Homeಕರೋನಾ ತಲ್ಲಣಕೊರೊನಾ: ಮಕ್ಕಳಿಗಾಗಿ ಜಾಗೃತಿ ಗೇಮ್ ಅಭಿವೃದ್ಧಿಪಡಿಸಿದ ಮದ್ರಾಸ್‌ ಐಐಟಿ ವಿದ್ಯಾರ್ಥಿಗಳು!

ಕೊರೊನಾ: ಮಕ್ಕಳಿಗಾಗಿ ಜಾಗೃತಿ ಗೇಮ್ ಅಭಿವೃದ್ಧಿಪಡಿಸಿದ ಮದ್ರಾಸ್‌ ಐಐಟಿ ವಿದ್ಯಾರ್ಥಿಗಳು!

- Advertisement -
- Advertisement -

ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಮದ್ರಾಸ್ (ಐಐಟಿ-ಎಂ) ವಿದ್ಯಾರ್ಥಿಗಳು ಡಿಜಿಟಲ್ ‘ಐಐಟಿ-ಎಂ ಕೋವಿಡ್ ಗೇಮ್’ ಅನ್ನು ಅಭಿವೃದ್ಧಿಪಡಿಸಿದ್ದು, ಈ ಗೇಮ್‌ ಆಡುವುದರಿಂದ ರೋಗದ ವಿರುದ್ಧ ತಮ್ಮನ್ನು ತಾವು ರಕ್ಷಿಸಿಕೊಳ್ಳಲು ಮತ್ತು ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳುವುದರ ಬಗ್ಗೆ ಸಾರ್ವಜನಿಕರಿಗೆ, ಅದರಲ್ಲೂ ವಿಶೇಷವಾಗಿ ಮಕ್ಕಳಗೆ ಜಾಗೃತಿ ಮೂಡಿಸುತ್ತದೆ ಎಂದು ಸೋಮವಾರ ಸಂಸ್ಥೆ ಹೇಳಿದೆ.

ಈ ಗೇಮ್ ಬ್ರೌಸರ್ ಆಧಾರಿತವಾಗಿದ್ದು, ಕಂಪ್ಯೂಟರ್, ಲ್ಯಾಪ್‌ಟಾಪ್, ಟ್ಯಾಬ್ಲೆಟ್ ಮತ್ತು ಮೊಬೈಲ್ ಫೋನ್‌ಗಳು ಸೇರಿದಂತೆ ಹಲವು ಸಾಧನಗಳಲ್ಲಿ ಆಡಬಹುದು. ಇದು ಉಚಿತವಾಗಿ ಲಭ್ಯವಿದ್ದು, www.letsplaytolearn.com ನ ಮುಖಪುಟದಿಂದ ಆಡಬಹುದು. ಜೊತೆಗೆ https://dost.iitm.ac.in/iitmdost/pages/game-corner ನಲ್ಲಿಯೂ ಲಭ್ಯವಿದೆ.

ವಿಭಿನ್ನ ಪ್ರೇಕ್ಷಕರ ಪ್ರತಿಕ್ರಿಯೆಯ ಆಧಾರದ ಮೇಲೆ, ವಿದ್ಯಾರ್ಥಿ ತಂಡವು, ಎಲ್ಲರಿಗೂ ತಲುಪುವಂತೆ ಮಾಡಲು ಈ ಆಟವನ್ನು ಹಲವಾರು ಭಾರತೀಯ ಪ್ರಾದೇಶಿಕ ಭಾಷೆಗಳಿಗೆ ಅನುವಾದಿಸಿದೆ. ಇಂಗ್ಲಿಷ್ ಸೇರಿದಂತೆ ಈ ಆಟವು 12 ಭಾಷೆಗಳಲ್ಲಿ ಲಭ್ಯವಿದೆ; ಅಸ್ಸಾಮೀಸ್, ಬಂಗಾಳಿ, ಗುಜರಾತಿ, ಹಿಂದಿ, ಕನ್ನಡ, ಮಲಯಾಳಂ, ಮರಾಠಿ, ಒಡಿಯಾ, ಪಂಜಾಬಿ, ಸಂಸ್ಕೃತ, ತಮಿಳು ಮತ್ತು ತೆಲುಗು ಭಾಷೆಗಳಲ್ಲಿ ಲಭ್ಯವಿದೆ ಎಂದು ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಇದನ್ನೂ ಓದಿ: ಕಂಗನಾ ವಿರುದ್ಧ ವಿಡಿಯೋ ಮಾಡಲು 65 ಲಕ್ಷ ಹಣ ಪಡೆಯಲಾಗಿದೆ: ಧೃವ್ ರಾಠೀ ಕೊಟ್ಟ…

ಈ ಆಟವನ್ನು ‘ಲೆಟ್ಸ್ ಪ್ಲೇ ಟು ಲರ್ನ್’ ಎಂಬ ಕೋರ್ಸ್ ತೆಗೆದುಕೊಂಡ ವಿದ್ಯಾರ್ಥಿಗಳು ರಚಿಸಿದ್ದಾರೆ. ಇದರಲ್ಲಿ ಅವರಿಗೆ ಆಟದ ಆಧಾರಿತ ಕಲಿಕಾ ಪರಿಕರಗಳು ಮತ್ತು ತಂತ್ರಗಳನ್ನು ಕಲಿಸಲಾಗುತ್ತದೆ.

ಈ ಆಟವು ಪ್ರಸಿದ್ಧ ಆಟವಾದ ‘ಸೂಪರ್ ಮಾರಿಯೋ’ ಆಟದಿಂದ ಸ್ಫೂರ್ತಿ ಪಡೆದಿದ್ದು, ಮಾಸ್ಕ್‌ ಮತ್ತು ಕೈಗಳನ್ನು ತೊಳೆಯುವುದು ಮುಂತಾದ ವಿವಿಧ ಸನ್ನಿವೇಶಗಳನ್ನು ಎದುರಿಸುವುದನ್ನು ಒಳಗೊಂಡಿದ್ದು, ಹ್ಯಾಂಡ್‌ಶೇಕ್ ಮತ್ತು ಅಪ್ಪಿಕೊಳ್ಳುವ ಕ್ರಿಯೆಗಳನ್ನು ಮಾಡಬಾರದು ಎಂದೂ ತಿಳಿಸುತ್ತದೆ.

ಮಗು ಸರಿಯಾದ ಕೆಲಸಗಳನ್ನು ಮಾಡುತ್ತಿದ್ದಂತೆ ಅಂಕಗಳು ಹೆಚ್ಚಾಗುತ್ತಲೇ ಇರುತ್ತವೆ. ತಪ್ಪು ವಿಷಯವನ್ನು ತಪ್ಪಿಸಲು ಮಗು ವಿಫಲವಾದರೆ, ಪರಿಣಾಮಗಳನ್ನು ತೋರಿಸುವ ಸಲುವಾಗಿ ಅಂಕಗಳನ್ನು ಕಡಿತಗೊಳಿಸಲಾಗುತ್ತದೆ. ಆಟವು 1 ನಿಮಿಷ ಮುಂದುವರಿಯುತ್ತದೆ, ಅಷ್ಟರಲ್ಲಿ ಆಟಗಾರರು ಗರಿಷ್ಠ ಅಂಕಗಳನ್ನು ಗಳಿಸಬೇಕು.


ಇದನ್ನೂ ಓದಿ: ಬಿಹಾರ ಚುನಾವಣೆ: ಮುಖ್ಯಮಂತ್ರಿ ನಿತೀಶ್ ಕುಮಾರ್‌ ಮೇಲೆ ಈರುಳ್ಳಿ ಎಸೆದು ಆಕ್ರೋಶ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...