Homeಕೊರೊನಾಕೊರೊನಾ ಸಾಂಕ್ರಾಮಿಕದಿಂದ ಮಾರಾಟದಲ್ಲಿ ದಾಖಲೆ ಬರೆದ ಡೋಲೊ-650

ಕೊರೊನಾ ಸಾಂಕ್ರಾಮಿಕದಿಂದ ಮಾರಾಟದಲ್ಲಿ ದಾಖಲೆ ಬರೆದ ಡೋಲೊ-650

- Advertisement -
- Advertisement -

ಕೊರೊನಾ ಸಾಂಕ್ರಾಮಿಕ ಆರಂಭದಿಂದಲೂ ಎಲ್ಲರೂ ಮೇಡ್ ಇನ್ ಇಂಡಿಯಾ ಡೋಲೊ-650 ಮಾತ್ರೆಯನ್ನು ಸೇವಿಸಿದ್ದಾರೆ. ದೇಶದಲ್ಲಿ ಕೊರೊನಾ ವೈರಸ್ ಸೋಂಕು ಆರಂಭವಾದಗಿನಿಂದ ಇಲ್ಲಿಯವರೆಗೆ ಮಾರಾಟವಾದ ಮಾತ್ರೆಗಳ ಸಂಖ್ಯೆ 350 ಕೋಟಿ ಎಂದು ಡೇಟಾ ತೋರಿಸಿದೆ.

ಭಾರತದಲ್ಲಿ ಡೋಲೊ ಪ್ಯಾರಿಸಿಟಮೊಲ್ ಮಾತ್ರೆಗಳು ಕಳೆದ ಎರಡು ವರ್ಷಗಳಿಂದ ಹೆಚ್ಚು ಮಾರಾಟವಾಗಿವೆ. IQVA ಸಂಶೋದನೆಯ ಪ್ರಕಾರ, 2019 ರ ನಂತರ ಭಾರತದಲ್ಲಿ ಕಂಪನಿಯು 7.5 ಕೋಟಿ ಡೋಲೊ ಮಾತ್ರೆಗಳನ್ನು ಮಾರಾಟ ಮಾಡಿದೆ. 2019 ಮತ್ತು 2021 ರ ಅವಧಿಯಲ್ಲಿ 350 ಕೋಟಿಗೂ ಹೆಚ್ಚು ಮಾತ್ರೆಗಳು ಮಾರಾಟವಾಗಿವೆ.

ಶೀತ ಮತ್ತು ಜ್ವರದ ವಿರುದ್ದ ಜನರು ಪ್ಯಾರಿಸಿಟಮೊಲ್ ಮಾತ್ರೆಗಳನ್ನು ಹೆಚ್ಚು ಸೇವಿಸಿದ್ದಾರೆ. ಭಾರತದಲ್ಲಿ ಕೊರೊನಾ ಕಾಣಿಸಿಕೊಂಡಾಗಿನಿಂದ ಸೇವಿಸಿಸುವ ಅಷ್ಟೂ (350 ಕೋಟಿ)  ಮಾತ್ರೆಗಳನ್ನು ನೇರವಾಗಿ ಜೋಡಿಸಿದರೆ, ಮೌಂಟ್ ಎವರೆಸ್ಟ್‌ಗಿಂತ 600 ಪಟ್ಟು ಎತ್ತರವಾಗುತ್ತದೆ ಅಥವಾ 63,000 ಅಡಿಗಳಷ್ಟು ಎತ್ತರವಿರುವ ಬುರ್ಜಾ ಖಲೀಫಾಕ್ಕೆ ಸಮವಾಗುತ್ತದೆ ಎನ್ನಲಾಗಿದೆ.

ಇದನ್ನೂ ಓದಿ: ಬಲವಂತವಾಗಿ ಯಾರಿಗೂ ಲಸಿಕೆ ನೀಡುವುದಿಲ್ಲ: ಸುಪ್ರೀಂಗೆ ಕೇಂದ್ರದ ಹೇಳಿಕೆ

ಡೋಲೊ-650 ಮಾತ್ರೆಯನ್ನು ಎರಡು ಲಕ್ಷ ಮಂದಿ ಗೂಗಲ್‌ನಲ್ಲಿ ಹುಡುಕಾಟ ನಡೆಸಿದ್ದಾರೆ. ಅಂದಾಜು 307 ಕೋಟಿ ರೂಪಾಯಿ ವಹಿವಾಟು ನಡೆಸುವುದರ ಮೂಲಕ ಡೋಲೊ ಮಾತ್ರೆಯು ಭಾರತದಲ್ಲಿ ಎರಡನೇ ದೊಡ್ಡ ನೋವು ನಿವಾರಕ ಮಾತ್ರೆಯಾಗಿದೆ. ಒಟ್ಟಾರೆಯಾಗಿ, 2019 ರಲ್ಲಿ, ಪ್ಯಾರಿಸಿಟಮೊಲ್ ವರ್ಗದ ಅಡಿಯಲ್ಲಿ ಎಲ್ಲಾ ಬ್ರ್ಯಾಂಡ್‌ಗಳ ಮಾರಾಟವು ಸುಮಾರು 530 ಕೋಟಿ ರೂ. ಇತ್ತು. ಆದರೆ ಕೊರೊನಾ ಆರಂಭವಾದ ಬಳಿಕ ಮಾರಾಟವು 70% ರಷ್ಟು ಹೆಚ್ಚಾಗಿದೆ ಮತ್ತು 2021 ರ ವೇಳೆಗೆ ಅವರು 924 ಕೋಟಿ ರೂ. ರೂಪಾಯಿಗೆ ಏರಿಕೆಯಾಗಿದೆ.

ಪ್ಯಾರಸಿಟಮೊಲ್ ಮಾತ್ರೆ 1960 ರಿಂದಲೂ ಅಸ್ತಿತ್ವದಲ್ಲಿದೆ. ಕ್ರೋಸಿನ್ ಮತ್ತು ಡೋಲೊ ಒಂದೇ ಬ್ರಾಂಡ್ ಮಾತ್ರೆಗಳಾಗಿವೆ. 2010 ರಲ್ಲಿ ಡೋಲೋವನ್ನು ಅತ್ಯುತ್ತಮ ನೋವು ನಿವಾರಕ ಮಾತ್ರೆಯೆಂದು ಪರಿಗಣಿಸಲಾಗಿತ್ತು.

ನೋವು ಮತ್ತು ಶೀತದಿಂದ ಗುಣಪಡಿಸುವುದೇ ಡೋಲೊ ಜನಪ್ರಿಯತೆಗೆ ಕಾರಣ ಎಂದು ಮಹಾತ್ಮ ಗಾಂಧಿ ವೈದ್ಯಕೀಯ ಸಂಸ್ಥೆಯ ಪ್ರಾಧ್ಯಾಪಕರಾದ ಡಾ.ಎ.ಪಿ ಕಲಾಂತ್ರಿಯವರು ಹೇಳಿದ್ದಾರೆ.

ಯಾವುದೇ ಜ್ವರ, ಶೀತ, ಕೆಮ್ಮು, ಮೈ-ಕೈ ನೋವಿಗೆ ಡೋಲೊ-650ಯನ್ನು ತೆಗೆದುಕೊಳ್ಳಲು ಸಲಹೆ ನೀಡುತ್ತೇವೆ ಎಂದು ವೈದರು ಹೇಳಿದ್ದಾರೆ. ಡೋಲೊ-650 ಯ ಉತ್ಪಾದನೆಯು ಕೊರೊನಾ ಅವಧಿಯಲ್ಲಿ 25 ಪಟ್ಟು ಹೆಚ್ಚಾಗಿದೆ ಎಂದು ಕಂಪನಿಯ ಸಿಇಒ 2021ರ ಜನವರಿಯಲ್ಲಿ ನಡೆದ ಒಂದು ಸಂದರ್ಶನದಲ್ಲಿ ಹೇಳಿದ್ದಾರೆ.

ಡೋಲೊ ಮಾರಾಟ ಮತ್ತು ಅದರ ಜನಪ್ರಿಯತೆ ಆಧರಿಸಿ ಹಲವು ಮೀಮ್‌ಗಳು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿವೆ.


ಇದನ್ನೂ ಓದಿ: ಕೊರೊನಾ ಮಾತ್ರೆಗಳು: ಉಪಯುಕ್ತವೇ..? ವೈದ್ಯರು ಹೇಳುವುದೇನು…?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....