Homeಕೊರೊನಾಕೊರೊನಾ ಸಾಂಕ್ರಾಮಿಕದಿಂದ ಮಾರಾಟದಲ್ಲಿ ದಾಖಲೆ ಬರೆದ ಡೋಲೊ-650

ಕೊರೊನಾ ಸಾಂಕ್ರಾಮಿಕದಿಂದ ಮಾರಾಟದಲ್ಲಿ ದಾಖಲೆ ಬರೆದ ಡೋಲೊ-650

- Advertisement -
- Advertisement -

ಕೊರೊನಾ ಸಾಂಕ್ರಾಮಿಕ ಆರಂಭದಿಂದಲೂ ಎಲ್ಲರೂ ಮೇಡ್ ಇನ್ ಇಂಡಿಯಾ ಡೋಲೊ-650 ಮಾತ್ರೆಯನ್ನು ಸೇವಿಸಿದ್ದಾರೆ. ದೇಶದಲ್ಲಿ ಕೊರೊನಾ ವೈರಸ್ ಸೋಂಕು ಆರಂಭವಾದಗಿನಿಂದ ಇಲ್ಲಿಯವರೆಗೆ ಮಾರಾಟವಾದ ಮಾತ್ರೆಗಳ ಸಂಖ್ಯೆ 350 ಕೋಟಿ ಎಂದು ಡೇಟಾ ತೋರಿಸಿದೆ.

ಭಾರತದಲ್ಲಿ ಡೋಲೊ ಪ್ಯಾರಿಸಿಟಮೊಲ್ ಮಾತ್ರೆಗಳು ಕಳೆದ ಎರಡು ವರ್ಷಗಳಿಂದ ಹೆಚ್ಚು ಮಾರಾಟವಾಗಿವೆ. IQVA ಸಂಶೋದನೆಯ ಪ್ರಕಾರ, 2019 ರ ನಂತರ ಭಾರತದಲ್ಲಿ ಕಂಪನಿಯು 7.5 ಕೋಟಿ ಡೋಲೊ ಮಾತ್ರೆಗಳನ್ನು ಮಾರಾಟ ಮಾಡಿದೆ. 2019 ಮತ್ತು 2021 ರ ಅವಧಿಯಲ್ಲಿ 350 ಕೋಟಿಗೂ ಹೆಚ್ಚು ಮಾತ್ರೆಗಳು ಮಾರಾಟವಾಗಿವೆ.

ಶೀತ ಮತ್ತು ಜ್ವರದ ವಿರುದ್ದ ಜನರು ಪ್ಯಾರಿಸಿಟಮೊಲ್ ಮಾತ್ರೆಗಳನ್ನು ಹೆಚ್ಚು ಸೇವಿಸಿದ್ದಾರೆ. ಭಾರತದಲ್ಲಿ ಕೊರೊನಾ ಕಾಣಿಸಿಕೊಂಡಾಗಿನಿಂದ ಸೇವಿಸಿಸುವ ಅಷ್ಟೂ (350 ಕೋಟಿ)  ಮಾತ್ರೆಗಳನ್ನು ನೇರವಾಗಿ ಜೋಡಿಸಿದರೆ, ಮೌಂಟ್ ಎವರೆಸ್ಟ್‌ಗಿಂತ 600 ಪಟ್ಟು ಎತ್ತರವಾಗುತ್ತದೆ ಅಥವಾ 63,000 ಅಡಿಗಳಷ್ಟು ಎತ್ತರವಿರುವ ಬುರ್ಜಾ ಖಲೀಫಾಕ್ಕೆ ಸಮವಾಗುತ್ತದೆ ಎನ್ನಲಾಗಿದೆ.

ಇದನ್ನೂ ಓದಿ: ಬಲವಂತವಾಗಿ ಯಾರಿಗೂ ಲಸಿಕೆ ನೀಡುವುದಿಲ್ಲ: ಸುಪ್ರೀಂಗೆ ಕೇಂದ್ರದ ಹೇಳಿಕೆ

ಡೋಲೊ-650 ಮಾತ್ರೆಯನ್ನು ಎರಡು ಲಕ್ಷ ಮಂದಿ ಗೂಗಲ್‌ನಲ್ಲಿ ಹುಡುಕಾಟ ನಡೆಸಿದ್ದಾರೆ. ಅಂದಾಜು 307 ಕೋಟಿ ರೂಪಾಯಿ ವಹಿವಾಟು ನಡೆಸುವುದರ ಮೂಲಕ ಡೋಲೊ ಮಾತ್ರೆಯು ಭಾರತದಲ್ಲಿ ಎರಡನೇ ದೊಡ್ಡ ನೋವು ನಿವಾರಕ ಮಾತ್ರೆಯಾಗಿದೆ. ಒಟ್ಟಾರೆಯಾಗಿ, 2019 ರಲ್ಲಿ, ಪ್ಯಾರಿಸಿಟಮೊಲ್ ವರ್ಗದ ಅಡಿಯಲ್ಲಿ ಎಲ್ಲಾ ಬ್ರ್ಯಾಂಡ್‌ಗಳ ಮಾರಾಟವು ಸುಮಾರು 530 ಕೋಟಿ ರೂ. ಇತ್ತು. ಆದರೆ ಕೊರೊನಾ ಆರಂಭವಾದ ಬಳಿಕ ಮಾರಾಟವು 70% ರಷ್ಟು ಹೆಚ್ಚಾಗಿದೆ ಮತ್ತು 2021 ರ ವೇಳೆಗೆ ಅವರು 924 ಕೋಟಿ ರೂ. ರೂಪಾಯಿಗೆ ಏರಿಕೆಯಾಗಿದೆ.

ಪ್ಯಾರಸಿಟಮೊಲ್ ಮಾತ್ರೆ 1960 ರಿಂದಲೂ ಅಸ್ತಿತ್ವದಲ್ಲಿದೆ. ಕ್ರೋಸಿನ್ ಮತ್ತು ಡೋಲೊ ಒಂದೇ ಬ್ರಾಂಡ್ ಮಾತ್ರೆಗಳಾಗಿವೆ. 2010 ರಲ್ಲಿ ಡೋಲೋವನ್ನು ಅತ್ಯುತ್ತಮ ನೋವು ನಿವಾರಕ ಮಾತ್ರೆಯೆಂದು ಪರಿಗಣಿಸಲಾಗಿತ್ತು.

ನೋವು ಮತ್ತು ಶೀತದಿಂದ ಗುಣಪಡಿಸುವುದೇ ಡೋಲೊ ಜನಪ್ರಿಯತೆಗೆ ಕಾರಣ ಎಂದು ಮಹಾತ್ಮ ಗಾಂಧಿ ವೈದ್ಯಕೀಯ ಸಂಸ್ಥೆಯ ಪ್ರಾಧ್ಯಾಪಕರಾದ ಡಾ.ಎ.ಪಿ ಕಲಾಂತ್ರಿಯವರು ಹೇಳಿದ್ದಾರೆ.

ಯಾವುದೇ ಜ್ವರ, ಶೀತ, ಕೆಮ್ಮು, ಮೈ-ಕೈ ನೋವಿಗೆ ಡೋಲೊ-650ಯನ್ನು ತೆಗೆದುಕೊಳ್ಳಲು ಸಲಹೆ ನೀಡುತ್ತೇವೆ ಎಂದು ವೈದರು ಹೇಳಿದ್ದಾರೆ. ಡೋಲೊ-650 ಯ ಉತ್ಪಾದನೆಯು ಕೊರೊನಾ ಅವಧಿಯಲ್ಲಿ 25 ಪಟ್ಟು ಹೆಚ್ಚಾಗಿದೆ ಎಂದು ಕಂಪನಿಯ ಸಿಇಒ 2021ರ ಜನವರಿಯಲ್ಲಿ ನಡೆದ ಒಂದು ಸಂದರ್ಶನದಲ್ಲಿ ಹೇಳಿದ್ದಾರೆ.

ಡೋಲೊ ಮಾರಾಟ ಮತ್ತು ಅದರ ಜನಪ್ರಿಯತೆ ಆಧರಿಸಿ ಹಲವು ಮೀಮ್‌ಗಳು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿವೆ.


ಇದನ್ನೂ ಓದಿ: ಕೊರೊನಾ ಮಾತ್ರೆಗಳು: ಉಪಯುಕ್ತವೇ..? ವೈದ್ಯರು ಹೇಳುವುದೇನು…?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...