Homeಕರೋನಾ ತಲ್ಲಣವಿಶ್ವದೆಲ್ಲೆಡೆ ಕೊರೊನಾ ಹೊಸ ರೂಪಾಂತರ ‘ಓಮಿಕ್ರಾನ್’ ಆತಂಕ: ತಜ್ಞರು ಹೇಳುವುದೇನು?

ವಿಶ್ವದೆಲ್ಲೆಡೆ ಕೊರೊನಾ ಹೊಸ ರೂಪಾಂತರ ‘ಓಮಿಕ್ರಾನ್’ ಆತಂಕ: ತಜ್ಞರು ಹೇಳುವುದೇನು?

- Advertisement -
- Advertisement -

ಈ ವಾರ ದಕ್ಷಿಣ ಆಫ್ರಿಕಾದಲ್ಲಿ ಮೊದಲ ಬಾರಿಗೆ ಕಂಡುಬಂದ ಕೊರೊನಾದ ಹೊಸ ರೂಪಾಂತರಕ್ಕೆ ‘ಓಮಿಕ್ರಾನ್’ ಎಂದು ಮರುನಾಮಕರಣ ಮಾಡಲಾಗಿದ್ದು, ವಿಶ್ವ ಆರೋಗ್ಯ ಸಂಸ್ಥೆ(WHO)ಯು ಈ ರೂಪಾಂತರವನ್ನು ‘ಕಳವಳಕಾರಿ ರೂಪಾಂತರ’ ಎಂದು ಕರೆದಿದೆ. ಓಮಿಕ್ರಾನ್‌ ಇತರ ರೂಪಗಳಿಗಿಂತ ಹೆಚ್ಚು ವೇಗವಾಗಿ ಹರಡಬಹುದು ಎಂದು WHO ಹೇಳಿದೆ.

“ಕೊರೊನಾ ಸಾಂಕ್ರಾಮಿಕ ರೋಗಶಾಸ್ತ್ರದಲ್ಲಿ ಹಾನಿಕಾರಕ ಬದಲಾವಣೆಯನ್ನು ಸೂಚಿಸುವ ಪುರಾವೆಗಳ ಆಧಾರದ ಮೇಲೆ… ವಿಶ್ವ ಆರೋಗ್ಯ ಸಂಸ್ಥೆಯು B.1.1.529 ಅನ್ನು ಕಳವಳಕಾರಿ ರೂಪಾಂತರ (VOC) ಎಂದು ಗೊತ್ತುಪಡಿಸಿ, ಇದನ್ನು ‘ಓಮಿಕ್ರಾನ್‌’ ಎಂದು ಹೆಸರಿಸಿದೆ” ಎಂದು ಆರೋಗ್ಯ ಸಂಸ್ಥೆ ತನ್ನ ಹೇಳಿಕೆಯಲ್ಲಿ ತಿಳಿಸಿದೆ.

ಇದನ್ನೂ ಓದಿ: ಕೊರೊನಾ ಮಾತ್ರೆಗಳು: ಉಪಯುಕ್ತವೇ..? ವೈದ್ಯರು ಹೇಳುವುದೇನು…?

ಈ ರೂಪಾಂತರವನ್ನು ಮೊದಲ ಬಾರಿಗೆ ಬುಧವಾರ ದಕ್ಷಿಣ ಆಫ್ರಿಕಾದಿಂದ ವಿಶ್ವ ಆರೋಗ್ಯ ಸಂಸ್ಥೆಗೆ ವರದಿ ಮಾಡಲಾಗಿದೆ. ಓಮಿಕ್ರಾನ್ ಸೋಂಕು ನವೆಂಬರ್ 9 ರಂದು ಸಂಗ್ರಹಿಸಲಾದ ಮಾದರಿಯಿಂದ ಮೊದಲ ಬಾರಿಗೆ ದೃಢೀಕರಿಸಲ್ಪಟ್ಟಿತು. ಇತ್ತೀಚಿನ ವಾರಗಳಲ್ಲಿ, ದಕ್ಷಿಣ ಆಫ್ರಿಕಾದಲ್ಲಿ ಸೋಂಕುಗಳು ತೀವ್ರವಾಗಿ ಹೆಚ್ಚಿದ್ದು, ಇದು ಇದೇ ಸೋಂಕಿನ ಪರಿಣಾಮವಾಗಿದೆ ಎಂದು ವರದಿಯಾಗಿದೆ. ದಕ್ಷಿಣ ಆಫ್ರಿಕಾದ ಬಹುತೇಕ ಎಲ್ಲಾ ಪ್ರಾಂತ್ಯಗಳಲ್ಲಿ ಓಮಿಕ್ರಾನ್ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದೆ ಎಂದು ಅದು ಹೇಳಿದೆ.

ಹೊಸ ರೂಪಾಂತರ ಓಮಿಕ್ರಾನ್ ಬಗ್ಗೆ ನಾನುಗೌರಿ.ಕಾಂ ಜೊತೆ ಮಾತನಾಡಿದ ಜಾಗತಿಕ ಆರೋಗ್ಯ ಮತ್ತು ಸಾಂಕ್ರಾಮಿಕ ಪಿಡುಗುಗಳ ಸಂಶೋಧಕರಾಗಿರುವ ಡಾ. ಹಿಮಾಂಶು ಅವರು, “ಪ್ರಸ್ತುತ ಕಂಡುಬಂದಿರುವ ಓಮಿಕ್ರಾನ್ ರೂಪಾಂತರ ಇದುವರೆಗೂ ಬಂದಿರುವ ಎಲ್ಲಾ ರೂಪಾಂತರಗಳಿಗಿಂತ ತುಂಬಾ ವೇಗವಾಗಿ ಹರಡುತ್ತದೆ. ಯಾವ ಮಟ್ಟದಲ್ಲಿ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ ಎಂಬುವುದು ಇನ್ನಷ್ಟೇ ತಿಳಿದು ಬರಬೇಕಿದೆ. ಮುಖ್ಯವಾದ ವಿಷಯವೇನೆಂದರೆ ಲಸಿಕೆ ಪಡೆದುಕೊಂಡವರಿಗೂ ಈ ರೂಪಾಂತರ ಸೋಂಕು ಹರಡಿದೆ ಎಂಬುವುದಾಗಿದೆ. ಆದರೆ ಅವರಲ್ಲಿ ಯಾವ ಮಟ್ಟಿಗೆ ಪರಿಣಾಮ ಬೀರುತ್ತದೆ ಎಂಬುವುದು ಇನ್ನೂ ತಿಳಿದು ಬಂದಿಲ್ಲ” ಎಂದು ಹೇಳಿದ್ದಾರೆ.

“ಇದುವರೆಗೂ ಡೆಲ್ಟಾ ಪ್ಲಸ್‌ ರೂಪಾಂತರದಿಂದ ಭಾರತದಲ್ಲಿ ಮೂರನೇ ಅಲೆ ಬರುತ್ತದೆ ಎಂದು ಹೇಳಲಾಗುತ್ತಿತ್ತು. ಆದರೆ ಇದೀಗ ಓಮಿಕ್ರಾನ್‌ ರೂಪಾಂತರದಿಂದಲೇ ಬಹುಷಃ ಬರಬಹುದು. ಇದು ಬಂದರೆ ಭಾರೀ ವೇಗದಲ್ಲಿ ಹರಡುತ್ತದೆ. ಕಳೆದ ಎರಡು ಅಲೆಗಳಲ್ಲಿ ನಮಗೆ ಹೆಚ್ಚಿನ ಮಾಹಿತಿಗಳು ಇರಲಿಲ್ಲ. ಆದರೆ ಈಗ ಮುಂದೆ ಏನಾಗಬಹುದು ಎಂಬ ಖಚಿತವಾದ ಮಾಹಿತಿ ದೊರೆಯುವಷ್ಟು ಈ ವೈರಸ್‌ ಬಗ್ಗೆ ಅಧ್ಯಯನ ನಡೆದಿದೆ. ಸಧ್ಯಕ್ಕೆ ಬೆಂಗಳೂರಿನಲ್ಲಿ ಲಕ್ಷದಲ್ಲಿ 20 ಜನರಿಗೆ ಐಸಿಯು ಬೇಕಾದರೂ ನಮ್ಮಲ್ಲಿ ಮೂಲಭೂತ ಸೌಕರ್ಯಗಳು ಸಾಲುವುದಿಲ್ಲ. ಆದ್ದರಿಂದ ಸರ್ಕಾರಗಳು ಆದಷ್ಟು ಬೇಗ ಎಚ್ಚೆತ್ತುಕೊಳ್ಳಬೇಕು” ಎಂದು ಡಾ. ಹಿಮಾಂಶು ಹೇಳಿದ್ದಾರೆ.

ಇದನ್ನೂ ಓದಿ: ಜಗತ್ತಿನ ಹಲವೆಡೆ ಹೆಚ್ಚಿದ ಕೊರೊನಾ ಪ್ರಕರಣಗಳು: ಲಾಕ್‌ಡೌನ್‌ ಘೋಷಿಸಿದ ದೇಶಗಳಿವು

ರೂಪಾಂತರಗಳನ್ನು ಚೆನ್ನಾಗಿ ಅರ್ಥಮಾಡಿಕೊಳ್ಳಲು ತಮ್ಮ ಕಣ್ಗಾವಲು ಮತ್ತು ವೈರಸ್ ಅನುಕ್ರಮ ಪ್ರಯತ್ನಗಳನ್ನು ಹೆಚ್ಚಿಸಲು WHO ಶುಕ್ರವಾರ ವಿಶ್ವದ ದೇಶಗಳಿಗೆ ಕರೆ ನೀಡಿದೆ. ದಕ್ಷಿಣ ಆಫ್ರಿಕಾದ ಹೊರತಾಗಿ, ಇಸ್ರೇಲ್‌ನಲ್ಲಿ, ಬೋಟ್ಸ್ವಾನ, ಬೆಲ್ಜಿಯಂ ಮತ್ತು ಹಾಂಗ್ ಕಾಂಗ್‌ನಲ್ಲಿಯೂ ಈ ರೂಪಾಂತರ ಪತ್ತೆಯಾಗಿದೆ.

ವಿಶ್ವ ಆರೋಗ್ಯ ಸಂಸ್ಥೆ ಹೊಸ ರೂಪಾಂತರವನ್ನು ವರ್ಗೀಕರಿಸಿದ ಒಂದು ದಿನದ ನಂತರ, ಪ್ರಧಾನ ಮಂತ್ರಿ ನರೇಂದ್ರ ಮೋದಿ ಶನಿವಾರ ಉನ್ನತ ಮಟ್ಟದ ಅಧಿಕಾರಿಗಳೊಂದಿಗೆ ಶನಿವಾರ ಸಭೆ ನಡೆಸಿದ್ದಾರೆ. ಸಬೆಯಲ್ಲಿ ಅವರು ದೇಶದಲ್ಲಿ ಕೋವಿಡ್‌ ಪರಿಸ್ಥಿತಿ ಹಾಗೂ ರಾಷ್ಟ್ರವ್ಯಾಪಿ ವ್ಯಾಕ್ಸಿನೇಷನ್ ಡ್ರೈವ್ ಕುರಿತು ಚರ್ಚಿಸಿದ್ದಾರೆ.

ದಕ್ಷಿಣ ಆಫ್ರಿಕಾದಲ್ಲಿ ವೈರಸ್ ಪತ್ತೆಯಾಗಿರುವುದು ಘೋಷಣೆಯಾಗುತ್ತಿದ್ದಂತೆ ಭಾರತ ಸೇರಿದಂತೆ ಹಲವಾರು ದೇಶಗಳು ಆಫ್ರಿಕಾದ ಪ್ರಯಾಣದ ಮೇಲೆ ನಿರ್ಬಂಧಗಳನ್ನು ವಿಧಿಸುವ ಹಂತಕ್ಕೆ ತಲುಪಿದೆ. ದಕ್ಷಿಣ ಆಫ್ರಿಕಾದಿಂದ ಮುಂಬೈಗೆ ಪ್ರಯಾಣಿಸುವ ಎಲ್ಲರೂ ಆಗಮಿಸಿದ ನಂತರ ಕಡ್ಡಾಯವಾಗಿ ಕ್ವಾರಂಟೈನ್‌ಗೆ ಒಳಗಾಗಬೇಕಾಗುತ್ತದೆ ಎಂದು ನಗರದ ಮೇಯರ್ ಕಿಶೋರಿ ಪೆಡ್ನೇಕರ್ ಶನಿವಾರ ಘೋಷಿಸಿದ್ದಾರೆ.

ಇದನ್ನೂ ಓದಿ: ಅಮೆರಿಕ, ಯೂರೋಪ್ ದೇಶಗಳಲ್ಲಿ ಕೊರೊನಾ ನಾಲ್ಕನೇ ಅಲೆ; ಭಾರತ ಎಚ್ಚೆತ್ತುಕೊಳ್ಳುವ ಸಮಯ ಬಂದಿದೆಯೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...