಗುವಾಗ ಆಯಾಸ ಮತ್ತು ಹಸಿವೆಯಿಂದ ಮೃತರಾದವರ ಸಂಖ್ಯಾಮಾಹಿತಿ ಇದ್ದರೆ ತಿಳಿಸಿ.?

LEAVE A REPLY

Please enter your comment!
Please enter your name here

- Advertisment -

ಸ್ವಕ್ಷೇತ್ರ ತಿರುವನಂತಪುರದಲ್ಲಿ ಬಿಜೆಪಿ ಭರ್ಜರಿ ಗೆಲುವು : ‘ಪ್ರಜಾಪ್ರಭುತ್ವದ ಸೌಂದರ್ಯ’ ಎಂದ ಕಾಂಗ್ರೆಸ್ ಸಂಸದ ಶಶಿ ತರೂರ್

ಕೇರಳದ ಸ್ಥಳೀಯ ಸಂಸ್ಥೆ ಚುನಾವಣೆಯ ಫಲಿತಾಂಶ ಇಂದು (ಡಿ.13) ಪ್ರಕಟಗೊಂಡಿದ್ದು, ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಭರ್ಜರಿ ಗೆಲುವು ದಾಖಲಿಸಿದೆ. ಈ ಮೂಲಕ 45 ವರ್ಷಗಳ ಸಿಪಿಐ(ಎಂ) ನೇತೃತ್ವದ ಎಲ್‌ಡಿಎಫ್‌...

ಕೇರಳ ಸ್ಥಳೀಯ ಸಂಸ್ಥೆ ಚುನಾವಣೆ : ಯುಡಿಎಫ್‌ ಸ್ಪಷ್ಟ ಮೇಲುಗೈ

ಇಂದು (2025 ಡಿಸೆಂಬರ್ 13, ಶನಿವಾರ) ಪ್ರಕಟಗೊಂಡ ಕೇರಳದ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶದಲ್ಲಿ ವಿರೋಧ ಪಕ್ಷಗಳ ಒಕ್ಕೂಟವಾದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) ಸ್ಪಷ್ಟ ಮೇಲುಗೈ ಸಾಧಿಸಿದೆ. ಈ ಮೂಲಕ ರಾಜ್ಯ...

ಕೋಲ್ಕತ್ತಾ ಮೆಸ್ಸಿ ಕಾರ್ಯಕ್ರಮದಲ್ಲಿ ಗಲಾಟೆ | ಕ್ಷಮೆ ಯಾಚಿಸಿದ ಸಿಎಂ ಮಮತಾ ಬ್ಯಾನರ್ಜಿ, ತನಿಖೆಗೆ ಸಮಿತಿ ರಚನೆ; ಆಯೋಜಕನ ಬಂಧನ

ಫುಟ್ಬಾಲ್ ತಾರೆ ಲಿಯೋನೆಲ್ ಮೆಸ್ಸಿ ಭೇಟಿಯ ವೇಳೆ ಶನಿವಾರ (ಡಿಸೆಂಬರ್ 13) ಕೋಲ್ಕತ್ತಾದ ಸಾಲ್ಟ್ ಲೇಕ್ ಕ್ರೀಡಾಂಗಣದಲ್ಲಿ ಉಂಟಾದ ಗಲಾಟೆಗೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕ್ಷಮೆಯಾಚಿಸಿದ್ದು, ನಿವೃತ್ತ ನ್ಯಾಯಮೂರ್ತಿ...

ಮೆಸ್ಸಿ ನೋಡಲು 25 ಸಾವಿರ ರೂ. ಪಾವತಿಸಿದವರಿಗೆ ನಿರಾಶೆ; ಕೋಪಗೊಂಡ ಅಭಿಮಾನಿಗಳಿಂದ ಕ್ರೀಡಾಂಗಣದಲ್ಲಿ ದಾಂಧಲೆ

ಶನಿವಾರ ನಡೆದ ಲಿಯೋನೆಲ್ ಮೆಸ್ಸಿ ಅವರ ಬಹು ನಿರೀಕ್ಷಿತ "ಗೋಟ್ ಇಂಡಿಯಾ ಟೂರ್" ಕೋಲ್ಕತ್ತಾದಲ್ಲಿ ಅಸ್ತವ್ಯಸ್ತವಾಯಿತು. ಯುವ ಭಾರತಿ ಕ್ರಿರಂಗನ್‌ನಲ್ಲಿ ರೊಚ್ಚಿಗೆದ್ದ ಅಭಿಮಾನಿಗಳ ದಾಂಧಲೆಯಿಂದ ಕ್ರೀಡಾಂಗಣ ಅವ್ಯವಸ್ಥೆಗೆ ಒಳಗಾಯಿತು. ಸಾವಿರಾರು ಅಭಿಮಾನಿಗಳು ಅರ್ಜೆಂಟೀನಾದ...

ಡ್ರಗ್‌ ಪೆಡ್ಲರ್‌ಗಳ ಮನೆ ಒಡೆದು ಹಾಕುವ ಹೇಳಿಕೆ : ಪರಮೇಶ್ವರ್ ಮಾತಿಗೆ ಆತಂಕ ವ್ಯಕ್ತಪಡಿಸಿದ ಕಾಂಗ್ರೆಸ್ ಹಿರಿಯ ನಾಯಕ ಚಿದಂಬರಂ

"ಡ್ರಗ್‌ ಪೆಡ್ಲರ್‌ಗಳ ಬಾಡಿಗೆ ಮನೆಗಳನ್ನು ಒಡೆದು ಹಾಕುವ ಹಂತಕ್ಕೆ ಹೋಗಿದ್ದೇವೆ" ಎಂಬ ಗೃಹ ಸಚಿವ ಜಿ.ಪರಮೇಶ್ವರ್ ಹೇಳಿಕೆಗೆ ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಆತಂಕ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ...

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆ: ಶಶಿ ತರೂರ್ ಕ್ಷೇತ್ರ ತಿರುವನಂತಪುರಂನಲ್ಲಿ ಬಿಜೆಪಿ ಮುನ್ನಡೆ

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ, ವಿಶೇಷವಾಗಿ ತಿರುವನಂತಪುರಂನಲ್ಲಿ ಭಾರತೀಯ ಜನತಾ ಪಕ್ಷದ ಸಾಧನೆಯನ್ನು ಹಿರಿಯ ಕಾಂಗ್ರೆಸ್ ನಾಯಕ ಶಶಿ ತರೂರ್ ಶನಿವಾರ ಅಭಿನಂದಿಸಿದ್ದಾರೆ. ಜನರ ತೀರ್ಪನ್ನು ಗೌರವಿಸಬೇಕು ಎಂದು ಹೇಳಿದ್ದಾರೆ. ಎಕ್ಸ್‌ನಲ್ಲಿ ದೀರ್ಘ...

ಆಳಂದ ಮತಗಳ್ಳತನ | ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್ ಸೇರಿ 7 ಮಂದಿ ವಿರುದ್ಧ ಎಸ್‌ಐಟಿ ಚಾರ್ಜ್‌ಶೀಟ್‌

ಕಲಬುರಗಿಯ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಮತಗಳ್ಳತನ (ಚುನಾವಣಾ ಆಕ್ರಮ) ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದು, ಆಳಂದದ ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್...

ಉತ್ತರ ಪ್ರದೇಶ| ಗಸ್ತು ವಾಹನ ಹಳ್ಳಕ್ಕೆ ಉರುಳಿಸಿದ ಪಾನಮತ್ತ ಪೊಲೀಸರು; ಕ್ರೇನ್ ಚಾಲಕನ ಮೇಲೆ ಹಲ್ಲೆ

ಶುಕ್ರವಾರ (ಡಿಸೆಂಬರ್ 12) ರಾತ್ರಿ ಪೊಲೀಸರೊಬ್ಬರು ಕಾರಿನ ನಿಯಂತ್ರಣ ಕಳೆದುಕೊಂಡ ಬಳಿಕ '112' ಪೊಲೀಸ್ ಪ್ರತಿಕ್ರಿಯೆ ವಾಹನ (ಪಿಆರ್‌ವಿ) ಹಳ್ಳಕ್ಕೆ ಉರುಳಿದೆ. ವರದಿಗಳ ಪ್ರಕಾರ, ಘಟನೆಯ ಸಮಯದಲ್ಲಿ ಪೊಲೀಸರು ಪಾನಮತ್ತರಾಗಿದ್ದರು. ಕಾರ್ ಕಂದಕಕ್ಕೆ...

ಲಿಯೋನೆಲ್ ಮೆಸ್ಸಿ ಇಂಡಿಯಾ ಪ್ರವಾಸ; ಅಭೂತಪೂರ್ವ ಸ್ವಾಗತ ಕೋರಿದ ಕೋಲ್ಕತ್ತಾ ಅಭಿಮಾನಿಗಳು

ಇಂಡಿಯಾ ಪ್ರವಾಸ ಪ್ರಾರಂಭಿಸಿರುವ ಅರ್ಜೆಂಟೀನಾದ ಪುಟ್‌ಬಾಲ್‌ ತಾರೆ ಲಿಯೋನೆಲ್ ಮೆಸ್ಸಿ ಕೋಲ್ಕತ್ತಾಗೆ ಬಂದಿಳಿದಿದ್ದಾರೆ. ಶನಿವಾರ ಬೆಳಗಿನ ಜಾವ ವಿಮಾನ ನಿಲ್ದಾಣದಲ್ಲಿ ನೆರೆದಿದ್ದ ಸಾವಿರಾರು ಅಭಿಮಾನಿಗಳಿಂದ ಅವರಿಗೆ ಅಭೂತಪೂರ್ವ ಸ್ವಾಗತ ಕೋರಿದರು. ಅರ್ಜೆಂಟೀನಾದ ಸೂಪರ್‌ಸ್ಟಾರ್ ದುಬೈ...

ನಟಿಯ ಅಪಹರಣ, ಅತ್ಯಾಚಾರ ಪ್ರಕರಣ : ಆರು ಅಪರಾಧಿಗಳಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಮಲಯಾಳಂ ಮೂಲದ ಬಹುಭಾಷಾ ನಟಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದ (2017ರ ಪ್ರಕರಣ) ಆರು ಅಪರಾಧಿಗಳಿಗೆ ಇಪ್ಪತ್ತು ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ಶುಕ್ರವಾರ (ಡಿಸೆಂಬರ್ 12) ಕೇರಳ ನ್ಯಾಯಾಲಯ ಆದೇಶಿಸಿದೆ. ಡಿಸೆಂಬರ್...