Homeಕರೋನಾ ತಲ್ಲಣವಿಶ್ವದೆಲ್ಲೆಡೆ ಕೊರೊನಾ ಹೊಸ ರೂಪಾಂತರ ‘ಓಮಿಕ್ರಾನ್’ ಆತಂಕ: ತಜ್ಞರು ಹೇಳುವುದೇನು?

ವಿಶ್ವದೆಲ್ಲೆಡೆ ಕೊರೊನಾ ಹೊಸ ರೂಪಾಂತರ ‘ಓಮಿಕ್ರಾನ್’ ಆತಂಕ: ತಜ್ಞರು ಹೇಳುವುದೇನು?

- Advertisement -
- Advertisement -

ಈ ವಾರ ದಕ್ಷಿಣ ಆಫ್ರಿಕಾದಲ್ಲಿ ಮೊದಲ ಬಾರಿಗೆ ಕಂಡುಬಂದ ಕೊರೊನಾದ ಹೊಸ ರೂಪಾಂತರಕ್ಕೆ ‘ಓಮಿಕ್ರಾನ್’ ಎಂದು ಮರುನಾಮಕರಣ ಮಾಡಲಾಗಿದ್ದು, ವಿಶ್ವ ಆರೋಗ್ಯ ಸಂಸ್ಥೆ(WHO)ಯು ಈ ರೂಪಾಂತರವನ್ನು ‘ಕಳವಳಕಾರಿ ರೂಪಾಂತರ’ ಎಂದು ಕರೆದಿದೆ. ಓಮಿಕ್ರಾನ್‌ ಇತರ ರೂಪಗಳಿಗಿಂತ ಹೆಚ್ಚು ವೇಗವಾಗಿ ಹರಡಬಹುದು ಎಂದು WHO ಹೇಳಿದೆ.

“ಕೊರೊನಾ ಸಾಂಕ್ರಾಮಿಕ ರೋಗಶಾಸ್ತ್ರದಲ್ಲಿ ಹಾನಿಕಾರಕ ಬದಲಾವಣೆಯನ್ನು ಸೂಚಿಸುವ ಪುರಾವೆಗಳ ಆಧಾರದ ಮೇಲೆ… ವಿಶ್ವ ಆರೋಗ್ಯ ಸಂಸ್ಥೆಯು B.1.1.529 ಅನ್ನು ಕಳವಳಕಾರಿ ರೂಪಾಂತರ (VOC) ಎಂದು ಗೊತ್ತುಪಡಿಸಿ, ಇದನ್ನು ‘ಓಮಿಕ್ರಾನ್‌’ ಎಂದು ಹೆಸರಿಸಿದೆ” ಎಂದು ಆರೋಗ್ಯ ಸಂಸ್ಥೆ ತನ್ನ ಹೇಳಿಕೆಯಲ್ಲಿ ತಿಳಿಸಿದೆ.

ಇದನ್ನೂ ಓದಿ: ಕೊರೊನಾ ಮಾತ್ರೆಗಳು: ಉಪಯುಕ್ತವೇ..? ವೈದ್ಯರು ಹೇಳುವುದೇನು…?

ಈ ರೂಪಾಂತರವನ್ನು ಮೊದಲ ಬಾರಿಗೆ ಬುಧವಾರ ದಕ್ಷಿಣ ಆಫ್ರಿಕಾದಿಂದ ವಿಶ್ವ ಆರೋಗ್ಯ ಸಂಸ್ಥೆಗೆ ವರದಿ ಮಾಡಲಾಗಿದೆ. ಓಮಿಕ್ರಾನ್ ಸೋಂಕು ನವೆಂಬರ್ 9 ರಂದು ಸಂಗ್ರಹಿಸಲಾದ ಮಾದರಿಯಿಂದ ಮೊದಲ ಬಾರಿಗೆ ದೃಢೀಕರಿಸಲ್ಪಟ್ಟಿತು. ಇತ್ತೀಚಿನ ವಾರಗಳಲ್ಲಿ, ದಕ್ಷಿಣ ಆಫ್ರಿಕಾದಲ್ಲಿ ಸೋಂಕುಗಳು ತೀವ್ರವಾಗಿ ಹೆಚ್ಚಿದ್ದು, ಇದು ಇದೇ ಸೋಂಕಿನ ಪರಿಣಾಮವಾಗಿದೆ ಎಂದು ವರದಿಯಾಗಿದೆ. ದಕ್ಷಿಣ ಆಫ್ರಿಕಾದ ಬಹುತೇಕ ಎಲ್ಲಾ ಪ್ರಾಂತ್ಯಗಳಲ್ಲಿ ಓಮಿಕ್ರಾನ್ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದೆ ಎಂದು ಅದು ಹೇಳಿದೆ.

ಹೊಸ ರೂಪಾಂತರ ಓಮಿಕ್ರಾನ್ ಬಗ್ಗೆ ನಾನುಗೌರಿ.ಕಾಂ ಜೊತೆ ಮಾತನಾಡಿದ ಜಾಗತಿಕ ಆರೋಗ್ಯ ಮತ್ತು ಸಾಂಕ್ರಾಮಿಕ ಪಿಡುಗುಗಳ ಸಂಶೋಧಕರಾಗಿರುವ ಡಾ. ಹಿಮಾಂಶು ಅವರು, “ಪ್ರಸ್ತುತ ಕಂಡುಬಂದಿರುವ ಓಮಿಕ್ರಾನ್ ರೂಪಾಂತರ ಇದುವರೆಗೂ ಬಂದಿರುವ ಎಲ್ಲಾ ರೂಪಾಂತರಗಳಿಗಿಂತ ತುಂಬಾ ವೇಗವಾಗಿ ಹರಡುತ್ತದೆ. ಯಾವ ಮಟ್ಟದಲ್ಲಿ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ ಎಂಬುವುದು ಇನ್ನಷ್ಟೇ ತಿಳಿದು ಬರಬೇಕಿದೆ. ಮುಖ್ಯವಾದ ವಿಷಯವೇನೆಂದರೆ ಲಸಿಕೆ ಪಡೆದುಕೊಂಡವರಿಗೂ ಈ ರೂಪಾಂತರ ಸೋಂಕು ಹರಡಿದೆ ಎಂಬುವುದಾಗಿದೆ. ಆದರೆ ಅವರಲ್ಲಿ ಯಾವ ಮಟ್ಟಿಗೆ ಪರಿಣಾಮ ಬೀರುತ್ತದೆ ಎಂಬುವುದು ಇನ್ನೂ ತಿಳಿದು ಬಂದಿಲ್ಲ” ಎಂದು ಹೇಳಿದ್ದಾರೆ.

“ಇದುವರೆಗೂ ಡೆಲ್ಟಾ ಪ್ಲಸ್‌ ರೂಪಾಂತರದಿಂದ ಭಾರತದಲ್ಲಿ ಮೂರನೇ ಅಲೆ ಬರುತ್ತದೆ ಎಂದು ಹೇಳಲಾಗುತ್ತಿತ್ತು. ಆದರೆ ಇದೀಗ ಓಮಿಕ್ರಾನ್‌ ರೂಪಾಂತರದಿಂದಲೇ ಬಹುಷಃ ಬರಬಹುದು. ಇದು ಬಂದರೆ ಭಾರೀ ವೇಗದಲ್ಲಿ ಹರಡುತ್ತದೆ. ಕಳೆದ ಎರಡು ಅಲೆಗಳಲ್ಲಿ ನಮಗೆ ಹೆಚ್ಚಿನ ಮಾಹಿತಿಗಳು ಇರಲಿಲ್ಲ. ಆದರೆ ಈಗ ಮುಂದೆ ಏನಾಗಬಹುದು ಎಂಬ ಖಚಿತವಾದ ಮಾಹಿತಿ ದೊರೆಯುವಷ್ಟು ಈ ವೈರಸ್‌ ಬಗ್ಗೆ ಅಧ್ಯಯನ ನಡೆದಿದೆ. ಸಧ್ಯಕ್ಕೆ ಬೆಂಗಳೂರಿನಲ್ಲಿ ಲಕ್ಷದಲ್ಲಿ 20 ಜನರಿಗೆ ಐಸಿಯು ಬೇಕಾದರೂ ನಮ್ಮಲ್ಲಿ ಮೂಲಭೂತ ಸೌಕರ್ಯಗಳು ಸಾಲುವುದಿಲ್ಲ. ಆದ್ದರಿಂದ ಸರ್ಕಾರಗಳು ಆದಷ್ಟು ಬೇಗ ಎಚ್ಚೆತ್ತುಕೊಳ್ಳಬೇಕು” ಎಂದು ಡಾ. ಹಿಮಾಂಶು ಹೇಳಿದ್ದಾರೆ.

ಇದನ್ನೂ ಓದಿ: ಜಗತ್ತಿನ ಹಲವೆಡೆ ಹೆಚ್ಚಿದ ಕೊರೊನಾ ಪ್ರಕರಣಗಳು: ಲಾಕ್‌ಡೌನ್‌ ಘೋಷಿಸಿದ ದೇಶಗಳಿವು

ರೂಪಾಂತರಗಳನ್ನು ಚೆನ್ನಾಗಿ ಅರ್ಥಮಾಡಿಕೊಳ್ಳಲು ತಮ್ಮ ಕಣ್ಗಾವಲು ಮತ್ತು ವೈರಸ್ ಅನುಕ್ರಮ ಪ್ರಯತ್ನಗಳನ್ನು ಹೆಚ್ಚಿಸಲು WHO ಶುಕ್ರವಾರ ವಿಶ್ವದ ದೇಶಗಳಿಗೆ ಕರೆ ನೀಡಿದೆ. ದಕ್ಷಿಣ ಆಫ್ರಿಕಾದ ಹೊರತಾಗಿ, ಇಸ್ರೇಲ್‌ನಲ್ಲಿ, ಬೋಟ್ಸ್ವಾನ, ಬೆಲ್ಜಿಯಂ ಮತ್ತು ಹಾಂಗ್ ಕಾಂಗ್‌ನಲ್ಲಿಯೂ ಈ ರೂಪಾಂತರ ಪತ್ತೆಯಾಗಿದೆ.

ವಿಶ್ವ ಆರೋಗ್ಯ ಸಂಸ್ಥೆ ಹೊಸ ರೂಪಾಂತರವನ್ನು ವರ್ಗೀಕರಿಸಿದ ಒಂದು ದಿನದ ನಂತರ, ಪ್ರಧಾನ ಮಂತ್ರಿ ನರೇಂದ್ರ ಮೋದಿ ಶನಿವಾರ ಉನ್ನತ ಮಟ್ಟದ ಅಧಿಕಾರಿಗಳೊಂದಿಗೆ ಶನಿವಾರ ಸಭೆ ನಡೆಸಿದ್ದಾರೆ. ಸಬೆಯಲ್ಲಿ ಅವರು ದೇಶದಲ್ಲಿ ಕೋವಿಡ್‌ ಪರಿಸ್ಥಿತಿ ಹಾಗೂ ರಾಷ್ಟ್ರವ್ಯಾಪಿ ವ್ಯಾಕ್ಸಿನೇಷನ್ ಡ್ರೈವ್ ಕುರಿತು ಚರ್ಚಿಸಿದ್ದಾರೆ.

ದಕ್ಷಿಣ ಆಫ್ರಿಕಾದಲ್ಲಿ ವೈರಸ್ ಪತ್ತೆಯಾಗಿರುವುದು ಘೋಷಣೆಯಾಗುತ್ತಿದ್ದಂತೆ ಭಾರತ ಸೇರಿದಂತೆ ಹಲವಾರು ದೇಶಗಳು ಆಫ್ರಿಕಾದ ಪ್ರಯಾಣದ ಮೇಲೆ ನಿರ್ಬಂಧಗಳನ್ನು ವಿಧಿಸುವ ಹಂತಕ್ಕೆ ತಲುಪಿದೆ. ದಕ್ಷಿಣ ಆಫ್ರಿಕಾದಿಂದ ಮುಂಬೈಗೆ ಪ್ರಯಾಣಿಸುವ ಎಲ್ಲರೂ ಆಗಮಿಸಿದ ನಂತರ ಕಡ್ಡಾಯವಾಗಿ ಕ್ವಾರಂಟೈನ್‌ಗೆ ಒಳಗಾಗಬೇಕಾಗುತ್ತದೆ ಎಂದು ನಗರದ ಮೇಯರ್ ಕಿಶೋರಿ ಪೆಡ್ನೇಕರ್ ಶನಿವಾರ ಘೋಷಿಸಿದ್ದಾರೆ.

ಇದನ್ನೂ ಓದಿ: ಅಮೆರಿಕ, ಯೂರೋಪ್ ದೇಶಗಳಲ್ಲಿ ಕೊರೊನಾ ನಾಲ್ಕನೇ ಅಲೆ; ಭಾರತ ಎಚ್ಚೆತ್ತುಕೊಳ್ಳುವ ಸಮಯ ಬಂದಿದೆಯೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....

ಬಿಹಾರ: ಸರ್ಕಾರಿ ಶಾಲಾ ಶಿಕ್ಷಕರಿಗೆ ಬೀದಿ ನಾಯಿಗಳನ್ನು ಎಣಿಸುವ ಹೆಚ್ಚುವರಿ ಕರ್ತವ್ಯ ವಹಿಸಿದ ಪುರಸಭೆ  

ಪಾಟ್ನಾ: ಸುಪ್ರೀಂ ಕೋರ್ಟ್ ಬೀದಿ ನಾಯಿಗಳ ವಿಚಾರದಲ್ಲಿ ಮಹತ್ವದ ಆದೇಶ ನೀಡಿದೆ. ಸಾರ್ವಜನಿಕ ರಸ್ತೆಗಳು, ಬೀದಿಗಳು ಬೀದಿನಾಯಿ ಮುಕ್ತವಾಗಿರಬೇಕು ಎಂದು ಹೇಳಿದೆ. ಆದರೆ ಈ ಆದೇಶ ಸರ್ಕಾರಿ ಶಾಲಾ ಶಿಕ್ಷಕರ ಪಾಲಿಗೆ ದೊಡ್ಡ...

ಮಮತಾ ಬ್ಯಾನರ್ಜಿಯ ರಾಜಕೀಯ ಸಲಹಾ ಸಂಸ್ಥೆ ಐ-ಪ್ಯಾಕ್, ಅದರ ಮುಖ್ಯಸ್ಥ ಪ್ರತೀಕ್ ಜೈನ್ ಮನೆ ಮೇಲೆ ಇಡಿ ದಾಳಿ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ...