Homeಮುಖಪುಟಕೊರೊನಾ ಪ್ಯಾಕೇಜ್‌ ಅಸಮರ್ಪಕ, ದೇಶದ ಆರ್ಥಿಕತೆ ಕುಸಿಯುತ್ತಿದೆ: ಬಿಜೆಪಿ ರಾಜ್ಯಸಭಾ ಸದಸ್ಯ ಸುಬ್ರಹ್ಮಣ್ಯನ್‌ ಸ್ವಾಮಿ

ಕೊರೊನಾ ಪ್ಯಾಕೇಜ್‌ ಅಸಮರ್ಪಕ, ದೇಶದ ಆರ್ಥಿಕತೆ ಕುಸಿಯುತ್ತಿದೆ: ಬಿಜೆಪಿ ರಾಜ್ಯಸಭಾ ಸದಸ್ಯ ಸುಬ್ರಹ್ಮಣ್ಯನ್‌ ಸ್ವಾಮಿ

ಇಷ್ಟಾಗಿಯು 2024 ರ ಚುನಾವಣೆಯಲ್ಲಿ ಮತ್ತೆ ಹಿಂದೂತ್ವವೇ ಗೆಲ್ಲಲಿದೆ ಎಂದು ಹೇಳಿದ್ದಾರೆ.

- Advertisement -
- Advertisement -

ಕೊರೊನಾ ಲಾಕ್‌ಡೌನ್‌ನಿಂದಾದ ಆರ್ಥಿಕ ಮುಗ್ಗಟ್ಟಿಗೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ಘೋಷಿಸಿರುವ ಕೊರೊನಾ ಪುನಶ್ಚೇತನ ಪ್ಯಾಕೇಜ್‌ ಅಸಮರ್ಪಕವಾಗಿದೆ ಹಾಗೂ ದೇಶದ ಆರ್ಥಿಕತೆ ಕುಸಿಯುತ್ತಿದೆ ಬಿಜೆಪಿ ರಾಜ್ಯಸಭಾ ಸದಸ್ಯ ಸುಬ್ರಹ್ಮಣ್ಯನ್‌ ಸ್ವಾಮಿ ಹೇಳಿದ್ದಾರೆ.

ಇಷ್ಟಾಗಿಯು 2024 ರ ಚುನಾವಣೆಯಲ್ಲಿ ಮತ್ತೆ ಹಿಂದೂತ್ವವೇ ಗೆಲ್ಲಲಿದೆ, 2014, 2019 ರಲ್ಲಿ ಕೂಡ ಹಿಂದುತ್ವ ಗೆದ್ದಿದೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಜಿಡಿಪಿ ಕುಸಿತ: “ಮೋದಿನಾಮಿಕ್ಸ್” ವಿಫಲವಾಗಿದೆ: ಅಧೀರ್ ರಂಜನ್ ಚೌಧರಿ

ಕೇಂದ್ರ ಸರ್ಕಾರದ ಪ್ಯಾಕೆಜ್ ಬಗ್ಗೆ ಮಾತನಾಡಿದ ಸುಬ್ರಹ್ಮಣ್ಯನ್ ಸ್ವಾಮಿ, “ಕೇಂದ್ರ ಸರ್ಕಾರ 21 ಟ್ರಿಲಿಯನ್‌ ಪರಿಹಾರ ಘೋಷಿಸಿದೆ. ಅದರಲ್ಲಿ, ಕೇವಲ 1.2 ಟ್ರಿಲಿಯನ್ ಮಾತ್ರ ಪ್ರೋತ್ಸಾಹಕವಾಗಿದೆ. ಉಳಿದದ್ದು ಉದ್ದೀಪಕ ಮತ್ತು ಹಣಕಾಸು ರಿಯಾಯಿತಿಗಳಾಗಿವೆ. ಪ್ರೋತ್ಸಾಹಕ ಪ್ಯಾಕೇಜ್ ಅಸಮರ್ಪಕವಾಗಿದೆ. ಅದು ಪೂರೈಕೆದಾರರನ್ನು ಬೆಳೆಸಿ, ಅಧಿಕಾರ ನೀಡುತ್ತದೆ” ಎಂದು ಅವರು ಹೇಳಿದ್ದಾರೆ.

2014-15 ರ ಆರ್ಥಿಕ ವರ್ಷದಲ್ಲಿ ದೇಶದ ಅಭಿವೃದ್ಧಿ ದರ ಶೇ.8 ರಷ್ಟಿತ್ತು. ನಂತರದ ವರ್ಷಗಳಲ್ಲಿ ಅದು ವರ್ಷದಿಂದ ವರ್ಷಕ್ಕೆ ಕುಸಿಯುತ್ತಾ ಬಂದಿದೆ. 2019-20 ನೇ ಸಾಲಿನ ಮೊದಲ ತ್ರೈಮಾಸಿಕದಲ್ಲಿ ಅಭಿವೃದ್ಧಿ ದರ 3.1 ಕ್ಕೆ ಕುಸಿದಿತ್ತು. ಕೊರೊನಾ ನಂತರದಲ್ಲಿ ಮತ್ತಷ್ಟು ಕುಸಿತ ಕಂಡಿದೆ. ಲಾಕ್‌ಡೌನ್‌ ಹೇರಿಕೆಯಿಂದಾಗಿ ವ್ಯಾಪಾರ, ವಹಿವಾಟು, ಉತ್ಪಾದನಾ ಕ್ಷೇತ್ರ ಎಲ್ಲವೂ ಸ್ಥಗಿತಗೊಂಡಿದ್ದು, ಅಭಿವೃದ್ಧಿ ಸೂಚ್ಯಂಕ ಬಿದ್ದಿದೆ ಎಂದು ಸುಬ್ರಹ್ಮಣ್ಯನ್ ಸ್ವಾಮಿ ಹೇಳಿರುವುದಾಗಿ ನ್ಯೂ ಇಂಡಿಯನ್‌ ಎಕ್ಸ್‌ಪ್ರೆಸ್‌ ವರದಿ ಮಾಡಿದೆ.

ಇದನ್ನೂ ಓದಿ: ಐತಿಹಾಸಿಕ ಜಿಡಿಪಿ ಕುಸಿತಕ್ಕೆ ಕೊರೊನಾ ಮಾತ್ರ ಕಾರಣವೆ? ಕರ್ನಾಟಕದ ತಜ್ಞರು ಏನಂತಾರೆ?


source: tradingeconomics.com

ಜಿಡಿಪಿ ದರ ಗಣನೀಯವಾಗಿ ಕುಸಿಯುತ್ತಿದೆ ಎಂದು ನಾನು ಹೇಳುತ್ತಲೇ ಇದ್ದೆ. ಆದರೆ, ಎಲ್ಲರೂ ನನಗೆ ಬೈದು ಬಾಯಿಮುಚ್ಚಿಸುತ್ತಿದ್ದರು. ಈಗ, 2020-2021 ರ ಹಣಕಾಸು ವರ್ಷದ ಆರಂಭದಲ್ಲಿ (ಏಪ್ರಿಲ್‌-ಜೂನ್‌ 30)  ದೇಶದ ಜಿಡಿಪಿ ಶೇಕಡಾ 23.9 ರಷ್ಟು ಕುಸಿದಿದೆ. ಈ ವರ್ಷದ ಅಂತ್ಯದ ವೇಳೆಗೆ ದೇಶದ ಅಭಿವೃದ್ಧಿ ದರ -15% ಗೆ ಇಳಿಯಬಹುದು. ಕೊನೆಗೆ ಒಟ್ಟಾರೆ ದೇಶದ ಬೆಳವಣಿಗೆ ಶೇಕಡಾ 15 ರಷ್ಟಾಗಬಹುದು ಎಂದು ಅವರು ಹೇಳಿದ್ದಾರೆ.

ಕಳೆದ ನಾಲ್ಕೈದು ವರ್ಷಗಳಿಂದ ವಿತ್ತೀಯ ಕೊರತೆಯುಂಟಾಗಿದೆ. ನೋಟು ಅನಾಣ್ಯೀಕರಣ ಮತ್ತು ಜಿಎಸ್‌ಟಿಯಿಂದ ಇದು ಸಂಭವಿಸಿದೆ. ಇದನ್ನು ತೆರಿಗೆ ಭಯೋತ್ಪಾದನೆ ಎಂದು ನಾವು ಕರೆಯಬಹುದು. ಆದಾಯ ತೆರಿಗೆ ದಿನದಿಂದ ದಿನಕ್ಕೆ ಕಠಿಣವಾಗುತ್ತಿದೆ. ಸರ್ಕಾರ ಜನರ ಕೈಗೆ ಹೇಗೆ ಹಣ ತಲುಪಬೇಕು ಎಂಬುದರ ಬಗ್ಗೆ ಯೋಚಿಸಬೇಕು ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಭಾರತಕ್ಕಿಂತ ಅಮೆರಿಕ, ಜಪಾನ್ ಜಿಡಿಪಿ ಕುಸಿತ ಹೆಚ್ಚು?: ಸುಳ್ಳು ಹರಡುತ್ತಿರುವ ಪೋಸ್ಟ್ ಕಾರ್ಡ್

ಕೊರೊನಾ ಪರಿಸ್ಥಿತಿಯನ್ನು ಸರ್ಕಾರ ಉತ್ತಮವಾಗಿ ನಿಭಾಯಿಸಿದೆ. ಆದರೆ, ದೇಶಾದ್ಯಂತ ಲಾಕ್‌ಡೌನ್‌ ಹೇರುವ ಮುನ್ನ ಜನರಿಗೆ ತಮ್ಮ ಜೀವನೋಪಾಯಕ್ಕೆ ಬೇಕಾದ ತಯಾರಿ ಮಾಡಿಕೊಳ್ಳಲು ಕಾಲಾವಕಾಶ ನೀಡಬೇಕಾಗಿತ್ತು. ಆದರೆ, ಅದು ಆಗಲಿಲ್ಲ ಹಾಗಾಗಿ ಜನರು ಸಂಕಷ್ಟಗಳನ್ನು ಎದುರಿಸಬೇಕಾಯಿತು ಎಂದು ಅವರು ಹೇಳಿದ್ದಾರೆ.

ಮುಂಬರುವ ಅಮೆರಿಕ ಚುನಾವಣೆಯಲ್ಲಿ ಮತ್ತೆ ಡೊನಾಲ್ಡ್ ಟ್ರಂಪ್ ಅವರೆ ಅಧ್ಯಕ್ಷರಾಗಬಹುದು. ಬಿಡೆನ್‌ ಮುಸ್ಲಿಮರ ಬಳಿ ಹೋಗಿ, ನಾವು ಅಧಿಕಾರಕ್ಕೆ ಬಂದರೆ, ಭಾರತೀಯರಿಗೆ ಪಾಠ ಹೇಳುತ್ತೇವೆ ಎಂದು ಹೇಳಿ ತಪ್ಪು ಮಾಡಿದ್ದಾರೆ. ಹಾಗಾಗಿ ಟ್ರಂಪ್‌ ಗೆಲ್ಲುತ್ತಾರೆಂಬ ವಿಶ್ವಾಸವಿದೆ ಎಂದು ಹೇಳಿದ್ದಾರೆ.


ಇದನ್ನೂ ಓದಿ: ಜಿಡಿಪಿ ಪಾತಾಳದಲ್ಲಿದ್ದರೂ ಸುಳ್ಳು ಹೇಳುತ್ತಿರುವ ಕರ್ನಾಟಕ ಬಿಜೆಪಿ;ಫ್ಯಾಕ್ಟ್‌ಚೆಕ್.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...