Homeಕರೋನಾ ತಲ್ಲಣಕೊರೊನಾ ಲಾಕ್‌ಡೌನ್; ವಲಸೆ ಕಾರ್ಮಿಕರ ಸಂಕಷ್ಟಕ್ಕೆ ಸುಳ್ಳುಸುದ್ಧಿಗಳೇ ಕಾರಣ: ಕೇಂದ್ರ ಸರ್ಕಾರ

ಕೊರೊನಾ ಲಾಕ್‌ಡೌನ್; ವಲಸೆ ಕಾರ್ಮಿಕರ ಸಂಕಷ್ಟಕ್ಕೆ ಸುಳ್ಳುಸುದ್ಧಿಗಳೇ ಕಾರಣ: ಕೇಂದ್ರ ಸರ್ಕಾರ

ಮೃತಪಟ್ಟ ವಲಸಿಗರ ಕುರಿತು ತನ್ನ ಬಳಿ ಯಾವುದೇ ಮಾಹಿತಿ ಇಲ್ಲ, ಆದ್ದರಿಂದ ಮೃತಪಟ್ಟವರಿಗೆ ಪರಿಹಾರ ಒದಗಿಸುವ ಪ್ರಶ್ನೆಯು ಏಳುವುದಿಲ್ಲ ಎಂದು ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯ ಸಂಸತ್ತಿಗೆ ತಿಳಿಸಿತ್ತು.

- Advertisement -
- Advertisement -

ವಲಸೆ ಹೊರಟಿದ್ದ ಕಾರ್ಮಿಕರ ಸಾವುಗಳ ಬಗ್ಗೆ ಯಾವುದೇ ಮಾಹಿತಿ ಇಲ್ಲ ಎಂದು ಕೇಂದ್ರ ಸರ್ಕಾರ ಹೇಳಿದ ಒಂದು ದಿನದ ನಂತರ, “ಕೊರೊನಾ ವೈರಸ್ ಹರಡುವುದನ್ನು ತಡೆಗಟ್ಟುವ ಸಲುವಾಗಿ ಮಾರ್ಚ್‌ನಿಂದ ದೇಶದಾದ್ಯಂತ ಲಾಕ್‌ಡೌನ್ ಮಾಡಿದ ನಂತರ ಸಾಮೂಹಿಕ ವಲಸೆಗೆ ಸುಳ್ಳುಸುದ್ಧಿಗಳೇ ಕಾರಣ” ಎಂದು ಕೇಂದ್ರ ಸರ್ಕಾರ ಮಂಗಳವಾರ ಸಂಸತ್ತಿನಲ್ಲಿ ಹೇಳಿದೆ.

ಮಾರ್ಚ್ 25 ರಂದು ಲಾಕ್‌ಡೌನ್ ಘೋಷಿಸುವ ಮೊದಲು ವಲಸೆ ಕಾರ್ಮಿಕರನ್ನು ರಕ್ಷಿಸಲು ಕೈಗೊಂಡ ಕ್ರಮಗಳ ಬಗ್ಗೆ ತೃಣಮೂಲ ಕಾಂಗ್ರೆಸ್‌ನ ಸಂಸದ ಮಾಲಾ ರಾಯ್ ಪ್ರಶ್ನಿಸಿದ್ದರು.

“ಹೆಚ್ಚಿನ ಸಂಖ್ಯೆಯ ವಲಸೆ ಕಾರ್ಮಿಕರ ವಲಸೆಯು ಲಾಕ್‌ಡೌನ್ ಅವಧಿಯ ಬಗ್ಗೆ ನಕಲಿ ಸುದ್ದಿಗಳಿಂದ ಉಂಟಾದ ಭೀತಿಯಿಂದ ಪ್ರಚೋದಿಸಲ್ಪಟ್ಟಿದ್ದು, ದೇಶದ ಜನರು, ವಿಶೇಷವಾಗಿ ವಲಸೆ ಕಾರ್ಮಿಕರು, ಆಹಾರ, ಕುಡಿಯುವ ನೀರು, ಆರೋಗ್ಯ ಸೇವೆಗಳು ಮತ್ತು ಆಶ್ರಯದಂತಹ ಮೂಲಭೂತ ಅವಶ್ಯಕತೆಗಳ ಸಮರ್ಪಕ ಪೂರೈಕೆಯ ಬಗ್ಗೆ ಚಿಂತಿತರಾಗಿದ್ದರು” ಎಂದು ಕೇಂದ್ರ ಸಚಿವ ನಿತ್ಯಾನಂದ್ ರೈ ಹೇಳಿದ್ದಾರೆ ಎಂದು ನ್ಯಾಷನಲ್ ಹೆರಾಲ್ಡ್ ವರದಿ ಮಾಡಿದೆ.

ಇದನ್ನೂ ಓದಿ: ಎಲ್ಲಾ ವಲಸೆ ಕಾರ್ಮಿಕರು ತಮ್ಮೂರು ತಲುಪಿದ್ದಾರೆಯೇ? ಎಷ್ಟು ಜನ ಉಳಿದುಕೊಂಡಿದ್ದಾರೆ? ಇಲ್ಲಿದೆ ಮಾಹಿತಿ

“ಆದಾಗ್ಯೂ, ಕೇಂದ್ರ ಸರ್ಕಾರವು ಈ ಬಗ್ಗೆ ಸಂಪೂರ್ಣ ಜಾಗೃತಿ ವಹಿಸಿತ್ತು. ಅನಿವಾರ್ಯವಾದ ಲಾಕ್‌ಡೌನ್ ಅವಧಿಯಲ್ಲಿ ಯಾವುದೇ ನಾಗರಿಕನೂ ಆಹಾರ, ಕುಡಿಯುವ ನೀರು, ವೈದ್ಯಕೀಯ ಸೌಲಭ್ಯಗಳು ಇತ್ಯಾದಿಗಳ ಮೂಲಭೂತ ಸೌಕರ್ಯಗಳಿಂದ ವಂಚಿತರಾಗಬಾರದು ಎಂಬ ಕಾರಣಕ್ಕೆ, ಅಗತ್ಯವಿರುವ ಎಲ್ಲ ಕ್ರಮಗಳನ್ನು ತೆಗೆದುಕೊಂಡರು” ಎಂದು ಸಚಿವರು ಹೇಳಿದರು.

“ಮಾರ್ಚ್ 28 ರಂದು ರಾಜ್ಯ ವಿಪತ್ತು ಪ್ರತಿಕ್ರಿಯೆ ನಿಧಿಯನ್ನು (SDRF) ಬಳಸಲು ಅವಕಾಶ ಮಾಡಿಕೊಟ್ಟು, “ಮನೆಯಿಲ್ಲದ ಜನರಿಗೆ ಮತ್ತು ವಲಸೆ ಕಾರ್ಮಿಕರಿಗೆ ತಾತ್ಕಾಲಿಕ ವಸತಿ, ಆಹಾರ, ಬಟ್ಟೆ, ವೈದ್ಯಕೀಯ ಆರೈಕೆ ಇತ್ಯಾದಿಗಳನ್ನು ಒದಗಿಸಲು ಕೇಂದ್ರವು ರಾಜ್ಯ ಸರ್ಕಾರಗಳಿಗೆ ಸೂಚಿಸಿತ್ತು. ಕೇಂದ್ರವು ರಾಜ್ಯ ವಿಪತ್ತು ನಿಧಿಯಿಂದ 11, 092 ಕೋಟಿ ಮುಂಗಡ ಹಣವನ್ನು ಏಪ್ರಿಲ್ 3 ರಂದು ರಾಜ್ಯಗಳಿಗೆ ಬಿಡುಗಡೆ ಮಾಡಿದೆ” ಎಂದು ಸಚಿವರು ಹೇಳಿದರು.

ಕೊರೊನಾ ಲಾಕ್‌ಡೌನ್ ವೇಳೆ ದೇಶದ ಹೆದ್ದಾರಿಗಳಲ್ಲಿ ರಕ್ತಸುರಿಸುತ್ತಾ ತಮ್ಮ ಮನೆಗೆ ಹೊರಟವರಲ್ಲಿ, ಮೃತಪಟ್ಟ ವಲಸಿಗರ ಕುರಿತು ತನ್ನ ಬಳಿ ಯಾವುದೇ ಮಾಹಿತಿ ಇಲ್ಲ, ಆದ್ದರಿಂದ ಮೃತಪಟ್ಟವರಿಗೆ ಪರಿಹಾರ ಒದಗಿಸುವ ಪ್ರಶ್ನೆಯು ಏಳುವುದಿಲ್ಲ ಎಂದು ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯ ಸಂಸತ್ತಿಗೆ ತಿಳಿಸಿತ್ತು.

ಇದನ್ನೂ ಓದಿ: ಯಾವೊಬ್ಬ ವಲಸೆ ಕಾರ್ಮಿಕರೂ ಆಹಾರವಿಲ್ಲದೆ ಸಾವನ್ನಪ್ಪಿಲ್ಲ: ನಳಿನ್ ಕುಮಾರ್‌ ಕಟೀಲ್

ವಲಸಿಗ ಕಾರ್ಮಿಕರು ಲಾಕ್‌ಡೌನ್ ವೇಳೆ ಎದುರಿಸಬಹುದಾದ ಸಂಕಷ್ಟವನ್ನು ಅಂದಾಜಿಸಲು ಕೇಂದ್ರ ಸರ್ಕಾರ ವಿಫಲವಾಗಿತ್ತೇ ಎಂಬ ಕುರಿತಾದ ಪ್ರಶ್ನಗೆ ಉತ್ತರಿಸಿದ ಕಾರ್ಮಿಕ ಮತ್ತು ಉದ್ಯೋಗ ರಾಜ್ಯ ಸಚಿವ ಸಂತೋಷ್ ಕುಮಾರ್ ಗಂಗ್ವಾರ್, “ಕೊರೊನಾ ಸಮಸ್ಯೆ ಹಾಗೂ ಲಾಕ್‌ಡೌನ್‍‌ನಿಂದಾಗಿ ಎದುರಾದ ಸಂಕಷ್ಟಗಳಿಗೆ ಕೇಂದ್ರ, ರಾಜ್ಯ ಸರಕಾರಗಳು, ಸ್ಥಳೀಯಾಡಳಿತ ಸಂಸ್ಥೆಗಳು, ವೈದ್ಯಕೀಯ ಸಿಬ್ಬಂದಿ, ಪೌರ ಕಾರ್ಮಿಕರು ಹಾಗೂ ಸರಕಾರೇತರ ಸಂಘಟನೆಗಳು ಸ್ಪಂದಿಸಿವೆ” ಎಂದು ಹೇಳಿದ್ದರು.

ಕೇಂದ್ರ ಸರ್ಕಾರವು ಕೇವಲ ಕೆಲವೆ ಗಂಟೆಗಳ ಅಂತರದಲ್ಲಿ ದೇಶದಾದ್ಯಂತ ಲಾಕ್‌ಡೌನ್ ಘೋಷಿಸಿದ ಪರಿಣಾಮದಿಂದಾಗಿ ಕೋಟ್ಯಾಂತರ ವಲಸೆ ಕಾರ್ಮಿಕರು ಸಂಕಷ್ಟಕ್ಕೆ ಸಿಲುಕಿ ತಮ್ಮ ಊರುಗಳಿಗೆ ತಲುಪಲು ಹರಸಾಹಸ ಪಡುವಂತಾಗಿತ್ತು.

ಇದರ ನಂತರ ದೇಶದ ಮಹಾವಲಸೆ ಪ್ರಾರಂಭವಾಗಿ ನೂರಾರು ಮಂದಿ ವಲಸೆ ಕಾರ್ಮಿಕರು ದೇಶದ ಹೆದ್ದಾರಿಗಳಲ್ಲಿ, ರೈಲುಗಳಲ್ಲಿ, ರೈಲಿನ ಹಳಿಗಳಲ್ಲಿ, ಅಫಘಾತ, ದಣಿವು ಹಾಗೂ ಹಸಿವಿನಿಂದ ಪ್ರಾಣ ಬಿಡುವಂತಾಯಿತು.


ಇದನ್ನೂ ಓದಿ: ಲಾಕ್‌‌ಡೌನ್‌ ಸಮಯದಲ್ಲಿ ಮೃತಪಟ್ಟ ವಲಸಿಗರ ಮಾಹಿತಿ ಇಲ್ಲ: ಕೇಂದ್ರ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...