Homeಮುಖಪುಟಕೊರೊನಾ ಲಾಕ್‌ಡೌನ್‌ : 1,70,000 ಕೋಟಿ ಪ್ಯಾಕೇಜ್‌ ಘೋಷಿಸಿದ ನಿರ್ಮಲ ಸೀತಾರಾಮನ್

ಕೊರೊನಾ ಲಾಕ್‌ಡೌನ್‌ : 1,70,000 ಕೋಟಿ ಪ್ಯಾಕೇಜ್‌ ಘೋಷಿಸಿದ ನಿರ್ಮಲ ಸೀತಾರಾಮನ್

ಬಡಮಹಿಳೆಯರಿಗೆ 20 ಕೋಟಿ ಮಹಿಳಾ ಜನಧನ್‌ ಅಕೌಂಟ್‌ಗಳಿಗೆ ತಿಂಗಳಿಗೆ 500 ರೂಗಳಂತೆ ಮುಂದಿನ ಮೂರು ತಿಂಗಳು ಹಾಕಲಾಗುವುದು.

- Advertisement -
- Advertisement -

ಕೊರೊನಾ ಲ್ಯಾಕ್‌ಡೌನ್‌ನಿಂದಾಗಿ ಆಪತ್ತಿನಲ್ಲಿರುವ ಜನರಿಗೆ ನೆರವಾಗಲು ಕೇಂದ್ರ ಸರ್ಕಾರ ಅಂತೂ ಮುಂದೆ ಬಂದಿದ್ದು, ಪ್ರಧಾನ ಮಂತ್ರಿ ಗರೀಬ್‌ ಕಲ್ಯಾಣ್‌ ಯೋಜನೆಯ ಹೆಸರಿನಲ್ಲಿ 1,70,000 ಕೋಟಿ ಪ್ಯಾಕೇಜ್‌ ಅನ್ನು ಹಣಕಾಸು ಸಚಿವೆ ನಿರ್ಮಲ ಸೀತಾರಾಮನ್ ಘೋಷಿಸಿದ್ದಾರೆ.

ಕರೋನಾ ವಿರುದ್ಧದ ಹೋರಾಟದ ಮುಂಚೂಣಿಯಲ್ಲಿರುವ ವೈದ್ಯರು, ದಾದಿಯರು, ಅರೆವೈದ್ಯರು, ಆಶಾ ಕಾರ್ಯಕರ್ತರಿಗೆ ಎಲ್ಲರಿಗೂ ಸರ್ಕಾರವು ಪ್ರತಿ ವ್ಯಕ್ತಿಗೆ 50 ಲಕ್ಷ ರೂಗಳ ಇನ್ಸೂರೆನ್ಸ್‌ ಘೋಷಿಸಿದ್ದಾರೆ.

“ಮಹಿಳೆಯರು, ವಲಸೆ ಕಾರ್ಮಿಕರು ಮತ್ತು ಸಮಾಜದ ಹಿಂದುಳಿದ ವರ್ಗವನ್ನು ತಲುಪಲು ಸರ್ಕಾರ ಕೆಲಸ ಮಾಡುತ್ತಿದೆ. ಈ ಜನರ ಕಳವಳಗಳನ್ನು ಪರಿಹರಿಸುವ ಪ್ಯಾಕೇಜ್‌ನೊಂದಿಗೆ ನಾವು ಹೊರಬಂದಿದ್ದೇವೆ. ನಾವು ಎರಡು ಅಂಶಗಳನ್ನು ನೋಡುತ್ತಿದ್ದೇವೆ: ನಗದು ವರ್ಗಾವಣೆ ಮತ್ತು ಆಹಾರ ಭದ್ರತೆಗೆ ಸಂಬಂಧಿಸಿದ ಕ್ರಮಗಳು” ಎಂದು ಸೀತಾರಾಮನ್ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.

“ಯಾರಾದರೂ ಹಸಿವಿನಿಂದ ಅಥವಾ ಹಣವಿಲ್ಲದೆ ಇರಬೇಕೆಂದು ನಾವು ಬಯಸುವುದಿಲ್ಲ. ಆದ್ದರಿಂದ ನಾವು ಸಾಕಷ್ಟು ನೀಡುತ್ತೇವೆ” ಎಂದು ಅವರು ನಗರ ಮತ್ತು ಗ್ರಾಮೀಣ ಬಡವರಿಗೆ 1,70,000 ಕೋಟಿ ರೂ ಘೋಷಿಸುತ್ತೆವೆ ಎಂದಿದ್ದಾರೆ.

ಯಾವ ಯಾವ ಕ್ಷೇತ್ರಕ್ಕೆ ಎಷ್ಟು ಎಷ್ಟು?

ಬಡವರಿಗೆ ಮತ್ತು ನಿರ್ಗತಿಕರಿಗೆ ಮುಂದಿನ ತಿಂಗಳುಗಳಲ್ಲಿ 5 ಕೆಜಿ ಹೆಚ್ಚುವರಿ ಗೋಧಿ ಮತ್ತು ಅಕ್ಕಿಯನ್ನು ಉಚಿತವಾಗಿ ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯಡಿ ನೀಡಲಾಗುವುದು. ಮುಂದಿನ ಮೂರು ತಿಂಗಳವರೆಗೆ ಅವರಿಗೆ 1 ಕೆಜಿ ದ್ವಿದಳ ಧಾನ್ಯಗಳನ್ನು ಉಚಿತವಾಗಿ ನೀಡಲಾಗುವುದು.

ಮಹಾತ್ಮ ಗಾಂಧಿ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ 5 ಕೋಟಿ ಕುಟುಂಬಗಳಿಗೆ: ಕೂಲಿ 182ರಿಂದ 202ಕ್ಕೆ ಏರಿಕೆ. 2000/- ಒಬ್ಬ ಕಾರ್ಮಿಕನಿಗೆ ಮೀಸಲು.

ರೈತರಿಗೆ: 8.69 ಕೋಟಿ ರೈತರಿಗೆ ತಲಾ 2000 ರೂ ಕೊಡುವ ಯೋಜನೆ ಏಪ್ರಿಲ್‌ 1ರಂದು ರೈತರ ಖಾತೆಗೆಳಿಗೆ ವರ್ಗಾವಣೆ.

ಹಿರಿಯ ನಾಗರಿಕರಿಗೆ, ವಿಧವೆಯರಿಗೆ ಮತ್ತು ವಿಕಲಚೇತನರಿಗೆ: 1000/- ರೂಗಳನ್ನು ಎರಡು ಕಂತುಗಳಲ್ಲಿ, 3 ತಿಂಗಳಲ್ಲಿ ನೀಡಲಾಗುವುದು. ನೇರ ಅವರ ಖಾತೆಗೆ ವರ್ಗಾವಣೆಯಾಗಲಿದೆ. ಇದು 3 ಕೋಟಿ ಜನರಿಗೆ ಅನ್ವಯಲಾಗಲಿದೆ.

ಬಡಮಹಿಳೆಯರಿಗೆ: 20 ಕೋಟಿ ಮಹಿಳಾ ಜನಧನ್‌ ಅಕೌಂಟ್‌ಗಳಿಗೆ ತಿಂಗಳಿಗೆ 500 ರೂಗಳಂತೆ ಮುಂದಿನ ಮೂರು ತಿಂಗಳು ಹಾಕಲಾಗುವುದು.

ಉಜ್ವಲ ಯೋಜನೆಯ ಗ್ಯಾಸ್‌ ಯೋಜನೆಯ 8.3 ಕೋಟಿ ಬಿಪಿಲ್‌ ಕುಟುಂಬಗಳಿಗೆ 3 ತಿಂಗಳು ಉಚಿತ ಗ್ಯಾಸ್‌ ಸಿಲಿಂಡರ್‌ ಒದಗಿಸಲಾಗುತ್ತದೆ.

ಮಹಿಳಾ ಸ್ವಸಹಾಯ ಗುಂಪುಗಳಿಗೆ : 63 ಲಕ್ಷ ಸ್ವಸಹಾಯ ಸಂಘಗಳ 7 ಕೋಟಿ ಕುಟುಂಬಗಳಿಗೆ ದೀನ್‌ ದಯಾಳ್‌ ಉಪಾಧ್ಯಾಯ ಯೋಜನೆಯ ಭಾಗವಾಗಿ 10 ಲಕ್ಷದ ಸಾಲದ ಬದಲಿಗೆ 20 ಲಕ್ಷ ಸಾಲ ಮಂಜೂರು.

ಇಪಿಎಫ್‌ ಹಣವನ್ನು ಮೂರು ತಿಂಗಳಿಗೆ ಸರ್ಕಾರವೇ ಭರಿಸಲಿದೆ. ಅಂದರೆ  ಉದ್ಯೋಗಿಯ 12% ಮತ್ತು ಸರ್ಕಾರದ 12% ಎರಡನ್ನೂ ಸರ್ಕಾರವೇ ಭರಿಸಲಿದೆ.

ಕಟ್ಟಡ ಕಾರ್ಮಿಕರಿಗೆ: ಕಾರ್ಮಿಕರ ಕಲ್ಯಾಣ ಮಂಡಳಿಯಿಂದ 3.5 ನೋಂದಾಯಿತ ಕಾರ್ಮಿಕರಿಗೆ ಕಲ್ಯಾಣ ನಿಧಿಯಿಂದ 31,000 ಕೋಟಿ ಹಣವನ್ನು ಬಳಸಲು ಮುಂದಾಗಿದೆ. ರಾಜ್ಯ ಸರ್ಕಾರದ ಮೂಲಕ ಅದರ ಬಳಕೆಗೆ ನಿರ್ದೇಶನ ನೀಡಲಾಗುವುದು.

ಜಿಲ್ಲಾ ಮಿನರಲ್‌ ಫಂಡ್‌: ಮೆಡಿಕಲ್‌ ಟೆಸ್ಟ್‌, ಸ್ಕ್ರೀನಿಂಗ್‌ ಸೇರಿದಂತೆ ಉಳಿದ ಕೆಲಸಗಳಿಗೆ ಬಳಸಬಹುದು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...