Homeಕರೋನಾ ತಲ್ಲಣಕೊರೊನಾ: ಮಕ್ಕಳಿಗಾಗಿ ಜಾಗೃತಿ ಗೇಮ್ ಅಭಿವೃದ್ಧಿಪಡಿಸಿದ ಮದ್ರಾಸ್‌ ಐಐಟಿ ವಿದ್ಯಾರ್ಥಿಗಳು!

ಕೊರೊನಾ: ಮಕ್ಕಳಿಗಾಗಿ ಜಾಗೃತಿ ಗೇಮ್ ಅಭಿವೃದ್ಧಿಪಡಿಸಿದ ಮದ್ರಾಸ್‌ ಐಐಟಿ ವಿದ್ಯಾರ್ಥಿಗಳು!

- Advertisement -
- Advertisement -

ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಮದ್ರಾಸ್ (ಐಐಟಿ-ಎಂ) ವಿದ್ಯಾರ್ಥಿಗಳು ಡಿಜಿಟಲ್ ‘ಐಐಟಿ-ಎಂ ಕೋವಿಡ್ ಗೇಮ್’ ಅನ್ನು ಅಭಿವೃದ್ಧಿಪಡಿಸಿದ್ದು, ಈ ಗೇಮ್‌ ಆಡುವುದರಿಂದ ರೋಗದ ವಿರುದ್ಧ ತಮ್ಮನ್ನು ತಾವು ರಕ್ಷಿಸಿಕೊಳ್ಳಲು ಮತ್ತು ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳುವುದರ ಬಗ್ಗೆ ಸಾರ್ವಜನಿಕರಿಗೆ, ಅದರಲ್ಲೂ ವಿಶೇಷವಾಗಿ ಮಕ್ಕಳಗೆ ಜಾಗೃತಿ ಮೂಡಿಸುತ್ತದೆ ಎಂದು ಸೋಮವಾರ ಸಂಸ್ಥೆ ಹೇಳಿದೆ.

ಈ ಗೇಮ್ ಬ್ರೌಸರ್ ಆಧಾರಿತವಾಗಿದ್ದು, ಕಂಪ್ಯೂಟರ್, ಲ್ಯಾಪ್‌ಟಾಪ್, ಟ್ಯಾಬ್ಲೆಟ್ ಮತ್ತು ಮೊಬೈಲ್ ಫೋನ್‌ಗಳು ಸೇರಿದಂತೆ ಹಲವು ಸಾಧನಗಳಲ್ಲಿ ಆಡಬಹುದು. ಇದು ಉಚಿತವಾಗಿ ಲಭ್ಯವಿದ್ದು, www.letsplaytolearn.com ನ ಮುಖಪುಟದಿಂದ ಆಡಬಹುದು. ಜೊತೆಗೆ https://dost.iitm.ac.in/iitmdost/pages/game-corner ನಲ್ಲಿಯೂ ಲಭ್ಯವಿದೆ.

ವಿಭಿನ್ನ ಪ್ರೇಕ್ಷಕರ ಪ್ರತಿಕ್ರಿಯೆಯ ಆಧಾರದ ಮೇಲೆ, ವಿದ್ಯಾರ್ಥಿ ತಂಡವು, ಎಲ್ಲರಿಗೂ ತಲುಪುವಂತೆ ಮಾಡಲು ಈ ಆಟವನ್ನು ಹಲವಾರು ಭಾರತೀಯ ಪ್ರಾದೇಶಿಕ ಭಾಷೆಗಳಿಗೆ ಅನುವಾದಿಸಿದೆ. ಇಂಗ್ಲಿಷ್ ಸೇರಿದಂತೆ ಈ ಆಟವು 12 ಭಾಷೆಗಳಲ್ಲಿ ಲಭ್ಯವಿದೆ; ಅಸ್ಸಾಮೀಸ್, ಬಂಗಾಳಿ, ಗುಜರಾತಿ, ಹಿಂದಿ, ಕನ್ನಡ, ಮಲಯಾಳಂ, ಮರಾಠಿ, ಒಡಿಯಾ, ಪಂಜಾಬಿ, ಸಂಸ್ಕೃತ, ತಮಿಳು ಮತ್ತು ತೆಲುಗು ಭಾಷೆಗಳಲ್ಲಿ ಲಭ್ಯವಿದೆ ಎಂದು ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಇದನ್ನೂ ಓದಿ: ಕಂಗನಾ ವಿರುದ್ಧ ವಿಡಿಯೋ ಮಾಡಲು 65 ಲಕ್ಷ ಹಣ ಪಡೆಯಲಾಗಿದೆ: ಧೃವ್ ರಾಠೀ ಕೊಟ್ಟ…

ಈ ಆಟವನ್ನು ‘ಲೆಟ್ಸ್ ಪ್ಲೇ ಟು ಲರ್ನ್’ ಎಂಬ ಕೋರ್ಸ್ ತೆಗೆದುಕೊಂಡ ವಿದ್ಯಾರ್ಥಿಗಳು ರಚಿಸಿದ್ದಾರೆ. ಇದರಲ್ಲಿ ಅವರಿಗೆ ಆಟದ ಆಧಾರಿತ ಕಲಿಕಾ ಪರಿಕರಗಳು ಮತ್ತು ತಂತ್ರಗಳನ್ನು ಕಲಿಸಲಾಗುತ್ತದೆ.

ಈ ಆಟವು ಪ್ರಸಿದ್ಧ ಆಟವಾದ ‘ಸೂಪರ್ ಮಾರಿಯೋ’ ಆಟದಿಂದ ಸ್ಫೂರ್ತಿ ಪಡೆದಿದ್ದು, ಮಾಸ್ಕ್‌ ಮತ್ತು ಕೈಗಳನ್ನು ತೊಳೆಯುವುದು ಮುಂತಾದ ವಿವಿಧ ಸನ್ನಿವೇಶಗಳನ್ನು ಎದುರಿಸುವುದನ್ನು ಒಳಗೊಂಡಿದ್ದು, ಹ್ಯಾಂಡ್‌ಶೇಕ್ ಮತ್ತು ಅಪ್ಪಿಕೊಳ್ಳುವ ಕ್ರಿಯೆಗಳನ್ನು ಮಾಡಬಾರದು ಎಂದೂ ತಿಳಿಸುತ್ತದೆ.

ಮಗು ಸರಿಯಾದ ಕೆಲಸಗಳನ್ನು ಮಾಡುತ್ತಿದ್ದಂತೆ ಅಂಕಗಳು ಹೆಚ್ಚಾಗುತ್ತಲೇ ಇರುತ್ತವೆ. ತಪ್ಪು ವಿಷಯವನ್ನು ತಪ್ಪಿಸಲು ಮಗು ವಿಫಲವಾದರೆ, ಪರಿಣಾಮಗಳನ್ನು ತೋರಿಸುವ ಸಲುವಾಗಿ ಅಂಕಗಳನ್ನು ಕಡಿತಗೊಳಿಸಲಾಗುತ್ತದೆ. ಆಟವು 1 ನಿಮಿಷ ಮುಂದುವರಿಯುತ್ತದೆ, ಅಷ್ಟರಲ್ಲಿ ಆಟಗಾರರು ಗರಿಷ್ಠ ಅಂಕಗಳನ್ನು ಗಳಿಸಬೇಕು.


ಇದನ್ನೂ ಓದಿ: ಬಿಹಾರ ಚುನಾವಣೆ: ಮುಖ್ಯಮಂತ್ರಿ ನಿತೀಶ್ ಕುಮಾರ್‌ ಮೇಲೆ ಈರುಳ್ಳಿ ಎಸೆದು ಆಕ್ರೋಶ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...