Homeಮುಖಪುಟಕೊರೊನಾ ಪ್ಯಾಕೇಜ್‌ ಅಸಮರ್ಪಕ, ದೇಶದ ಆರ್ಥಿಕತೆ ಕುಸಿಯುತ್ತಿದೆ: ಬಿಜೆಪಿ ರಾಜ್ಯಸಭಾ ಸದಸ್ಯ ಸುಬ್ರಹ್ಮಣ್ಯನ್‌ ಸ್ವಾಮಿ

ಕೊರೊನಾ ಪ್ಯಾಕೇಜ್‌ ಅಸಮರ್ಪಕ, ದೇಶದ ಆರ್ಥಿಕತೆ ಕುಸಿಯುತ್ತಿದೆ: ಬಿಜೆಪಿ ರಾಜ್ಯಸಭಾ ಸದಸ್ಯ ಸುಬ್ರಹ್ಮಣ್ಯನ್‌ ಸ್ವಾಮಿ

ಇಷ್ಟಾಗಿಯು 2024 ರ ಚುನಾವಣೆಯಲ್ಲಿ ಮತ್ತೆ ಹಿಂದೂತ್ವವೇ ಗೆಲ್ಲಲಿದೆ ಎಂದು ಹೇಳಿದ್ದಾರೆ.

- Advertisement -
- Advertisement -

ಕೊರೊನಾ ಲಾಕ್‌ಡೌನ್‌ನಿಂದಾದ ಆರ್ಥಿಕ ಮುಗ್ಗಟ್ಟಿಗೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ಘೋಷಿಸಿರುವ ಕೊರೊನಾ ಪುನಶ್ಚೇತನ ಪ್ಯಾಕೇಜ್‌ ಅಸಮರ್ಪಕವಾಗಿದೆ ಹಾಗೂ ದೇಶದ ಆರ್ಥಿಕತೆ ಕುಸಿಯುತ್ತಿದೆ ಬಿಜೆಪಿ ರಾಜ್ಯಸಭಾ ಸದಸ್ಯ ಸುಬ್ರಹ್ಮಣ್ಯನ್‌ ಸ್ವಾಮಿ ಹೇಳಿದ್ದಾರೆ.

ಇಷ್ಟಾಗಿಯು 2024 ರ ಚುನಾವಣೆಯಲ್ಲಿ ಮತ್ತೆ ಹಿಂದೂತ್ವವೇ ಗೆಲ್ಲಲಿದೆ, 2014, 2019 ರಲ್ಲಿ ಕೂಡ ಹಿಂದುತ್ವ ಗೆದ್ದಿದೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಜಿಡಿಪಿ ಕುಸಿತ: “ಮೋದಿನಾಮಿಕ್ಸ್” ವಿಫಲವಾಗಿದೆ: ಅಧೀರ್ ರಂಜನ್ ಚೌಧರಿ

ಕೇಂದ್ರ ಸರ್ಕಾರದ ಪ್ಯಾಕೆಜ್ ಬಗ್ಗೆ ಮಾತನಾಡಿದ ಸುಬ್ರಹ್ಮಣ್ಯನ್ ಸ್ವಾಮಿ, “ಕೇಂದ್ರ ಸರ್ಕಾರ 21 ಟ್ರಿಲಿಯನ್‌ ಪರಿಹಾರ ಘೋಷಿಸಿದೆ. ಅದರಲ್ಲಿ, ಕೇವಲ 1.2 ಟ್ರಿಲಿಯನ್ ಮಾತ್ರ ಪ್ರೋತ್ಸಾಹಕವಾಗಿದೆ. ಉಳಿದದ್ದು ಉದ್ದೀಪಕ ಮತ್ತು ಹಣಕಾಸು ರಿಯಾಯಿತಿಗಳಾಗಿವೆ. ಪ್ರೋತ್ಸಾಹಕ ಪ್ಯಾಕೇಜ್ ಅಸಮರ್ಪಕವಾಗಿದೆ. ಅದು ಪೂರೈಕೆದಾರರನ್ನು ಬೆಳೆಸಿ, ಅಧಿಕಾರ ನೀಡುತ್ತದೆ” ಎಂದು ಅವರು ಹೇಳಿದ್ದಾರೆ.

2014-15 ರ ಆರ್ಥಿಕ ವರ್ಷದಲ್ಲಿ ದೇಶದ ಅಭಿವೃದ್ಧಿ ದರ ಶೇ.8 ರಷ್ಟಿತ್ತು. ನಂತರದ ವರ್ಷಗಳಲ್ಲಿ ಅದು ವರ್ಷದಿಂದ ವರ್ಷಕ್ಕೆ ಕುಸಿಯುತ್ತಾ ಬಂದಿದೆ. 2019-20 ನೇ ಸಾಲಿನ ಮೊದಲ ತ್ರೈಮಾಸಿಕದಲ್ಲಿ ಅಭಿವೃದ್ಧಿ ದರ 3.1 ಕ್ಕೆ ಕುಸಿದಿತ್ತು. ಕೊರೊನಾ ನಂತರದಲ್ಲಿ ಮತ್ತಷ್ಟು ಕುಸಿತ ಕಂಡಿದೆ. ಲಾಕ್‌ಡೌನ್‌ ಹೇರಿಕೆಯಿಂದಾಗಿ ವ್ಯಾಪಾರ, ವಹಿವಾಟು, ಉತ್ಪಾದನಾ ಕ್ಷೇತ್ರ ಎಲ್ಲವೂ ಸ್ಥಗಿತಗೊಂಡಿದ್ದು, ಅಭಿವೃದ್ಧಿ ಸೂಚ್ಯಂಕ ಬಿದ್ದಿದೆ ಎಂದು ಸುಬ್ರಹ್ಮಣ್ಯನ್ ಸ್ವಾಮಿ ಹೇಳಿರುವುದಾಗಿ ನ್ಯೂ ಇಂಡಿಯನ್‌ ಎಕ್ಸ್‌ಪ್ರೆಸ್‌ ವರದಿ ಮಾಡಿದೆ.

ಇದನ್ನೂ ಓದಿ: ಐತಿಹಾಸಿಕ ಜಿಡಿಪಿ ಕುಸಿತಕ್ಕೆ ಕೊರೊನಾ ಮಾತ್ರ ಕಾರಣವೆ? ಕರ್ನಾಟಕದ ತಜ್ಞರು ಏನಂತಾರೆ?


source: tradingeconomics.com

ಜಿಡಿಪಿ ದರ ಗಣನೀಯವಾಗಿ ಕುಸಿಯುತ್ತಿದೆ ಎಂದು ನಾನು ಹೇಳುತ್ತಲೇ ಇದ್ದೆ. ಆದರೆ, ಎಲ್ಲರೂ ನನಗೆ ಬೈದು ಬಾಯಿಮುಚ್ಚಿಸುತ್ತಿದ್ದರು. ಈಗ, 2020-2021 ರ ಹಣಕಾಸು ವರ್ಷದ ಆರಂಭದಲ್ಲಿ (ಏಪ್ರಿಲ್‌-ಜೂನ್‌ 30)  ದೇಶದ ಜಿಡಿಪಿ ಶೇಕಡಾ 23.9 ರಷ್ಟು ಕುಸಿದಿದೆ. ಈ ವರ್ಷದ ಅಂತ್ಯದ ವೇಳೆಗೆ ದೇಶದ ಅಭಿವೃದ್ಧಿ ದರ -15% ಗೆ ಇಳಿಯಬಹುದು. ಕೊನೆಗೆ ಒಟ್ಟಾರೆ ದೇಶದ ಬೆಳವಣಿಗೆ ಶೇಕಡಾ 15 ರಷ್ಟಾಗಬಹುದು ಎಂದು ಅವರು ಹೇಳಿದ್ದಾರೆ.

ಕಳೆದ ನಾಲ್ಕೈದು ವರ್ಷಗಳಿಂದ ವಿತ್ತೀಯ ಕೊರತೆಯುಂಟಾಗಿದೆ. ನೋಟು ಅನಾಣ್ಯೀಕರಣ ಮತ್ತು ಜಿಎಸ್‌ಟಿಯಿಂದ ಇದು ಸಂಭವಿಸಿದೆ. ಇದನ್ನು ತೆರಿಗೆ ಭಯೋತ್ಪಾದನೆ ಎಂದು ನಾವು ಕರೆಯಬಹುದು. ಆದಾಯ ತೆರಿಗೆ ದಿನದಿಂದ ದಿನಕ್ಕೆ ಕಠಿಣವಾಗುತ್ತಿದೆ. ಸರ್ಕಾರ ಜನರ ಕೈಗೆ ಹೇಗೆ ಹಣ ತಲುಪಬೇಕು ಎಂಬುದರ ಬಗ್ಗೆ ಯೋಚಿಸಬೇಕು ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಭಾರತಕ್ಕಿಂತ ಅಮೆರಿಕ, ಜಪಾನ್ ಜಿಡಿಪಿ ಕುಸಿತ ಹೆಚ್ಚು?: ಸುಳ್ಳು ಹರಡುತ್ತಿರುವ ಪೋಸ್ಟ್ ಕಾರ್ಡ್

ಕೊರೊನಾ ಪರಿಸ್ಥಿತಿಯನ್ನು ಸರ್ಕಾರ ಉತ್ತಮವಾಗಿ ನಿಭಾಯಿಸಿದೆ. ಆದರೆ, ದೇಶಾದ್ಯಂತ ಲಾಕ್‌ಡೌನ್‌ ಹೇರುವ ಮುನ್ನ ಜನರಿಗೆ ತಮ್ಮ ಜೀವನೋಪಾಯಕ್ಕೆ ಬೇಕಾದ ತಯಾರಿ ಮಾಡಿಕೊಳ್ಳಲು ಕಾಲಾವಕಾಶ ನೀಡಬೇಕಾಗಿತ್ತು. ಆದರೆ, ಅದು ಆಗಲಿಲ್ಲ ಹಾಗಾಗಿ ಜನರು ಸಂಕಷ್ಟಗಳನ್ನು ಎದುರಿಸಬೇಕಾಯಿತು ಎಂದು ಅವರು ಹೇಳಿದ್ದಾರೆ.

ಮುಂಬರುವ ಅಮೆರಿಕ ಚುನಾವಣೆಯಲ್ಲಿ ಮತ್ತೆ ಡೊನಾಲ್ಡ್ ಟ್ರಂಪ್ ಅವರೆ ಅಧ್ಯಕ್ಷರಾಗಬಹುದು. ಬಿಡೆನ್‌ ಮುಸ್ಲಿಮರ ಬಳಿ ಹೋಗಿ, ನಾವು ಅಧಿಕಾರಕ್ಕೆ ಬಂದರೆ, ಭಾರತೀಯರಿಗೆ ಪಾಠ ಹೇಳುತ್ತೇವೆ ಎಂದು ಹೇಳಿ ತಪ್ಪು ಮಾಡಿದ್ದಾರೆ. ಹಾಗಾಗಿ ಟ್ರಂಪ್‌ ಗೆಲ್ಲುತ್ತಾರೆಂಬ ವಿಶ್ವಾಸವಿದೆ ಎಂದು ಹೇಳಿದ್ದಾರೆ.


ಇದನ್ನೂ ಓದಿ: ಜಿಡಿಪಿ ಪಾತಾಳದಲ್ಲಿದ್ದರೂ ಸುಳ್ಳು ಹೇಳುತ್ತಿರುವ ಕರ್ನಾಟಕ ಬಿಜೆಪಿ;ಫ್ಯಾಕ್ಟ್‌ಚೆಕ್.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...

ಮುಂಬೈ| ಬುರ್ಖಾ ಧರಿಸಿ ಲೋಕಲ್‌ ಟ್ರೈನ್‌ನ ಮಹಿಳಾ ಬೋಗಿಯಲ್ಲಿ ಪ್ರಯಾಣಿಸಿದ ವ್ಯಕ್ತಿ ಬಂಧನ

ಮುಂಬೈನ ಉಪನಗರ ರೈಲಿನ ಮಹಿಳಾ ಬೋಗಿಯಲ್ಲಿ ಬುರ್ಖಾ ಧರಿಸಿ ಪ್ರಯಾಣಿಸುತ್ತಿದ್ದ ಆರೋಪದ ಮೇಲೆ ನಾಸಿಕ್‌ನ 57 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ. ಈ ಘಟನೆ ಫೆಬ್ರವರಿ 6 ರಂದು ಘಾಟ್ಕೋಪರ್...

ಎಪ್‌ಸ್ಟೀನ್‌ ಫೈಲ್ಸ್ ಜನಾಕ್ರೋಶ : ಎಐ ಶೃಂಗಸಭೆಯಿಂದ ದೂರ ಉಳಿದ ಬಿಲ್‌ ಗೇಟ್ಸ್‌

ಎಪ್‌ಸ್ಟೀನ್‌ ಫೈಲ್ಸ್‌ ಮುಂದಿಟ್ಟುಕೊಂಡು ಜನರು ತೀವ್ರ ವಿರೋಧ ವ್ಯಕ್ತಪಡಿಸಿದ ಬೆನ್ನಲ್ಲೇ, 'ಇಂಡಿಯಾ ಎಐ ಇಂಪ್ಯಾಕ್ಟ್ ಶೃಂಗಸಭೆ'ಯಿಂದ ಮೈಕ್ರೋಸಾಫ್ಟ್‌ ಸಹ-ಸಂಸ್ಥಾಪಕ ಬಿಲ್ ಗೇಟ್ಸ್ ದೂರ ಉಳಿದಿದ್ದಾರೆ. ಈ ಕುರಿತು ಗೇಟ್ಸ್ ಫೌಂಡೇಶನ್ ಇಂಡಿಯಾ ಗುರುವಾರ...

ಬೆಂಗಳೂರಿನಲ್ಲಿ ರಂಜಾನ್ ಆಹಾರ ಮೇಳ ನಡೆಸದಂತೆ ಹೋಟೆಲ್‌ಗಳಿಗೆ ಎಚ್ಚರಿಕೆ

ಬೆಂಗಳೂರು: ಫ್ರೇಸರ್ ಟೌನ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿನ ಎಂಎಂ ರಸ್ತೆಯಲ್ಲಿ ರಂಜಾನ್ ಆಹಾರ ಮೇಳ ನಡೆಸದಂತೆ ಹೋಟೆಲ್ ಮಾಲೀಕರಿಗೆ ಸ್ಥಳೀಯ ನಿವಾಸಿಗಳು ಎಚ್ಚರಿಕೆ ನೀಡಿದ್ದಾರೆ. ರಂಜಾನ್ ಆಹಾರ ಮೇಳದಿಂದ ಸಂಚಾರ ದಟ್ಟಣೆ. ಅವ್ಯವಸ್ಥೆಯ ಜೊತೆಗೆ...

‘ದಿ ಕೇರಳ ಸ್ಟೋರಿ-2’ ಚಲನಚಿತ್ರ ಜಾತ್ಯತೀತತೆಗೆ ಬೆದರಿಕೆ: ಮುಖ್ಯಮಂತ್ರಿ ಪಿಣರಾಯಿ ವಿಜಯನ್

'ದಿ ಕೇರಳ ಸ್ಟೋರಿ' ಚಿತ್ರದ ಎರಡನೇ ಭಾಗ ಬಿಡುಗಡೆಯಾಗುತ್ತಿರುವ ಬಗ್ಗೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಕಳವಳ ವ್ಯಕ್ತಪಡಿಸಿದ್ದು, ಇದರ ಮೊದಲ ಭಾಗವು "ರಾಜ್ಯದ ವಿರುದ್ಧ ದ್ವೇಷವನ್ನು ಹರಡುವ ಮತ್ತು ನಮ್ಮ ಜಾತ್ಯತೀತ...

ಬಿಜೆಪಿ ಸೇರಲು ಸಿದ್ದರಾದ ಭೂಪೇನ್ ಬೋರಾ : ಪ್ರಿಯಾಂಕಾ, ಡಿಕೆಶಿ ಸೇರಿದಂತೆ ‘ಕೈ ಟ್ರಬಲ್ ಶೂಟರ್‌ಗಳು’ ಅಸ್ಸಾಂಗೆ ದೌಡು

ರಾಜ್ಯ ಕಾಂಗ್ರೆಸ್‌ ಘಟಕದ ಮಾಜಿ ಅಧ್ಯಕ್ಷ ಭೂಪೇನ್ ಬೋರಾ ಬಿಜೆಪಿಗೆ ಹಾರಲು ಸಿದ್ದರಾಗಿರುವ ನಡುವೆ ಪ್ರಿಯಾಂಕಾ ಗಾಂಧಿ, ಡಿ.ಕೆ ಶಿವಕುಮಾರ್ ಸೇರಿದಂತೆ ಕಾಂಗ್ರೆಸ್‌ನ ಟ್ರಬಲ್ ಶೂಟರ್‌ಗಳ ತಂಡ ಅಸ್ಸಾಂಗೆ ದೌಡಾಯಿಸಿದೆ. ಅಸ್ಸಾಂ ಕಾಂಗ್ರೆಸ್ ಅಭ್ಯರ್ಥಿಗಳ...

ಸರ್ಕಾರದ ಭರವಸೆಗೆ ಮಣಿಯದ ಸಾರಿಗೆ ಸಿಬ್ಬಂದಿ : ಮುಷ್ಕರ ಮುಂದುವರಿಸಲು ನಿರ್ಧಾರ

ಹಿಂಬಾಕಿ ಪಾವತಿ, ವೇತನ ಪರಿಷ್ಕರಣೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ರಾಜ್ಯದ ನಾಲ್ಕು ಸಾರಿಗೆ ನಿಗಮಗಳಾದ ಕೆಎಸ್‌ಆರ್‌ಟಿಸಿ, ಕೆಕೆಆರ್‌ಟಿಸಿ, ಎನ್‌ಡಬ್ಲ್ಯುಕೆಆರ್‌ಟಿಸಿ ಹಾಗೂ ಬಿಎಂಟಿಸಿಯ ನೌಕರರು ಇಂದು (ಫೆ.19) ಮುಷ್ಕರಕ್ಕೆ ಕರೆ ಕೊಟ್ಟಿದ್ದಾರೆ. ನೌಕರರ ಪ್ರತಿಭಟನೆ...