Homeಮುಖಪುಟಕೊರೊನಾ ಲಾಕ್‌ಡೌನ್‌ : 1,70,000 ಕೋಟಿ ಪ್ಯಾಕೇಜ್‌ ಘೋಷಿಸಿದ ನಿರ್ಮಲ ಸೀತಾರಾಮನ್

ಕೊರೊನಾ ಲಾಕ್‌ಡೌನ್‌ : 1,70,000 ಕೋಟಿ ಪ್ಯಾಕೇಜ್‌ ಘೋಷಿಸಿದ ನಿರ್ಮಲ ಸೀತಾರಾಮನ್

ಬಡಮಹಿಳೆಯರಿಗೆ 20 ಕೋಟಿ ಮಹಿಳಾ ಜನಧನ್‌ ಅಕೌಂಟ್‌ಗಳಿಗೆ ತಿಂಗಳಿಗೆ 500 ರೂಗಳಂತೆ ಮುಂದಿನ ಮೂರು ತಿಂಗಳು ಹಾಕಲಾಗುವುದು.

- Advertisement -
- Advertisement -

ಕೊರೊನಾ ಲ್ಯಾಕ್‌ಡೌನ್‌ನಿಂದಾಗಿ ಆಪತ್ತಿನಲ್ಲಿರುವ ಜನರಿಗೆ ನೆರವಾಗಲು ಕೇಂದ್ರ ಸರ್ಕಾರ ಅಂತೂ ಮುಂದೆ ಬಂದಿದ್ದು, ಪ್ರಧಾನ ಮಂತ್ರಿ ಗರೀಬ್‌ ಕಲ್ಯಾಣ್‌ ಯೋಜನೆಯ ಹೆಸರಿನಲ್ಲಿ 1,70,000 ಕೋಟಿ ಪ್ಯಾಕೇಜ್‌ ಅನ್ನು ಹಣಕಾಸು ಸಚಿವೆ ನಿರ್ಮಲ ಸೀತಾರಾಮನ್ ಘೋಷಿಸಿದ್ದಾರೆ.

ಕರೋನಾ ವಿರುದ್ಧದ ಹೋರಾಟದ ಮುಂಚೂಣಿಯಲ್ಲಿರುವ ವೈದ್ಯರು, ದಾದಿಯರು, ಅರೆವೈದ್ಯರು, ಆಶಾ ಕಾರ್ಯಕರ್ತರಿಗೆ ಎಲ್ಲರಿಗೂ ಸರ್ಕಾರವು ಪ್ರತಿ ವ್ಯಕ್ತಿಗೆ 50 ಲಕ್ಷ ರೂಗಳ ಇನ್ಸೂರೆನ್ಸ್‌ ಘೋಷಿಸಿದ್ದಾರೆ.

“ಮಹಿಳೆಯರು, ವಲಸೆ ಕಾರ್ಮಿಕರು ಮತ್ತು ಸಮಾಜದ ಹಿಂದುಳಿದ ವರ್ಗವನ್ನು ತಲುಪಲು ಸರ್ಕಾರ ಕೆಲಸ ಮಾಡುತ್ತಿದೆ. ಈ ಜನರ ಕಳವಳಗಳನ್ನು ಪರಿಹರಿಸುವ ಪ್ಯಾಕೇಜ್‌ನೊಂದಿಗೆ ನಾವು ಹೊರಬಂದಿದ್ದೇವೆ. ನಾವು ಎರಡು ಅಂಶಗಳನ್ನು ನೋಡುತ್ತಿದ್ದೇವೆ: ನಗದು ವರ್ಗಾವಣೆ ಮತ್ತು ಆಹಾರ ಭದ್ರತೆಗೆ ಸಂಬಂಧಿಸಿದ ಕ್ರಮಗಳು” ಎಂದು ಸೀತಾರಾಮನ್ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.

“ಯಾರಾದರೂ ಹಸಿವಿನಿಂದ ಅಥವಾ ಹಣವಿಲ್ಲದೆ ಇರಬೇಕೆಂದು ನಾವು ಬಯಸುವುದಿಲ್ಲ. ಆದ್ದರಿಂದ ನಾವು ಸಾಕಷ್ಟು ನೀಡುತ್ತೇವೆ” ಎಂದು ಅವರು ನಗರ ಮತ್ತು ಗ್ರಾಮೀಣ ಬಡವರಿಗೆ 1,70,000 ಕೋಟಿ ರೂ ಘೋಷಿಸುತ್ತೆವೆ ಎಂದಿದ್ದಾರೆ.

ಯಾವ ಯಾವ ಕ್ಷೇತ್ರಕ್ಕೆ ಎಷ್ಟು ಎಷ್ಟು?

ಬಡವರಿಗೆ ಮತ್ತು ನಿರ್ಗತಿಕರಿಗೆ ಮುಂದಿನ ತಿಂಗಳುಗಳಲ್ಲಿ 5 ಕೆಜಿ ಹೆಚ್ಚುವರಿ ಗೋಧಿ ಮತ್ತು ಅಕ್ಕಿಯನ್ನು ಉಚಿತವಾಗಿ ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯಡಿ ನೀಡಲಾಗುವುದು. ಮುಂದಿನ ಮೂರು ತಿಂಗಳವರೆಗೆ ಅವರಿಗೆ 1 ಕೆಜಿ ದ್ವಿದಳ ಧಾನ್ಯಗಳನ್ನು ಉಚಿತವಾಗಿ ನೀಡಲಾಗುವುದು.

ಮಹಾತ್ಮ ಗಾಂಧಿ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ 5 ಕೋಟಿ ಕುಟುಂಬಗಳಿಗೆ: ಕೂಲಿ 182ರಿಂದ 202ಕ್ಕೆ ಏರಿಕೆ. 2000/- ಒಬ್ಬ ಕಾರ್ಮಿಕನಿಗೆ ಮೀಸಲು.

ರೈತರಿಗೆ: 8.69 ಕೋಟಿ ರೈತರಿಗೆ ತಲಾ 2000 ರೂ ಕೊಡುವ ಯೋಜನೆ ಏಪ್ರಿಲ್‌ 1ರಂದು ರೈತರ ಖಾತೆಗೆಳಿಗೆ ವರ್ಗಾವಣೆ.

ಹಿರಿಯ ನಾಗರಿಕರಿಗೆ, ವಿಧವೆಯರಿಗೆ ಮತ್ತು ವಿಕಲಚೇತನರಿಗೆ: 1000/- ರೂಗಳನ್ನು ಎರಡು ಕಂತುಗಳಲ್ಲಿ, 3 ತಿಂಗಳಲ್ಲಿ ನೀಡಲಾಗುವುದು. ನೇರ ಅವರ ಖಾತೆಗೆ ವರ್ಗಾವಣೆಯಾಗಲಿದೆ. ಇದು 3 ಕೋಟಿ ಜನರಿಗೆ ಅನ್ವಯಲಾಗಲಿದೆ.

ಬಡಮಹಿಳೆಯರಿಗೆ: 20 ಕೋಟಿ ಮಹಿಳಾ ಜನಧನ್‌ ಅಕೌಂಟ್‌ಗಳಿಗೆ ತಿಂಗಳಿಗೆ 500 ರೂಗಳಂತೆ ಮುಂದಿನ ಮೂರು ತಿಂಗಳು ಹಾಕಲಾಗುವುದು.

ಉಜ್ವಲ ಯೋಜನೆಯ ಗ್ಯಾಸ್‌ ಯೋಜನೆಯ 8.3 ಕೋಟಿ ಬಿಪಿಲ್‌ ಕುಟುಂಬಗಳಿಗೆ 3 ತಿಂಗಳು ಉಚಿತ ಗ್ಯಾಸ್‌ ಸಿಲಿಂಡರ್‌ ಒದಗಿಸಲಾಗುತ್ತದೆ.

ಮಹಿಳಾ ಸ್ವಸಹಾಯ ಗುಂಪುಗಳಿಗೆ : 63 ಲಕ್ಷ ಸ್ವಸಹಾಯ ಸಂಘಗಳ 7 ಕೋಟಿ ಕುಟುಂಬಗಳಿಗೆ ದೀನ್‌ ದಯಾಳ್‌ ಉಪಾಧ್ಯಾಯ ಯೋಜನೆಯ ಭಾಗವಾಗಿ 10 ಲಕ್ಷದ ಸಾಲದ ಬದಲಿಗೆ 20 ಲಕ್ಷ ಸಾಲ ಮಂಜೂರು.

ಇಪಿಎಫ್‌ ಹಣವನ್ನು ಮೂರು ತಿಂಗಳಿಗೆ ಸರ್ಕಾರವೇ ಭರಿಸಲಿದೆ. ಅಂದರೆ  ಉದ್ಯೋಗಿಯ 12% ಮತ್ತು ಸರ್ಕಾರದ 12% ಎರಡನ್ನೂ ಸರ್ಕಾರವೇ ಭರಿಸಲಿದೆ.

ಕಟ್ಟಡ ಕಾರ್ಮಿಕರಿಗೆ: ಕಾರ್ಮಿಕರ ಕಲ್ಯಾಣ ಮಂಡಳಿಯಿಂದ 3.5 ನೋಂದಾಯಿತ ಕಾರ್ಮಿಕರಿಗೆ ಕಲ್ಯಾಣ ನಿಧಿಯಿಂದ 31,000 ಕೋಟಿ ಹಣವನ್ನು ಬಳಸಲು ಮುಂದಾಗಿದೆ. ರಾಜ್ಯ ಸರ್ಕಾರದ ಮೂಲಕ ಅದರ ಬಳಕೆಗೆ ನಿರ್ದೇಶನ ನೀಡಲಾಗುವುದು.

ಜಿಲ್ಲಾ ಮಿನರಲ್‌ ಫಂಡ್‌: ಮೆಡಿಕಲ್‌ ಟೆಸ್ಟ್‌, ಸ್ಕ್ರೀನಿಂಗ್‌ ಸೇರಿದಂತೆ ಉಳಿದ ಕೆಲಸಗಳಿಗೆ ಬಳಸಬಹುದು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...