Homeಮುಖಪುಟಲಾಕ್‌ಡೌನ್‌: ಎರಡು ವಾರದಿಂದ ಸಿಗದ ಕೂಲಿ, ತುಮಕೂರಿನ ಟೆಂಟ್‌ಗಳಲ್ಲಿ ವಲಸೆ ಕೂಲಿ ಕಾರ್ಮಿಕರ ಬವಣೆ..

ಲಾಕ್‌ಡೌನ್‌: ಎರಡು ವಾರದಿಂದ ಸಿಗದ ಕೂಲಿ, ತುಮಕೂರಿನ ಟೆಂಟ್‌ಗಳಲ್ಲಿ ವಲಸೆ ಕೂಲಿ ಕಾರ್ಮಿಕರ ಬವಣೆ..

ಕೊರೊನ ಬಂದು ನಮ್ ಕೆಲಸ ಕಸ್ಕೊತ್ರಿ. ಅಂಗಡಿ ಬಂದ್ ಆಗೇವ. ರೊಕ್ಕನೂ ಇಲ್ಲ, ಅಕ್ಕಿನೂ ಇಲ್ಲ. ನೋಡ್ರಿ ಈ ಟೆಂಟ್ ಒಳಗ ನಿದ್ದಿ ಮಾಡೋಣ ಅಂದ್ರ ನಿದ್ದಿ ಬರೋದಿಲ್ರಿ, ಸ್ಯಾನ ಕಷ್ಟ ಆಗೇತ್ರಿ ಎನ್ನುತ್ತಾರೆ ಅಲ್ಲಿನ ಮಹಿಳೆಯರು.

- Advertisement -
- Advertisement -

ಕೊರೊನ ಸೋಂಕು ಹರಡುತ್ತಿರುವ  ಹಿನ್ನೆಲೆಯಲ್ಲಿ ಮಾಡಲಾದ ಲಾಕ್‌ಡೌನ್‌‌ನಿಂದಾಗಿ ದಿನಗೂಲಿ ಕಾರ್ಮಿಕರ ಪಾಡು ಹೇಳತೀರದಾಗಿದೆ. ಕೊರೊನ ಬಂದು ಅವರ ಕೆಲಸ ಕಿತ್ತುಕೊಂಡು ಮೂಲೆಗೆ ಕೂರಿಸಿದೆ. ಇತ್ತ ಕೆಲಸವೂ ಇಲ್ಲ, ಅತ್ತ ಹಳ್ಳಿಗೂ  ಹೋಗುವಂತಿಲ್ಲ ಪ್ಲಾಸ್ಟಿಕ್ ಹಾಳೆಯಿಂದ ನಿರ್ಮಿಸಿಕೊಂಡಿರುವ ಟೆಂಟ್‌ಗಳಲ್ಲಿ ಕೆಲಸವಿಲ್ಲದ ಕೂರುವುದೆಂದರೆ ಬೇಸರ. ಸುಡುಬೆಂಕಿ ಬಿಸಲಿಲ್ಲ ಗುಡಾರಗಳಲ್ಲಿ ಕುಳಿತುಕೊಂಡರೆ ಹಾಳಾದ ಧಗೆ. ಕ್ಷಣಮಾತ್ರದಲ್ಲಿ ಬೆವರಿನ ಸ್ನಾನವೂ ಆಗಿಹೋಗುತ್ತದೆ. ಇಂತಹ ಯಾತನಾಮಯ ಸನ್ನಿವೇಶದಲ್ಲಿ ಕೆಲಸ ಮಾಡಿಸಿಕೊಂಡಿರುವ ಗುತ್ತಿಗೆದಾರರು ಕೂಲಿಯನ್ನೂ ನೀಡಿಲ್ಲ. ಅಕ್ಕಿ ಕೊಳ್ಳಲು ದುಡ್ಡಿಲ್ಲ. ಅಕ್ಕಿ ತರೋಣವೆಂದರೆ ಅಂಗಡಿ ತೆಗೆಯುತ್ತಿಲ್ಲ. ಒಲೆ ಹಚ್ಚುವುದು ಹೇಗೆಂಬ ಚಿಂತೆಯಲ್ಲಿ ದಿನಕೂಲಿ ಕಾರ್ಮಿಕರು ಬದುಕು ಸವೆಸುವಂತಹ ಬಿಕ್ಕಟ್ಟಿನ ಪರಿಸ್ಥಿತಿ ತುಮಕೂರಿನಲ್ಲಿ ನಿರ್ಮಾಣವಾಗಿದೆ.

ಹೌದು, ಇದು ತುಮಕೂರಿಗೆ ಉತ್ತರ ಕರ್ನಾಟಕದಿಂದ ಬಂದಿರುವ ದಿನಗೂಲಿ ಕಾರ್ಮಿಕರ ದುಸ್ಥಿತಿ. ಕೇವಲ ರಾಯಚೂರು ಜಿಲ್ಲೆಯೊಂದರಿಂದಲೇ ಒಂದು ಸಾವಿರಕ್ಕೂ ಹೆಚ್ಚು ಕುಟುಂಬಗಳು ತುಮಕೂರಿಗೆ ಬಂದಿವೆ. ನಗರದ ಒಳಗೆ ಮತ್ತು ಹೊರಗೆ 50 ಕ್ಯಾಂಪ್‌ಗಳಲ್ಲಿ ಟೆಂಟ್ ಹಾಕಿಕೊಂಡು ಜೀವಿಸುತ್ತಿವೆ. ದೊಡ್ಡ ಕ್ಯಾಂಪ್ ಅಂದ್ರೆ ಸೋಮೇಶ್ವರಪುರಂ ಕೊನೆಯಲ್ಲಿ ರಾಧಾಕೃಷ್ಣ ರಸ್ತೆಯಲ್ಲಿರುವ ಕ್ಯಾಂಪ್. ಒಂದೇ ಕಡೆ 40ಕ್ಕೂ ಹೆಚ್ಚು ಕುಟುಂಬಗಳು ಟೆಂಟ್ ನಿರ್ಮಿಸಿಕೊಂಡು ಕಾಲದೂಡುತ್ತಿದ್ದಾರೆ. ಹಾಲುಕುಡಿಯುವ ಹಸುಳೆಯರು, ಅಪ್ರಾಪ್ತ ಬಾಲಕ ಬಾಲಕಿಯರು, ಹೆಂಗಸರು ಮತ್ತು ಪುರುಷರು ಕ್ಯಾಂಪ್‌ಗಳಲ್ಲಿ ಇದ್ದಾರೆ.

ಈಗ  ಕೊರನಾ ಸೋಂಕು ಹರಡುವ ಭೀತಿಯಿಂದ ಈ ಕೂಲಿಕಾರ್ಮಿಕರಿಗೆ ರಜೆ ನೀಡಲಾಗಿದೆ. ಹೀಗಾಗಿ ಕೆಲಸವಿಲ್ಲ. ಊರಿಗೆ ಹೋಗಬೇಕೆಂದರೆ ಬಸ್ ವ್ಯವಸ್ಥೆ ಇಲ್ಲ. ಇಲ್ಲಿರಲು ನೆಲೆ ಇಲ್ಲ. ಎರಡು ವಾರದಿಂದಲೂ ಮೇಸ್ತ್ರಿ ಕೂಲಿಹಣ ನೀಡಿಲ್ಲ. ಹೀಗಾಗಿ ಕೂಲಿಕಾರ್ಮಿಕರ ಪರಿಸ್ಥಿತಿ ಯಾರಿಗೂ ಹೇಳಿಕೊಳ್ಳುವಂತಿಲ್ಲ. ಇವರೆಲ್ಲ ತುಮಕೂರು ಸ್ಮಾರ್ಟಿಸಿಟಿಯಡಿ ಕೈಗೊಂಡಿರುವ ಕಾಮಗಾರಿಗಳಲ್ಲಿ ಕೆಲಸ ಮಾಡುತ್ತಿದ್ದವರು. ಕುಡಿಯುವ ನೀರು ಪೈಪ್ ಅಳವಡಿಸುವುದು, ಮಲ್ಟಿಟ್ರ್ಯಾಕ್ ಪೈಪ್ ಲೈನ್‌ಗಾಗಿ ರಸ್ತೆ ಬದಿಯಲ್ಲಿ ಗುಂಡಿ ತೋಡುತ್ತಿದ್ದರು. ಗ್ಯಾಸ್ ಪೈಪ್ ಲೈನ್, ಚರಂಡಿಗಾಗಿ ಭೂಮಿ ಅಗೆಯುವ ಕೆಲಸ ಮಾಡುತ್ತಿದ್ದರು. ನಗರವನ್ನು ಕಟ್ಟುವಲ್ಲಿ ಇವರ ಪಾತ್ರ ಬಹುಮುಖ್ಯವಾದುದು. ಆದರೂ ಈ ಕೂಲಿ ಕಾರ್ಮಿಕರ ಬದುಕು ಕೊರೊನ ಮತ್ತು ಬಿಸಿಲ ಬೇಗೆಗೆ  ಬೆಂದು ಹೋಗಿದೆ.

ನಮ್ದು ರಾಯಚೂರ್ ರೀ. ನಮಗ ರೊಕ್ಕ ಕೊಟ್ಟು ಎರಡ್ ವಾರ ಆತ್ರಿ. ಊರಿಗೆ ಹೋಗೋಣ ಅಂದ್ರ ಬಸ್ ಇಲ್ರಿ. ಕೆಲಸಕ್ಕೆ ರಜೆ ಕೊಟ್ಟಾರ್ರೀ. ನಾವು ಏನೋ ಮಾಡೋದು ತಿಳಿತಿಲ್ರಿ, ಕೊರೊನ ಬಂದು ನಮ್ ಕೆಲಸ ಕಸ್ಕೊತ್ರಿ. ಅಂಗಡಿ ಬಂದ್ ಆಗೇವ. ರೊಕ್ಕನೂ ಇಲ್ಲ, ಅಕ್ಕಿನೂ ಇಲ್ಲ. ನೋಡ್ರಿ ಈ ಟೆಂಟ್ ಒಳಗ ನಿದ್ದಿ ಮಾಡೋಣ ಅಂದ್ರ ನಿದ್ದಿ ಬರೋದಿಲ್ರಿ, ಸ್ಯಾನ ಕಷ್ಟ ಆಗೇತ್ರಿ. ನಮಗೆ ರೊಕ್ಕ ಕೊಟ್ರ ಅಕ್ಕಿ, ಬೇಳಿ ಬೇರೆ ಬೇರೆ ಸಾಮಾನ ತರಬೌದ್ರಿ. ರೊಕ್ಕ ಕೊಡ್ತಾರ ಅಂತ ಎದುರು ನೋಡ್ತಾ ಇದ್ದೇವ್ರಿ. ನಾವ್ ಎಲ್ಲಿಗು ಹೋಕಾಗದಿಲ್ಲ. ಒಂದೇ ಕಡಿ ಕೂರ್ಬೇಕಂದ್ರ ಭಾಳ ತ್ರಾಸ ಆಗೇತ್ರಿ ಎಂದು ಅಲ್ಲಿನ ಮಹಿಳೆಯರು ನೋವು ತೋಡಿಕೊಂಡರು.

ಬಿಸಿಲಿನ ಧಗೆಗೆ ಮಕ್ಕಳ ಕಣ್ಣುಮುಚ್ಚಿದ್ದವು. ಪುರುಷರು ಮತ್ತು ಮಹಿಳೆಯರು ಟೆಂಟ್‌ಗಳಲ್ಲಿ ನಿದ್ದೆ ಬಾರದೆ ಹೊರಳಾಡುತ್ತಿದ್ದರು. ಇಡೀ ಟೆಂಟ್‌ಗಳು ನಿಶ್ಯಬ್ದವಾಗಿದ್ದವು. ಮಾತು ಇಲ್ಲ, ಕಥೆಯೂ ಇಲ್ಲ. ಅವರವರ ಪಾಡಿಗೆ ಅವರಿದ್ದರು. ನಾವು ಅಲ್ಲಿಗೆ ಹೋಗುತ್ತಿದ್ದಂತೆಯೇ ಒಬ್ಬೊಬ್ಬರೇ ಎದ್ದು ಬಂದರು. ಮೇಸ್ತ್ರಿಗೆ ಮೊಬೈಲ್ ಕರೆ ಮಾಡಿ ಕೇಳಿದರು. ಸ್ಮಾರ್ಟ್ ಸಿಟಿ ಕಾಮಗಾರಿ ಮಾಡಿಸುವ ಗುತ್ತಿಗೆದಾರರು ಪ್ರತಿವಾರವೂ ಕೂಲಿಹಣ ಬಟವಾಡೆ ಮಾಡಿಸಬೇಕಿತ್ತು. ಆದರೆ ಈ ಬಾರಿ ಹಾಗೆ ಮಾಡಿಲ್ಲ. ಗುತ್ತಿಗೆದಾರರು ಹಣ ಕೊಡದೆ ವಿಳಂಬ ಮಾಡಿರುವುದು ತಿಳಿದುಬಂತು. ಕೋಟಿಕೋಟಿ ಹಣ ಬಂದಿದ್ದರೂ ಸರಿಯಾಗಿ ಹಣ ಬಟವಾಡೆ ಮಾಡದಿರುವುದಕ್ಕೆ ಕೆಲವರು ಬೇಸರ ವ್ಯಕ್ತಪಡಿಸಿದರು.

ಕುಣಿಗಲ್ ರಸ್ತೆಯಲ್ಲಿ ಬಳ್ಳಾರಿಯ ಜಿಲ್ಲೆಯ ನಾಲ್ಕು ಕುಟುಂಬಗಳು ಅದೇ ತಾನೆ ಟೆಂಟ್ ನಿರ್ಮಾಣಕ್ಕೆ ಸಿದ್ದತೆ ನಡೆಸುತ್ತಿದ್ದವು. ಕೆಲಸವಿಲ್ಲದೆ ತೊಂದರೆಯಾಗಿದೆ. ಸಣ್ಣ ಮಕ್ಕಳು ಇದ್ದಾವೆ. ಅವುಗಳನ್ನು ಕಟ್ಟಿಕೊಂಡು ಊರಿಗೆ ಹೋಗೋಕೆ ಆಗೊಲ್ಲ. ಬಸ್, ಲಾರಿ ಯಾವ ವ್ಯವಸ್ಥೆಯೂ ಇಲ್ಲ. ಗುತ್ತಿಗೆದಾರರನ್ನು ಕೇಳಿದ್ದೀವಿ. ಇಲ್ಲೇ ಟೆಂಟ್ ಹಾಕಿಕೊಳ್ಳಿ ಎಂದು ಹೇಳಿದ್ದಾರೆ ಎಂದು ಎರಡು ದಬ್ಬೆಗಳನ್ನು ಜೋಡಿಸಿ ಮೊಳೆ ಹೊಡೆಯುತ್ತಿದ್ದರು. ಮಕ್ಕಳು ಮರದ ನೆರಳಿನಲ್ಲಿ ಆಡಿಕೊಳ್ಳುತ್ತಿದ್ದರು. ಬಿಸಿಲು ಕುಣಿಯುತ್ತಿತ್ತು. ಜನಜೀವನ ಅಸ್ತವ್ಯಸ್ತಗೊಂಡಿತ್ತು.

ತುಮಕೂರಿನಲ್ಲಿ ಉತ್ತರ ಕರ್ನಾಟದ ಜಿಲ್ಲೆಗಳಿಗೆ ಕೆಲಸಕ್ಕಾಗಿ ಅರಸಿ ಬಂದವರು ಇಂದು ಕೆಲಸವಿಲ್ಲದೆ, ಊರಿಗೂ ಹೋಗಲಾರದಂತಹ ತ್ರಿಶಂಕು ಸ್ಥಿತಿಯಲ್ಲಿದ್ದಾರೆ. ಸಾವಿರಾರು ಕುಟುಂಬಗಳಿಗೆ ಗುತ್ತಿಗೆದಾರರು ನೀಡುವ ಹಣದಿಂದ ದವಸಧಾನ್ಯ ಖರೀದಿ ಮಾಡಿ ತುತ್ತಿನಚೀಲ ತುಂಬಿಸಿಕೊಳ್ಳಬೇಕಾಗಿದೆ. ಕೆಲಸದಲ್ಲಿ ಗಂಡಾಳಿಗೆ 450 ರೂಪಾಯಿ ಕೂಲಿ ನೀಡಿದರೆ ಹೆಣ್ಣಾಳಿಗೆ 300 ರೂಪಾಯಿ ನೀಡಿ ಕೂಲಿಯಲ್ಲೂ ತಾರತಮ್ಯ ಮಾಡಲಾಗುತ್ತಿದೆ.  ನಗರದ ರಸ್ತೆ, ಚರಂಡಿ, ಪೈಪ್ ಲೈನ್ ಮೊದಲಾದ ಜನೋಪಯೋಗಿ ಕೆಲಸ ಮಾಡುವ ಈ ಕೂಲಿಕಾರ್ಮಿಕರ ಬದುಕು ಅತಂತ್ರವಾಗಿದೆ. ನಗರವನ್ನೇ ನಿರ್ಮಿಸುವ ಇವರ ಬದುಕು ಹಸನಾಗುವುದೆಂತು?

ಕೂಡಲೇ ತುಮಕೂರು ಜಿಲ್ಲಾಡಳಿತ ಇವರ ನೆರವಿಗೆ ಬರಬೇಕಿದೆ. ಕೂಲಿ ಕೊಡುವುದರ ಜೊತೆಗೆ ಆಹಾರ ದೊರೆಯುವಂತೆ ಕ್ರಮ ಕೈಗೊಳ್ಳಬೇಕಿದೆ. ಇವರನ್ನು ನಿರ್ಮಾಣ ಕಾರ್ಮಿಕರ ಅಡಿಯಲ್ಲಿ ತಂದು ಪ್ರೋತ್ಸಾಹ ಧನ ನೀಡಬೇಕಿದೆ. ಈ ಕುರಿತು ಪ್ರಜ್ಞಾವಂತರು ಸರ್ಕಾರವನ್ನು ಒತ್ತಾಯಿಸಬೇಕಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...