Homeಕರೋನಾ ತಲ್ಲಣಕೊರೊನಾ ಲಾಕ್‌ಡೌನ್; ವಲಸೆ ಕಾರ್ಮಿಕರ ಸಂಕಷ್ಟಕ್ಕೆ ಸುಳ್ಳುಸುದ್ಧಿಗಳೇ ಕಾರಣ: ಕೇಂದ್ರ ಸರ್ಕಾರ

ಕೊರೊನಾ ಲಾಕ್‌ಡೌನ್; ವಲಸೆ ಕಾರ್ಮಿಕರ ಸಂಕಷ್ಟಕ್ಕೆ ಸುಳ್ಳುಸುದ್ಧಿಗಳೇ ಕಾರಣ: ಕೇಂದ್ರ ಸರ್ಕಾರ

ಮೃತಪಟ್ಟ ವಲಸಿಗರ ಕುರಿತು ತನ್ನ ಬಳಿ ಯಾವುದೇ ಮಾಹಿತಿ ಇಲ್ಲ, ಆದ್ದರಿಂದ ಮೃತಪಟ್ಟವರಿಗೆ ಪರಿಹಾರ ಒದಗಿಸುವ ಪ್ರಶ್ನೆಯು ಏಳುವುದಿಲ್ಲ ಎಂದು ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯ ಸಂಸತ್ತಿಗೆ ತಿಳಿಸಿತ್ತು.

- Advertisement -
- Advertisement -

ವಲಸೆ ಹೊರಟಿದ್ದ ಕಾರ್ಮಿಕರ ಸಾವುಗಳ ಬಗ್ಗೆ ಯಾವುದೇ ಮಾಹಿತಿ ಇಲ್ಲ ಎಂದು ಕೇಂದ್ರ ಸರ್ಕಾರ ಹೇಳಿದ ಒಂದು ದಿನದ ನಂತರ, “ಕೊರೊನಾ ವೈರಸ್ ಹರಡುವುದನ್ನು ತಡೆಗಟ್ಟುವ ಸಲುವಾಗಿ ಮಾರ್ಚ್‌ನಿಂದ ದೇಶದಾದ್ಯಂತ ಲಾಕ್‌ಡೌನ್ ಮಾಡಿದ ನಂತರ ಸಾಮೂಹಿಕ ವಲಸೆಗೆ ಸುಳ್ಳುಸುದ್ಧಿಗಳೇ ಕಾರಣ” ಎಂದು ಕೇಂದ್ರ ಸರ್ಕಾರ ಮಂಗಳವಾರ ಸಂಸತ್ತಿನಲ್ಲಿ ಹೇಳಿದೆ.

ಮಾರ್ಚ್ 25 ರಂದು ಲಾಕ್‌ಡೌನ್ ಘೋಷಿಸುವ ಮೊದಲು ವಲಸೆ ಕಾರ್ಮಿಕರನ್ನು ರಕ್ಷಿಸಲು ಕೈಗೊಂಡ ಕ್ರಮಗಳ ಬಗ್ಗೆ ತೃಣಮೂಲ ಕಾಂಗ್ರೆಸ್‌ನ ಸಂಸದ ಮಾಲಾ ರಾಯ್ ಪ್ರಶ್ನಿಸಿದ್ದರು.

“ಹೆಚ್ಚಿನ ಸಂಖ್ಯೆಯ ವಲಸೆ ಕಾರ್ಮಿಕರ ವಲಸೆಯು ಲಾಕ್‌ಡೌನ್ ಅವಧಿಯ ಬಗ್ಗೆ ನಕಲಿ ಸುದ್ದಿಗಳಿಂದ ಉಂಟಾದ ಭೀತಿಯಿಂದ ಪ್ರಚೋದಿಸಲ್ಪಟ್ಟಿದ್ದು, ದೇಶದ ಜನರು, ವಿಶೇಷವಾಗಿ ವಲಸೆ ಕಾರ್ಮಿಕರು, ಆಹಾರ, ಕುಡಿಯುವ ನೀರು, ಆರೋಗ್ಯ ಸೇವೆಗಳು ಮತ್ತು ಆಶ್ರಯದಂತಹ ಮೂಲಭೂತ ಅವಶ್ಯಕತೆಗಳ ಸಮರ್ಪಕ ಪೂರೈಕೆಯ ಬಗ್ಗೆ ಚಿಂತಿತರಾಗಿದ್ದರು” ಎಂದು ಕೇಂದ್ರ ಸಚಿವ ನಿತ್ಯಾನಂದ್ ರೈ ಹೇಳಿದ್ದಾರೆ ಎಂದು ನ್ಯಾಷನಲ್ ಹೆರಾಲ್ಡ್ ವರದಿ ಮಾಡಿದೆ.

ಇದನ್ನೂ ಓದಿ: ಎಲ್ಲಾ ವಲಸೆ ಕಾರ್ಮಿಕರು ತಮ್ಮೂರು ತಲುಪಿದ್ದಾರೆಯೇ? ಎಷ್ಟು ಜನ ಉಳಿದುಕೊಂಡಿದ್ದಾರೆ? ಇಲ್ಲಿದೆ ಮಾಹಿತಿ

“ಆದಾಗ್ಯೂ, ಕೇಂದ್ರ ಸರ್ಕಾರವು ಈ ಬಗ್ಗೆ ಸಂಪೂರ್ಣ ಜಾಗೃತಿ ವಹಿಸಿತ್ತು. ಅನಿವಾರ್ಯವಾದ ಲಾಕ್‌ಡೌನ್ ಅವಧಿಯಲ್ಲಿ ಯಾವುದೇ ನಾಗರಿಕನೂ ಆಹಾರ, ಕುಡಿಯುವ ನೀರು, ವೈದ್ಯಕೀಯ ಸೌಲಭ್ಯಗಳು ಇತ್ಯಾದಿಗಳ ಮೂಲಭೂತ ಸೌಕರ್ಯಗಳಿಂದ ವಂಚಿತರಾಗಬಾರದು ಎಂಬ ಕಾರಣಕ್ಕೆ, ಅಗತ್ಯವಿರುವ ಎಲ್ಲ ಕ್ರಮಗಳನ್ನು ತೆಗೆದುಕೊಂಡರು” ಎಂದು ಸಚಿವರು ಹೇಳಿದರು.

“ಮಾರ್ಚ್ 28 ರಂದು ರಾಜ್ಯ ವಿಪತ್ತು ಪ್ರತಿಕ್ರಿಯೆ ನಿಧಿಯನ್ನು (SDRF) ಬಳಸಲು ಅವಕಾಶ ಮಾಡಿಕೊಟ್ಟು, “ಮನೆಯಿಲ್ಲದ ಜನರಿಗೆ ಮತ್ತು ವಲಸೆ ಕಾರ್ಮಿಕರಿಗೆ ತಾತ್ಕಾಲಿಕ ವಸತಿ, ಆಹಾರ, ಬಟ್ಟೆ, ವೈದ್ಯಕೀಯ ಆರೈಕೆ ಇತ್ಯಾದಿಗಳನ್ನು ಒದಗಿಸಲು ಕೇಂದ್ರವು ರಾಜ್ಯ ಸರ್ಕಾರಗಳಿಗೆ ಸೂಚಿಸಿತ್ತು. ಕೇಂದ್ರವು ರಾಜ್ಯ ವಿಪತ್ತು ನಿಧಿಯಿಂದ 11, 092 ಕೋಟಿ ಮುಂಗಡ ಹಣವನ್ನು ಏಪ್ರಿಲ್ 3 ರಂದು ರಾಜ್ಯಗಳಿಗೆ ಬಿಡುಗಡೆ ಮಾಡಿದೆ” ಎಂದು ಸಚಿವರು ಹೇಳಿದರು.

ಕೊರೊನಾ ಲಾಕ್‌ಡೌನ್ ವೇಳೆ ದೇಶದ ಹೆದ್ದಾರಿಗಳಲ್ಲಿ ರಕ್ತಸುರಿಸುತ್ತಾ ತಮ್ಮ ಮನೆಗೆ ಹೊರಟವರಲ್ಲಿ, ಮೃತಪಟ್ಟ ವಲಸಿಗರ ಕುರಿತು ತನ್ನ ಬಳಿ ಯಾವುದೇ ಮಾಹಿತಿ ಇಲ್ಲ, ಆದ್ದರಿಂದ ಮೃತಪಟ್ಟವರಿಗೆ ಪರಿಹಾರ ಒದಗಿಸುವ ಪ್ರಶ್ನೆಯು ಏಳುವುದಿಲ್ಲ ಎಂದು ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯ ಸಂಸತ್ತಿಗೆ ತಿಳಿಸಿತ್ತು.

ಇದನ್ನೂ ಓದಿ: ಯಾವೊಬ್ಬ ವಲಸೆ ಕಾರ್ಮಿಕರೂ ಆಹಾರವಿಲ್ಲದೆ ಸಾವನ್ನಪ್ಪಿಲ್ಲ: ನಳಿನ್ ಕುಮಾರ್‌ ಕಟೀಲ್

ವಲಸಿಗ ಕಾರ್ಮಿಕರು ಲಾಕ್‌ಡೌನ್ ವೇಳೆ ಎದುರಿಸಬಹುದಾದ ಸಂಕಷ್ಟವನ್ನು ಅಂದಾಜಿಸಲು ಕೇಂದ್ರ ಸರ್ಕಾರ ವಿಫಲವಾಗಿತ್ತೇ ಎಂಬ ಕುರಿತಾದ ಪ್ರಶ್ನಗೆ ಉತ್ತರಿಸಿದ ಕಾರ್ಮಿಕ ಮತ್ತು ಉದ್ಯೋಗ ರಾಜ್ಯ ಸಚಿವ ಸಂತೋಷ್ ಕುಮಾರ್ ಗಂಗ್ವಾರ್, “ಕೊರೊನಾ ಸಮಸ್ಯೆ ಹಾಗೂ ಲಾಕ್‌ಡೌನ್‍‌ನಿಂದಾಗಿ ಎದುರಾದ ಸಂಕಷ್ಟಗಳಿಗೆ ಕೇಂದ್ರ, ರಾಜ್ಯ ಸರಕಾರಗಳು, ಸ್ಥಳೀಯಾಡಳಿತ ಸಂಸ್ಥೆಗಳು, ವೈದ್ಯಕೀಯ ಸಿಬ್ಬಂದಿ, ಪೌರ ಕಾರ್ಮಿಕರು ಹಾಗೂ ಸರಕಾರೇತರ ಸಂಘಟನೆಗಳು ಸ್ಪಂದಿಸಿವೆ” ಎಂದು ಹೇಳಿದ್ದರು.

ಕೇಂದ್ರ ಸರ್ಕಾರವು ಕೇವಲ ಕೆಲವೆ ಗಂಟೆಗಳ ಅಂತರದಲ್ಲಿ ದೇಶದಾದ್ಯಂತ ಲಾಕ್‌ಡೌನ್ ಘೋಷಿಸಿದ ಪರಿಣಾಮದಿಂದಾಗಿ ಕೋಟ್ಯಾಂತರ ವಲಸೆ ಕಾರ್ಮಿಕರು ಸಂಕಷ್ಟಕ್ಕೆ ಸಿಲುಕಿ ತಮ್ಮ ಊರುಗಳಿಗೆ ತಲುಪಲು ಹರಸಾಹಸ ಪಡುವಂತಾಗಿತ್ತು.

ಇದರ ನಂತರ ದೇಶದ ಮಹಾವಲಸೆ ಪ್ರಾರಂಭವಾಗಿ ನೂರಾರು ಮಂದಿ ವಲಸೆ ಕಾರ್ಮಿಕರು ದೇಶದ ಹೆದ್ದಾರಿಗಳಲ್ಲಿ, ರೈಲುಗಳಲ್ಲಿ, ರೈಲಿನ ಹಳಿಗಳಲ್ಲಿ, ಅಫಘಾತ, ದಣಿವು ಹಾಗೂ ಹಸಿವಿನಿಂದ ಪ್ರಾಣ ಬಿಡುವಂತಾಯಿತು.


ಇದನ್ನೂ ಓದಿ: ಲಾಕ್‌‌ಡೌನ್‌ ಸಮಯದಲ್ಲಿ ಮೃತಪಟ್ಟ ವಲಸಿಗರ ಮಾಹಿತಿ ಇಲ್ಲ: ಕೇಂದ್ರ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...