Homeಮುಖಪುಟಲಾಕ್‌ಡೌನ್‌: ಎರಡು ವಾರದಿಂದ ಸಿಗದ ಕೂಲಿ, ತುಮಕೂರಿನ ಟೆಂಟ್‌ಗಳಲ್ಲಿ ವಲಸೆ ಕೂಲಿ ಕಾರ್ಮಿಕರ ಬವಣೆ..

ಲಾಕ್‌ಡೌನ್‌: ಎರಡು ವಾರದಿಂದ ಸಿಗದ ಕೂಲಿ, ತುಮಕೂರಿನ ಟೆಂಟ್‌ಗಳಲ್ಲಿ ವಲಸೆ ಕೂಲಿ ಕಾರ್ಮಿಕರ ಬವಣೆ..

ಕೊರೊನ ಬಂದು ನಮ್ ಕೆಲಸ ಕಸ್ಕೊತ್ರಿ. ಅಂಗಡಿ ಬಂದ್ ಆಗೇವ. ರೊಕ್ಕನೂ ಇಲ್ಲ, ಅಕ್ಕಿನೂ ಇಲ್ಲ. ನೋಡ್ರಿ ಈ ಟೆಂಟ್ ಒಳಗ ನಿದ್ದಿ ಮಾಡೋಣ ಅಂದ್ರ ನಿದ್ದಿ ಬರೋದಿಲ್ರಿ, ಸ್ಯಾನ ಕಷ್ಟ ಆಗೇತ್ರಿ ಎನ್ನುತ್ತಾರೆ ಅಲ್ಲಿನ ಮಹಿಳೆಯರು.

- Advertisement -
- Advertisement -

ಕೊರೊನ ಸೋಂಕು ಹರಡುತ್ತಿರುವ  ಹಿನ್ನೆಲೆಯಲ್ಲಿ ಮಾಡಲಾದ ಲಾಕ್‌ಡೌನ್‌‌ನಿಂದಾಗಿ ದಿನಗೂಲಿ ಕಾರ್ಮಿಕರ ಪಾಡು ಹೇಳತೀರದಾಗಿದೆ. ಕೊರೊನ ಬಂದು ಅವರ ಕೆಲಸ ಕಿತ್ತುಕೊಂಡು ಮೂಲೆಗೆ ಕೂರಿಸಿದೆ. ಇತ್ತ ಕೆಲಸವೂ ಇಲ್ಲ, ಅತ್ತ ಹಳ್ಳಿಗೂ  ಹೋಗುವಂತಿಲ್ಲ ಪ್ಲಾಸ್ಟಿಕ್ ಹಾಳೆಯಿಂದ ನಿರ್ಮಿಸಿಕೊಂಡಿರುವ ಟೆಂಟ್‌ಗಳಲ್ಲಿ ಕೆಲಸವಿಲ್ಲದ ಕೂರುವುದೆಂದರೆ ಬೇಸರ. ಸುಡುಬೆಂಕಿ ಬಿಸಲಿಲ್ಲ ಗುಡಾರಗಳಲ್ಲಿ ಕುಳಿತುಕೊಂಡರೆ ಹಾಳಾದ ಧಗೆ. ಕ್ಷಣಮಾತ್ರದಲ್ಲಿ ಬೆವರಿನ ಸ್ನಾನವೂ ಆಗಿಹೋಗುತ್ತದೆ. ಇಂತಹ ಯಾತನಾಮಯ ಸನ್ನಿವೇಶದಲ್ಲಿ ಕೆಲಸ ಮಾಡಿಸಿಕೊಂಡಿರುವ ಗುತ್ತಿಗೆದಾರರು ಕೂಲಿಯನ್ನೂ ನೀಡಿಲ್ಲ. ಅಕ್ಕಿ ಕೊಳ್ಳಲು ದುಡ್ಡಿಲ್ಲ. ಅಕ್ಕಿ ತರೋಣವೆಂದರೆ ಅಂಗಡಿ ತೆಗೆಯುತ್ತಿಲ್ಲ. ಒಲೆ ಹಚ್ಚುವುದು ಹೇಗೆಂಬ ಚಿಂತೆಯಲ್ಲಿ ದಿನಕೂಲಿ ಕಾರ್ಮಿಕರು ಬದುಕು ಸವೆಸುವಂತಹ ಬಿಕ್ಕಟ್ಟಿನ ಪರಿಸ್ಥಿತಿ ತುಮಕೂರಿನಲ್ಲಿ ನಿರ್ಮಾಣವಾಗಿದೆ.

ಹೌದು, ಇದು ತುಮಕೂರಿಗೆ ಉತ್ತರ ಕರ್ನಾಟಕದಿಂದ ಬಂದಿರುವ ದಿನಗೂಲಿ ಕಾರ್ಮಿಕರ ದುಸ್ಥಿತಿ. ಕೇವಲ ರಾಯಚೂರು ಜಿಲ್ಲೆಯೊಂದರಿಂದಲೇ ಒಂದು ಸಾವಿರಕ್ಕೂ ಹೆಚ್ಚು ಕುಟುಂಬಗಳು ತುಮಕೂರಿಗೆ ಬಂದಿವೆ. ನಗರದ ಒಳಗೆ ಮತ್ತು ಹೊರಗೆ 50 ಕ್ಯಾಂಪ್‌ಗಳಲ್ಲಿ ಟೆಂಟ್ ಹಾಕಿಕೊಂಡು ಜೀವಿಸುತ್ತಿವೆ. ದೊಡ್ಡ ಕ್ಯಾಂಪ್ ಅಂದ್ರೆ ಸೋಮೇಶ್ವರಪುರಂ ಕೊನೆಯಲ್ಲಿ ರಾಧಾಕೃಷ್ಣ ರಸ್ತೆಯಲ್ಲಿರುವ ಕ್ಯಾಂಪ್. ಒಂದೇ ಕಡೆ 40ಕ್ಕೂ ಹೆಚ್ಚು ಕುಟುಂಬಗಳು ಟೆಂಟ್ ನಿರ್ಮಿಸಿಕೊಂಡು ಕಾಲದೂಡುತ್ತಿದ್ದಾರೆ. ಹಾಲುಕುಡಿಯುವ ಹಸುಳೆಯರು, ಅಪ್ರಾಪ್ತ ಬಾಲಕ ಬಾಲಕಿಯರು, ಹೆಂಗಸರು ಮತ್ತು ಪುರುಷರು ಕ್ಯಾಂಪ್‌ಗಳಲ್ಲಿ ಇದ್ದಾರೆ.

ಈಗ  ಕೊರನಾ ಸೋಂಕು ಹರಡುವ ಭೀತಿಯಿಂದ ಈ ಕೂಲಿಕಾರ್ಮಿಕರಿಗೆ ರಜೆ ನೀಡಲಾಗಿದೆ. ಹೀಗಾಗಿ ಕೆಲಸವಿಲ್ಲ. ಊರಿಗೆ ಹೋಗಬೇಕೆಂದರೆ ಬಸ್ ವ್ಯವಸ್ಥೆ ಇಲ್ಲ. ಇಲ್ಲಿರಲು ನೆಲೆ ಇಲ್ಲ. ಎರಡು ವಾರದಿಂದಲೂ ಮೇಸ್ತ್ರಿ ಕೂಲಿಹಣ ನೀಡಿಲ್ಲ. ಹೀಗಾಗಿ ಕೂಲಿಕಾರ್ಮಿಕರ ಪರಿಸ್ಥಿತಿ ಯಾರಿಗೂ ಹೇಳಿಕೊಳ್ಳುವಂತಿಲ್ಲ. ಇವರೆಲ್ಲ ತುಮಕೂರು ಸ್ಮಾರ್ಟಿಸಿಟಿಯಡಿ ಕೈಗೊಂಡಿರುವ ಕಾಮಗಾರಿಗಳಲ್ಲಿ ಕೆಲಸ ಮಾಡುತ್ತಿದ್ದವರು. ಕುಡಿಯುವ ನೀರು ಪೈಪ್ ಅಳವಡಿಸುವುದು, ಮಲ್ಟಿಟ್ರ್ಯಾಕ್ ಪೈಪ್ ಲೈನ್‌ಗಾಗಿ ರಸ್ತೆ ಬದಿಯಲ್ಲಿ ಗುಂಡಿ ತೋಡುತ್ತಿದ್ದರು. ಗ್ಯಾಸ್ ಪೈಪ್ ಲೈನ್, ಚರಂಡಿಗಾಗಿ ಭೂಮಿ ಅಗೆಯುವ ಕೆಲಸ ಮಾಡುತ್ತಿದ್ದರು. ನಗರವನ್ನು ಕಟ್ಟುವಲ್ಲಿ ಇವರ ಪಾತ್ರ ಬಹುಮುಖ್ಯವಾದುದು. ಆದರೂ ಈ ಕೂಲಿ ಕಾರ್ಮಿಕರ ಬದುಕು ಕೊರೊನ ಮತ್ತು ಬಿಸಿಲ ಬೇಗೆಗೆ  ಬೆಂದು ಹೋಗಿದೆ.

ನಮ್ದು ರಾಯಚೂರ್ ರೀ. ನಮಗ ರೊಕ್ಕ ಕೊಟ್ಟು ಎರಡ್ ವಾರ ಆತ್ರಿ. ಊರಿಗೆ ಹೋಗೋಣ ಅಂದ್ರ ಬಸ್ ಇಲ್ರಿ. ಕೆಲಸಕ್ಕೆ ರಜೆ ಕೊಟ್ಟಾರ್ರೀ. ನಾವು ಏನೋ ಮಾಡೋದು ತಿಳಿತಿಲ್ರಿ, ಕೊರೊನ ಬಂದು ನಮ್ ಕೆಲಸ ಕಸ್ಕೊತ್ರಿ. ಅಂಗಡಿ ಬಂದ್ ಆಗೇವ. ರೊಕ್ಕನೂ ಇಲ್ಲ, ಅಕ್ಕಿನೂ ಇಲ್ಲ. ನೋಡ್ರಿ ಈ ಟೆಂಟ್ ಒಳಗ ನಿದ್ದಿ ಮಾಡೋಣ ಅಂದ್ರ ನಿದ್ದಿ ಬರೋದಿಲ್ರಿ, ಸ್ಯಾನ ಕಷ್ಟ ಆಗೇತ್ರಿ. ನಮಗೆ ರೊಕ್ಕ ಕೊಟ್ರ ಅಕ್ಕಿ, ಬೇಳಿ ಬೇರೆ ಬೇರೆ ಸಾಮಾನ ತರಬೌದ್ರಿ. ರೊಕ್ಕ ಕೊಡ್ತಾರ ಅಂತ ಎದುರು ನೋಡ್ತಾ ಇದ್ದೇವ್ರಿ. ನಾವ್ ಎಲ್ಲಿಗು ಹೋಕಾಗದಿಲ್ಲ. ಒಂದೇ ಕಡಿ ಕೂರ್ಬೇಕಂದ್ರ ಭಾಳ ತ್ರಾಸ ಆಗೇತ್ರಿ ಎಂದು ಅಲ್ಲಿನ ಮಹಿಳೆಯರು ನೋವು ತೋಡಿಕೊಂಡರು.

ಬಿಸಿಲಿನ ಧಗೆಗೆ ಮಕ್ಕಳ ಕಣ್ಣುಮುಚ್ಚಿದ್ದವು. ಪುರುಷರು ಮತ್ತು ಮಹಿಳೆಯರು ಟೆಂಟ್‌ಗಳಲ್ಲಿ ನಿದ್ದೆ ಬಾರದೆ ಹೊರಳಾಡುತ್ತಿದ್ದರು. ಇಡೀ ಟೆಂಟ್‌ಗಳು ನಿಶ್ಯಬ್ದವಾಗಿದ್ದವು. ಮಾತು ಇಲ್ಲ, ಕಥೆಯೂ ಇಲ್ಲ. ಅವರವರ ಪಾಡಿಗೆ ಅವರಿದ್ದರು. ನಾವು ಅಲ್ಲಿಗೆ ಹೋಗುತ್ತಿದ್ದಂತೆಯೇ ಒಬ್ಬೊಬ್ಬರೇ ಎದ್ದು ಬಂದರು. ಮೇಸ್ತ್ರಿಗೆ ಮೊಬೈಲ್ ಕರೆ ಮಾಡಿ ಕೇಳಿದರು. ಸ್ಮಾರ್ಟ್ ಸಿಟಿ ಕಾಮಗಾರಿ ಮಾಡಿಸುವ ಗುತ್ತಿಗೆದಾರರು ಪ್ರತಿವಾರವೂ ಕೂಲಿಹಣ ಬಟವಾಡೆ ಮಾಡಿಸಬೇಕಿತ್ತು. ಆದರೆ ಈ ಬಾರಿ ಹಾಗೆ ಮಾಡಿಲ್ಲ. ಗುತ್ತಿಗೆದಾರರು ಹಣ ಕೊಡದೆ ವಿಳಂಬ ಮಾಡಿರುವುದು ತಿಳಿದುಬಂತು. ಕೋಟಿಕೋಟಿ ಹಣ ಬಂದಿದ್ದರೂ ಸರಿಯಾಗಿ ಹಣ ಬಟವಾಡೆ ಮಾಡದಿರುವುದಕ್ಕೆ ಕೆಲವರು ಬೇಸರ ವ್ಯಕ್ತಪಡಿಸಿದರು.

ಕುಣಿಗಲ್ ರಸ್ತೆಯಲ್ಲಿ ಬಳ್ಳಾರಿಯ ಜಿಲ್ಲೆಯ ನಾಲ್ಕು ಕುಟುಂಬಗಳು ಅದೇ ತಾನೆ ಟೆಂಟ್ ನಿರ್ಮಾಣಕ್ಕೆ ಸಿದ್ದತೆ ನಡೆಸುತ್ತಿದ್ದವು. ಕೆಲಸವಿಲ್ಲದೆ ತೊಂದರೆಯಾಗಿದೆ. ಸಣ್ಣ ಮಕ್ಕಳು ಇದ್ದಾವೆ. ಅವುಗಳನ್ನು ಕಟ್ಟಿಕೊಂಡು ಊರಿಗೆ ಹೋಗೋಕೆ ಆಗೊಲ್ಲ. ಬಸ್, ಲಾರಿ ಯಾವ ವ್ಯವಸ್ಥೆಯೂ ಇಲ್ಲ. ಗುತ್ತಿಗೆದಾರರನ್ನು ಕೇಳಿದ್ದೀವಿ. ಇಲ್ಲೇ ಟೆಂಟ್ ಹಾಕಿಕೊಳ್ಳಿ ಎಂದು ಹೇಳಿದ್ದಾರೆ ಎಂದು ಎರಡು ದಬ್ಬೆಗಳನ್ನು ಜೋಡಿಸಿ ಮೊಳೆ ಹೊಡೆಯುತ್ತಿದ್ದರು. ಮಕ್ಕಳು ಮರದ ನೆರಳಿನಲ್ಲಿ ಆಡಿಕೊಳ್ಳುತ್ತಿದ್ದರು. ಬಿಸಿಲು ಕುಣಿಯುತ್ತಿತ್ತು. ಜನಜೀವನ ಅಸ್ತವ್ಯಸ್ತಗೊಂಡಿತ್ತು.

ತುಮಕೂರಿನಲ್ಲಿ ಉತ್ತರ ಕರ್ನಾಟದ ಜಿಲ್ಲೆಗಳಿಗೆ ಕೆಲಸಕ್ಕಾಗಿ ಅರಸಿ ಬಂದವರು ಇಂದು ಕೆಲಸವಿಲ್ಲದೆ, ಊರಿಗೂ ಹೋಗಲಾರದಂತಹ ತ್ರಿಶಂಕು ಸ್ಥಿತಿಯಲ್ಲಿದ್ದಾರೆ. ಸಾವಿರಾರು ಕುಟುಂಬಗಳಿಗೆ ಗುತ್ತಿಗೆದಾರರು ನೀಡುವ ಹಣದಿಂದ ದವಸಧಾನ್ಯ ಖರೀದಿ ಮಾಡಿ ತುತ್ತಿನಚೀಲ ತುಂಬಿಸಿಕೊಳ್ಳಬೇಕಾಗಿದೆ. ಕೆಲಸದಲ್ಲಿ ಗಂಡಾಳಿಗೆ 450 ರೂಪಾಯಿ ಕೂಲಿ ನೀಡಿದರೆ ಹೆಣ್ಣಾಳಿಗೆ 300 ರೂಪಾಯಿ ನೀಡಿ ಕೂಲಿಯಲ್ಲೂ ತಾರತಮ್ಯ ಮಾಡಲಾಗುತ್ತಿದೆ.  ನಗರದ ರಸ್ತೆ, ಚರಂಡಿ, ಪೈಪ್ ಲೈನ್ ಮೊದಲಾದ ಜನೋಪಯೋಗಿ ಕೆಲಸ ಮಾಡುವ ಈ ಕೂಲಿಕಾರ್ಮಿಕರ ಬದುಕು ಅತಂತ್ರವಾಗಿದೆ. ನಗರವನ್ನೇ ನಿರ್ಮಿಸುವ ಇವರ ಬದುಕು ಹಸನಾಗುವುದೆಂತು?

ಕೂಡಲೇ ತುಮಕೂರು ಜಿಲ್ಲಾಡಳಿತ ಇವರ ನೆರವಿಗೆ ಬರಬೇಕಿದೆ. ಕೂಲಿ ಕೊಡುವುದರ ಜೊತೆಗೆ ಆಹಾರ ದೊರೆಯುವಂತೆ ಕ್ರಮ ಕೈಗೊಳ್ಳಬೇಕಿದೆ. ಇವರನ್ನು ನಿರ್ಮಾಣ ಕಾರ್ಮಿಕರ ಅಡಿಯಲ್ಲಿ ತಂದು ಪ್ರೋತ್ಸಾಹ ಧನ ನೀಡಬೇಕಿದೆ. ಈ ಕುರಿತು ಪ್ರಜ್ಞಾವಂತರು ಸರ್ಕಾರವನ್ನು ಒತ್ತಾಯಿಸಬೇಕಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...