Homeಮುಖಪುಟಕೊರೊನಾ ಲಾಕ್‌ಡೌನ್: 6 ರಾಜ್ಯಗಳ 67 ಲಕ್ಷ ವಲಸೆ ಕಾರ್ಮಿಕರು ತವರಿಗೆ ಮರಳಿದ್ದಾರೆ

ಕೊರೊನಾ ಲಾಕ್‌ಡೌನ್: 6 ರಾಜ್ಯಗಳ 67 ಲಕ್ಷ ವಲಸೆ ಕಾರ್ಮಿಕರು ತವರಿಗೆ ಮರಳಿದ್ದಾರೆ

- Advertisement -
- Advertisement -

ಮಾರ್ಚ್‌ನಲ್ಲಿ ಕೊರೊನಾ ಲಾಕ್‌ಡೌನ್ ವಿಧಿಸಿದಾಗಿನಿಂದ ವಲಸೆ ಕಾರ್ಮಿಕರ ಕುರಿತು ಕೇಂದ್ರ ಕೌಶಲ್ಯ ಅಭಿವೃದ್ಧಿ ಸಚಿವಾಲಯ ಸಂಗ್ರಹಿಸಿದ ಪ್ರಾಥಮಿಕ ಮಾಹಿತಿಯಂತೆ, ದೇಶದ ನಗರ ಕೇಂದ್ರಗಳಿಂದ ಆರು ರಾಜ್ಯಗಳ 116 ಜಿಲ್ಲೆಗಳಿಗೆ 67 ಲಕ್ಷ ವಲಸಿಗರು ವಾಪಾಸು ತಮ್ಮ ಮನೆಗಳಿಗೆ ಮರಳಿದ್ದಾರೆ.

ಈ ಪೈಕಿ ಸುಮಾರು 44 ಲಕ್ಷ ಅಥವಾ ಸುಮಾರು ಮೂರನೇ ಎರಡರಷ್ಟು ಜನರು 53 ಜಿಲ್ಲೆಗಳಿಗೆ ಮರಳಿದ್ದಾರೆ.

ಅತೀ ಹೆಚ್ಚು 23.6 ಲಕ್ಷ ವಲಸೆ ಕಾರ್ಮಿಕರು ಬಿಹಾರದ 32 ಜಿಲ್ಲೆಗಳಿಗೆ ಮರಳಿದ್ದು ಅದು ಅಗ್ರಸ್ಥಾನದಲ್ಲಿದ್ದರೆ, ಉತ್ತರ ಪ್ರದೇಶ 17.48 ಲಕ್ಷ ವಲಸೆ ಕಾರ್ಮಿಕರು 31 ಜಿಲ್ಲೆಗಳಿಗೆ ಹಿಂತಿರುಗಿದ್ದಾರೆ, ಇದು ಎರಡನೆ ಸ್ಥಾನದಲ್ಲಿದೆ.

ಈ ದತ್ತಾಂಶದಲ್ಲಿ ಪಶ್ಚಿಮ ಬಂಗಾಳ ಮತ್ತು ಚತ್ತಿಸ್ ಗಡ ಒಳಗೊಂಡಿಲ್ಲವಾದ್ದರಿಂದ, ಅಂತಿಮ ವರದಿಯ ಸಂಖ್ಯೆಗಳು ಇನ್ನೂ ಹೆಚ್ಚಾಗುವ ಸಾದ್ಯತೆಗಳಿವೆ. ಅಲ್ಲದೆ ಮುಂದಿನ 15 ದಿನಗಳಲ್ಲಿ ವಲಸಿಗರನ್ನು ತಮ್ಮ ರಾಜ್ಯಗಳಿಗೆ ಮರಳಲು ಅನುಕೂಲ ಮಾಡಿಕೊಡುವಂತೆ ಕೇಂದ್ರ ಮತ್ತು ರಾಜ್ಯಗಳಿಗೆ ಸುಪ್ರೀಂ ಕೋರ್ಟ್ ನಿರ್ದೇಶನ ನೀಡಿದೆ.

 

53 ಜಿಲ್ಲೆಗಳಿಗೆ ತಲಾ ಒಂದು ಲಕ್ಷಕ್ಕೂ ಹೆಚ್ಚು ವಲಸೆ ಕಾರ್ಮಿಕರು ಹಿಂತಿರುಗಿರುವುದು ದಾಖಲಾಗಿದೆ. 38 ಜಿಲ್ಲೆಗಳಲ್ಲಿ 50 ಸಾವಿರದಿಂದ 1 ಒಂದು ಲಕ್ಷದವರೆಗೆ ವಲಸಿಗರು ಹಿಂದಿರುಗಿದ್ದಯ ವರದಿಯಾಗಿದೆ.

ಅತೀ ಹೆಚ್ಚು ವಲಸಿಗರು ಹಿಂತಿರುಗಿದ 15 ಜಿಲ್ಲೆಗಳಲ್ಲಿ ಉತ್ತರ ಪ್ರದೇಶದ ಸಿದ್ದಾರ್ಥನಗರ ಜಿಲ್ಲೆ ಮೊದಲನೆ ಸ್ಥಾನದಲ್ಲಿದೆ. ಇಲ್ಲಿ 1.6 ಲಕ್ಷ ವಲಸೆ ಕಾರ್ಮಿಕರು ಹಿಂತಿರುಗಿದ್ದಾರೆ.

ಉಳಿದ ಜಿಲ್ಲೆಗಳೆಂದರೆ ಬಿಹಾರ್ ರಾಜ್ಯದ ಪೂರ್ವ ಚಂಪಾರನ್ (1.5 ಲಕ್ಷ), ಕತಿಹಾರ್ (1.4 ಲಕ್ಷ), ಮಧುಬಾನಿ (1.25 ಲಕ್ಷ), ಗಯಾ (1.2 ಲಕ್ಷ), ಪಶ್ಚಿಮ ಚಂಪಾರನ್ (1.2 ಲಕ್ಷ), ದರ್ಭಂಗಾ (1.03 ಲಕ್ಷ), ಅರಿಯಾ (1.01 ಲಕ್ಷ) ಮತ್ತು ಮುಜಾಫರ್ಪುರ ( 1.01 ಲಕ್ಷ).

ರಾಜಸ್ಥಾನ್ ರಾಜ್ಯದ ಪಾಲಿ (1.4 ಲಕ್ಷ), ಉದಯಪುರ (1.3 ಲಕ್ಷ) ಮತ್ತು ಜಲೋರ್ (1.1 ಲಕ್ಷ). ಒಡಿಸ್ಸಾದ ಗಂಜಾಂ (1.25 ಲಕ್ಷ); ಉತ್ತರ ಪ್ರದೇಶದ ಪ್ರಯಾಗರಾಜ್ (1.05 ಲಕ್ಷ); ಮತ್ತು ಮಧ್ಯ ಪ್ರದೇಶದ ಬಾಲಘಾಟ್ (1.03 ಲಕ್ಷ).


ಓದಿ: ಎಲ್ಲಾ ವಲಸೆ ಕಾರ್ಮಿಕರು ತಮ್ಮೂರು ತಲುಪಿದ್ದಾರೆಯೇ? ಎಷ್ಟು ಜನ ಉಳಿದುಕೊಂಡಿದ್ದಾರೆ? ಇಲ್ಲಿದೆ ಮಾಹಿತಿ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ವಲಸೆ ಕಾರ್ಮಿಕರು ಕಾಲ್ನಡಿಗೆಯಲ್ಲಿ ಹಿಂದಿರುಗುವಾಗ ಆಯಾಸ ಮತ್ತು ಹಸಿವೆಯಿಂದ ಮೃತರಾದವರ ಸಂಖ್ಯಾಮಾಹಿತಿ ಇದ್ದರೆ ತಿಳಿಸಿ.?

LEAVE A REPLY

Please enter your comment!
Please enter your name here

- Advertisment -

ಬಿಡದಿ ರೈತರ ವಿಚಾರದಲ್ಲಿ ಸರ್ಕಾರದ ನಿರ್ಧಾರ ಸ್ವಾಗತಾರ್ಹ ಆದರೆ.., ಸಂಯುಕ್ತ ಹೋರಾಟ ಸಮಿತಿಯ ಎಚ್ಚರಿಕೆಯ ಮಾತು

ಬಿಡದಿ ಟೌನ್‌ಶಿಪ್ ವಿಚಾರದಲ್ಲಿ ಬಲವಂತವಾಗಿ ಯಾವುದೇ ರೈತರ ಭೂಮಿ ಕಿತ್ತುಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳುತ್ತಿರುವುದು ಕೇವಲ ಮಾತಿನ ಜಾಣ್ಮೆಯಷ್ಟೇ. ಬಿಡದಿ ಭಾಗದ ಮೂರು ಗ್ರಾಮಗಳಿಗೆ ಹೊರಡಿಸಲಾಗಿರುವ ಭೂಸ್ವಾಧೀನದ ಅಂತಿಮ ಅಧಿಸೂಚನೆಯನ್ನು ಸಂಪೂರ್ಣವಾಗಿ...

“8.5 ಕೆಜಿ ತೂಕ ಇಳಿಸಿಕೊಂಡ ಸೋನಮ್ ವಾಂಗ್‌ಚುಕ್ ಜೀವಕ್ಕೆ ಅಪಾಯ: ಬಲವಂತ ಆಹಾರ ನೀಡುವಂತೆ ದೆಹಲಿ ಹೈಕೋರ್ಟ್‌ನಲ್ಲಿ ಪಿಐಎಲ್”

ದೇಶದ ಶೈಕ್ಷಣಿಕ ವ್ಯವಸ್ಥೆಯ ಭವಿಷ್ಯವನ್ನು ಗಾಳಿಗೆ ತೂರಿರುವ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಸಾಲು ಸಾಲು ಭ್ರಷ್ಟಾಚಾರದ ವಿರುದ್ಧ ಸಿಡಿದೆದ್ದು, ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪ್ರಖ್ಯಾತ ಹವಾಮಾನ ಮತ್ತು...

ಇನ್‌ಸ್ಟಾಮಾರ್ಟ್‌ನಲ್ಲಿ ಸಿಗಲಿದೆ ಎಲ್‌ಪಿಜಿ ಸಿಲಿಂಡರ್: ಬೆಂಗಳೂರಿನಲ್ಲಿ ಹೊಸ ಸೇವೆ ಆರಂಭ!

ಬೆಂಗಳೂರು: ದೇಶದಲ್ಲೇ ಮೊದಲ ಬಾರಿಗೆ ಬೆಂಗಳೂರಿನ ಗ್ರಾಹಕರು ಇನ್ನು ಮುಂದೆ ಪ್ರಮುಖ ಕ್ವಿಕ್ ಕಾಮರ್ಸ್ ಸಂಸ್ಥೆಯಾದ 'ಇನ್‌ಸ್ಟಾಮಾರ್ಟ್' (Instamart) ಆ್ಯಪ್ ಮೂಲಕವೇ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳನ್ನು ಬುಕ್ ಮಾಡಬಹುದು. ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್...

ಬಿಡದಿ ರೈತರ ಹೋರಾಟಕ್ಕೆ ಜಯ: ಬಲವಂತವಾಗಿ ಒಬ್ಬೇ ಒಬ್ಬ ರೈತರ ಜಮೀನನ್ನೂ ಪಡೆಯಲ್ಲ ಸಿಎಂ ಡಿ.ಕೆ.ಶಿವಕುಮಾರ್

"ಬಿಡದಿ ಸ್ಮಾರ್ಟ್ ಸಿಟಿ/ಟೌನ್ ಶಿಪ್ ಯೋಜನೆಯ ಹೆಸರಿನಲ್ಲಿ ಬಲವಂತವಾಗಿ ಒಬ್ಬೇ ಒಬ್ಬ ರೈತರ ಅಥವಾ ರೈತ ಮಹಿಳೆಯರ ಜಮೀನನ್ನು ನಮ್ಮ ಸರ್ಕಾರ ಭೂಸ್ವಾಧೀನ ಮಾಡಿಕೊಳ್ಳುವುದಿಲ್ಲ," ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಬಿಡದಿ ಟೌನ್‌ಶಿಪ್...

ಪಶ್ಚಿಮ ಬಂಗಾಳ: TMC ಬಂಡಾಯ ನಾಯಕ ರಿತಬ್ರತ ಬ್ಯಾನರ್ಜಿಗೆ ವಿಪಕ್ಷ ಸ್ಥಾನ ನೀಡಿದ್ದಕ್ಕೆ ನ್ಯಾಯಾಧೀಶರ ತೀವ್ರ ಆಕ್ಷೇಪ

ತೃಣಮೂಲ ಕಾಂಗ್ರೆಸ್‌ನ ಬಂಡಾಯ ಬಣದ ಮುಖ್ಯಸ್ಥ ರಿತಬ್ರತ ಬ್ಯಾನರ್ಜಿ ಅವರನ್ನು ಪಶ್ಚಿಮ ಬಂಗಾಳದ ವಿಧಾನಸಭೆಯ ವಿರೋಧ ಪಕ್ಷದ ನಾಯಕರನ್ನಾಗಿ ನೇಮಕ ಮಾಡುವಲ್ಲಿ ಸ್ಪೀಕರ್ ರತೀಂದ್ರ ಬೋಸ್ ತೋರಿರುವ "ತರಾತುರಿ"ಯನ್ನು ಕಲ್ಕತ್ತಾ ಹೈಕೋರ್ಟ್‌ನ ನ್ಯಾಯಮೂರ್ತಿ...

ಎರಡು ವರ್ಷಗಳಲ್ಲಿ 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ; ಇವರಲ್ಲಿ 193 ಮಂದಿ ವಿದೇಶಿಯರೆಂದು ಘೋಷಿತರು: ಅಸ್ಸಾಂ ಸರ್ಕಾರ

ಗುವಾಹಟಿ: ಕಳೆದ ಎರಡು ವರ್ಷಗಳ ಅವಧಿಯಲ್ಲಿ ಗಡೀಪಾರು, ಗಡಿಯಿಂದ ಆಚೆಗೆ ತಳ್ಳುವಿಕೆ (ಪುಶ್‌ಬ್ಯಾಕ್) ಅಥವಾ ಉಚ್ಚಾಟನೆ ಪ್ರಕ್ರಿಯೆಯ ಮೂಲಕ ಒಟ್ಟು 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ ಎಂದು ಅಸ್ಸಾಂ ಸರ್ಕಾರ ರಾಜ್ಯ ವಿಧಾನಸಭೆಗೆ...

17 ದಿನ, 9 ಕೆಜಿ ತೂಕ ಇಳಿಕೆ, ಸೋನಮ್ ವಾಂಗ್‌ಚುಕ್ ಆರೋಗ್ಯ ಸ್ಥಿತಿ ಗಂಭೀರ: ಉಪವಾಸ ಕೈಬಿಡುವಂತೆ ಅಖಿಲೇಶ್-ಕೇಜ್ರಿವಾಲ್ ಮನವಿ

ದೇಶದ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಸರಣಿ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಭ್ರಷ್ಟಾಚಾರವನ್ನು ವಿರೋಧಿಸಿ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಖ್ಯಾತ ಪರಿಸರ ಕಾರ್ಯಕರ್ತ ಸೋನಮ್...

ಎನ್‌ಸಿಪಿಯ ಎರಡೂ ಬಣಗಳಲ್ಲೂ ಬಿರುಸಿನ ಬೆಳವಣಿಗೆ : ಬಿಜೆಪಿ ತೆಕ್ಕೆಗೆ ಮತ್ತೊಂದು ಪಕ್ಷ?

ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿಯ (ಎನ್‌ಸಿಪಿ) ಎರಡೂ ಬಣಗಳ ಮುಖ್ಯ ನಾಯಕರು ಮಂಗಳವಾರ (ಜು.14) ರಾತ್ರಿ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ಈ ಸಭೆಯು ಶರದ್ ಪವಾರ್ ಅವರ...

ಮೋದಿಯ ಮೌನವನ್ನು ಪ್ರಶ್ನಿಸುವ ರಾಹುಲ್ ಗಾಂಧಿ, ಸಾರ್ವಜನಿಕ ಹಿತಾಸಕ್ತಿಯ ಈ ವಿಷಯಗಳಲ್ಲಿ ತಾವೇಕೆ ಮೌನ?

ಪ್ರಧಾನಿ ಮೋದಿಯವರದ್ದು ಜಾಣ ಮೌನ ಎಂದು ಈಗಾಗಲೇ ಈ ದೇಶದ ಜನಕ್ಕೆ ಮನವರಿಕೆಯಾಗಿದೆ. ಕಳೆದ 14ವರ್ಷದಲ್ಲಿ ಒಂದೇ ಒಂದು ಪ್ರೆಸ್ ಮೀಟ್‌ಅನ್ನು ಅಡ್ರೆಸ್ ಮಾಡದೆ ಇರುವವರ ಬಗ್ಗೆ ಜನ ಹೆಚ್ಚಿನದ್ದೇನನ್ನು ನಿರೀಕ್ಷಿಸಲಾರರು, ಆದರೆ...

ಹೊಸ ಮತದಾರರ ಫಾರಂ 6ಕ್ಕೆ ಪೋಷಕರ ಎಸ್‌ಐಆರ್ ಕಡ್ಡಾಯಗೊಳಿಸಿದ ಚು. ಆಯೋಗ : ಸಂಪೂರ್ಣ ಕಾನೂನುಬಾಹಿರ ಎಂದ ಸಂಸದ ಜಾನ್ ಬ್ರಿಟ್ಟಾಸ್

ಹೊಸ ಮತದಾರರನ್ನು ನೋಂದಾಯಿಸಲು ಬಳಸುವ ತನ್ನ ಆನ್‌ಲೈನ್ ಅರ್ಜಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಹೊಸ ವಿಭಾಗವನ್ನು ಸೇರಿಸುವ ಮೂಲಕ ಚುನಾವಣಾ ಆಯೋಗವು (ಇಸಿ) "ಸಂಪೂರ್ಣವಾಗಿ ಕಾನೂನು ಅಧಿಕಾರವಿಲ್ಲದೆ ಕಾರ್ಯನಿರ್ವಹಿಸಿದೆ" ಎಂದು...