Homeಕರೋನಾ ತಲ್ಲಣವಿಶ್ವದೆಲ್ಲೆಡೆ ಕೊರೊನಾ ಹೊಸ ರೂಪಾಂತರ ‘ಓಮಿಕ್ರಾನ್’ ಆತಂಕ: ತಜ್ಞರು ಹೇಳುವುದೇನು?

ವಿಶ್ವದೆಲ್ಲೆಡೆ ಕೊರೊನಾ ಹೊಸ ರೂಪಾಂತರ ‘ಓಮಿಕ್ರಾನ್’ ಆತಂಕ: ತಜ್ಞರು ಹೇಳುವುದೇನು?

- Advertisement -
- Advertisement -

ಈ ವಾರ ದಕ್ಷಿಣ ಆಫ್ರಿಕಾದಲ್ಲಿ ಮೊದಲ ಬಾರಿಗೆ ಕಂಡುಬಂದ ಕೊರೊನಾದ ಹೊಸ ರೂಪಾಂತರಕ್ಕೆ ‘ಓಮಿಕ್ರಾನ್’ ಎಂದು ಮರುನಾಮಕರಣ ಮಾಡಲಾಗಿದ್ದು, ವಿಶ್ವ ಆರೋಗ್ಯ ಸಂಸ್ಥೆ(WHO)ಯು ಈ ರೂಪಾಂತರವನ್ನು ‘ಕಳವಳಕಾರಿ ರೂಪಾಂತರ’ ಎಂದು ಕರೆದಿದೆ. ಓಮಿಕ್ರಾನ್‌ ಇತರ ರೂಪಗಳಿಗಿಂತ ಹೆಚ್ಚು ವೇಗವಾಗಿ ಹರಡಬಹುದು ಎಂದು WHO ಹೇಳಿದೆ.

“ಕೊರೊನಾ ಸಾಂಕ್ರಾಮಿಕ ರೋಗಶಾಸ್ತ್ರದಲ್ಲಿ ಹಾನಿಕಾರಕ ಬದಲಾವಣೆಯನ್ನು ಸೂಚಿಸುವ ಪುರಾವೆಗಳ ಆಧಾರದ ಮೇಲೆ… ವಿಶ್ವ ಆರೋಗ್ಯ ಸಂಸ್ಥೆಯು B.1.1.529 ಅನ್ನು ಕಳವಳಕಾರಿ ರೂಪಾಂತರ (VOC) ಎಂದು ಗೊತ್ತುಪಡಿಸಿ, ಇದನ್ನು ‘ಓಮಿಕ್ರಾನ್‌’ ಎಂದು ಹೆಸರಿಸಿದೆ” ಎಂದು ಆರೋಗ್ಯ ಸಂಸ್ಥೆ ತನ್ನ ಹೇಳಿಕೆಯಲ್ಲಿ ತಿಳಿಸಿದೆ.

ಇದನ್ನೂ ಓದಿ: ಕೊರೊನಾ ಮಾತ್ರೆಗಳು: ಉಪಯುಕ್ತವೇ..? ವೈದ್ಯರು ಹೇಳುವುದೇನು…?

ಈ ರೂಪಾಂತರವನ್ನು ಮೊದಲ ಬಾರಿಗೆ ಬುಧವಾರ ದಕ್ಷಿಣ ಆಫ್ರಿಕಾದಿಂದ ವಿಶ್ವ ಆರೋಗ್ಯ ಸಂಸ್ಥೆಗೆ ವರದಿ ಮಾಡಲಾಗಿದೆ. ಓಮಿಕ್ರಾನ್ ಸೋಂಕು ನವೆಂಬರ್ 9 ರಂದು ಸಂಗ್ರಹಿಸಲಾದ ಮಾದರಿಯಿಂದ ಮೊದಲ ಬಾರಿಗೆ ದೃಢೀಕರಿಸಲ್ಪಟ್ಟಿತು. ಇತ್ತೀಚಿನ ವಾರಗಳಲ್ಲಿ, ದಕ್ಷಿಣ ಆಫ್ರಿಕಾದಲ್ಲಿ ಸೋಂಕುಗಳು ತೀವ್ರವಾಗಿ ಹೆಚ್ಚಿದ್ದು, ಇದು ಇದೇ ಸೋಂಕಿನ ಪರಿಣಾಮವಾಗಿದೆ ಎಂದು ವರದಿಯಾಗಿದೆ. ದಕ್ಷಿಣ ಆಫ್ರಿಕಾದ ಬಹುತೇಕ ಎಲ್ಲಾ ಪ್ರಾಂತ್ಯಗಳಲ್ಲಿ ಓಮಿಕ್ರಾನ್ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದೆ ಎಂದು ಅದು ಹೇಳಿದೆ.

ಹೊಸ ರೂಪಾಂತರ ಓಮಿಕ್ರಾನ್ ಬಗ್ಗೆ ನಾನುಗೌರಿ.ಕಾಂ ಜೊತೆ ಮಾತನಾಡಿದ ಜಾಗತಿಕ ಆರೋಗ್ಯ ಮತ್ತು ಸಾಂಕ್ರಾಮಿಕ ಪಿಡುಗುಗಳ ಸಂಶೋಧಕರಾಗಿರುವ ಡಾ. ಹಿಮಾಂಶು ಅವರು, “ಪ್ರಸ್ತುತ ಕಂಡುಬಂದಿರುವ ಓಮಿಕ್ರಾನ್ ರೂಪಾಂತರ ಇದುವರೆಗೂ ಬಂದಿರುವ ಎಲ್ಲಾ ರೂಪಾಂತರಗಳಿಗಿಂತ ತುಂಬಾ ವೇಗವಾಗಿ ಹರಡುತ್ತದೆ. ಯಾವ ಮಟ್ಟದಲ್ಲಿ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ ಎಂಬುವುದು ಇನ್ನಷ್ಟೇ ತಿಳಿದು ಬರಬೇಕಿದೆ. ಮುಖ್ಯವಾದ ವಿಷಯವೇನೆಂದರೆ ಲಸಿಕೆ ಪಡೆದುಕೊಂಡವರಿಗೂ ಈ ರೂಪಾಂತರ ಸೋಂಕು ಹರಡಿದೆ ಎಂಬುವುದಾಗಿದೆ. ಆದರೆ ಅವರಲ್ಲಿ ಯಾವ ಮಟ್ಟಿಗೆ ಪರಿಣಾಮ ಬೀರುತ್ತದೆ ಎಂಬುವುದು ಇನ್ನೂ ತಿಳಿದು ಬಂದಿಲ್ಲ” ಎಂದು ಹೇಳಿದ್ದಾರೆ.

“ಇದುವರೆಗೂ ಡೆಲ್ಟಾ ಪ್ಲಸ್‌ ರೂಪಾಂತರದಿಂದ ಭಾರತದಲ್ಲಿ ಮೂರನೇ ಅಲೆ ಬರುತ್ತದೆ ಎಂದು ಹೇಳಲಾಗುತ್ತಿತ್ತು. ಆದರೆ ಇದೀಗ ಓಮಿಕ್ರಾನ್‌ ರೂಪಾಂತರದಿಂದಲೇ ಬಹುಷಃ ಬರಬಹುದು. ಇದು ಬಂದರೆ ಭಾರೀ ವೇಗದಲ್ಲಿ ಹರಡುತ್ತದೆ. ಕಳೆದ ಎರಡು ಅಲೆಗಳಲ್ಲಿ ನಮಗೆ ಹೆಚ್ಚಿನ ಮಾಹಿತಿಗಳು ಇರಲಿಲ್ಲ. ಆದರೆ ಈಗ ಮುಂದೆ ಏನಾಗಬಹುದು ಎಂಬ ಖಚಿತವಾದ ಮಾಹಿತಿ ದೊರೆಯುವಷ್ಟು ಈ ವೈರಸ್‌ ಬಗ್ಗೆ ಅಧ್ಯಯನ ನಡೆದಿದೆ. ಸಧ್ಯಕ್ಕೆ ಬೆಂಗಳೂರಿನಲ್ಲಿ ಲಕ್ಷದಲ್ಲಿ 20 ಜನರಿಗೆ ಐಸಿಯು ಬೇಕಾದರೂ ನಮ್ಮಲ್ಲಿ ಮೂಲಭೂತ ಸೌಕರ್ಯಗಳು ಸಾಲುವುದಿಲ್ಲ. ಆದ್ದರಿಂದ ಸರ್ಕಾರಗಳು ಆದಷ್ಟು ಬೇಗ ಎಚ್ಚೆತ್ತುಕೊಳ್ಳಬೇಕು” ಎಂದು ಡಾ. ಹಿಮಾಂಶು ಹೇಳಿದ್ದಾರೆ.

ಇದನ್ನೂ ಓದಿ: ಜಗತ್ತಿನ ಹಲವೆಡೆ ಹೆಚ್ಚಿದ ಕೊರೊನಾ ಪ್ರಕರಣಗಳು: ಲಾಕ್‌ಡೌನ್‌ ಘೋಷಿಸಿದ ದೇಶಗಳಿವು

ರೂಪಾಂತರಗಳನ್ನು ಚೆನ್ನಾಗಿ ಅರ್ಥಮಾಡಿಕೊಳ್ಳಲು ತಮ್ಮ ಕಣ್ಗಾವಲು ಮತ್ತು ವೈರಸ್ ಅನುಕ್ರಮ ಪ್ರಯತ್ನಗಳನ್ನು ಹೆಚ್ಚಿಸಲು WHO ಶುಕ್ರವಾರ ವಿಶ್ವದ ದೇಶಗಳಿಗೆ ಕರೆ ನೀಡಿದೆ. ದಕ್ಷಿಣ ಆಫ್ರಿಕಾದ ಹೊರತಾಗಿ, ಇಸ್ರೇಲ್‌ನಲ್ಲಿ, ಬೋಟ್ಸ್ವಾನ, ಬೆಲ್ಜಿಯಂ ಮತ್ತು ಹಾಂಗ್ ಕಾಂಗ್‌ನಲ್ಲಿಯೂ ಈ ರೂಪಾಂತರ ಪತ್ತೆಯಾಗಿದೆ.

ವಿಶ್ವ ಆರೋಗ್ಯ ಸಂಸ್ಥೆ ಹೊಸ ರೂಪಾಂತರವನ್ನು ವರ್ಗೀಕರಿಸಿದ ಒಂದು ದಿನದ ನಂತರ, ಪ್ರಧಾನ ಮಂತ್ರಿ ನರೇಂದ್ರ ಮೋದಿ ಶನಿವಾರ ಉನ್ನತ ಮಟ್ಟದ ಅಧಿಕಾರಿಗಳೊಂದಿಗೆ ಶನಿವಾರ ಸಭೆ ನಡೆಸಿದ್ದಾರೆ. ಸಬೆಯಲ್ಲಿ ಅವರು ದೇಶದಲ್ಲಿ ಕೋವಿಡ್‌ ಪರಿಸ್ಥಿತಿ ಹಾಗೂ ರಾಷ್ಟ್ರವ್ಯಾಪಿ ವ್ಯಾಕ್ಸಿನೇಷನ್ ಡ್ರೈವ್ ಕುರಿತು ಚರ್ಚಿಸಿದ್ದಾರೆ.

ದಕ್ಷಿಣ ಆಫ್ರಿಕಾದಲ್ಲಿ ವೈರಸ್ ಪತ್ತೆಯಾಗಿರುವುದು ಘೋಷಣೆಯಾಗುತ್ತಿದ್ದಂತೆ ಭಾರತ ಸೇರಿದಂತೆ ಹಲವಾರು ದೇಶಗಳು ಆಫ್ರಿಕಾದ ಪ್ರಯಾಣದ ಮೇಲೆ ನಿರ್ಬಂಧಗಳನ್ನು ವಿಧಿಸುವ ಹಂತಕ್ಕೆ ತಲುಪಿದೆ. ದಕ್ಷಿಣ ಆಫ್ರಿಕಾದಿಂದ ಮುಂಬೈಗೆ ಪ್ರಯಾಣಿಸುವ ಎಲ್ಲರೂ ಆಗಮಿಸಿದ ನಂತರ ಕಡ್ಡಾಯವಾಗಿ ಕ್ವಾರಂಟೈನ್‌ಗೆ ಒಳಗಾಗಬೇಕಾಗುತ್ತದೆ ಎಂದು ನಗರದ ಮೇಯರ್ ಕಿಶೋರಿ ಪೆಡ್ನೇಕರ್ ಶನಿವಾರ ಘೋಷಿಸಿದ್ದಾರೆ.

ಇದನ್ನೂ ಓದಿ: ಅಮೆರಿಕ, ಯೂರೋಪ್ ದೇಶಗಳಲ್ಲಿ ಕೊರೊನಾ ನಾಲ್ಕನೇ ಅಲೆ; ಭಾರತ ಎಚ್ಚೆತ್ತುಕೊಳ್ಳುವ ಸಮಯ ಬಂದಿದೆಯೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...