Homeಮುಖಪುಟಕೊರೊನಾ ಲಾಕ್‌ಡೌನ್‌ : 1,70,000 ಕೋಟಿ ಪ್ಯಾಕೇಜ್‌ ಘೋಷಿಸಿದ ನಿರ್ಮಲ ಸೀತಾರಾಮನ್

ಕೊರೊನಾ ಲಾಕ್‌ಡೌನ್‌ : 1,70,000 ಕೋಟಿ ಪ್ಯಾಕೇಜ್‌ ಘೋಷಿಸಿದ ನಿರ್ಮಲ ಸೀತಾರಾಮನ್

ಬಡಮಹಿಳೆಯರಿಗೆ 20 ಕೋಟಿ ಮಹಿಳಾ ಜನಧನ್‌ ಅಕೌಂಟ್‌ಗಳಿಗೆ ತಿಂಗಳಿಗೆ 500 ರೂಗಳಂತೆ ಮುಂದಿನ ಮೂರು ತಿಂಗಳು ಹಾಕಲಾಗುವುದು.

- Advertisement -
- Advertisement -

ಕೊರೊನಾ ಲ್ಯಾಕ್‌ಡೌನ್‌ನಿಂದಾಗಿ ಆಪತ್ತಿನಲ್ಲಿರುವ ಜನರಿಗೆ ನೆರವಾಗಲು ಕೇಂದ್ರ ಸರ್ಕಾರ ಅಂತೂ ಮುಂದೆ ಬಂದಿದ್ದು, ಪ್ರಧಾನ ಮಂತ್ರಿ ಗರೀಬ್‌ ಕಲ್ಯಾಣ್‌ ಯೋಜನೆಯ ಹೆಸರಿನಲ್ಲಿ 1,70,000 ಕೋಟಿ ಪ್ಯಾಕೇಜ್‌ ಅನ್ನು ಹಣಕಾಸು ಸಚಿವೆ ನಿರ್ಮಲ ಸೀತಾರಾಮನ್ ಘೋಷಿಸಿದ್ದಾರೆ.

ಕರೋನಾ ವಿರುದ್ಧದ ಹೋರಾಟದ ಮುಂಚೂಣಿಯಲ್ಲಿರುವ ವೈದ್ಯರು, ದಾದಿಯರು, ಅರೆವೈದ್ಯರು, ಆಶಾ ಕಾರ್ಯಕರ್ತರಿಗೆ ಎಲ್ಲರಿಗೂ ಸರ್ಕಾರವು ಪ್ರತಿ ವ್ಯಕ್ತಿಗೆ 50 ಲಕ್ಷ ರೂಗಳ ಇನ್ಸೂರೆನ್ಸ್‌ ಘೋಷಿಸಿದ್ದಾರೆ.

“ಮಹಿಳೆಯರು, ವಲಸೆ ಕಾರ್ಮಿಕರು ಮತ್ತು ಸಮಾಜದ ಹಿಂದುಳಿದ ವರ್ಗವನ್ನು ತಲುಪಲು ಸರ್ಕಾರ ಕೆಲಸ ಮಾಡುತ್ತಿದೆ. ಈ ಜನರ ಕಳವಳಗಳನ್ನು ಪರಿಹರಿಸುವ ಪ್ಯಾಕೇಜ್‌ನೊಂದಿಗೆ ನಾವು ಹೊರಬಂದಿದ್ದೇವೆ. ನಾವು ಎರಡು ಅಂಶಗಳನ್ನು ನೋಡುತ್ತಿದ್ದೇವೆ: ನಗದು ವರ್ಗಾವಣೆ ಮತ್ತು ಆಹಾರ ಭದ್ರತೆಗೆ ಸಂಬಂಧಿಸಿದ ಕ್ರಮಗಳು” ಎಂದು ಸೀತಾರಾಮನ್ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.

“ಯಾರಾದರೂ ಹಸಿವಿನಿಂದ ಅಥವಾ ಹಣವಿಲ್ಲದೆ ಇರಬೇಕೆಂದು ನಾವು ಬಯಸುವುದಿಲ್ಲ. ಆದ್ದರಿಂದ ನಾವು ಸಾಕಷ್ಟು ನೀಡುತ್ತೇವೆ” ಎಂದು ಅವರು ನಗರ ಮತ್ತು ಗ್ರಾಮೀಣ ಬಡವರಿಗೆ 1,70,000 ಕೋಟಿ ರೂ ಘೋಷಿಸುತ್ತೆವೆ ಎಂದಿದ್ದಾರೆ.

ಯಾವ ಯಾವ ಕ್ಷೇತ್ರಕ್ಕೆ ಎಷ್ಟು ಎಷ್ಟು?

ಬಡವರಿಗೆ ಮತ್ತು ನಿರ್ಗತಿಕರಿಗೆ ಮುಂದಿನ ತಿಂಗಳುಗಳಲ್ಲಿ 5 ಕೆಜಿ ಹೆಚ್ಚುವರಿ ಗೋಧಿ ಮತ್ತು ಅಕ್ಕಿಯನ್ನು ಉಚಿತವಾಗಿ ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯಡಿ ನೀಡಲಾಗುವುದು. ಮುಂದಿನ ಮೂರು ತಿಂಗಳವರೆಗೆ ಅವರಿಗೆ 1 ಕೆಜಿ ದ್ವಿದಳ ಧಾನ್ಯಗಳನ್ನು ಉಚಿತವಾಗಿ ನೀಡಲಾಗುವುದು.

ಮಹಾತ್ಮ ಗಾಂಧಿ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ 5 ಕೋಟಿ ಕುಟುಂಬಗಳಿಗೆ: ಕೂಲಿ 182ರಿಂದ 202ಕ್ಕೆ ಏರಿಕೆ. 2000/- ಒಬ್ಬ ಕಾರ್ಮಿಕನಿಗೆ ಮೀಸಲು.

ರೈತರಿಗೆ: 8.69 ಕೋಟಿ ರೈತರಿಗೆ ತಲಾ 2000 ರೂ ಕೊಡುವ ಯೋಜನೆ ಏಪ್ರಿಲ್‌ 1ರಂದು ರೈತರ ಖಾತೆಗೆಳಿಗೆ ವರ್ಗಾವಣೆ.

ಹಿರಿಯ ನಾಗರಿಕರಿಗೆ, ವಿಧವೆಯರಿಗೆ ಮತ್ತು ವಿಕಲಚೇತನರಿಗೆ: 1000/- ರೂಗಳನ್ನು ಎರಡು ಕಂತುಗಳಲ್ಲಿ, 3 ತಿಂಗಳಲ್ಲಿ ನೀಡಲಾಗುವುದು. ನೇರ ಅವರ ಖಾತೆಗೆ ವರ್ಗಾವಣೆಯಾಗಲಿದೆ. ಇದು 3 ಕೋಟಿ ಜನರಿಗೆ ಅನ್ವಯಲಾಗಲಿದೆ.

ಬಡಮಹಿಳೆಯರಿಗೆ: 20 ಕೋಟಿ ಮಹಿಳಾ ಜನಧನ್‌ ಅಕೌಂಟ್‌ಗಳಿಗೆ ತಿಂಗಳಿಗೆ 500 ರೂಗಳಂತೆ ಮುಂದಿನ ಮೂರು ತಿಂಗಳು ಹಾಕಲಾಗುವುದು.

ಉಜ್ವಲ ಯೋಜನೆಯ ಗ್ಯಾಸ್‌ ಯೋಜನೆಯ 8.3 ಕೋಟಿ ಬಿಪಿಲ್‌ ಕುಟುಂಬಗಳಿಗೆ 3 ತಿಂಗಳು ಉಚಿತ ಗ್ಯಾಸ್‌ ಸಿಲಿಂಡರ್‌ ಒದಗಿಸಲಾಗುತ್ತದೆ.

ಮಹಿಳಾ ಸ್ವಸಹಾಯ ಗುಂಪುಗಳಿಗೆ : 63 ಲಕ್ಷ ಸ್ವಸಹಾಯ ಸಂಘಗಳ 7 ಕೋಟಿ ಕುಟುಂಬಗಳಿಗೆ ದೀನ್‌ ದಯಾಳ್‌ ಉಪಾಧ್ಯಾಯ ಯೋಜನೆಯ ಭಾಗವಾಗಿ 10 ಲಕ್ಷದ ಸಾಲದ ಬದಲಿಗೆ 20 ಲಕ್ಷ ಸಾಲ ಮಂಜೂರು.

ಇಪಿಎಫ್‌ ಹಣವನ್ನು ಮೂರು ತಿಂಗಳಿಗೆ ಸರ್ಕಾರವೇ ಭರಿಸಲಿದೆ. ಅಂದರೆ  ಉದ್ಯೋಗಿಯ 12% ಮತ್ತು ಸರ್ಕಾರದ 12% ಎರಡನ್ನೂ ಸರ್ಕಾರವೇ ಭರಿಸಲಿದೆ.

ಕಟ್ಟಡ ಕಾರ್ಮಿಕರಿಗೆ: ಕಾರ್ಮಿಕರ ಕಲ್ಯಾಣ ಮಂಡಳಿಯಿಂದ 3.5 ನೋಂದಾಯಿತ ಕಾರ್ಮಿಕರಿಗೆ ಕಲ್ಯಾಣ ನಿಧಿಯಿಂದ 31,000 ಕೋಟಿ ಹಣವನ್ನು ಬಳಸಲು ಮುಂದಾಗಿದೆ. ರಾಜ್ಯ ಸರ್ಕಾರದ ಮೂಲಕ ಅದರ ಬಳಕೆಗೆ ನಿರ್ದೇಶನ ನೀಡಲಾಗುವುದು.

ಜಿಲ್ಲಾ ಮಿನರಲ್‌ ಫಂಡ್‌: ಮೆಡಿಕಲ್‌ ಟೆಸ್ಟ್‌, ಸ್ಕ್ರೀನಿಂಗ್‌ ಸೇರಿದಂತೆ ಉಳಿದ ಕೆಲಸಗಳಿಗೆ ಬಳಸಬಹುದು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...