Homeಮುಖಪುಟಕೊರೊನಾ ಲಾಕ್‌ಡೌನ್: 6 ರಾಜ್ಯಗಳ 67 ಲಕ್ಷ ವಲಸೆ ಕಾರ್ಮಿಕರು ತವರಿಗೆ ಮರಳಿದ್ದಾರೆ

ಕೊರೊನಾ ಲಾಕ್‌ಡೌನ್: 6 ರಾಜ್ಯಗಳ 67 ಲಕ್ಷ ವಲಸೆ ಕಾರ್ಮಿಕರು ತವರಿಗೆ ಮರಳಿದ್ದಾರೆ

- Advertisement -
- Advertisement -

ಮಾರ್ಚ್‌ನಲ್ಲಿ ಕೊರೊನಾ ಲಾಕ್‌ಡೌನ್ ವಿಧಿಸಿದಾಗಿನಿಂದ ವಲಸೆ ಕಾರ್ಮಿಕರ ಕುರಿತು ಕೇಂದ್ರ ಕೌಶಲ್ಯ ಅಭಿವೃದ್ಧಿ ಸಚಿವಾಲಯ ಸಂಗ್ರಹಿಸಿದ ಪ್ರಾಥಮಿಕ ಮಾಹಿತಿಯಂತೆ, ದೇಶದ ನಗರ ಕೇಂದ್ರಗಳಿಂದ ಆರು ರಾಜ್ಯಗಳ 116 ಜಿಲ್ಲೆಗಳಿಗೆ 67 ಲಕ್ಷ ವಲಸಿಗರು ವಾಪಾಸು ತಮ್ಮ ಮನೆಗಳಿಗೆ ಮರಳಿದ್ದಾರೆ.

ಈ ಪೈಕಿ ಸುಮಾರು 44 ಲಕ್ಷ ಅಥವಾ ಸುಮಾರು ಮೂರನೇ ಎರಡರಷ್ಟು ಜನರು 53 ಜಿಲ್ಲೆಗಳಿಗೆ ಮರಳಿದ್ದಾರೆ.

ಅತೀ ಹೆಚ್ಚು 23.6 ಲಕ್ಷ ವಲಸೆ ಕಾರ್ಮಿಕರು ಬಿಹಾರದ 32 ಜಿಲ್ಲೆಗಳಿಗೆ ಮರಳಿದ್ದು ಅದು ಅಗ್ರಸ್ಥಾನದಲ್ಲಿದ್ದರೆ, ಉತ್ತರ ಪ್ರದೇಶ 17.48 ಲಕ್ಷ ವಲಸೆ ಕಾರ್ಮಿಕರು 31 ಜಿಲ್ಲೆಗಳಿಗೆ ಹಿಂತಿರುಗಿದ್ದಾರೆ, ಇದು ಎರಡನೆ ಸ್ಥಾನದಲ್ಲಿದೆ.

ಈ ದತ್ತಾಂಶದಲ್ಲಿ ಪಶ್ಚಿಮ ಬಂಗಾಳ ಮತ್ತು ಚತ್ತಿಸ್ ಗಡ ಒಳಗೊಂಡಿಲ್ಲವಾದ್ದರಿಂದ, ಅಂತಿಮ ವರದಿಯ ಸಂಖ್ಯೆಗಳು ಇನ್ನೂ ಹೆಚ್ಚಾಗುವ ಸಾದ್ಯತೆಗಳಿವೆ. ಅಲ್ಲದೆ ಮುಂದಿನ 15 ದಿನಗಳಲ್ಲಿ ವಲಸಿಗರನ್ನು ತಮ್ಮ ರಾಜ್ಯಗಳಿಗೆ ಮರಳಲು ಅನುಕೂಲ ಮಾಡಿಕೊಡುವಂತೆ ಕೇಂದ್ರ ಮತ್ತು ರಾಜ್ಯಗಳಿಗೆ ಸುಪ್ರೀಂ ಕೋರ್ಟ್ ನಿರ್ದೇಶನ ನೀಡಿದೆ.

 

53 ಜಿಲ್ಲೆಗಳಿಗೆ ತಲಾ ಒಂದು ಲಕ್ಷಕ್ಕೂ ಹೆಚ್ಚು ವಲಸೆ ಕಾರ್ಮಿಕರು ಹಿಂತಿರುಗಿರುವುದು ದಾಖಲಾಗಿದೆ. 38 ಜಿಲ್ಲೆಗಳಲ್ಲಿ 50 ಸಾವಿರದಿಂದ 1 ಒಂದು ಲಕ್ಷದವರೆಗೆ ವಲಸಿಗರು ಹಿಂದಿರುಗಿದ್ದಯ ವರದಿಯಾಗಿದೆ.

ಅತೀ ಹೆಚ್ಚು ವಲಸಿಗರು ಹಿಂತಿರುಗಿದ 15 ಜಿಲ್ಲೆಗಳಲ್ಲಿ ಉತ್ತರ ಪ್ರದೇಶದ ಸಿದ್ದಾರ್ಥನಗರ ಜಿಲ್ಲೆ ಮೊದಲನೆ ಸ್ಥಾನದಲ್ಲಿದೆ. ಇಲ್ಲಿ 1.6 ಲಕ್ಷ ವಲಸೆ ಕಾರ್ಮಿಕರು ಹಿಂತಿರುಗಿದ್ದಾರೆ.

ಉಳಿದ ಜಿಲ್ಲೆಗಳೆಂದರೆ ಬಿಹಾರ್ ರಾಜ್ಯದ ಪೂರ್ವ ಚಂಪಾರನ್ (1.5 ಲಕ್ಷ), ಕತಿಹಾರ್ (1.4 ಲಕ್ಷ), ಮಧುಬಾನಿ (1.25 ಲಕ್ಷ), ಗಯಾ (1.2 ಲಕ್ಷ), ಪಶ್ಚಿಮ ಚಂಪಾರನ್ (1.2 ಲಕ್ಷ), ದರ್ಭಂಗಾ (1.03 ಲಕ್ಷ), ಅರಿಯಾ (1.01 ಲಕ್ಷ) ಮತ್ತು ಮುಜಾಫರ್ಪುರ ( 1.01 ಲಕ್ಷ).

ರಾಜಸ್ಥಾನ್ ರಾಜ್ಯದ ಪಾಲಿ (1.4 ಲಕ್ಷ), ಉದಯಪುರ (1.3 ಲಕ್ಷ) ಮತ್ತು ಜಲೋರ್ (1.1 ಲಕ್ಷ). ಒಡಿಸ್ಸಾದ ಗಂಜಾಂ (1.25 ಲಕ್ಷ); ಉತ್ತರ ಪ್ರದೇಶದ ಪ್ರಯಾಗರಾಜ್ (1.05 ಲಕ್ಷ); ಮತ್ತು ಮಧ್ಯ ಪ್ರದೇಶದ ಬಾಲಘಾಟ್ (1.03 ಲಕ್ಷ).


ಓದಿ: ಎಲ್ಲಾ ವಲಸೆ ಕಾರ್ಮಿಕರು ತಮ್ಮೂರು ತಲುಪಿದ್ದಾರೆಯೇ? ಎಷ್ಟು ಜನ ಉಳಿದುಕೊಂಡಿದ್ದಾರೆ? ಇಲ್ಲಿದೆ ಮಾಹಿತಿ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ವಲಸೆ ಕಾರ್ಮಿಕರು ಕಾಲ್ನಡಿಗೆಯಲ್ಲಿ ಹಿಂದಿರುಗುವಾಗ ಆಯಾಸ ಮತ್ತು ಹಸಿವೆಯಿಂದ ಮೃತರಾದವರ ಸಂಖ್ಯಾಮಾಹಿತಿ ಇದ್ದರೆ ತಿಳಿಸಿ.?

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...