Homeಕರೋನಾ ತಲ್ಲಣಕೊರೊನಾ ತಪ್ಪಿದರೂ ಕಳಂಕ ತಪ್ಪುತ್ತಿಲ್ಲ: ಸೋಂಕಿತರ ಕಥೆ–ವ್ಯಥೆ!

ಕೊರೊನಾ ತಪ್ಪಿದರೂ ಕಳಂಕ ತಪ್ಪುತ್ತಿಲ್ಲ: ಸೋಂಕಿತರ ಕಥೆ–ವ್ಯಥೆ!

ಇಂತಹ ಸಂದರ್ಭದಲ್ಲಿ ಒಬ್ಬರು ಇನ್ನೊಬ್ಬರ ಬೆನ್ನಿಗೆ ನಿಂತು ಸೋಂಕಿತರ ರಕ್ಷಣೆಗೆ, ಅವರ ಆತ್ಮಸ್ಥೈರ್ಯಕ್ಕೆ ಬೆಂಬಲವಾಗಿ ನಿಲ್ಲಬೇಕಿರುವುದು ಅವಶ್ಯಕ. ಇದು ನಮ್ಮೆಲ್ಲರ ಸಾಮಾಜಿಕ ಹೊಣೆಯೂ ಹೌದು. ಇಂತಹ ಪರಸ್ಪರ ನಂಬಿಕೆ ಉಳಿಸಿಕೊಳ್ಳುವ ಕೆಲಸಗಳಿಂದ ಮಾತ್ರ ಸೋಂಕಿನ ವಿರುದ್ಧ ಗೆಲ್ಲಲು ಸಾಧ್ಯ.

- Advertisement -
- Advertisement -

ಭಾರತದಲ್ಲಿ ಸುಮಾರು 9,31,181 ಜನರಿಗೆ ಕೊರೊನಾ ಸೋಂಕು ಆವರಿಸಿದೆ. ಈ ಪೈಕಿ 5,92,032 ಜನ ಗುಣಮುಖರಾಗಿ ಮನೆಗೆ ತೆರಳಿದ್ದರೆ, ಸಕ್ರಿಯ ಪ್ರಕರಣಗಳ ಸಂಖ್ಯೆ ಸದ್ಯಕ್ಕೆ 3,19,840. ಕೊರೊನಾ ಸೋಂಕಿನಿಂದಾಗಿ ಈವರೆಗೆ ಸುಮಾರು 24,309 ಜನ ಮೃತಪಟ್ಟಿದ್ದಾರೆ. ಅಂದರೆ ಮೃತಪಟ್ಟಿರುವ ಶೇಕಡಾವಾರು ಪ್ರಮಾಣ 2.3. ಮೃತಪಟ್ಟವರಲ್ಲಿ ಬಹುತೇಕರು 60ಕ್ಕಿಂತ ಹೆಚ್ಚು ವಯಸ್ಸಿನವರು ಮತ್ತು ಇತರ ರೋಗವನ್ನು ಹೊಂದಿದ್ದಂತವರು.

ಸ್ವಲ್ಪ ಹೆಚ್ಚುವರಿ ಎಚ್ಚರಿಕೆ ಮತ್ತು ಧೈರ್ಯ ಇದ್ದರೆ ಈ ಸೋಂಕನ್ನು ಸಂಭಾಳಿಸುವುದು ಕಷ್ಟದ ಕೆಲಸ ಏನಲ್ಲ ಎಂಬುದ ಹಲವು ತಜ್ಞರ ಅಭಿಪ್ರಾಯ. ಇದಕ್ಕಿಂತ ಮುಖ್ಯವಾಗಿ ಇಂತಹ ಸಂದರ್ಭದಲ್ಲಿ ಒಬ್ಬರು ಇನ್ನೊಬ್ಬರ ಬೆನ್ನಿಗೆ ನಿಂತು ಸೋಂಕಿತರ ರಕ್ಷಣೆಗೆ, ಅವರ ಆತ್ಮಸ್ಥೈರ್ಯಕ್ಕೆ ಬೆಂಬಲವಾಗಿ ನಿಲ್ಲಬೇಕಿರುವುದು ಅವಶ್ಯಕ. ಇದು ನಮ್ಮೆಲ್ಲರ ಸಾಮಾಜಿಕ ಹೊಣೆಯೂ ಹೌದು. ಇಂತಹ ಪರಸ್ಪರ ನಂಬಿಕೆ ಉಳಿಸಿಕೊಳ್ಳುವ ಕೆಲಸಗಳಿಂದ ಮಾತ್ರ ಸೋಂಕಿನ ವಿರುದ್ಧ ಗೆಲ್ಲಲು ಸಾಧ್ಯ. ಆದರೆ, ನಮ್ಮ ದೇಶದಲ್ಲಿ ಆಗುತ್ತಿರುವು ಒಂದು ಅಮಾನವೀಯ ಬೆಳವಣಿಗೆ ಆತಂಕಕ್ಕೆ ಎಡೆಮಾಡಿಕೊಟ್ಟಿದೆ.

ರಾಜ್ಯದಲ್ಲಿ ಕೊರೊನಾ ಸೋಂಕಿತರನ್ನು ನಡೆಸಿಕೊಳ್ಳುತ್ತಿರುವ – ಅವರ ಜೊತೆಗೆ ವರ್ತಿಸುತ್ತಿರುವ ಹಲವು ವರದಿಗಳು ಸಿಗುತ್ತವೆ. ಸೋಂಕು ಪೀಡಿತರಾಗಿ ರೋಗದ ನೋವಿಗಿಂತಲೂ ಜನರಿಂದ ಮಾನಸಿಕ ಹಿಂಸೆ ಅನುಭವಿಸಿದ ಕೆಲವರ ಕಥೆ ಇಲ್ಲಿದೆ.

ಕಥೆ-1: ಆತನ ಹೆಸರು ಸುರೇಶ್ (ಹೆಸರನ್ನು ಬದಲಿಸಲಾಗಿದೆ). ಬೆಂಗಳೂರಿನಲ್ಲಿ ಒಂದು ಒಳ್ಳೆಯ ಕಂಪೆನಿಯಲ್ಲಿ ಕೆಲಸ. ಒಳ್ಳೆಯ ಸಂಬಳ ಕೂಡ ಇದೆ. ಇತ್ತೀಚೆಗೆ ಒಂದು ಅಪಾರ್ಟ್‌ಮೆಂಟ್ ಖರೀದಿ ಮಾಡಿದ್ದರು. ಆದರೆ, ವಾರದ ಹಿಂದೆ ಅವರಿಗೆ ಊಟ ಮಾಡುವಾಗ ರುಚಿ ಗೊತ್ತಾಗಿರಲಿಲ್ಲ. ಹೀಗಾಗಿ ತಮ್ಮ ವೈದ್ಯರ ಸಲಹೆ ಮೇರೆಗೆ ಕೊರೊನಾ ಟೆಸ್ಟ್ ಮಾಡಿಸಿದ್ದಾರೆ. ಪಾಸಿಟೀವ್ ಫಲಿತಾಂಶ ಬಂದಿದೆ. ಆದರೆ, ಈ ವಿಚಾರ ಮನೆಗೆ ಆಗಮಿಸುವ ವೇಳೆಗೆ ಎಲ್ಲರಿಗೂ ಗೊತ್ತಾಗಿದೆ.

ಪರೀಕ್ಷೆ ನಡೆಸಿ ಇಂದಿಗೆ ಸರಿಯಾಗಿ 10 ದಿನಗಳಾಗಿವೆ. ತಾನು ಹಾಗೂ ತನ್ನ ಹೆಂಡತಿ ಮನೆಯಿಂದ ಹೊರ ಬರುವುದಿಲ್ಲ. ಅಪಾಟ್ಮೆರ್ಂಟ್‍ನ ಕಾಮನ್ ಸ್ಥಳಗಳನ್ನು ಬಳಸುವುದಿಲ್ಲ ಎಂದು ಇವರು ಅಪಾರ್ಟ್ಮೆಂಟ್ ಮ್ಯಾನೇಜ್ಮೆಂಟ್‍ನವರಿಗೆ ಮಾತು ನೀಡಿದ್ದಾರೆ. ಹೀಗಾಗಿ ಗಂಡ-ಹೆಂಡತಿ ಇಬ್ಬರೂ ಮನೆಯಿಂದ ಹೊರ ಬಂದು ಸೂರ್ಯನ ಕಿರಣಗಳನ್ನು ನೋಡಿಯೇ 10 ದಿನಗಳಾಗಿವೆ. ಈ ನಡುವೆ ವಾಚ್ಮನ್ ಪ್ರತಿದಿನ ಮನೆಯ ಬಾಗಿಲ ಬಳಿಯಲ್ಲಿ ಇಟ್ಟು ಹೋಗುವ ಮೊಸರನ್ನವೇ ಇವರಿಗೆ ಗತಿ. ಇನ್ನು ಮನೆಯಲ್ಲಿ ತುಂಬಾ ಕಸ ಇದ್ದು ಅದನ್ನು ಹೊರಗೆ ಸಾಗಿಸುವುದಕ್ಕೂ ಇವರು ನಿಸ್ಸಹಾಯಕರು. ಕೊರೊನಾ ನಿಮಿತ್ತ ತಮ್ಮ ಪ್ರತಿಯೊಂದು ಕೆಲಸಕ್ಕೂ ಇವರು ಪರಾವಲಂಬಿಗಳಾಗಿದ್ದಾರೆ.

ಕೊರೋನಾ ಸೋಂಕಿತರಾದ ಎಲ್ಲರೂ ಸಾಮಾನ್ಯವಾಗಿ ಎದುರಿಸಲೇಬೇಕಾದ ಸಂಕಷ್ಟವಿದು ಎಂದುಕೊಳ್ಳೋಣ. ಆದರೆ, ಚೂರಿಯಂತೆ ಇರಿಯುವ ಜನರ ಮಾತು ಕೊರೋನಾ ರೋಗಿಗಳ ಮಾನಸಿಕ ಆರೋಗ್ಯವನ್ನು ಹದಗೆಡಿಸಿದೆ. ಒಂದೆಡೆ ಅಪಾಟ್ಮೆರ್ಂಟ್‍ನ ಇತರ ನಿವಾಸಿಗಳು ಇಂತವರನ್ನು ಏಕೆ ಇಲ್ಲಿ ಇಟ್ಟಿದ್ದೀರಿ? ಎಂದು ವರಾತ ತೆಗೆಯುತ್ತಿದ್ದಾರೆ. ಅಪಾಟ್ಮೆರ್ಂಟ್ ನಿವಾಸಿಗಳ ವಾಟ್ಸಾಪ್ ಗ್ರೂಪುಗಳಲ್ಲಿ ಪ್ರತಿನಿತ್ಯ ಇವರದ್ದೇ ಮಾತಾಡುತ್ತಾ ಮಾನಸಿಕ ಕಿರುಕುಳ ನೀಡುತ್ತಿದ್ದಾರೆ. ಅಲ್ಲದೆ, ಆರೋಗ್ಯ ವಿಚಾರಿಸುವ ನೆಪದಲ್ಲಿ ಇವರಿಗೆ ಕರೆ ಮಾಡುವವರ ಚುಚ್ಚು ಮಾತುಗಳಿಂದ ಅಕ್ಷರಶಃ ನೊಂದಿದ್ದಾರೆ.

ನಾಳೆ ಇವರು ಖಂಡಿತ ಕೊರೋನಾದಂತಹ ಖಾಯಿಲೆಯಿಂದ ಬಚಾವಾಗಿ ಬರಬಹುದು. ಆದರೆ, ಈ ಸಂದರ್ಭದಲ್ಲಿ ಅವರ ಮನಸ್ಸಿಗೆ ಸತತವಾಗಿ ಉಂಟಾಗಿರುವ ನೋವಿನಿಂದ ರೋಗಿ ಬೇಗ ಗುಣವಾಗುತ್ತಾನೆ ಎಂದು ಹೇಳುವುದು ಕಷ್ಟ.

ಕಥೆ-2: ಆತ ಮೂಲತಃ ಮಲೆನಾಡಿನ ಹುಡುಗ. ಜೀವನೋಪಾಯಕ್ಕಾಗಿ ಬೆಂಗಳೂರಿಗೆ ಆಗಮಿಸಿದ್ದ. ಒಂದೊಳ್ಳೆ ಕೆಲಸ ಪಡೆದಿದ್ದ ಆತ ನಗರದ ಪ್ರತಿಷ್ಠಿತ ಏರಿಯಾದಲ್ಲಿ ಮನೆಯೊಂದನ್ನು ಬಾಡಿಗೆಗೆ ಪಡೆದಿದ್ದ. ಆದರೆ, ದುರಾದೃಷ್ಟವಶಾತ್ ಆಗಿನ್ನು ರಾಜ್ಯಕ್ಕೆ ಕಾಲಿಟ್ಟಿದ್ದ ಕೊರೊನಾ ಲಾಕ್‍ಡೌನ್ ಜಾರಿಯಾಗಿದ್ದ ಸಂದರ್ಭದಲ್ಲಿ ಆತನಿಗೂ ವಕ್ಕರಿಸಿತ್ತು.

ದಿಢೀರನೆ ಕಾಣಿಸಿಕೊಂಡಿದ್ದ ಸುಸ್ತು ಜ್ವರದಿಂದಾಗಿ ಮೆತ್ತಗಾಗಿದ್ದ ಆತ ಕೋವಿಡ್-19 ಪರೀಕ್ಷೆ ಮಾಡಿಸಿಕೊಂಡಿದ್ದ. ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿತ್ತು. ಹೀಗಾಗಿ ಕೂಡಲೇ ಆತನನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ಆತನೂ ಚಿಕಿತ್ಸೆಗೆ ಸ್ಪಂದಿಸಿ ಶೀಘ್ರವಾಗಿ ಗುಣಮುಖನಾಗಿದ್ದ.

ಆದರೆ, ಆಗಿನ್ನು ಮಾಧ್ಯಮಗಳು ಪ್ರತಿನಿತ್ಯ ಕೊರೊನಾ ಕೇಕೆ, ತಬ್ಲಿಘಿ ಸೋಂಕು, ಕೊರೊನಾ ರಣಕಹಳೆ, ಕೊರೊನಾ ಅಟ್ಟಹಾಸ, ಸಾವಿನ ಸರದಾರ ಹೀಗೆ ನಾನಾ ಹೆಸರಿನಲ್ಲಿ ಸೋಂಕನ್ನು ವಿಜೃಂಭಿಸಿ ವರದಿ ಮಾಡಿದ್ದವು. ಈ ಮೂಲಕ ಜನರಲ್ಲಿ ಎಚ್ಚರಿಕೆಯ ಬದಲು ಭೀತಿ ಹುಟ್ಟಿಸುವಲ್ಲಿ ಸಫಲರಾಗಿದ್ದರು. ಪರಿಣಾಮ ಆತ ಕೊರೊನಾದಿಂದ ಗುಣಮುಖನಾಗಿ ಮನೆಗೆ ಮರಳಿದ್ದರೂ ಸಹ ಕೊರೊನಾಗೆ ಹೆದರಿ ಮನೆಯ ಯಜಮಾನ ಆತನನ್ನು ಏಕಾಏಕಿ ಹೊರಹಾಕಿದ್ದ. “ಲಾಕ್‍ಡೌನ್ ಸಂದರ್ಭದಲ್ಲಿ ಅಸಹಾಯಕನಂತೆ ನಾನು ಬೀದಿ ಪಾಲಾಗಿದ್ದೆ. ಯಾರೂ ಸಹಾಯ ಹಸ್ತ ಚಾಚಲಿಲ್ಲ. ಕೊನೆಗೆ ಕೆಲಸವನ್ನೂ ಕಳೆದುಕೊಂಡು, ಆನಂತರ ಅನಿವಾರ್ಯವಾಗಿ ಊರಿಗೆ ಮರಳಿದೆ” ಎನ್ನುತ್ತಾರೆ ಅವರು.

ಇದು ಕೊರೊನಾ ಸೋಂಕು ಪೀಡಿತರ ಕಥೆಯಾದರೆ, ಇಂತಹ ಸಂದರ್ಭದಲ್ಲಿ ಒಂದು ಊರಿನಿಂದ ಮತ್ತೊಂದು ಊರಿಗೆ ಅನಿವಾರ್ಯ ಕಾರಣಗಳಿಗಾಗಿ ತಮ್ಮ ಸಂಬಂಧಿಕರ ಅಥವಾ ತಮ್ಮ ಮನೆಗೆ ತೆರಳುವವರ ಕಥೆ ಭಿನ್ನವಾಗಿದೆ, ಮತ್ತಷ್ಟು ಸಮಸ್ಯೆಗಳನ್ನು ಸೃಷ್ಟಿಸಿರುವುದು ತಿಳಿಯುತ್ತದೆ.

ಕಥೆ 3: ಆಕೆಯ ಹೆಸರು ಭಾನು (ಹೆಸರನ್ನು ಬದಲಾಯಿಸಲಾಗಿದೆ). ಶಿವಮೊಗ್ಗ ಜಿಲ್ಲೆಯ ಹಳ್ಳಿಯೊಂದರ ನಿವಾಸಿಯಾಗಿರುವ ಈಕೆ ಪದವೀಧರೆ. ಪೋಷಕರು ಈಕೆಯನ್ನು ದೂರದ ಮಂಗಳೂರಿಗೆ ಮದುವೆ ಮಾಡಿಕೊಟ್ಟಿದ್ದರು. ಆಕೆಯ ದುರಾದೃಷ್ಟವೋ ಏನೋ? ಆಕೆಗೆ 7 ತಿಂಗಳು ತುಂಬುತ್ತಿದ್ದಂತೆ ರಾಜ್ಯದಲ್ಲಿ ಕೊರೊನಾ ಸೋಂಕು ಹೆಚ್ಚಾಗಿ ಲಾಕ್‍ಡೌನ್ ಘೋಷಿಸಲಾಯಿತು.

ಸಾಮಾನ್ಯವಾಗಿ ಹೆಣ್ಣು ಮಕ್ಕಳಿಗೆ ಹೆರಿಗೆ ಸಂದರ್ಭದಲ್ಲಿ 7ನೇ ತಿಂಗಳು ನಡೆಯುವಾಗ ಸೀಮಂತ ಮಾಡಿಸಿ ಹೆರಿಗೆಗೆ ತವರು ಮನೆಗೆ ಕಳಿಸುವುದು ವಾಡಿಕೆ. ತವರು ಮನೆಗೆ ತೆರಳಲು ಇಂತಹ ಸಂದರ್ಭದಲ್ಲಿ ಹೆಣ್ಣು ಮಕ್ಕಳು ಕಾತರದಿಂದ ಕಾಯುತ್ತಿರುತ್ತಾರೆ. ಆದರೆ, ವಿಪರ್ಯಾಸ ಆಕೆ ಹೆರಿಗೆಗೆಂದು ತವರು ಮನೆಗೆ ಹೋಗುವುದು ಸಾಧ್ಯವೇ ಆಗಿರಲಿಲ್ಲ. ಹೀಗಾಗಿ ಗಂಡನ ಮನೆಯಲ್ಲೇ ಹೆರಿಗೆಯಾಗಿ ಹೆಣ್ಣುಮಗು ಜನಿಸಿತ್ತು.

ಆಕೆಗೆ ಮಗು ಜನಿಸುವಷ್ಟರಲ್ಲಿ ದೇಶದಾದ್ಯಂತ ಲಾಕ್‍ಡೌನ್ ಹಂತಹಂತವಾಗಿ ಸಡಿಲಿಕೆಯಾಗಿತ್ತು. ಹೀಗಾಗಿ ಮಗುವನ್ನಾದರೂ ತವರಿಗೆ ತೋರಿಸುವ ಸಲುವಾಗಿ ಆಕೆ ಗಂಡನ ಜೊತೆಗೆ ಕಾರಿನಲ್ಲಿ ತನ್ನ ಊರಿಗೆ ಬಂದಿಳಿದಿದ್ದಳು. ಆದರೆ, ಇಡೀ ಊರೇ ಒಟ್ಟಾಗಿ ಆಕೆ ಬಂದಿದ್ದ ಕಾರಿಗೆ ಮುತ್ತಿಗೆ ಹಾಕಿತ್ತು. ಹೊರಗಡೆಯಿಂದ ಯಾರೂ ಊರಿನ ಒಳಗೆ ಬರಬಾರದು ಎಂದು ತಾಕೀತು ಮಾಡಿ, ಕೊನೆಗೆ ಜಗಳ ಮಾಡಿ ಒತ್ತಾಯಪೂರ್ವಕವಾಗಿ ಆಕೆಯನ್ನು ಹಿಂದಕ್ಕೆ ಕಳಿಸಲಾಯಿತು.

ಇಂತಹ ಅಸಂಖ್ಯಾತ ಕಥೆಗಳಲ್ಲಿ ಇವು ಕೆಲವಷ್ಟೇ. ಮಾನವೀಯ ಸಮಾಜ ತಲೆ ತಗ್ಗಿಸುವ ಅದೆಷ್ಟೋ ಕಥೆಗಳು ಕೊರೊನಾ ಸೋಂಕಿತರನ್ನು ಕಳಂಕಿತರಾಗಿ ಕಾಣುತ್ತಿರುವ ಕಾರಣಕ್ಕೆ ಹುಟ್ಟಿಕೊಂಡಿವೆ. ಕೊರೊನಾ ಸಮಯದಲ್ಲಿ ಮಾನವೀಯ ಮೌಲ್ಯಗಳು ಮರೆಯಾಗಬಾರದೆಲ್ಲ! ಹೀಗೆ ಕೆಲವು ‘ಭಯಂಕರ’ ಮಾಧ್ಯಮಗಳ ವೈಭವೀಕೃತ ವರದಿಗಳಿಗೆ ಬೆಚ್ಚಿಬಿದ್ದು ಇಂತಹ ಸಂದಿಗ್ಧ ಸಂದರ್ಭದಲ್ಲಿ ಒಬ್ಬರ ಬೆನ್ನಿಗೆ ಒಬ್ಬರು ನಿಲ್ಲುಬೇಕಿರುವ ಸಮಯದಲ್ಲಿ ವಿವೇಕ ಕಳೆದುಕೊಳ್ಳಬಾರದಲ್ಲವೇ?


ಇದನ್ನು ಓದಿ: ‘ಪಕ್ಷದ ಬಾಗಿಲು ಮುಚ್ಚಿಲ್ಲ’: ಬಿಜೆಪಿ ಸೇರುವುದಿಲ್ಲ ಎಂದ ಪೈಲಟ್‌ಗೆ ಕಾಂಗ್ರೆಸ್ ಪ್ರತಿಕ್ರಿಯೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನದ ಭಿವಾಡಿಯಲ್ಲಿ ಗೋ ಕಳ್ಳಸಾಗಣೆದಾರರು ಮತ್ತು ಗೋರಕ್ಷಕರ ನಡುವೆ ಘರ್ಷಣೆ: ಯುವಕ ಸಾವು

ಜೈಪುರ: ರಾಜಸ್ಥಾನದ ಭಿವಾಡಿಯಲ್ಲಿ ಸೋಮವಾರ ಬೆಳಗಿನ ಜಾವ ಗೋ ಕಳ್ಳಸಾಗಣೆದಾರರು ಮತ್ತು ಗೋರಕ್ಷಕರ ನಡುವೆ ನಡೆದ ಘರ್ಷಣೆಯಲ್ಲಿ ಯುವಕನೊಬ್ಬ ಸಾವನ್ನಪ್ಪಿದ್ದಾನೆ. ಈ ಘಟನೆಯಿಂದಾಗಿ ಮೃತನ ಕುಟುಂಬ ಪ್ರತಿಭಟನೆ ನಡೆಸಿದ್ದು, ಆತನನ್ನು ಗುಂಡಿಕ್ಕಿ ಕೊಲ್ಲಲಾಗಿದೆ ಎಂದು...

ಖಮೇನಿ ಹತ್ಯೆ ಬಗ್ಗೆ ಪ್ರಧಾನಿ ಮೋದಿ ತಮ್ಮ ನಿಲುವು ತಿಳಿಸಬೇಕು: ರಾಹುಲ್ ಗಾಂಧಿ ಒತ್ತಾಯ

ಇರಾನ್‌ನ ಪರಮೋಚ್ಚ ನಾಯಕ ಆಯತೊಲ್ಲಾ ಅಲಿ ಖಮೇನಿ ಹತ್ಯೆಯ ಬಗ್ಗೆ ತಮ್ಮ ನಿಲುವನ್ನು ಸ್ಪಷ್ಟವಾಗಿ ತಿಳಿಸುವಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮಂಗಳವಾರ ಪ್ರಧಾನಿ ನರೇಂದ್ರ ಮೋದಿ ಅವರನ್ನು ಕೇಳಿದ್ದಾರೆ. ಅಮೆರಿಕ ಮತ್ತು...

ಇರಾನ್‌ ಮೇಲೆ ಇಸ್ರೇಲ್ ದಾಳಿ: ಟೆಹ್ರಾನ್‌ನಿಂದ 200ಕ್ಕೂ ಹೆಚ್ಚು ಭಾರತೀಯ ವಿದ್ಯಾರ್ಥಿಗಳು ಕೋಮ್‌ಗೆ ಸ್ಥಳಾಂತರ

ನವದೆಹಲಿ: ಇರಾನ್ ಮೇಲೆ ಅಮೆರಿಕ-ಇಸ್ರೇಲ್ ದಾಳಿಗಳು ತೀವ್ರಗೊಳ್ಳುತ್ತಿರುವ ಮಧ್ಯೆ, ಟೆಹ್ರಾನ್‌ನಿಂದ ಸ್ಥಳಾಂತರಿಸಲ್ಪಟ್ಟ ಭಾರತೀಯ ವಿದ್ಯಾರ್ಥಿಗಳನ್ನು ಕೋಮ್‌ಗೆ ಸುರಕ್ಷಿತವಾಗಿ ಸ್ಥಳಾಂತರಿಸಲಾಗಿದೆ, ಆದರೆ ಭಾರತೀಯ ರಾಯಭಾರ ಕಚೇರಿಯು ಮುನ್ನೆಚ್ಚರಿಕೆ ಕ್ರಮವಾಗಿ ತನ್ನ ಪ್ರಜೆಗಳನ್ನು ಮನೆಯೊಳಗೆ ಇರುವಂತೆ...

‘ಪಿಟಿಸಿಎಲ್‌ ಕಾಯ್ದೆ’ ಸಮರ್ಪಕ ಜಾರಿಗೆ ಆಗ್ರಹಿಸಿ ಆಹೋರಾತ್ರಿ ಧರಣಿ ಸತ್ಯಾಗ್ರಹ

'ಪಿಟಿಸಿಎಲ್‌ (PTCL) ಕಾಯ್ದೆ' ಸಮರ್ಪಕ ಜಾರಿಗೆ ಆಗ್ರಹಿಸಿ ಆಹೋರಾತ್ರಿ ಧರಣಿ ಸತ್ಯಾಗ್ರಹ ನಡೆಸಲಾಗುವುದು ಎಂದು 'ಪಿಟಿಸಿಎಲ್‌ ಕಾಯ್ದೆ ಭೂಮಿ ವಂಚಿತರ ಹೋರಾಟ ಸಮಿತಿ' ಮುಖಂಡರು ಘೋಷಿಸಿದರು. ಬೆಂಗಳೂರಿನ ಪ್ರೆಸ್‌ ಕ್ಲಬ್‌ನಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ...

ರಾಜಸ್ಥಾನ| ‘ನೀವು ಕೆಳಜಾತಿಯವರು, ಎಲ್‌ಎಲ್‌ಬಿ ನಿಮಗೆ ಸೂಕ್ತವಲ್ಲ..’; ದಲಿತ ವಿದ್ಯಾರ್ಥಿನಿಗೆ ಪ್ರಾಧ್ಯಾಪಕರಿಂದ ಜಾತಿ ನಿಂದನೆ

ರಾಜಸ್ಥಾನದ ಚುರುವಿನ ಸರ್ಕಾರಿ ಕಾನೂನು ಕಾಲೇಜಿನ ಮೂರನೇ ಸೆಮಿಸ್ಟರ್ ದಲಿತ ಎಲ್‌ಎಲ್‌ಬಿ ವಿದ್ಯಾರ್ಥಿನಿಯೊಬ್ಬರು, ಇಬ್ಬರು ಪ್ರಾಧ್ಯಾಪಕರಿಂದ ಜಾತಿ ಆಧಾರಿತ ನಿಂದನೆ, ಬೆದರಿಕೆ ಮತ್ತು ತಾರತಮ್ಯ ಆರೋಪದ ಮೇಲೆ ಪೊಲೀಸ್ ದೂರು ದಾಖಲಿಸಿದ್ದಾರೆ. ಎಸ್‌ಸಿ...

ಬೆಂಗಳೂರು: ಮೂರು ಅಂತಸ್ತಿನ ಕಟ್ಟಡದಲ್ಲಿ ಬೆಂಕಿ ಅವಘಡ: ಮಹಿಳೆ ಸಾವು, ಮೂವರ ರಕ್ಷಣೆ

ಬೆಂಗಳೂರು: ಸೋಮವಾರ ರಾತ್ರಿ ಉತ್ತರ ಬೆಂಗಳೂರಿನಲ್ಲಿರುವ ಮನೆಯೊಂದರಲ್ಲಿ ಸಂಭವಿಸಿದ ಬೆಂಕಿ ಅವಘಡದಲ್ಲಿ ಮಹಿಳೆಯೊಬ್ಬರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ. ಮೃತರನ್ನು 55 ವರ್ಷದ ಸವಿತಾ ಎಂದು ಗುರುತಿಸಲಾಗಿದೆ. ಅವರ ಪತಿ ಗುತ್ತಿಗೆದಾರ ರಮೇಶ್...

ಲಕ್ನೋ | 12 ವರ್ಷದ ಬಾಲಕ ಉನೈಝ್ ಗುಂಡೇಟಿಗೆ ಬಲಿ : ಸಂಚು ರೂಪಿಸಿ ಕೊಲೆ ಮಾಡಲಾಗಿದೆ ಎಂದ ಕುಟುಂಬ

ಉತ್ತರ ಪ್ರದೇಶದ ಲಕ್ನೋದಲ್ಲಿ 12 ವರ್ಷದ ಬಾಲಕನೊಬ್ಬ ಗುಂಡೇಟಿನಿಂದ ಮೃತಪಟ್ಟಿದ್ದು, ಆತನನ್ನು ಕೊಲೆ ಮಾಡಲಾಗಿದೆ. ಕೃತ್ಯವನ್ನು ಮುಚ್ಚಿ ಹಾಕಲು ಪ್ರಯತ್ನಿಸಲಾಗುತ್ತಿದೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಈ ಘಟನೆ ದೇಶದ ಗಮನ ಸೆಳೆದಿದ್ದು, ಸಾಮಾಜಿಕ...

ಕೇರಳ: ಪೊಲೀಸರ ‘ದುರುದ್ದೇಶಪೂರಿತ ಮೊಕದ್ದಮೆ’ಗಾಗಿ ನಿವೃತ್ತ ಸೇನಾ ಅಧಿಕಾರಿಗೆ ಕೇರಳ ನ್ಯಾಯಾಲಯದಿಂದ 5 ಲಕ್ಷ ರೂ. ಪರಿಹಾರ ಘೋಷಣೆ

ಕೊಲ್ಲಂ, ಕೇರಳ: ಪೊಲೀಸರ "ದುರುದ್ದೇಶಪೂರಿತ ಮೊಕದ್ದಮೆ"ಗಾಗಿ ನಿವೃತ್ತ ಸೇನಾ ಅಧಿಕಾರಿಯೊಬ್ಬರಿಗೆ ಕೇರಳ ನ್ಯಾಯಾಲಯವು 5 ಲಕ್ಷ ರೂ.ಗಳ ಪರಿಹಾರವನ್ನು ಘೋಷಿಸಿದೆ.  ಪ್ರಿನ್ಸಿಪಲ್ ಮುನ್ಸಿಫ್ ರಾಗಿ ಎಸ್. ಅವರು, 54 ವರ್ಷದ ನಿವೃತ್ತ ನಾಯಕ್ ಸುಬೇದಾರ್...

ಮಧ್ಯಪ್ರದೇಶ: ಇಂದೋರ್‌ನಲ್ಲಿ ಒಳಚರಂಡಿಗೆ ಇಳಿದು ಇಬ್ಬರು ಪೌರ ಕಾರ್ಮಿಕರು ಸಾವು: ವಿಷಕಾರಿ ಅನಿಲ ಶಂಕೆ

ಇಂದೋರ್‌ನ ಚೋಯಿತ್ರಮ್ ಆಸ್ಪತ್ರೆ ಬಳಿ ಸೋಮವಾರ ಒಳಚರಂಡಿ ಒಳಗೆ ಇಳಿದ ಕಾರಣ ಕರಣ್ ಮತ್ತು ಅಜಯ್ ಎಂದು ಗುರುತಿಸಲಾದ ಇಂದೋರ್ ಮಹಾನಗರ ಪಾಲಿಕೆಯ ಇಬ್ಬರು ಪೌರ ಕಾರ್ಮಿಕರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.  ವಲಯ 13ರ...

‘ಅತೃಪ್ತ ಆತ್ಮಗಳ ಹತಾಶ ಹೇಳಿಕೆ’ : ವಿಪಕ್ಷ ನಾಯಕರ ಫೋನ್ ಕದ್ದಾಲಿಕೆ ಆರೋಪಕ್ಕೆ ಸಿಎಂ ಸಿದ್ದರಾಮಯ್ಯ ತಿರುಗೇಟು

ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರ ಮೇಲೆ ಕಣ್ಣಿಡಲು ಪೋನ್ ಕದ್ದಾಲಿಕೆ ನಡೆಯುತ್ತಿದೆ ಎಂಬ ವಿರೋಧ ಪಕ್ಷದ ನಾಯಕರಾದ ಆರ್.ಅಶೋಕ್ ಮತ್ತು ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿಯವರ ಆರೋಪಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ....