Homeಕರೋನಾ ತಲ್ಲಣಕೊರೊನಾ: ಮಕ್ಕಳಿಗಾಗಿ ಜಾಗೃತಿ ಗೇಮ್ ಅಭಿವೃದ್ಧಿಪಡಿಸಿದ ಮದ್ರಾಸ್‌ ಐಐಟಿ ವಿದ್ಯಾರ್ಥಿಗಳು!

ಕೊರೊನಾ: ಮಕ್ಕಳಿಗಾಗಿ ಜಾಗೃತಿ ಗೇಮ್ ಅಭಿವೃದ್ಧಿಪಡಿಸಿದ ಮದ್ರಾಸ್‌ ಐಐಟಿ ವಿದ್ಯಾರ್ಥಿಗಳು!

- Advertisement -
- Advertisement -

ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಮದ್ರಾಸ್ (ಐಐಟಿ-ಎಂ) ವಿದ್ಯಾರ್ಥಿಗಳು ಡಿಜಿಟಲ್ ‘ಐಐಟಿ-ಎಂ ಕೋವಿಡ್ ಗೇಮ್’ ಅನ್ನು ಅಭಿವೃದ್ಧಿಪಡಿಸಿದ್ದು, ಈ ಗೇಮ್‌ ಆಡುವುದರಿಂದ ರೋಗದ ವಿರುದ್ಧ ತಮ್ಮನ್ನು ತಾವು ರಕ್ಷಿಸಿಕೊಳ್ಳಲು ಮತ್ತು ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳುವುದರ ಬಗ್ಗೆ ಸಾರ್ವಜನಿಕರಿಗೆ, ಅದರಲ್ಲೂ ವಿಶೇಷವಾಗಿ ಮಕ್ಕಳಗೆ ಜಾಗೃತಿ ಮೂಡಿಸುತ್ತದೆ ಎಂದು ಸೋಮವಾರ ಸಂಸ್ಥೆ ಹೇಳಿದೆ.

ಈ ಗೇಮ್ ಬ್ರೌಸರ್ ಆಧಾರಿತವಾಗಿದ್ದು, ಕಂಪ್ಯೂಟರ್, ಲ್ಯಾಪ್‌ಟಾಪ್, ಟ್ಯಾಬ್ಲೆಟ್ ಮತ್ತು ಮೊಬೈಲ್ ಫೋನ್‌ಗಳು ಸೇರಿದಂತೆ ಹಲವು ಸಾಧನಗಳಲ್ಲಿ ಆಡಬಹುದು. ಇದು ಉಚಿತವಾಗಿ ಲಭ್ಯವಿದ್ದು, www.letsplaytolearn.com ನ ಮುಖಪುಟದಿಂದ ಆಡಬಹುದು. ಜೊತೆಗೆ https://dost.iitm.ac.in/iitmdost/pages/game-corner ನಲ್ಲಿಯೂ ಲಭ್ಯವಿದೆ.

ವಿಭಿನ್ನ ಪ್ರೇಕ್ಷಕರ ಪ್ರತಿಕ್ರಿಯೆಯ ಆಧಾರದ ಮೇಲೆ, ವಿದ್ಯಾರ್ಥಿ ತಂಡವು, ಎಲ್ಲರಿಗೂ ತಲುಪುವಂತೆ ಮಾಡಲು ಈ ಆಟವನ್ನು ಹಲವಾರು ಭಾರತೀಯ ಪ್ರಾದೇಶಿಕ ಭಾಷೆಗಳಿಗೆ ಅನುವಾದಿಸಿದೆ. ಇಂಗ್ಲಿಷ್ ಸೇರಿದಂತೆ ಈ ಆಟವು 12 ಭಾಷೆಗಳಲ್ಲಿ ಲಭ್ಯವಿದೆ; ಅಸ್ಸಾಮೀಸ್, ಬಂಗಾಳಿ, ಗುಜರಾತಿ, ಹಿಂದಿ, ಕನ್ನಡ, ಮಲಯಾಳಂ, ಮರಾಠಿ, ಒಡಿಯಾ, ಪಂಜಾಬಿ, ಸಂಸ್ಕೃತ, ತಮಿಳು ಮತ್ತು ತೆಲುಗು ಭಾಷೆಗಳಲ್ಲಿ ಲಭ್ಯವಿದೆ ಎಂದು ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಇದನ್ನೂ ಓದಿ: ಕಂಗನಾ ವಿರುದ್ಧ ವಿಡಿಯೋ ಮಾಡಲು 65 ಲಕ್ಷ ಹಣ ಪಡೆಯಲಾಗಿದೆ: ಧೃವ್ ರಾಠೀ ಕೊಟ್ಟ…

ಈ ಆಟವನ್ನು ‘ಲೆಟ್ಸ್ ಪ್ಲೇ ಟು ಲರ್ನ್’ ಎಂಬ ಕೋರ್ಸ್ ತೆಗೆದುಕೊಂಡ ವಿದ್ಯಾರ್ಥಿಗಳು ರಚಿಸಿದ್ದಾರೆ. ಇದರಲ್ಲಿ ಅವರಿಗೆ ಆಟದ ಆಧಾರಿತ ಕಲಿಕಾ ಪರಿಕರಗಳು ಮತ್ತು ತಂತ್ರಗಳನ್ನು ಕಲಿಸಲಾಗುತ್ತದೆ.

ಈ ಆಟವು ಪ್ರಸಿದ್ಧ ಆಟವಾದ ‘ಸೂಪರ್ ಮಾರಿಯೋ’ ಆಟದಿಂದ ಸ್ಫೂರ್ತಿ ಪಡೆದಿದ್ದು, ಮಾಸ್ಕ್‌ ಮತ್ತು ಕೈಗಳನ್ನು ತೊಳೆಯುವುದು ಮುಂತಾದ ವಿವಿಧ ಸನ್ನಿವೇಶಗಳನ್ನು ಎದುರಿಸುವುದನ್ನು ಒಳಗೊಂಡಿದ್ದು, ಹ್ಯಾಂಡ್‌ಶೇಕ್ ಮತ್ತು ಅಪ್ಪಿಕೊಳ್ಳುವ ಕ್ರಿಯೆಗಳನ್ನು ಮಾಡಬಾರದು ಎಂದೂ ತಿಳಿಸುತ್ತದೆ.

ಮಗು ಸರಿಯಾದ ಕೆಲಸಗಳನ್ನು ಮಾಡುತ್ತಿದ್ದಂತೆ ಅಂಕಗಳು ಹೆಚ್ಚಾಗುತ್ತಲೇ ಇರುತ್ತವೆ. ತಪ್ಪು ವಿಷಯವನ್ನು ತಪ್ಪಿಸಲು ಮಗು ವಿಫಲವಾದರೆ, ಪರಿಣಾಮಗಳನ್ನು ತೋರಿಸುವ ಸಲುವಾಗಿ ಅಂಕಗಳನ್ನು ಕಡಿತಗೊಳಿಸಲಾಗುತ್ತದೆ. ಆಟವು 1 ನಿಮಿಷ ಮುಂದುವರಿಯುತ್ತದೆ, ಅಷ್ಟರಲ್ಲಿ ಆಟಗಾರರು ಗರಿಷ್ಠ ಅಂಕಗಳನ್ನು ಗಳಿಸಬೇಕು.


ಇದನ್ನೂ ಓದಿ: ಬಿಹಾರ ಚುನಾವಣೆ: ಮುಖ್ಯಮಂತ್ರಿ ನಿತೀಶ್ ಕುಮಾರ್‌ ಮೇಲೆ ಈರುಳ್ಳಿ ಎಸೆದು ಆಕ್ರೋಶ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...