Homeಮುಖಪುಟಕೊರೊನಾ ಲಾಕ್‌ಡೌನ್‌ : 1,70,000 ಕೋಟಿ ಪ್ಯಾಕೇಜ್‌ ಘೋಷಿಸಿದ ನಿರ್ಮಲ ಸೀತಾರಾಮನ್

ಕೊರೊನಾ ಲಾಕ್‌ಡೌನ್‌ : 1,70,000 ಕೋಟಿ ಪ್ಯಾಕೇಜ್‌ ಘೋಷಿಸಿದ ನಿರ್ಮಲ ಸೀತಾರಾಮನ್

ಬಡಮಹಿಳೆಯರಿಗೆ 20 ಕೋಟಿ ಮಹಿಳಾ ಜನಧನ್‌ ಅಕೌಂಟ್‌ಗಳಿಗೆ ತಿಂಗಳಿಗೆ 500 ರೂಗಳಂತೆ ಮುಂದಿನ ಮೂರು ತಿಂಗಳು ಹಾಕಲಾಗುವುದು.

- Advertisement -
- Advertisement -

ಕೊರೊನಾ ಲ್ಯಾಕ್‌ಡೌನ್‌ನಿಂದಾಗಿ ಆಪತ್ತಿನಲ್ಲಿರುವ ಜನರಿಗೆ ನೆರವಾಗಲು ಕೇಂದ್ರ ಸರ್ಕಾರ ಅಂತೂ ಮುಂದೆ ಬಂದಿದ್ದು, ಪ್ರಧಾನ ಮಂತ್ರಿ ಗರೀಬ್‌ ಕಲ್ಯಾಣ್‌ ಯೋಜನೆಯ ಹೆಸರಿನಲ್ಲಿ 1,70,000 ಕೋಟಿ ಪ್ಯಾಕೇಜ್‌ ಅನ್ನು ಹಣಕಾಸು ಸಚಿವೆ ನಿರ್ಮಲ ಸೀತಾರಾಮನ್ ಘೋಷಿಸಿದ್ದಾರೆ.

ಕರೋನಾ ವಿರುದ್ಧದ ಹೋರಾಟದ ಮುಂಚೂಣಿಯಲ್ಲಿರುವ ವೈದ್ಯರು, ದಾದಿಯರು, ಅರೆವೈದ್ಯರು, ಆಶಾ ಕಾರ್ಯಕರ್ತರಿಗೆ ಎಲ್ಲರಿಗೂ ಸರ್ಕಾರವು ಪ್ರತಿ ವ್ಯಕ್ತಿಗೆ 50 ಲಕ್ಷ ರೂಗಳ ಇನ್ಸೂರೆನ್ಸ್‌ ಘೋಷಿಸಿದ್ದಾರೆ.

“ಮಹಿಳೆಯರು, ವಲಸೆ ಕಾರ್ಮಿಕರು ಮತ್ತು ಸಮಾಜದ ಹಿಂದುಳಿದ ವರ್ಗವನ್ನು ತಲುಪಲು ಸರ್ಕಾರ ಕೆಲಸ ಮಾಡುತ್ತಿದೆ. ಈ ಜನರ ಕಳವಳಗಳನ್ನು ಪರಿಹರಿಸುವ ಪ್ಯಾಕೇಜ್‌ನೊಂದಿಗೆ ನಾವು ಹೊರಬಂದಿದ್ದೇವೆ. ನಾವು ಎರಡು ಅಂಶಗಳನ್ನು ನೋಡುತ್ತಿದ್ದೇವೆ: ನಗದು ವರ್ಗಾವಣೆ ಮತ್ತು ಆಹಾರ ಭದ್ರತೆಗೆ ಸಂಬಂಧಿಸಿದ ಕ್ರಮಗಳು” ಎಂದು ಸೀತಾರಾಮನ್ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.

“ಯಾರಾದರೂ ಹಸಿವಿನಿಂದ ಅಥವಾ ಹಣವಿಲ್ಲದೆ ಇರಬೇಕೆಂದು ನಾವು ಬಯಸುವುದಿಲ್ಲ. ಆದ್ದರಿಂದ ನಾವು ಸಾಕಷ್ಟು ನೀಡುತ್ತೇವೆ” ಎಂದು ಅವರು ನಗರ ಮತ್ತು ಗ್ರಾಮೀಣ ಬಡವರಿಗೆ 1,70,000 ಕೋಟಿ ರೂ ಘೋಷಿಸುತ್ತೆವೆ ಎಂದಿದ್ದಾರೆ.

ಯಾವ ಯಾವ ಕ್ಷೇತ್ರಕ್ಕೆ ಎಷ್ಟು ಎಷ್ಟು?

ಬಡವರಿಗೆ ಮತ್ತು ನಿರ್ಗತಿಕರಿಗೆ ಮುಂದಿನ ತಿಂಗಳುಗಳಲ್ಲಿ 5 ಕೆಜಿ ಹೆಚ್ಚುವರಿ ಗೋಧಿ ಮತ್ತು ಅಕ್ಕಿಯನ್ನು ಉಚಿತವಾಗಿ ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯಡಿ ನೀಡಲಾಗುವುದು. ಮುಂದಿನ ಮೂರು ತಿಂಗಳವರೆಗೆ ಅವರಿಗೆ 1 ಕೆಜಿ ದ್ವಿದಳ ಧಾನ್ಯಗಳನ್ನು ಉಚಿತವಾಗಿ ನೀಡಲಾಗುವುದು.

ಮಹಾತ್ಮ ಗಾಂಧಿ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ 5 ಕೋಟಿ ಕುಟುಂಬಗಳಿಗೆ: ಕೂಲಿ 182ರಿಂದ 202ಕ್ಕೆ ಏರಿಕೆ. 2000/- ಒಬ್ಬ ಕಾರ್ಮಿಕನಿಗೆ ಮೀಸಲು.

ರೈತರಿಗೆ: 8.69 ಕೋಟಿ ರೈತರಿಗೆ ತಲಾ 2000 ರೂ ಕೊಡುವ ಯೋಜನೆ ಏಪ್ರಿಲ್‌ 1ರಂದು ರೈತರ ಖಾತೆಗೆಳಿಗೆ ವರ್ಗಾವಣೆ.

ಹಿರಿಯ ನಾಗರಿಕರಿಗೆ, ವಿಧವೆಯರಿಗೆ ಮತ್ತು ವಿಕಲಚೇತನರಿಗೆ: 1000/- ರೂಗಳನ್ನು ಎರಡು ಕಂತುಗಳಲ್ಲಿ, 3 ತಿಂಗಳಲ್ಲಿ ನೀಡಲಾಗುವುದು. ನೇರ ಅವರ ಖಾತೆಗೆ ವರ್ಗಾವಣೆಯಾಗಲಿದೆ. ಇದು 3 ಕೋಟಿ ಜನರಿಗೆ ಅನ್ವಯಲಾಗಲಿದೆ.

ಬಡಮಹಿಳೆಯರಿಗೆ: 20 ಕೋಟಿ ಮಹಿಳಾ ಜನಧನ್‌ ಅಕೌಂಟ್‌ಗಳಿಗೆ ತಿಂಗಳಿಗೆ 500 ರೂಗಳಂತೆ ಮುಂದಿನ ಮೂರು ತಿಂಗಳು ಹಾಕಲಾಗುವುದು.

ಉಜ್ವಲ ಯೋಜನೆಯ ಗ್ಯಾಸ್‌ ಯೋಜನೆಯ 8.3 ಕೋಟಿ ಬಿಪಿಲ್‌ ಕುಟುಂಬಗಳಿಗೆ 3 ತಿಂಗಳು ಉಚಿತ ಗ್ಯಾಸ್‌ ಸಿಲಿಂಡರ್‌ ಒದಗಿಸಲಾಗುತ್ತದೆ.

ಮಹಿಳಾ ಸ್ವಸಹಾಯ ಗುಂಪುಗಳಿಗೆ : 63 ಲಕ್ಷ ಸ್ವಸಹಾಯ ಸಂಘಗಳ 7 ಕೋಟಿ ಕುಟುಂಬಗಳಿಗೆ ದೀನ್‌ ದಯಾಳ್‌ ಉಪಾಧ್ಯಾಯ ಯೋಜನೆಯ ಭಾಗವಾಗಿ 10 ಲಕ್ಷದ ಸಾಲದ ಬದಲಿಗೆ 20 ಲಕ್ಷ ಸಾಲ ಮಂಜೂರು.

ಇಪಿಎಫ್‌ ಹಣವನ್ನು ಮೂರು ತಿಂಗಳಿಗೆ ಸರ್ಕಾರವೇ ಭರಿಸಲಿದೆ. ಅಂದರೆ  ಉದ್ಯೋಗಿಯ 12% ಮತ್ತು ಸರ್ಕಾರದ 12% ಎರಡನ್ನೂ ಸರ್ಕಾರವೇ ಭರಿಸಲಿದೆ.

ಕಟ್ಟಡ ಕಾರ್ಮಿಕರಿಗೆ: ಕಾರ್ಮಿಕರ ಕಲ್ಯಾಣ ಮಂಡಳಿಯಿಂದ 3.5 ನೋಂದಾಯಿತ ಕಾರ್ಮಿಕರಿಗೆ ಕಲ್ಯಾಣ ನಿಧಿಯಿಂದ 31,000 ಕೋಟಿ ಹಣವನ್ನು ಬಳಸಲು ಮುಂದಾಗಿದೆ. ರಾಜ್ಯ ಸರ್ಕಾರದ ಮೂಲಕ ಅದರ ಬಳಕೆಗೆ ನಿರ್ದೇಶನ ನೀಡಲಾಗುವುದು.

ಜಿಲ್ಲಾ ಮಿನರಲ್‌ ಫಂಡ್‌: ಮೆಡಿಕಲ್‌ ಟೆಸ್ಟ್‌, ಸ್ಕ್ರೀನಿಂಗ್‌ ಸೇರಿದಂತೆ ಉಳಿದ ಕೆಲಸಗಳಿಗೆ ಬಳಸಬಹುದು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...