Homeಕರೋನಾ ತಲ್ಲಣಕೊರೊನಾ ತಪ್ಪಿದರೂ ಕಳಂಕ ತಪ್ಪುತ್ತಿಲ್ಲ: ಸೋಂಕಿತರ ಕಥೆ–ವ್ಯಥೆ!

ಕೊರೊನಾ ತಪ್ಪಿದರೂ ಕಳಂಕ ತಪ್ಪುತ್ತಿಲ್ಲ: ಸೋಂಕಿತರ ಕಥೆ–ವ್ಯಥೆ!

ಇಂತಹ ಸಂದರ್ಭದಲ್ಲಿ ಒಬ್ಬರು ಇನ್ನೊಬ್ಬರ ಬೆನ್ನಿಗೆ ನಿಂತು ಸೋಂಕಿತರ ರಕ್ಷಣೆಗೆ, ಅವರ ಆತ್ಮಸ್ಥೈರ್ಯಕ್ಕೆ ಬೆಂಬಲವಾಗಿ ನಿಲ್ಲಬೇಕಿರುವುದು ಅವಶ್ಯಕ. ಇದು ನಮ್ಮೆಲ್ಲರ ಸಾಮಾಜಿಕ ಹೊಣೆಯೂ ಹೌದು. ಇಂತಹ ಪರಸ್ಪರ ನಂಬಿಕೆ ಉಳಿಸಿಕೊಳ್ಳುವ ಕೆಲಸಗಳಿಂದ ಮಾತ್ರ ಸೋಂಕಿನ ವಿರುದ್ಧ ಗೆಲ್ಲಲು ಸಾಧ್ಯ.

- Advertisement -
- Advertisement -

ಭಾರತದಲ್ಲಿ ಸುಮಾರು 9,31,181 ಜನರಿಗೆ ಕೊರೊನಾ ಸೋಂಕು ಆವರಿಸಿದೆ. ಈ ಪೈಕಿ 5,92,032 ಜನ ಗುಣಮುಖರಾಗಿ ಮನೆಗೆ ತೆರಳಿದ್ದರೆ, ಸಕ್ರಿಯ ಪ್ರಕರಣಗಳ ಸಂಖ್ಯೆ ಸದ್ಯಕ್ಕೆ 3,19,840. ಕೊರೊನಾ ಸೋಂಕಿನಿಂದಾಗಿ ಈವರೆಗೆ ಸುಮಾರು 24,309 ಜನ ಮೃತಪಟ್ಟಿದ್ದಾರೆ. ಅಂದರೆ ಮೃತಪಟ್ಟಿರುವ ಶೇಕಡಾವಾರು ಪ್ರಮಾಣ 2.3. ಮೃತಪಟ್ಟವರಲ್ಲಿ ಬಹುತೇಕರು 60ಕ್ಕಿಂತ ಹೆಚ್ಚು ವಯಸ್ಸಿನವರು ಮತ್ತು ಇತರ ರೋಗವನ್ನು ಹೊಂದಿದ್ದಂತವರು.

ಸ್ವಲ್ಪ ಹೆಚ್ಚುವರಿ ಎಚ್ಚರಿಕೆ ಮತ್ತು ಧೈರ್ಯ ಇದ್ದರೆ ಈ ಸೋಂಕನ್ನು ಸಂಭಾಳಿಸುವುದು ಕಷ್ಟದ ಕೆಲಸ ಏನಲ್ಲ ಎಂಬುದ ಹಲವು ತಜ್ಞರ ಅಭಿಪ್ರಾಯ. ಇದಕ್ಕಿಂತ ಮುಖ್ಯವಾಗಿ ಇಂತಹ ಸಂದರ್ಭದಲ್ಲಿ ಒಬ್ಬರು ಇನ್ನೊಬ್ಬರ ಬೆನ್ನಿಗೆ ನಿಂತು ಸೋಂಕಿತರ ರಕ್ಷಣೆಗೆ, ಅವರ ಆತ್ಮಸ್ಥೈರ್ಯಕ್ಕೆ ಬೆಂಬಲವಾಗಿ ನಿಲ್ಲಬೇಕಿರುವುದು ಅವಶ್ಯಕ. ಇದು ನಮ್ಮೆಲ್ಲರ ಸಾಮಾಜಿಕ ಹೊಣೆಯೂ ಹೌದು. ಇಂತಹ ಪರಸ್ಪರ ನಂಬಿಕೆ ಉಳಿಸಿಕೊಳ್ಳುವ ಕೆಲಸಗಳಿಂದ ಮಾತ್ರ ಸೋಂಕಿನ ವಿರುದ್ಧ ಗೆಲ್ಲಲು ಸಾಧ್ಯ. ಆದರೆ, ನಮ್ಮ ದೇಶದಲ್ಲಿ ಆಗುತ್ತಿರುವು ಒಂದು ಅಮಾನವೀಯ ಬೆಳವಣಿಗೆ ಆತಂಕಕ್ಕೆ ಎಡೆಮಾಡಿಕೊಟ್ಟಿದೆ.

ರಾಜ್ಯದಲ್ಲಿ ಕೊರೊನಾ ಸೋಂಕಿತರನ್ನು ನಡೆಸಿಕೊಳ್ಳುತ್ತಿರುವ – ಅವರ ಜೊತೆಗೆ ವರ್ತಿಸುತ್ತಿರುವ ಹಲವು ವರದಿಗಳು ಸಿಗುತ್ತವೆ. ಸೋಂಕು ಪೀಡಿತರಾಗಿ ರೋಗದ ನೋವಿಗಿಂತಲೂ ಜನರಿಂದ ಮಾನಸಿಕ ಹಿಂಸೆ ಅನುಭವಿಸಿದ ಕೆಲವರ ಕಥೆ ಇಲ್ಲಿದೆ.

ಕಥೆ-1: ಆತನ ಹೆಸರು ಸುರೇಶ್ (ಹೆಸರನ್ನು ಬದಲಿಸಲಾಗಿದೆ). ಬೆಂಗಳೂರಿನಲ್ಲಿ ಒಂದು ಒಳ್ಳೆಯ ಕಂಪೆನಿಯಲ್ಲಿ ಕೆಲಸ. ಒಳ್ಳೆಯ ಸಂಬಳ ಕೂಡ ಇದೆ. ಇತ್ತೀಚೆಗೆ ಒಂದು ಅಪಾರ್ಟ್‌ಮೆಂಟ್ ಖರೀದಿ ಮಾಡಿದ್ದರು. ಆದರೆ, ವಾರದ ಹಿಂದೆ ಅವರಿಗೆ ಊಟ ಮಾಡುವಾಗ ರುಚಿ ಗೊತ್ತಾಗಿರಲಿಲ್ಲ. ಹೀಗಾಗಿ ತಮ್ಮ ವೈದ್ಯರ ಸಲಹೆ ಮೇರೆಗೆ ಕೊರೊನಾ ಟೆಸ್ಟ್ ಮಾಡಿಸಿದ್ದಾರೆ. ಪಾಸಿಟೀವ್ ಫಲಿತಾಂಶ ಬಂದಿದೆ. ಆದರೆ, ಈ ವಿಚಾರ ಮನೆಗೆ ಆಗಮಿಸುವ ವೇಳೆಗೆ ಎಲ್ಲರಿಗೂ ಗೊತ್ತಾಗಿದೆ.

ಪರೀಕ್ಷೆ ನಡೆಸಿ ಇಂದಿಗೆ ಸರಿಯಾಗಿ 10 ದಿನಗಳಾಗಿವೆ. ತಾನು ಹಾಗೂ ತನ್ನ ಹೆಂಡತಿ ಮನೆಯಿಂದ ಹೊರ ಬರುವುದಿಲ್ಲ. ಅಪಾಟ್ಮೆರ್ಂಟ್‍ನ ಕಾಮನ್ ಸ್ಥಳಗಳನ್ನು ಬಳಸುವುದಿಲ್ಲ ಎಂದು ಇವರು ಅಪಾರ್ಟ್ಮೆಂಟ್ ಮ್ಯಾನೇಜ್ಮೆಂಟ್‍ನವರಿಗೆ ಮಾತು ನೀಡಿದ್ದಾರೆ. ಹೀಗಾಗಿ ಗಂಡ-ಹೆಂಡತಿ ಇಬ್ಬರೂ ಮನೆಯಿಂದ ಹೊರ ಬಂದು ಸೂರ್ಯನ ಕಿರಣಗಳನ್ನು ನೋಡಿಯೇ 10 ದಿನಗಳಾಗಿವೆ. ಈ ನಡುವೆ ವಾಚ್ಮನ್ ಪ್ರತಿದಿನ ಮನೆಯ ಬಾಗಿಲ ಬಳಿಯಲ್ಲಿ ಇಟ್ಟು ಹೋಗುವ ಮೊಸರನ್ನವೇ ಇವರಿಗೆ ಗತಿ. ಇನ್ನು ಮನೆಯಲ್ಲಿ ತುಂಬಾ ಕಸ ಇದ್ದು ಅದನ್ನು ಹೊರಗೆ ಸಾಗಿಸುವುದಕ್ಕೂ ಇವರು ನಿಸ್ಸಹಾಯಕರು. ಕೊರೊನಾ ನಿಮಿತ್ತ ತಮ್ಮ ಪ್ರತಿಯೊಂದು ಕೆಲಸಕ್ಕೂ ಇವರು ಪರಾವಲಂಬಿಗಳಾಗಿದ್ದಾರೆ.

ಕೊರೋನಾ ಸೋಂಕಿತರಾದ ಎಲ್ಲರೂ ಸಾಮಾನ್ಯವಾಗಿ ಎದುರಿಸಲೇಬೇಕಾದ ಸಂಕಷ್ಟವಿದು ಎಂದುಕೊಳ್ಳೋಣ. ಆದರೆ, ಚೂರಿಯಂತೆ ಇರಿಯುವ ಜನರ ಮಾತು ಕೊರೋನಾ ರೋಗಿಗಳ ಮಾನಸಿಕ ಆರೋಗ್ಯವನ್ನು ಹದಗೆಡಿಸಿದೆ. ಒಂದೆಡೆ ಅಪಾಟ್ಮೆರ್ಂಟ್‍ನ ಇತರ ನಿವಾಸಿಗಳು ಇಂತವರನ್ನು ಏಕೆ ಇಲ್ಲಿ ಇಟ್ಟಿದ್ದೀರಿ? ಎಂದು ವರಾತ ತೆಗೆಯುತ್ತಿದ್ದಾರೆ. ಅಪಾಟ್ಮೆರ್ಂಟ್ ನಿವಾಸಿಗಳ ವಾಟ್ಸಾಪ್ ಗ್ರೂಪುಗಳಲ್ಲಿ ಪ್ರತಿನಿತ್ಯ ಇವರದ್ದೇ ಮಾತಾಡುತ್ತಾ ಮಾನಸಿಕ ಕಿರುಕುಳ ನೀಡುತ್ತಿದ್ದಾರೆ. ಅಲ್ಲದೆ, ಆರೋಗ್ಯ ವಿಚಾರಿಸುವ ನೆಪದಲ್ಲಿ ಇವರಿಗೆ ಕರೆ ಮಾಡುವವರ ಚುಚ್ಚು ಮಾತುಗಳಿಂದ ಅಕ್ಷರಶಃ ನೊಂದಿದ್ದಾರೆ.

ನಾಳೆ ಇವರು ಖಂಡಿತ ಕೊರೋನಾದಂತಹ ಖಾಯಿಲೆಯಿಂದ ಬಚಾವಾಗಿ ಬರಬಹುದು. ಆದರೆ, ಈ ಸಂದರ್ಭದಲ್ಲಿ ಅವರ ಮನಸ್ಸಿಗೆ ಸತತವಾಗಿ ಉಂಟಾಗಿರುವ ನೋವಿನಿಂದ ರೋಗಿ ಬೇಗ ಗುಣವಾಗುತ್ತಾನೆ ಎಂದು ಹೇಳುವುದು ಕಷ್ಟ.

ಕಥೆ-2: ಆತ ಮೂಲತಃ ಮಲೆನಾಡಿನ ಹುಡುಗ. ಜೀವನೋಪಾಯಕ್ಕಾಗಿ ಬೆಂಗಳೂರಿಗೆ ಆಗಮಿಸಿದ್ದ. ಒಂದೊಳ್ಳೆ ಕೆಲಸ ಪಡೆದಿದ್ದ ಆತ ನಗರದ ಪ್ರತಿಷ್ಠಿತ ಏರಿಯಾದಲ್ಲಿ ಮನೆಯೊಂದನ್ನು ಬಾಡಿಗೆಗೆ ಪಡೆದಿದ್ದ. ಆದರೆ, ದುರಾದೃಷ್ಟವಶಾತ್ ಆಗಿನ್ನು ರಾಜ್ಯಕ್ಕೆ ಕಾಲಿಟ್ಟಿದ್ದ ಕೊರೊನಾ ಲಾಕ್‍ಡೌನ್ ಜಾರಿಯಾಗಿದ್ದ ಸಂದರ್ಭದಲ್ಲಿ ಆತನಿಗೂ ವಕ್ಕರಿಸಿತ್ತು.

ದಿಢೀರನೆ ಕಾಣಿಸಿಕೊಂಡಿದ್ದ ಸುಸ್ತು ಜ್ವರದಿಂದಾಗಿ ಮೆತ್ತಗಾಗಿದ್ದ ಆತ ಕೋವಿಡ್-19 ಪರೀಕ್ಷೆ ಮಾಡಿಸಿಕೊಂಡಿದ್ದ. ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿತ್ತು. ಹೀಗಾಗಿ ಕೂಡಲೇ ಆತನನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ಆತನೂ ಚಿಕಿತ್ಸೆಗೆ ಸ್ಪಂದಿಸಿ ಶೀಘ್ರವಾಗಿ ಗುಣಮುಖನಾಗಿದ್ದ.

ಆದರೆ, ಆಗಿನ್ನು ಮಾಧ್ಯಮಗಳು ಪ್ರತಿನಿತ್ಯ ಕೊರೊನಾ ಕೇಕೆ, ತಬ್ಲಿಘಿ ಸೋಂಕು, ಕೊರೊನಾ ರಣಕಹಳೆ, ಕೊರೊನಾ ಅಟ್ಟಹಾಸ, ಸಾವಿನ ಸರದಾರ ಹೀಗೆ ನಾನಾ ಹೆಸರಿನಲ್ಲಿ ಸೋಂಕನ್ನು ವಿಜೃಂಭಿಸಿ ವರದಿ ಮಾಡಿದ್ದವು. ಈ ಮೂಲಕ ಜನರಲ್ಲಿ ಎಚ್ಚರಿಕೆಯ ಬದಲು ಭೀತಿ ಹುಟ್ಟಿಸುವಲ್ಲಿ ಸಫಲರಾಗಿದ್ದರು. ಪರಿಣಾಮ ಆತ ಕೊರೊನಾದಿಂದ ಗುಣಮುಖನಾಗಿ ಮನೆಗೆ ಮರಳಿದ್ದರೂ ಸಹ ಕೊರೊನಾಗೆ ಹೆದರಿ ಮನೆಯ ಯಜಮಾನ ಆತನನ್ನು ಏಕಾಏಕಿ ಹೊರಹಾಕಿದ್ದ. “ಲಾಕ್‍ಡೌನ್ ಸಂದರ್ಭದಲ್ಲಿ ಅಸಹಾಯಕನಂತೆ ನಾನು ಬೀದಿ ಪಾಲಾಗಿದ್ದೆ. ಯಾರೂ ಸಹಾಯ ಹಸ್ತ ಚಾಚಲಿಲ್ಲ. ಕೊನೆಗೆ ಕೆಲಸವನ್ನೂ ಕಳೆದುಕೊಂಡು, ಆನಂತರ ಅನಿವಾರ್ಯವಾಗಿ ಊರಿಗೆ ಮರಳಿದೆ” ಎನ್ನುತ್ತಾರೆ ಅವರು.

ಇದು ಕೊರೊನಾ ಸೋಂಕು ಪೀಡಿತರ ಕಥೆಯಾದರೆ, ಇಂತಹ ಸಂದರ್ಭದಲ್ಲಿ ಒಂದು ಊರಿನಿಂದ ಮತ್ತೊಂದು ಊರಿಗೆ ಅನಿವಾರ್ಯ ಕಾರಣಗಳಿಗಾಗಿ ತಮ್ಮ ಸಂಬಂಧಿಕರ ಅಥವಾ ತಮ್ಮ ಮನೆಗೆ ತೆರಳುವವರ ಕಥೆ ಭಿನ್ನವಾಗಿದೆ, ಮತ್ತಷ್ಟು ಸಮಸ್ಯೆಗಳನ್ನು ಸೃಷ್ಟಿಸಿರುವುದು ತಿಳಿಯುತ್ತದೆ.

ಕಥೆ 3: ಆಕೆಯ ಹೆಸರು ಭಾನು (ಹೆಸರನ್ನು ಬದಲಾಯಿಸಲಾಗಿದೆ). ಶಿವಮೊಗ್ಗ ಜಿಲ್ಲೆಯ ಹಳ್ಳಿಯೊಂದರ ನಿವಾಸಿಯಾಗಿರುವ ಈಕೆ ಪದವೀಧರೆ. ಪೋಷಕರು ಈಕೆಯನ್ನು ದೂರದ ಮಂಗಳೂರಿಗೆ ಮದುವೆ ಮಾಡಿಕೊಟ್ಟಿದ್ದರು. ಆಕೆಯ ದುರಾದೃಷ್ಟವೋ ಏನೋ? ಆಕೆಗೆ 7 ತಿಂಗಳು ತುಂಬುತ್ತಿದ್ದಂತೆ ರಾಜ್ಯದಲ್ಲಿ ಕೊರೊನಾ ಸೋಂಕು ಹೆಚ್ಚಾಗಿ ಲಾಕ್‍ಡೌನ್ ಘೋಷಿಸಲಾಯಿತು.

ಸಾಮಾನ್ಯವಾಗಿ ಹೆಣ್ಣು ಮಕ್ಕಳಿಗೆ ಹೆರಿಗೆ ಸಂದರ್ಭದಲ್ಲಿ 7ನೇ ತಿಂಗಳು ನಡೆಯುವಾಗ ಸೀಮಂತ ಮಾಡಿಸಿ ಹೆರಿಗೆಗೆ ತವರು ಮನೆಗೆ ಕಳಿಸುವುದು ವಾಡಿಕೆ. ತವರು ಮನೆಗೆ ತೆರಳಲು ಇಂತಹ ಸಂದರ್ಭದಲ್ಲಿ ಹೆಣ್ಣು ಮಕ್ಕಳು ಕಾತರದಿಂದ ಕಾಯುತ್ತಿರುತ್ತಾರೆ. ಆದರೆ, ವಿಪರ್ಯಾಸ ಆಕೆ ಹೆರಿಗೆಗೆಂದು ತವರು ಮನೆಗೆ ಹೋಗುವುದು ಸಾಧ್ಯವೇ ಆಗಿರಲಿಲ್ಲ. ಹೀಗಾಗಿ ಗಂಡನ ಮನೆಯಲ್ಲೇ ಹೆರಿಗೆಯಾಗಿ ಹೆಣ್ಣುಮಗು ಜನಿಸಿತ್ತು.

ಆಕೆಗೆ ಮಗು ಜನಿಸುವಷ್ಟರಲ್ಲಿ ದೇಶದಾದ್ಯಂತ ಲಾಕ್‍ಡೌನ್ ಹಂತಹಂತವಾಗಿ ಸಡಿಲಿಕೆಯಾಗಿತ್ತು. ಹೀಗಾಗಿ ಮಗುವನ್ನಾದರೂ ತವರಿಗೆ ತೋರಿಸುವ ಸಲುವಾಗಿ ಆಕೆ ಗಂಡನ ಜೊತೆಗೆ ಕಾರಿನಲ್ಲಿ ತನ್ನ ಊರಿಗೆ ಬಂದಿಳಿದಿದ್ದಳು. ಆದರೆ, ಇಡೀ ಊರೇ ಒಟ್ಟಾಗಿ ಆಕೆ ಬಂದಿದ್ದ ಕಾರಿಗೆ ಮುತ್ತಿಗೆ ಹಾಕಿತ್ತು. ಹೊರಗಡೆಯಿಂದ ಯಾರೂ ಊರಿನ ಒಳಗೆ ಬರಬಾರದು ಎಂದು ತಾಕೀತು ಮಾಡಿ, ಕೊನೆಗೆ ಜಗಳ ಮಾಡಿ ಒತ್ತಾಯಪೂರ್ವಕವಾಗಿ ಆಕೆಯನ್ನು ಹಿಂದಕ್ಕೆ ಕಳಿಸಲಾಯಿತು.

ಇಂತಹ ಅಸಂಖ್ಯಾತ ಕಥೆಗಳಲ್ಲಿ ಇವು ಕೆಲವಷ್ಟೇ. ಮಾನವೀಯ ಸಮಾಜ ತಲೆ ತಗ್ಗಿಸುವ ಅದೆಷ್ಟೋ ಕಥೆಗಳು ಕೊರೊನಾ ಸೋಂಕಿತರನ್ನು ಕಳಂಕಿತರಾಗಿ ಕಾಣುತ್ತಿರುವ ಕಾರಣಕ್ಕೆ ಹುಟ್ಟಿಕೊಂಡಿವೆ. ಕೊರೊನಾ ಸಮಯದಲ್ಲಿ ಮಾನವೀಯ ಮೌಲ್ಯಗಳು ಮರೆಯಾಗಬಾರದೆಲ್ಲ! ಹೀಗೆ ಕೆಲವು ‘ಭಯಂಕರ’ ಮಾಧ್ಯಮಗಳ ವೈಭವೀಕೃತ ವರದಿಗಳಿಗೆ ಬೆಚ್ಚಿಬಿದ್ದು ಇಂತಹ ಸಂದಿಗ್ಧ ಸಂದರ್ಭದಲ್ಲಿ ಒಬ್ಬರ ಬೆನ್ನಿಗೆ ಒಬ್ಬರು ನಿಲ್ಲುಬೇಕಿರುವ ಸಮಯದಲ್ಲಿ ವಿವೇಕ ಕಳೆದುಕೊಳ್ಳಬಾರದಲ್ಲವೇ?


ಇದನ್ನು ಓದಿ: ‘ಪಕ್ಷದ ಬಾಗಿಲು ಮುಚ್ಚಿಲ್ಲ’: ಬಿಜೆಪಿ ಸೇರುವುದಿಲ್ಲ ಎಂದ ಪೈಲಟ್‌ಗೆ ಕಾಂಗ್ರೆಸ್ ಪ್ರತಿಕ್ರಿಯೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...