Homeಮುಖಪುಟಕೊರೊನಾ ಲಾಕ್‌ಡೌನ್‌ : 1,70,000 ಕೋಟಿ ಪ್ಯಾಕೇಜ್‌ ಘೋಷಿಸಿದ ನಿರ್ಮಲ ಸೀತಾರಾಮನ್

ಕೊರೊನಾ ಲಾಕ್‌ಡೌನ್‌ : 1,70,000 ಕೋಟಿ ಪ್ಯಾಕೇಜ್‌ ಘೋಷಿಸಿದ ನಿರ್ಮಲ ಸೀತಾರಾಮನ್

ಬಡಮಹಿಳೆಯರಿಗೆ 20 ಕೋಟಿ ಮಹಿಳಾ ಜನಧನ್‌ ಅಕೌಂಟ್‌ಗಳಿಗೆ ತಿಂಗಳಿಗೆ 500 ರೂಗಳಂತೆ ಮುಂದಿನ ಮೂರು ತಿಂಗಳು ಹಾಕಲಾಗುವುದು.

- Advertisement -
- Advertisement -

ಕೊರೊನಾ ಲ್ಯಾಕ್‌ಡೌನ್‌ನಿಂದಾಗಿ ಆಪತ್ತಿನಲ್ಲಿರುವ ಜನರಿಗೆ ನೆರವಾಗಲು ಕೇಂದ್ರ ಸರ್ಕಾರ ಅಂತೂ ಮುಂದೆ ಬಂದಿದ್ದು, ಪ್ರಧಾನ ಮಂತ್ರಿ ಗರೀಬ್‌ ಕಲ್ಯಾಣ್‌ ಯೋಜನೆಯ ಹೆಸರಿನಲ್ಲಿ 1,70,000 ಕೋಟಿ ಪ್ಯಾಕೇಜ್‌ ಅನ್ನು ಹಣಕಾಸು ಸಚಿವೆ ನಿರ್ಮಲ ಸೀತಾರಾಮನ್ ಘೋಷಿಸಿದ್ದಾರೆ.

ಕರೋನಾ ವಿರುದ್ಧದ ಹೋರಾಟದ ಮುಂಚೂಣಿಯಲ್ಲಿರುವ ವೈದ್ಯರು, ದಾದಿಯರು, ಅರೆವೈದ್ಯರು, ಆಶಾ ಕಾರ್ಯಕರ್ತರಿಗೆ ಎಲ್ಲರಿಗೂ ಸರ್ಕಾರವು ಪ್ರತಿ ವ್ಯಕ್ತಿಗೆ 50 ಲಕ್ಷ ರೂಗಳ ಇನ್ಸೂರೆನ್ಸ್‌ ಘೋಷಿಸಿದ್ದಾರೆ.

“ಮಹಿಳೆಯರು, ವಲಸೆ ಕಾರ್ಮಿಕರು ಮತ್ತು ಸಮಾಜದ ಹಿಂದುಳಿದ ವರ್ಗವನ್ನು ತಲುಪಲು ಸರ್ಕಾರ ಕೆಲಸ ಮಾಡುತ್ತಿದೆ. ಈ ಜನರ ಕಳವಳಗಳನ್ನು ಪರಿಹರಿಸುವ ಪ್ಯಾಕೇಜ್‌ನೊಂದಿಗೆ ನಾವು ಹೊರಬಂದಿದ್ದೇವೆ. ನಾವು ಎರಡು ಅಂಶಗಳನ್ನು ನೋಡುತ್ತಿದ್ದೇವೆ: ನಗದು ವರ್ಗಾವಣೆ ಮತ್ತು ಆಹಾರ ಭದ್ರತೆಗೆ ಸಂಬಂಧಿಸಿದ ಕ್ರಮಗಳು” ಎಂದು ಸೀತಾರಾಮನ್ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.

“ಯಾರಾದರೂ ಹಸಿವಿನಿಂದ ಅಥವಾ ಹಣವಿಲ್ಲದೆ ಇರಬೇಕೆಂದು ನಾವು ಬಯಸುವುದಿಲ್ಲ. ಆದ್ದರಿಂದ ನಾವು ಸಾಕಷ್ಟು ನೀಡುತ್ತೇವೆ” ಎಂದು ಅವರು ನಗರ ಮತ್ತು ಗ್ರಾಮೀಣ ಬಡವರಿಗೆ 1,70,000 ಕೋಟಿ ರೂ ಘೋಷಿಸುತ್ತೆವೆ ಎಂದಿದ್ದಾರೆ.

ಯಾವ ಯಾವ ಕ್ಷೇತ್ರಕ್ಕೆ ಎಷ್ಟು ಎಷ್ಟು?

ಬಡವರಿಗೆ ಮತ್ತು ನಿರ್ಗತಿಕರಿಗೆ ಮುಂದಿನ ತಿಂಗಳುಗಳಲ್ಲಿ 5 ಕೆಜಿ ಹೆಚ್ಚುವರಿ ಗೋಧಿ ಮತ್ತು ಅಕ್ಕಿಯನ್ನು ಉಚಿತವಾಗಿ ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯಡಿ ನೀಡಲಾಗುವುದು. ಮುಂದಿನ ಮೂರು ತಿಂಗಳವರೆಗೆ ಅವರಿಗೆ 1 ಕೆಜಿ ದ್ವಿದಳ ಧಾನ್ಯಗಳನ್ನು ಉಚಿತವಾಗಿ ನೀಡಲಾಗುವುದು.

ಮಹಾತ್ಮ ಗಾಂಧಿ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ 5 ಕೋಟಿ ಕುಟುಂಬಗಳಿಗೆ: ಕೂಲಿ 182ರಿಂದ 202ಕ್ಕೆ ಏರಿಕೆ. 2000/- ಒಬ್ಬ ಕಾರ್ಮಿಕನಿಗೆ ಮೀಸಲು.

ರೈತರಿಗೆ: 8.69 ಕೋಟಿ ರೈತರಿಗೆ ತಲಾ 2000 ರೂ ಕೊಡುವ ಯೋಜನೆ ಏಪ್ರಿಲ್‌ 1ರಂದು ರೈತರ ಖಾತೆಗೆಳಿಗೆ ವರ್ಗಾವಣೆ.

ಹಿರಿಯ ನಾಗರಿಕರಿಗೆ, ವಿಧವೆಯರಿಗೆ ಮತ್ತು ವಿಕಲಚೇತನರಿಗೆ: 1000/- ರೂಗಳನ್ನು ಎರಡು ಕಂತುಗಳಲ್ಲಿ, 3 ತಿಂಗಳಲ್ಲಿ ನೀಡಲಾಗುವುದು. ನೇರ ಅವರ ಖಾತೆಗೆ ವರ್ಗಾವಣೆಯಾಗಲಿದೆ. ಇದು 3 ಕೋಟಿ ಜನರಿಗೆ ಅನ್ವಯಲಾಗಲಿದೆ.

ಬಡಮಹಿಳೆಯರಿಗೆ: 20 ಕೋಟಿ ಮಹಿಳಾ ಜನಧನ್‌ ಅಕೌಂಟ್‌ಗಳಿಗೆ ತಿಂಗಳಿಗೆ 500 ರೂಗಳಂತೆ ಮುಂದಿನ ಮೂರು ತಿಂಗಳು ಹಾಕಲಾಗುವುದು.

ಉಜ್ವಲ ಯೋಜನೆಯ ಗ್ಯಾಸ್‌ ಯೋಜನೆಯ 8.3 ಕೋಟಿ ಬಿಪಿಲ್‌ ಕುಟುಂಬಗಳಿಗೆ 3 ತಿಂಗಳು ಉಚಿತ ಗ್ಯಾಸ್‌ ಸಿಲಿಂಡರ್‌ ಒದಗಿಸಲಾಗುತ್ತದೆ.

ಮಹಿಳಾ ಸ್ವಸಹಾಯ ಗುಂಪುಗಳಿಗೆ : 63 ಲಕ್ಷ ಸ್ವಸಹಾಯ ಸಂಘಗಳ 7 ಕೋಟಿ ಕುಟುಂಬಗಳಿಗೆ ದೀನ್‌ ದಯಾಳ್‌ ಉಪಾಧ್ಯಾಯ ಯೋಜನೆಯ ಭಾಗವಾಗಿ 10 ಲಕ್ಷದ ಸಾಲದ ಬದಲಿಗೆ 20 ಲಕ್ಷ ಸಾಲ ಮಂಜೂರು.

ಇಪಿಎಫ್‌ ಹಣವನ್ನು ಮೂರು ತಿಂಗಳಿಗೆ ಸರ್ಕಾರವೇ ಭರಿಸಲಿದೆ. ಅಂದರೆ  ಉದ್ಯೋಗಿಯ 12% ಮತ್ತು ಸರ್ಕಾರದ 12% ಎರಡನ್ನೂ ಸರ್ಕಾರವೇ ಭರಿಸಲಿದೆ.

ಕಟ್ಟಡ ಕಾರ್ಮಿಕರಿಗೆ: ಕಾರ್ಮಿಕರ ಕಲ್ಯಾಣ ಮಂಡಳಿಯಿಂದ 3.5 ನೋಂದಾಯಿತ ಕಾರ್ಮಿಕರಿಗೆ ಕಲ್ಯಾಣ ನಿಧಿಯಿಂದ 31,000 ಕೋಟಿ ಹಣವನ್ನು ಬಳಸಲು ಮುಂದಾಗಿದೆ. ರಾಜ್ಯ ಸರ್ಕಾರದ ಮೂಲಕ ಅದರ ಬಳಕೆಗೆ ನಿರ್ದೇಶನ ನೀಡಲಾಗುವುದು.

ಜಿಲ್ಲಾ ಮಿನರಲ್‌ ಫಂಡ್‌: ಮೆಡಿಕಲ್‌ ಟೆಸ್ಟ್‌, ಸ್ಕ್ರೀನಿಂಗ್‌ ಸೇರಿದಂತೆ ಉಳಿದ ಕೆಲಸಗಳಿಗೆ ಬಳಸಬಹುದು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...