Homeಕರೋನಾ ತಲ್ಲಣವಿಶ್ವದೆಲ್ಲೆಡೆ ಕೊರೊನಾ ಹೊಸ ರೂಪಾಂತರ ‘ಓಮಿಕ್ರಾನ್’ ಆತಂಕ: ತಜ್ಞರು ಹೇಳುವುದೇನು?

ವಿಶ್ವದೆಲ್ಲೆಡೆ ಕೊರೊನಾ ಹೊಸ ರೂಪಾಂತರ ‘ಓಮಿಕ್ರಾನ್’ ಆತಂಕ: ತಜ್ಞರು ಹೇಳುವುದೇನು?

- Advertisement -
- Advertisement -

ಈ ವಾರ ದಕ್ಷಿಣ ಆಫ್ರಿಕಾದಲ್ಲಿ ಮೊದಲ ಬಾರಿಗೆ ಕಂಡುಬಂದ ಕೊರೊನಾದ ಹೊಸ ರೂಪಾಂತರಕ್ಕೆ ‘ಓಮಿಕ್ರಾನ್’ ಎಂದು ಮರುನಾಮಕರಣ ಮಾಡಲಾಗಿದ್ದು, ವಿಶ್ವ ಆರೋಗ್ಯ ಸಂಸ್ಥೆ(WHO)ಯು ಈ ರೂಪಾಂತರವನ್ನು ‘ಕಳವಳಕಾರಿ ರೂಪಾಂತರ’ ಎಂದು ಕರೆದಿದೆ. ಓಮಿಕ್ರಾನ್‌ ಇತರ ರೂಪಗಳಿಗಿಂತ ಹೆಚ್ಚು ವೇಗವಾಗಿ ಹರಡಬಹುದು ಎಂದು WHO ಹೇಳಿದೆ.

“ಕೊರೊನಾ ಸಾಂಕ್ರಾಮಿಕ ರೋಗಶಾಸ್ತ್ರದಲ್ಲಿ ಹಾನಿಕಾರಕ ಬದಲಾವಣೆಯನ್ನು ಸೂಚಿಸುವ ಪುರಾವೆಗಳ ಆಧಾರದ ಮೇಲೆ… ವಿಶ್ವ ಆರೋಗ್ಯ ಸಂಸ್ಥೆಯು B.1.1.529 ಅನ್ನು ಕಳವಳಕಾರಿ ರೂಪಾಂತರ (VOC) ಎಂದು ಗೊತ್ತುಪಡಿಸಿ, ಇದನ್ನು ‘ಓಮಿಕ್ರಾನ್‌’ ಎಂದು ಹೆಸರಿಸಿದೆ” ಎಂದು ಆರೋಗ್ಯ ಸಂಸ್ಥೆ ತನ್ನ ಹೇಳಿಕೆಯಲ್ಲಿ ತಿಳಿಸಿದೆ.

ಇದನ್ನೂ ಓದಿ: ಕೊರೊನಾ ಮಾತ್ರೆಗಳು: ಉಪಯುಕ್ತವೇ..? ವೈದ್ಯರು ಹೇಳುವುದೇನು…?

ಈ ರೂಪಾಂತರವನ್ನು ಮೊದಲ ಬಾರಿಗೆ ಬುಧವಾರ ದಕ್ಷಿಣ ಆಫ್ರಿಕಾದಿಂದ ವಿಶ್ವ ಆರೋಗ್ಯ ಸಂಸ್ಥೆಗೆ ವರದಿ ಮಾಡಲಾಗಿದೆ. ಓಮಿಕ್ರಾನ್ ಸೋಂಕು ನವೆಂಬರ್ 9 ರಂದು ಸಂಗ್ರಹಿಸಲಾದ ಮಾದರಿಯಿಂದ ಮೊದಲ ಬಾರಿಗೆ ದೃಢೀಕರಿಸಲ್ಪಟ್ಟಿತು. ಇತ್ತೀಚಿನ ವಾರಗಳಲ್ಲಿ, ದಕ್ಷಿಣ ಆಫ್ರಿಕಾದಲ್ಲಿ ಸೋಂಕುಗಳು ತೀವ್ರವಾಗಿ ಹೆಚ್ಚಿದ್ದು, ಇದು ಇದೇ ಸೋಂಕಿನ ಪರಿಣಾಮವಾಗಿದೆ ಎಂದು ವರದಿಯಾಗಿದೆ. ದಕ್ಷಿಣ ಆಫ್ರಿಕಾದ ಬಹುತೇಕ ಎಲ್ಲಾ ಪ್ರಾಂತ್ಯಗಳಲ್ಲಿ ಓಮಿಕ್ರಾನ್ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದೆ ಎಂದು ಅದು ಹೇಳಿದೆ.

ಹೊಸ ರೂಪಾಂತರ ಓಮಿಕ್ರಾನ್ ಬಗ್ಗೆ ನಾನುಗೌರಿ.ಕಾಂ ಜೊತೆ ಮಾತನಾಡಿದ ಜಾಗತಿಕ ಆರೋಗ್ಯ ಮತ್ತು ಸಾಂಕ್ರಾಮಿಕ ಪಿಡುಗುಗಳ ಸಂಶೋಧಕರಾಗಿರುವ ಡಾ. ಹಿಮಾಂಶು ಅವರು, “ಪ್ರಸ್ತುತ ಕಂಡುಬಂದಿರುವ ಓಮಿಕ್ರಾನ್ ರೂಪಾಂತರ ಇದುವರೆಗೂ ಬಂದಿರುವ ಎಲ್ಲಾ ರೂಪಾಂತರಗಳಿಗಿಂತ ತುಂಬಾ ವೇಗವಾಗಿ ಹರಡುತ್ತದೆ. ಯಾವ ಮಟ್ಟದಲ್ಲಿ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ ಎಂಬುವುದು ಇನ್ನಷ್ಟೇ ತಿಳಿದು ಬರಬೇಕಿದೆ. ಮುಖ್ಯವಾದ ವಿಷಯವೇನೆಂದರೆ ಲಸಿಕೆ ಪಡೆದುಕೊಂಡವರಿಗೂ ಈ ರೂಪಾಂತರ ಸೋಂಕು ಹರಡಿದೆ ಎಂಬುವುದಾಗಿದೆ. ಆದರೆ ಅವರಲ್ಲಿ ಯಾವ ಮಟ್ಟಿಗೆ ಪರಿಣಾಮ ಬೀರುತ್ತದೆ ಎಂಬುವುದು ಇನ್ನೂ ತಿಳಿದು ಬಂದಿಲ್ಲ” ಎಂದು ಹೇಳಿದ್ದಾರೆ.

“ಇದುವರೆಗೂ ಡೆಲ್ಟಾ ಪ್ಲಸ್‌ ರೂಪಾಂತರದಿಂದ ಭಾರತದಲ್ಲಿ ಮೂರನೇ ಅಲೆ ಬರುತ್ತದೆ ಎಂದು ಹೇಳಲಾಗುತ್ತಿತ್ತು. ಆದರೆ ಇದೀಗ ಓಮಿಕ್ರಾನ್‌ ರೂಪಾಂತರದಿಂದಲೇ ಬಹುಷಃ ಬರಬಹುದು. ಇದು ಬಂದರೆ ಭಾರೀ ವೇಗದಲ್ಲಿ ಹರಡುತ್ತದೆ. ಕಳೆದ ಎರಡು ಅಲೆಗಳಲ್ಲಿ ನಮಗೆ ಹೆಚ್ಚಿನ ಮಾಹಿತಿಗಳು ಇರಲಿಲ್ಲ. ಆದರೆ ಈಗ ಮುಂದೆ ಏನಾಗಬಹುದು ಎಂಬ ಖಚಿತವಾದ ಮಾಹಿತಿ ದೊರೆಯುವಷ್ಟು ಈ ವೈರಸ್‌ ಬಗ್ಗೆ ಅಧ್ಯಯನ ನಡೆದಿದೆ. ಸಧ್ಯಕ್ಕೆ ಬೆಂಗಳೂರಿನಲ್ಲಿ ಲಕ್ಷದಲ್ಲಿ 20 ಜನರಿಗೆ ಐಸಿಯು ಬೇಕಾದರೂ ನಮ್ಮಲ್ಲಿ ಮೂಲಭೂತ ಸೌಕರ್ಯಗಳು ಸಾಲುವುದಿಲ್ಲ. ಆದ್ದರಿಂದ ಸರ್ಕಾರಗಳು ಆದಷ್ಟು ಬೇಗ ಎಚ್ಚೆತ್ತುಕೊಳ್ಳಬೇಕು” ಎಂದು ಡಾ. ಹಿಮಾಂಶು ಹೇಳಿದ್ದಾರೆ.

ಇದನ್ನೂ ಓದಿ: ಜಗತ್ತಿನ ಹಲವೆಡೆ ಹೆಚ್ಚಿದ ಕೊರೊನಾ ಪ್ರಕರಣಗಳು: ಲಾಕ್‌ಡೌನ್‌ ಘೋಷಿಸಿದ ದೇಶಗಳಿವು

ರೂಪಾಂತರಗಳನ್ನು ಚೆನ್ನಾಗಿ ಅರ್ಥಮಾಡಿಕೊಳ್ಳಲು ತಮ್ಮ ಕಣ್ಗಾವಲು ಮತ್ತು ವೈರಸ್ ಅನುಕ್ರಮ ಪ್ರಯತ್ನಗಳನ್ನು ಹೆಚ್ಚಿಸಲು WHO ಶುಕ್ರವಾರ ವಿಶ್ವದ ದೇಶಗಳಿಗೆ ಕರೆ ನೀಡಿದೆ. ದಕ್ಷಿಣ ಆಫ್ರಿಕಾದ ಹೊರತಾಗಿ, ಇಸ್ರೇಲ್‌ನಲ್ಲಿ, ಬೋಟ್ಸ್ವಾನ, ಬೆಲ್ಜಿಯಂ ಮತ್ತು ಹಾಂಗ್ ಕಾಂಗ್‌ನಲ್ಲಿಯೂ ಈ ರೂಪಾಂತರ ಪತ್ತೆಯಾಗಿದೆ.

ವಿಶ್ವ ಆರೋಗ್ಯ ಸಂಸ್ಥೆ ಹೊಸ ರೂಪಾಂತರವನ್ನು ವರ್ಗೀಕರಿಸಿದ ಒಂದು ದಿನದ ನಂತರ, ಪ್ರಧಾನ ಮಂತ್ರಿ ನರೇಂದ್ರ ಮೋದಿ ಶನಿವಾರ ಉನ್ನತ ಮಟ್ಟದ ಅಧಿಕಾರಿಗಳೊಂದಿಗೆ ಶನಿವಾರ ಸಭೆ ನಡೆಸಿದ್ದಾರೆ. ಸಬೆಯಲ್ಲಿ ಅವರು ದೇಶದಲ್ಲಿ ಕೋವಿಡ್‌ ಪರಿಸ್ಥಿತಿ ಹಾಗೂ ರಾಷ್ಟ್ರವ್ಯಾಪಿ ವ್ಯಾಕ್ಸಿನೇಷನ್ ಡ್ರೈವ್ ಕುರಿತು ಚರ್ಚಿಸಿದ್ದಾರೆ.

ದಕ್ಷಿಣ ಆಫ್ರಿಕಾದಲ್ಲಿ ವೈರಸ್ ಪತ್ತೆಯಾಗಿರುವುದು ಘೋಷಣೆಯಾಗುತ್ತಿದ್ದಂತೆ ಭಾರತ ಸೇರಿದಂತೆ ಹಲವಾರು ದೇಶಗಳು ಆಫ್ರಿಕಾದ ಪ್ರಯಾಣದ ಮೇಲೆ ನಿರ್ಬಂಧಗಳನ್ನು ವಿಧಿಸುವ ಹಂತಕ್ಕೆ ತಲುಪಿದೆ. ದಕ್ಷಿಣ ಆಫ್ರಿಕಾದಿಂದ ಮುಂಬೈಗೆ ಪ್ರಯಾಣಿಸುವ ಎಲ್ಲರೂ ಆಗಮಿಸಿದ ನಂತರ ಕಡ್ಡಾಯವಾಗಿ ಕ್ವಾರಂಟೈನ್‌ಗೆ ಒಳಗಾಗಬೇಕಾಗುತ್ತದೆ ಎಂದು ನಗರದ ಮೇಯರ್ ಕಿಶೋರಿ ಪೆಡ್ನೇಕರ್ ಶನಿವಾರ ಘೋಷಿಸಿದ್ದಾರೆ.

ಇದನ್ನೂ ಓದಿ: ಅಮೆರಿಕ, ಯೂರೋಪ್ ದೇಶಗಳಲ್ಲಿ ಕೊರೊನಾ ನಾಲ್ಕನೇ ಅಲೆ; ಭಾರತ ಎಚ್ಚೆತ್ತುಕೊಳ್ಳುವ ಸಮಯ ಬಂದಿದೆಯೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...