Homeಕರೋನಾ ತಲ್ಲಣಹೊಸ ಕೊರೊನಾ ಆತಂಕ: ಲಂಡನ್‌ನಿಂದ ಬಂದಿದ್ದ 6 ಮಂದಿಗೆ ಕೊರೊನಾ ಸೋಂಕು

ಹೊಸ ಕೊರೊನಾ ಆತಂಕ: ಲಂಡನ್‌ನಿಂದ ಬಂದಿದ್ದ 6 ಮಂದಿಗೆ ಕೊರೊನಾ ಸೋಂಕು

ಡಿ.21 ರ ಸೋಮವಾರ ರಾತ್ರಿ ಲಂಡನ್‌ನಿಂದ ಭಾರತಕ್ಕೆ ಆಗಮಿಸಿದ್ದ ಏರ್ ಇಂಡಿಯಾ ವಿಮಾನದಲ್ಲಿ 266 ಜನ ಪ್ರಯಾಣಿಕರಿದ್ದರು. ಅವರಲ್ಲಿ  6 ಪ್ರಯಾಣಿಕರಲ್ಲಿ ಕೊರೊನಾ ಸೋಂಕು ಕಂಡುಬಂದಿದೆ.

- Advertisement -
- Advertisement -

ಬ್ರಿಟನ್‌ನಲ್ಲಿ ಹೊಸ ಸ್ಪರೂಪದ ಕೊರೊನಾ ವೈರಸ್ ತೀವ್ರ ವೇಗದಲ್ಲಿ ಹಬ್ಬುತಿದ್ದು, ಭಾರತದಲ್ಲೂ ಆತಂಕಕ್ಕೆ ಕಾರಣವಾಗಿದೆ. ಡಿ.21ರ ರಾತ್ರಿ ಲಂಡನ್‌ನಿಂದ ಏರ್ ಇಂಡಿಯಾ ವಿಮಾನದಲ್ಲಿ ಭಾರತಕ್ಕೆ ಆಗಮಿಸಿದ ಆರು ಪ್ರಯಾಣಿಕರಿಗೆ ಕೊರೊನಾ ಸೋಂಕು ಇರುವುದು ದೃಢವಾಗಿದೆ.

ದೆಹಲಿಗೆ ಬೆಳಿಗ್ಗೆ ಬಂದಿಳಿದ ಬ್ರಿಟಿಷ್ ಏರ್‌ವೇಸ್ ವಿಮಾನದಲ್ಲಿದ್ದವರನ್ನು ಕೊರೊನಾಪರೀಕ್ಷೆಗೆ ಒಳಪಡಿಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಬ್ರಿಟನ್‌ನಲ್ಲಿ ಹೊಸ ವೈರಸ್ ಕಾಣಿಸಿಕೊಂಡಿದ್ದು, ಅಲ್ಲಿಂದಲೇ ಬಂದಿರುವ ಪ್ರಯಾಣಿಕರಲ್ಲಿ ಸೋಂಕು ಪತ್ತೆಯಾಗಿರುವುದು ಆತಂಕಕ್ಕೆ ಕಾರಣವಾಗಿದೆ.

ಯುಕೆಯಿಂದ ಭಾರತಕ್ಕೆ ಬರುವ ವಿಮಾನಗಳ ತಾತ್ಕಾಲಿಕ ನಿಷೇಧವು ಇಂದು ರಾತ್ರಿಯಿಂದ ಜಾರಿಗೆ ಬರಲಿದ್ದು, ಇದು ಡಿಸೆಂಬರ್ 31 ರವರೆಗೆ ಇರುತ್ತದೆ. ಅಲ್ಲಿಯವರೆಗೆ, ಬ್ರಿಟನ್‌ನಿಂದ ಆಗಮಿಸುವ ಎಲ್ಲಾ ಪ್ರಯಾಣಿಕರನ್ನು ವಿಮಾನ ನಿಲ್ದಾಣಗಳಲ್ಲೇ ಕೊರೊನಾ ಪರೀಕ್ಷೆಗೆ ಒಳಪಡಿಸಲಾಗುವುದು ಎಂದು ಸರ್ಕಾರ ಮಾಹಿತಿ ನೀಡಿದೆ.

ಇದನ್ನೂ ಓದಿ: ಹೊಸ ಕೊರೊನಾ ಆತಂಕ: ಕಳೆದ 14 ದಿನದಲ್ಲಿ ಹೊರ ದೇಶಗಳಿಂದ ರಾಜ್ಯಕ್ಕೆ ಬಂದವರಿಗೆ ಟೆಸ್ಟ್

ಡಿ.21 ರ ಸೋಮವಾರ ರಾತ್ರಿ ಲಂಡನ್‌ನಿಂದ ಭಾರತಕ್ಕೆ ಆಗಮಿಸಿದ್ದ ಏರ್ ಇಂಡಿಯಾ ವಿಮಾನದಲ್ಲಿ 266 ಜನ ಪ್ರಯಾಣಿಕರಿದ್ದರು. ಅವರಲ್ಲಿ 6 ಪ್ರಯಾಣಿಕರಲ್ಲಿ ಕೊರೊನಾ ಸೋಂಕು ಕಂಡುಬಂದಿದೆ.

ದೆಹಲಿ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರ ಕೊರೊನಾ ಪರೀಕ್ಷೆಗಳನ್ನು ನಡೆಸಲು ಸಹಾಯ ಮಾಡುತ್ತಿರುವ ಸರ್ಕಾರಿ ಅಧಿಕಾರಿ ಅವನಿಶ್ ಕುಮಾರ್ ಹೇಳುವಂತೆ, ಈ ಆರು ಜನರಲ್ಲಿ ಹೊಸ ಸ್ವರೂಪದ ಕೊರೊನಾ ಇದೆಯಾ ಎಂಬುದು ಇನ್ನು ಸ್ಪಷ್ಟವಾಗಿಲ್ಲ, ಎನ್‌ಸಿಡಿಸಿ (National Centre for Disease Control) ಇದನ್ನು ಖಚಿತಪಡಿಸುತ್ತದೆ ಎಂದಿದ್ದಾರೆ. ದೆಹಲಿ ವಿಮಾನ ನಿಲ್ದಾಣದಲ್ಲಿ ಪರೀಕ್ಷೆ ನಡೆಸಿರುವ ಮಾದರಿಗಳನ್ನು ಎನ್‌ಸಿಡಿಸಿಗೆ ಕಳುಹಿಸಲಾಗಿದೆ.

ದೇಶದಲ್ಲಿ, ಬ್ರಿಟನ್ ವಿಮಾನ ನಿಷೇಧ ಘೋಷಣೆಯಾದಾಗಿನಿಂದ ಬ್ರಿಟನ್‌ನಿಂದ ಎರಡು ವಿಮಾನಗಳು ಭಾರತಕ್ಕೆ ಬಂದಿವೆ. ಒಂದು ಮುಂಬೈ ಮತ್ತು ಇನ್ನೊಂದು ಪಂಜಾಬ್‌ನ ಅಮೃತಸರದಲ್ಲಿ ಇಳಿದಿವೆ. ಅಮೃತಸರದಲ್ಲಿ  ಆಗಮಿಸಿದ 240 ಪ್ರಯಾಣಿಕರ ಪರೀಕ್ಷಾ ಫಲಿತಾಂಶಗಳು ಮಂಗಳವಾರ(ಡಿ.22) ಮಧ್ಯಾಹ್ನ ಬರಲಿವೆ ಎಂದು ಸರ್ಕಾರಿ ಅಧಿಕಾರಿ ದೀಪಕ್ ಭಾಟಿಯಾ ತಿಳಿಸಿದ್ದಾರೆ.

ಹೊಸ ಸ್ವರೂಪದ ಕೊರೊನಾ ನಿಯಂತ್ರಣಕ್ಕಾಗಿ ಇಂಗ್ಲೆಂಡ್‌ ಸರ್ಕಾರ ಈಗಾಗಲೇ ನಾಲ್ಕನೇ ಹಂತದ ಲಾಕ್‌ಡೌನ್ ಘೋಷಿಸಿ, ಜನರನ್ನು ಮನೆಯಲ್ಲಿಯೇ ಇರುವಂತೆ ಮನವಿ ಮಾಡಿದೆ. ದೇಶದಲ್ಲಿ ಆತಂಕ ಪಡುವ ಅಗತ್ಯವಿಲ್ಲ ಸರ್ಕಾರ ಎಲ್ಲಾ ರೀತಿಯ ಮುನ್ನೆಚ್ಚರಿಕೆ ವಹಿಸಿದೆ ಎಂದು ಕೇಂದ್ರ ಆರೋಗ್ಯ ಸಚಿವ ಡಾ.ಹರ್ಷವರ್ಧನ್ ತಿಳಿಸಿದ್ದಾರೆ.


ಇದನ್ನೂ ಓದಿ: ಬ್ರಿಟನ್‌ನಲ್ಲಿ ಹೊಸ ಕೊರೊನಾ ವೈರಸ್ ಪತ್ತೆ: ಯುಕೆ ವಿಮಾನಗಳನ್ನು ನಿರ್ಬಂಧಿಸಿದ ಭಾರತ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...