Homeಕರೋನಾ ತಲ್ಲಣಕೊರೊನಾ ಲಾಕ್‌ಡೌನ್; ವಲಸೆ ಕಾರ್ಮಿಕರ ಸಂಕಷ್ಟಕ್ಕೆ ಸುಳ್ಳುಸುದ್ಧಿಗಳೇ ಕಾರಣ: ಕೇಂದ್ರ ಸರ್ಕಾರ

ಕೊರೊನಾ ಲಾಕ್‌ಡೌನ್; ವಲಸೆ ಕಾರ್ಮಿಕರ ಸಂಕಷ್ಟಕ್ಕೆ ಸುಳ್ಳುಸುದ್ಧಿಗಳೇ ಕಾರಣ: ಕೇಂದ್ರ ಸರ್ಕಾರ

ಮೃತಪಟ್ಟ ವಲಸಿಗರ ಕುರಿತು ತನ್ನ ಬಳಿ ಯಾವುದೇ ಮಾಹಿತಿ ಇಲ್ಲ, ಆದ್ದರಿಂದ ಮೃತಪಟ್ಟವರಿಗೆ ಪರಿಹಾರ ಒದಗಿಸುವ ಪ್ರಶ್ನೆಯು ಏಳುವುದಿಲ್ಲ ಎಂದು ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯ ಸಂಸತ್ತಿಗೆ ತಿಳಿಸಿತ್ತು.

- Advertisement -
- Advertisement -

ವಲಸೆ ಹೊರಟಿದ್ದ ಕಾರ್ಮಿಕರ ಸಾವುಗಳ ಬಗ್ಗೆ ಯಾವುದೇ ಮಾಹಿತಿ ಇಲ್ಲ ಎಂದು ಕೇಂದ್ರ ಸರ್ಕಾರ ಹೇಳಿದ ಒಂದು ದಿನದ ನಂತರ, “ಕೊರೊನಾ ವೈರಸ್ ಹರಡುವುದನ್ನು ತಡೆಗಟ್ಟುವ ಸಲುವಾಗಿ ಮಾರ್ಚ್‌ನಿಂದ ದೇಶದಾದ್ಯಂತ ಲಾಕ್‌ಡೌನ್ ಮಾಡಿದ ನಂತರ ಸಾಮೂಹಿಕ ವಲಸೆಗೆ ಸುಳ್ಳುಸುದ್ಧಿಗಳೇ ಕಾರಣ” ಎಂದು ಕೇಂದ್ರ ಸರ್ಕಾರ ಮಂಗಳವಾರ ಸಂಸತ್ತಿನಲ್ಲಿ ಹೇಳಿದೆ.

ಮಾರ್ಚ್ 25 ರಂದು ಲಾಕ್‌ಡೌನ್ ಘೋಷಿಸುವ ಮೊದಲು ವಲಸೆ ಕಾರ್ಮಿಕರನ್ನು ರಕ್ಷಿಸಲು ಕೈಗೊಂಡ ಕ್ರಮಗಳ ಬಗ್ಗೆ ತೃಣಮೂಲ ಕಾಂಗ್ರೆಸ್‌ನ ಸಂಸದ ಮಾಲಾ ರಾಯ್ ಪ್ರಶ್ನಿಸಿದ್ದರು.

“ಹೆಚ್ಚಿನ ಸಂಖ್ಯೆಯ ವಲಸೆ ಕಾರ್ಮಿಕರ ವಲಸೆಯು ಲಾಕ್‌ಡೌನ್ ಅವಧಿಯ ಬಗ್ಗೆ ನಕಲಿ ಸುದ್ದಿಗಳಿಂದ ಉಂಟಾದ ಭೀತಿಯಿಂದ ಪ್ರಚೋದಿಸಲ್ಪಟ್ಟಿದ್ದು, ದೇಶದ ಜನರು, ವಿಶೇಷವಾಗಿ ವಲಸೆ ಕಾರ್ಮಿಕರು, ಆಹಾರ, ಕುಡಿಯುವ ನೀರು, ಆರೋಗ್ಯ ಸೇವೆಗಳು ಮತ್ತು ಆಶ್ರಯದಂತಹ ಮೂಲಭೂತ ಅವಶ್ಯಕತೆಗಳ ಸಮರ್ಪಕ ಪೂರೈಕೆಯ ಬಗ್ಗೆ ಚಿಂತಿತರಾಗಿದ್ದರು” ಎಂದು ಕೇಂದ್ರ ಸಚಿವ ನಿತ್ಯಾನಂದ್ ರೈ ಹೇಳಿದ್ದಾರೆ ಎಂದು ನ್ಯಾಷನಲ್ ಹೆರಾಲ್ಡ್ ವರದಿ ಮಾಡಿದೆ.

ಇದನ್ನೂ ಓದಿ: ಎಲ್ಲಾ ವಲಸೆ ಕಾರ್ಮಿಕರು ತಮ್ಮೂರು ತಲುಪಿದ್ದಾರೆಯೇ? ಎಷ್ಟು ಜನ ಉಳಿದುಕೊಂಡಿದ್ದಾರೆ? ಇಲ್ಲಿದೆ ಮಾಹಿತಿ

“ಆದಾಗ್ಯೂ, ಕೇಂದ್ರ ಸರ್ಕಾರವು ಈ ಬಗ್ಗೆ ಸಂಪೂರ್ಣ ಜಾಗೃತಿ ವಹಿಸಿತ್ತು. ಅನಿವಾರ್ಯವಾದ ಲಾಕ್‌ಡೌನ್ ಅವಧಿಯಲ್ಲಿ ಯಾವುದೇ ನಾಗರಿಕನೂ ಆಹಾರ, ಕುಡಿಯುವ ನೀರು, ವೈದ್ಯಕೀಯ ಸೌಲಭ್ಯಗಳು ಇತ್ಯಾದಿಗಳ ಮೂಲಭೂತ ಸೌಕರ್ಯಗಳಿಂದ ವಂಚಿತರಾಗಬಾರದು ಎಂಬ ಕಾರಣಕ್ಕೆ, ಅಗತ್ಯವಿರುವ ಎಲ್ಲ ಕ್ರಮಗಳನ್ನು ತೆಗೆದುಕೊಂಡರು” ಎಂದು ಸಚಿವರು ಹೇಳಿದರು.

“ಮಾರ್ಚ್ 28 ರಂದು ರಾಜ್ಯ ವಿಪತ್ತು ಪ್ರತಿಕ್ರಿಯೆ ನಿಧಿಯನ್ನು (SDRF) ಬಳಸಲು ಅವಕಾಶ ಮಾಡಿಕೊಟ್ಟು, “ಮನೆಯಿಲ್ಲದ ಜನರಿಗೆ ಮತ್ತು ವಲಸೆ ಕಾರ್ಮಿಕರಿಗೆ ತಾತ್ಕಾಲಿಕ ವಸತಿ, ಆಹಾರ, ಬಟ್ಟೆ, ವೈದ್ಯಕೀಯ ಆರೈಕೆ ಇತ್ಯಾದಿಗಳನ್ನು ಒದಗಿಸಲು ಕೇಂದ್ರವು ರಾಜ್ಯ ಸರ್ಕಾರಗಳಿಗೆ ಸೂಚಿಸಿತ್ತು. ಕೇಂದ್ರವು ರಾಜ್ಯ ವಿಪತ್ತು ನಿಧಿಯಿಂದ 11, 092 ಕೋಟಿ ಮುಂಗಡ ಹಣವನ್ನು ಏಪ್ರಿಲ್ 3 ರಂದು ರಾಜ್ಯಗಳಿಗೆ ಬಿಡುಗಡೆ ಮಾಡಿದೆ” ಎಂದು ಸಚಿವರು ಹೇಳಿದರು.

ಕೊರೊನಾ ಲಾಕ್‌ಡೌನ್ ವೇಳೆ ದೇಶದ ಹೆದ್ದಾರಿಗಳಲ್ಲಿ ರಕ್ತಸುರಿಸುತ್ತಾ ತಮ್ಮ ಮನೆಗೆ ಹೊರಟವರಲ್ಲಿ, ಮೃತಪಟ್ಟ ವಲಸಿಗರ ಕುರಿತು ತನ್ನ ಬಳಿ ಯಾವುದೇ ಮಾಹಿತಿ ಇಲ್ಲ, ಆದ್ದರಿಂದ ಮೃತಪಟ್ಟವರಿಗೆ ಪರಿಹಾರ ಒದಗಿಸುವ ಪ್ರಶ್ನೆಯು ಏಳುವುದಿಲ್ಲ ಎಂದು ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯ ಸಂಸತ್ತಿಗೆ ತಿಳಿಸಿತ್ತು.

ಇದನ್ನೂ ಓದಿ: ಯಾವೊಬ್ಬ ವಲಸೆ ಕಾರ್ಮಿಕರೂ ಆಹಾರವಿಲ್ಲದೆ ಸಾವನ್ನಪ್ಪಿಲ್ಲ: ನಳಿನ್ ಕುಮಾರ್‌ ಕಟೀಲ್

ವಲಸಿಗ ಕಾರ್ಮಿಕರು ಲಾಕ್‌ಡೌನ್ ವೇಳೆ ಎದುರಿಸಬಹುದಾದ ಸಂಕಷ್ಟವನ್ನು ಅಂದಾಜಿಸಲು ಕೇಂದ್ರ ಸರ್ಕಾರ ವಿಫಲವಾಗಿತ್ತೇ ಎಂಬ ಕುರಿತಾದ ಪ್ರಶ್ನಗೆ ಉತ್ತರಿಸಿದ ಕಾರ್ಮಿಕ ಮತ್ತು ಉದ್ಯೋಗ ರಾಜ್ಯ ಸಚಿವ ಸಂತೋಷ್ ಕುಮಾರ್ ಗಂಗ್ವಾರ್, “ಕೊರೊನಾ ಸಮಸ್ಯೆ ಹಾಗೂ ಲಾಕ್‌ಡೌನ್‍‌ನಿಂದಾಗಿ ಎದುರಾದ ಸಂಕಷ್ಟಗಳಿಗೆ ಕೇಂದ್ರ, ರಾಜ್ಯ ಸರಕಾರಗಳು, ಸ್ಥಳೀಯಾಡಳಿತ ಸಂಸ್ಥೆಗಳು, ವೈದ್ಯಕೀಯ ಸಿಬ್ಬಂದಿ, ಪೌರ ಕಾರ್ಮಿಕರು ಹಾಗೂ ಸರಕಾರೇತರ ಸಂಘಟನೆಗಳು ಸ್ಪಂದಿಸಿವೆ” ಎಂದು ಹೇಳಿದ್ದರು.

ಕೇಂದ್ರ ಸರ್ಕಾರವು ಕೇವಲ ಕೆಲವೆ ಗಂಟೆಗಳ ಅಂತರದಲ್ಲಿ ದೇಶದಾದ್ಯಂತ ಲಾಕ್‌ಡೌನ್ ಘೋಷಿಸಿದ ಪರಿಣಾಮದಿಂದಾಗಿ ಕೋಟ್ಯಾಂತರ ವಲಸೆ ಕಾರ್ಮಿಕರು ಸಂಕಷ್ಟಕ್ಕೆ ಸಿಲುಕಿ ತಮ್ಮ ಊರುಗಳಿಗೆ ತಲುಪಲು ಹರಸಾಹಸ ಪಡುವಂತಾಗಿತ್ತು.

ಇದರ ನಂತರ ದೇಶದ ಮಹಾವಲಸೆ ಪ್ರಾರಂಭವಾಗಿ ನೂರಾರು ಮಂದಿ ವಲಸೆ ಕಾರ್ಮಿಕರು ದೇಶದ ಹೆದ್ದಾರಿಗಳಲ್ಲಿ, ರೈಲುಗಳಲ್ಲಿ, ರೈಲಿನ ಹಳಿಗಳಲ್ಲಿ, ಅಫಘಾತ, ದಣಿವು ಹಾಗೂ ಹಸಿವಿನಿಂದ ಪ್ರಾಣ ಬಿಡುವಂತಾಯಿತು.


ಇದನ್ನೂ ಓದಿ: ಲಾಕ್‌‌ಡೌನ್‌ ಸಮಯದಲ್ಲಿ ಮೃತಪಟ್ಟ ವಲಸಿಗರ ಮಾಹಿತಿ ಇಲ್ಲ: ಕೇಂದ್ರ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...