Homeಕರೋನಾ ತಲ್ಲಣವಿಶ್ವದೆಲ್ಲೆಡೆ ಕೊರೊನಾ ಹೊಸ ರೂಪಾಂತರ ‘ಓಮಿಕ್ರಾನ್’ ಆತಂಕ: ತಜ್ಞರು ಹೇಳುವುದೇನು?

ವಿಶ್ವದೆಲ್ಲೆಡೆ ಕೊರೊನಾ ಹೊಸ ರೂಪಾಂತರ ‘ಓಮಿಕ್ರಾನ್’ ಆತಂಕ: ತಜ್ಞರು ಹೇಳುವುದೇನು?

- Advertisement -
- Advertisement -

ಈ ವಾರ ದಕ್ಷಿಣ ಆಫ್ರಿಕಾದಲ್ಲಿ ಮೊದಲ ಬಾರಿಗೆ ಕಂಡುಬಂದ ಕೊರೊನಾದ ಹೊಸ ರೂಪಾಂತರಕ್ಕೆ ‘ಓಮಿಕ್ರಾನ್’ ಎಂದು ಮರುನಾಮಕರಣ ಮಾಡಲಾಗಿದ್ದು, ವಿಶ್ವ ಆರೋಗ್ಯ ಸಂಸ್ಥೆ(WHO)ಯು ಈ ರೂಪಾಂತರವನ್ನು ‘ಕಳವಳಕಾರಿ ರೂಪಾಂತರ’ ಎಂದು ಕರೆದಿದೆ. ಓಮಿಕ್ರಾನ್‌ ಇತರ ರೂಪಗಳಿಗಿಂತ ಹೆಚ್ಚು ವೇಗವಾಗಿ ಹರಡಬಹುದು ಎಂದು WHO ಹೇಳಿದೆ.

“ಕೊರೊನಾ ಸಾಂಕ್ರಾಮಿಕ ರೋಗಶಾಸ್ತ್ರದಲ್ಲಿ ಹಾನಿಕಾರಕ ಬದಲಾವಣೆಯನ್ನು ಸೂಚಿಸುವ ಪುರಾವೆಗಳ ಆಧಾರದ ಮೇಲೆ… ವಿಶ್ವ ಆರೋಗ್ಯ ಸಂಸ್ಥೆಯು B.1.1.529 ಅನ್ನು ಕಳವಳಕಾರಿ ರೂಪಾಂತರ (VOC) ಎಂದು ಗೊತ್ತುಪಡಿಸಿ, ಇದನ್ನು ‘ಓಮಿಕ್ರಾನ್‌’ ಎಂದು ಹೆಸರಿಸಿದೆ” ಎಂದು ಆರೋಗ್ಯ ಸಂಸ್ಥೆ ತನ್ನ ಹೇಳಿಕೆಯಲ್ಲಿ ತಿಳಿಸಿದೆ.

ಇದನ್ನೂ ಓದಿ: ಕೊರೊನಾ ಮಾತ್ರೆಗಳು: ಉಪಯುಕ್ತವೇ..? ವೈದ್ಯರು ಹೇಳುವುದೇನು…?

ಈ ರೂಪಾಂತರವನ್ನು ಮೊದಲ ಬಾರಿಗೆ ಬುಧವಾರ ದಕ್ಷಿಣ ಆಫ್ರಿಕಾದಿಂದ ವಿಶ್ವ ಆರೋಗ್ಯ ಸಂಸ್ಥೆಗೆ ವರದಿ ಮಾಡಲಾಗಿದೆ. ಓಮಿಕ್ರಾನ್ ಸೋಂಕು ನವೆಂಬರ್ 9 ರಂದು ಸಂಗ್ರಹಿಸಲಾದ ಮಾದರಿಯಿಂದ ಮೊದಲ ಬಾರಿಗೆ ದೃಢೀಕರಿಸಲ್ಪಟ್ಟಿತು. ಇತ್ತೀಚಿನ ವಾರಗಳಲ್ಲಿ, ದಕ್ಷಿಣ ಆಫ್ರಿಕಾದಲ್ಲಿ ಸೋಂಕುಗಳು ತೀವ್ರವಾಗಿ ಹೆಚ್ಚಿದ್ದು, ಇದು ಇದೇ ಸೋಂಕಿನ ಪರಿಣಾಮವಾಗಿದೆ ಎಂದು ವರದಿಯಾಗಿದೆ. ದಕ್ಷಿಣ ಆಫ್ರಿಕಾದ ಬಹುತೇಕ ಎಲ್ಲಾ ಪ್ರಾಂತ್ಯಗಳಲ್ಲಿ ಓಮಿಕ್ರಾನ್ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದೆ ಎಂದು ಅದು ಹೇಳಿದೆ.

ಹೊಸ ರೂಪಾಂತರ ಓಮಿಕ್ರಾನ್ ಬಗ್ಗೆ ನಾನುಗೌರಿ.ಕಾಂ ಜೊತೆ ಮಾತನಾಡಿದ ಜಾಗತಿಕ ಆರೋಗ್ಯ ಮತ್ತು ಸಾಂಕ್ರಾಮಿಕ ಪಿಡುಗುಗಳ ಸಂಶೋಧಕರಾಗಿರುವ ಡಾ. ಹಿಮಾಂಶು ಅವರು, “ಪ್ರಸ್ತುತ ಕಂಡುಬಂದಿರುವ ಓಮಿಕ್ರಾನ್ ರೂಪಾಂತರ ಇದುವರೆಗೂ ಬಂದಿರುವ ಎಲ್ಲಾ ರೂಪಾಂತರಗಳಿಗಿಂತ ತುಂಬಾ ವೇಗವಾಗಿ ಹರಡುತ್ತದೆ. ಯಾವ ಮಟ್ಟದಲ್ಲಿ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ ಎಂಬುವುದು ಇನ್ನಷ್ಟೇ ತಿಳಿದು ಬರಬೇಕಿದೆ. ಮುಖ್ಯವಾದ ವಿಷಯವೇನೆಂದರೆ ಲಸಿಕೆ ಪಡೆದುಕೊಂಡವರಿಗೂ ಈ ರೂಪಾಂತರ ಸೋಂಕು ಹರಡಿದೆ ಎಂಬುವುದಾಗಿದೆ. ಆದರೆ ಅವರಲ್ಲಿ ಯಾವ ಮಟ್ಟಿಗೆ ಪರಿಣಾಮ ಬೀರುತ್ತದೆ ಎಂಬುವುದು ಇನ್ನೂ ತಿಳಿದು ಬಂದಿಲ್ಲ” ಎಂದು ಹೇಳಿದ್ದಾರೆ.

“ಇದುವರೆಗೂ ಡೆಲ್ಟಾ ಪ್ಲಸ್‌ ರೂಪಾಂತರದಿಂದ ಭಾರತದಲ್ಲಿ ಮೂರನೇ ಅಲೆ ಬರುತ್ತದೆ ಎಂದು ಹೇಳಲಾಗುತ್ತಿತ್ತು. ಆದರೆ ಇದೀಗ ಓಮಿಕ್ರಾನ್‌ ರೂಪಾಂತರದಿಂದಲೇ ಬಹುಷಃ ಬರಬಹುದು. ಇದು ಬಂದರೆ ಭಾರೀ ವೇಗದಲ್ಲಿ ಹರಡುತ್ತದೆ. ಕಳೆದ ಎರಡು ಅಲೆಗಳಲ್ಲಿ ನಮಗೆ ಹೆಚ್ಚಿನ ಮಾಹಿತಿಗಳು ಇರಲಿಲ್ಲ. ಆದರೆ ಈಗ ಮುಂದೆ ಏನಾಗಬಹುದು ಎಂಬ ಖಚಿತವಾದ ಮಾಹಿತಿ ದೊರೆಯುವಷ್ಟು ಈ ವೈರಸ್‌ ಬಗ್ಗೆ ಅಧ್ಯಯನ ನಡೆದಿದೆ. ಸಧ್ಯಕ್ಕೆ ಬೆಂಗಳೂರಿನಲ್ಲಿ ಲಕ್ಷದಲ್ಲಿ 20 ಜನರಿಗೆ ಐಸಿಯು ಬೇಕಾದರೂ ನಮ್ಮಲ್ಲಿ ಮೂಲಭೂತ ಸೌಕರ್ಯಗಳು ಸಾಲುವುದಿಲ್ಲ. ಆದ್ದರಿಂದ ಸರ್ಕಾರಗಳು ಆದಷ್ಟು ಬೇಗ ಎಚ್ಚೆತ್ತುಕೊಳ್ಳಬೇಕು” ಎಂದು ಡಾ. ಹಿಮಾಂಶು ಹೇಳಿದ್ದಾರೆ.

ಇದನ್ನೂ ಓದಿ: ಜಗತ್ತಿನ ಹಲವೆಡೆ ಹೆಚ್ಚಿದ ಕೊರೊನಾ ಪ್ರಕರಣಗಳು: ಲಾಕ್‌ಡೌನ್‌ ಘೋಷಿಸಿದ ದೇಶಗಳಿವು

ರೂಪಾಂತರಗಳನ್ನು ಚೆನ್ನಾಗಿ ಅರ್ಥಮಾಡಿಕೊಳ್ಳಲು ತಮ್ಮ ಕಣ್ಗಾವಲು ಮತ್ತು ವೈರಸ್ ಅನುಕ್ರಮ ಪ್ರಯತ್ನಗಳನ್ನು ಹೆಚ್ಚಿಸಲು WHO ಶುಕ್ರವಾರ ವಿಶ್ವದ ದೇಶಗಳಿಗೆ ಕರೆ ನೀಡಿದೆ. ದಕ್ಷಿಣ ಆಫ್ರಿಕಾದ ಹೊರತಾಗಿ, ಇಸ್ರೇಲ್‌ನಲ್ಲಿ, ಬೋಟ್ಸ್ವಾನ, ಬೆಲ್ಜಿಯಂ ಮತ್ತು ಹಾಂಗ್ ಕಾಂಗ್‌ನಲ್ಲಿಯೂ ಈ ರೂಪಾಂತರ ಪತ್ತೆಯಾಗಿದೆ.

ವಿಶ್ವ ಆರೋಗ್ಯ ಸಂಸ್ಥೆ ಹೊಸ ರೂಪಾಂತರವನ್ನು ವರ್ಗೀಕರಿಸಿದ ಒಂದು ದಿನದ ನಂತರ, ಪ್ರಧಾನ ಮಂತ್ರಿ ನರೇಂದ್ರ ಮೋದಿ ಶನಿವಾರ ಉನ್ನತ ಮಟ್ಟದ ಅಧಿಕಾರಿಗಳೊಂದಿಗೆ ಶನಿವಾರ ಸಭೆ ನಡೆಸಿದ್ದಾರೆ. ಸಬೆಯಲ್ಲಿ ಅವರು ದೇಶದಲ್ಲಿ ಕೋವಿಡ್‌ ಪರಿಸ್ಥಿತಿ ಹಾಗೂ ರಾಷ್ಟ್ರವ್ಯಾಪಿ ವ್ಯಾಕ್ಸಿನೇಷನ್ ಡ್ರೈವ್ ಕುರಿತು ಚರ್ಚಿಸಿದ್ದಾರೆ.

ದಕ್ಷಿಣ ಆಫ್ರಿಕಾದಲ್ಲಿ ವೈರಸ್ ಪತ್ತೆಯಾಗಿರುವುದು ಘೋಷಣೆಯಾಗುತ್ತಿದ್ದಂತೆ ಭಾರತ ಸೇರಿದಂತೆ ಹಲವಾರು ದೇಶಗಳು ಆಫ್ರಿಕಾದ ಪ್ರಯಾಣದ ಮೇಲೆ ನಿರ್ಬಂಧಗಳನ್ನು ವಿಧಿಸುವ ಹಂತಕ್ಕೆ ತಲುಪಿದೆ. ದಕ್ಷಿಣ ಆಫ್ರಿಕಾದಿಂದ ಮುಂಬೈಗೆ ಪ್ರಯಾಣಿಸುವ ಎಲ್ಲರೂ ಆಗಮಿಸಿದ ನಂತರ ಕಡ್ಡಾಯವಾಗಿ ಕ್ವಾರಂಟೈನ್‌ಗೆ ಒಳಗಾಗಬೇಕಾಗುತ್ತದೆ ಎಂದು ನಗರದ ಮೇಯರ್ ಕಿಶೋರಿ ಪೆಡ್ನೇಕರ್ ಶನಿವಾರ ಘೋಷಿಸಿದ್ದಾರೆ.

ಇದನ್ನೂ ಓದಿ: ಅಮೆರಿಕ, ಯೂರೋಪ್ ದೇಶಗಳಲ್ಲಿ ಕೊರೊನಾ ನಾಲ್ಕನೇ ಅಲೆ; ಭಾರತ ಎಚ್ಚೆತ್ತುಕೊಳ್ಳುವ ಸಮಯ ಬಂದಿದೆಯೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....