Homeಮುಖಪುಟಕೊರೊನಾ ಪ್ಯಾಕೇಜ್‌ ಅಸಮರ್ಪಕ, ದೇಶದ ಆರ್ಥಿಕತೆ ಕುಸಿಯುತ್ತಿದೆ: ಬಿಜೆಪಿ ರಾಜ್ಯಸಭಾ ಸದಸ್ಯ ಸುಬ್ರಹ್ಮಣ್ಯನ್‌ ಸ್ವಾಮಿ

ಕೊರೊನಾ ಪ್ಯಾಕೇಜ್‌ ಅಸಮರ್ಪಕ, ದೇಶದ ಆರ್ಥಿಕತೆ ಕುಸಿಯುತ್ತಿದೆ: ಬಿಜೆಪಿ ರಾಜ್ಯಸಭಾ ಸದಸ್ಯ ಸುಬ್ರಹ್ಮಣ್ಯನ್‌ ಸ್ವಾಮಿ

ಇಷ್ಟಾಗಿಯು 2024 ರ ಚುನಾವಣೆಯಲ್ಲಿ ಮತ್ತೆ ಹಿಂದೂತ್ವವೇ ಗೆಲ್ಲಲಿದೆ ಎಂದು ಹೇಳಿದ್ದಾರೆ.

- Advertisement -
- Advertisement -

ಕೊರೊನಾ ಲಾಕ್‌ಡೌನ್‌ನಿಂದಾದ ಆರ್ಥಿಕ ಮುಗ್ಗಟ್ಟಿಗೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ಘೋಷಿಸಿರುವ ಕೊರೊನಾ ಪುನಶ್ಚೇತನ ಪ್ಯಾಕೇಜ್‌ ಅಸಮರ್ಪಕವಾಗಿದೆ ಹಾಗೂ ದೇಶದ ಆರ್ಥಿಕತೆ ಕುಸಿಯುತ್ತಿದೆ ಬಿಜೆಪಿ ರಾಜ್ಯಸಭಾ ಸದಸ್ಯ ಸುಬ್ರಹ್ಮಣ್ಯನ್‌ ಸ್ವಾಮಿ ಹೇಳಿದ್ದಾರೆ.

ಇಷ್ಟಾಗಿಯು 2024 ರ ಚುನಾವಣೆಯಲ್ಲಿ ಮತ್ತೆ ಹಿಂದೂತ್ವವೇ ಗೆಲ್ಲಲಿದೆ, 2014, 2019 ರಲ್ಲಿ ಕೂಡ ಹಿಂದುತ್ವ ಗೆದ್ದಿದೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಜಿಡಿಪಿ ಕುಸಿತ: “ಮೋದಿನಾಮಿಕ್ಸ್” ವಿಫಲವಾಗಿದೆ: ಅಧೀರ್ ರಂಜನ್ ಚೌಧರಿ

ಕೇಂದ್ರ ಸರ್ಕಾರದ ಪ್ಯಾಕೆಜ್ ಬಗ್ಗೆ ಮಾತನಾಡಿದ ಸುಬ್ರಹ್ಮಣ್ಯನ್ ಸ್ವಾಮಿ, “ಕೇಂದ್ರ ಸರ್ಕಾರ 21 ಟ್ರಿಲಿಯನ್‌ ಪರಿಹಾರ ಘೋಷಿಸಿದೆ. ಅದರಲ್ಲಿ, ಕೇವಲ 1.2 ಟ್ರಿಲಿಯನ್ ಮಾತ್ರ ಪ್ರೋತ್ಸಾಹಕವಾಗಿದೆ. ಉಳಿದದ್ದು ಉದ್ದೀಪಕ ಮತ್ತು ಹಣಕಾಸು ರಿಯಾಯಿತಿಗಳಾಗಿವೆ. ಪ್ರೋತ್ಸಾಹಕ ಪ್ಯಾಕೇಜ್ ಅಸಮರ್ಪಕವಾಗಿದೆ. ಅದು ಪೂರೈಕೆದಾರರನ್ನು ಬೆಳೆಸಿ, ಅಧಿಕಾರ ನೀಡುತ್ತದೆ” ಎಂದು ಅವರು ಹೇಳಿದ್ದಾರೆ.

2014-15 ರ ಆರ್ಥಿಕ ವರ್ಷದಲ್ಲಿ ದೇಶದ ಅಭಿವೃದ್ಧಿ ದರ ಶೇ.8 ರಷ್ಟಿತ್ತು. ನಂತರದ ವರ್ಷಗಳಲ್ಲಿ ಅದು ವರ್ಷದಿಂದ ವರ್ಷಕ್ಕೆ ಕುಸಿಯುತ್ತಾ ಬಂದಿದೆ. 2019-20 ನೇ ಸಾಲಿನ ಮೊದಲ ತ್ರೈಮಾಸಿಕದಲ್ಲಿ ಅಭಿವೃದ್ಧಿ ದರ 3.1 ಕ್ಕೆ ಕುಸಿದಿತ್ತು. ಕೊರೊನಾ ನಂತರದಲ್ಲಿ ಮತ್ತಷ್ಟು ಕುಸಿತ ಕಂಡಿದೆ. ಲಾಕ್‌ಡೌನ್‌ ಹೇರಿಕೆಯಿಂದಾಗಿ ವ್ಯಾಪಾರ, ವಹಿವಾಟು, ಉತ್ಪಾದನಾ ಕ್ಷೇತ್ರ ಎಲ್ಲವೂ ಸ್ಥಗಿತಗೊಂಡಿದ್ದು, ಅಭಿವೃದ್ಧಿ ಸೂಚ್ಯಂಕ ಬಿದ್ದಿದೆ ಎಂದು ಸುಬ್ರಹ್ಮಣ್ಯನ್ ಸ್ವಾಮಿ ಹೇಳಿರುವುದಾಗಿ ನ್ಯೂ ಇಂಡಿಯನ್‌ ಎಕ್ಸ್‌ಪ್ರೆಸ್‌ ವರದಿ ಮಾಡಿದೆ.

ಇದನ್ನೂ ಓದಿ: ಐತಿಹಾಸಿಕ ಜಿಡಿಪಿ ಕುಸಿತಕ್ಕೆ ಕೊರೊನಾ ಮಾತ್ರ ಕಾರಣವೆ? ಕರ್ನಾಟಕದ ತಜ್ಞರು ಏನಂತಾರೆ?


source: tradingeconomics.com

ಜಿಡಿಪಿ ದರ ಗಣನೀಯವಾಗಿ ಕುಸಿಯುತ್ತಿದೆ ಎಂದು ನಾನು ಹೇಳುತ್ತಲೇ ಇದ್ದೆ. ಆದರೆ, ಎಲ್ಲರೂ ನನಗೆ ಬೈದು ಬಾಯಿಮುಚ್ಚಿಸುತ್ತಿದ್ದರು. ಈಗ, 2020-2021 ರ ಹಣಕಾಸು ವರ್ಷದ ಆರಂಭದಲ್ಲಿ (ಏಪ್ರಿಲ್‌-ಜೂನ್‌ 30)  ದೇಶದ ಜಿಡಿಪಿ ಶೇಕಡಾ 23.9 ರಷ್ಟು ಕುಸಿದಿದೆ. ಈ ವರ್ಷದ ಅಂತ್ಯದ ವೇಳೆಗೆ ದೇಶದ ಅಭಿವೃದ್ಧಿ ದರ -15% ಗೆ ಇಳಿಯಬಹುದು. ಕೊನೆಗೆ ಒಟ್ಟಾರೆ ದೇಶದ ಬೆಳವಣಿಗೆ ಶೇಕಡಾ 15 ರಷ್ಟಾಗಬಹುದು ಎಂದು ಅವರು ಹೇಳಿದ್ದಾರೆ.

ಕಳೆದ ನಾಲ್ಕೈದು ವರ್ಷಗಳಿಂದ ವಿತ್ತೀಯ ಕೊರತೆಯುಂಟಾಗಿದೆ. ನೋಟು ಅನಾಣ್ಯೀಕರಣ ಮತ್ತು ಜಿಎಸ್‌ಟಿಯಿಂದ ಇದು ಸಂಭವಿಸಿದೆ. ಇದನ್ನು ತೆರಿಗೆ ಭಯೋತ್ಪಾದನೆ ಎಂದು ನಾವು ಕರೆಯಬಹುದು. ಆದಾಯ ತೆರಿಗೆ ದಿನದಿಂದ ದಿನಕ್ಕೆ ಕಠಿಣವಾಗುತ್ತಿದೆ. ಸರ್ಕಾರ ಜನರ ಕೈಗೆ ಹೇಗೆ ಹಣ ತಲುಪಬೇಕು ಎಂಬುದರ ಬಗ್ಗೆ ಯೋಚಿಸಬೇಕು ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಭಾರತಕ್ಕಿಂತ ಅಮೆರಿಕ, ಜಪಾನ್ ಜಿಡಿಪಿ ಕುಸಿತ ಹೆಚ್ಚು?: ಸುಳ್ಳು ಹರಡುತ್ತಿರುವ ಪೋಸ್ಟ್ ಕಾರ್ಡ್

ಕೊರೊನಾ ಪರಿಸ್ಥಿತಿಯನ್ನು ಸರ್ಕಾರ ಉತ್ತಮವಾಗಿ ನಿಭಾಯಿಸಿದೆ. ಆದರೆ, ದೇಶಾದ್ಯಂತ ಲಾಕ್‌ಡೌನ್‌ ಹೇರುವ ಮುನ್ನ ಜನರಿಗೆ ತಮ್ಮ ಜೀವನೋಪಾಯಕ್ಕೆ ಬೇಕಾದ ತಯಾರಿ ಮಾಡಿಕೊಳ್ಳಲು ಕಾಲಾವಕಾಶ ನೀಡಬೇಕಾಗಿತ್ತು. ಆದರೆ, ಅದು ಆಗಲಿಲ್ಲ ಹಾಗಾಗಿ ಜನರು ಸಂಕಷ್ಟಗಳನ್ನು ಎದುರಿಸಬೇಕಾಯಿತು ಎಂದು ಅವರು ಹೇಳಿದ್ದಾರೆ.

ಮುಂಬರುವ ಅಮೆರಿಕ ಚುನಾವಣೆಯಲ್ಲಿ ಮತ್ತೆ ಡೊನಾಲ್ಡ್ ಟ್ರಂಪ್ ಅವರೆ ಅಧ್ಯಕ್ಷರಾಗಬಹುದು. ಬಿಡೆನ್‌ ಮುಸ್ಲಿಮರ ಬಳಿ ಹೋಗಿ, ನಾವು ಅಧಿಕಾರಕ್ಕೆ ಬಂದರೆ, ಭಾರತೀಯರಿಗೆ ಪಾಠ ಹೇಳುತ್ತೇವೆ ಎಂದು ಹೇಳಿ ತಪ್ಪು ಮಾಡಿದ್ದಾರೆ. ಹಾಗಾಗಿ ಟ್ರಂಪ್‌ ಗೆಲ್ಲುತ್ತಾರೆಂಬ ವಿಶ್ವಾಸವಿದೆ ಎಂದು ಹೇಳಿದ್ದಾರೆ.


ಇದನ್ನೂ ಓದಿ: ಜಿಡಿಪಿ ಪಾತಾಳದಲ್ಲಿದ್ದರೂ ಸುಳ್ಳು ಹೇಳುತ್ತಿರುವ ಕರ್ನಾಟಕ ಬಿಜೆಪಿ;ಫ್ಯಾಕ್ಟ್‌ಚೆಕ್.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...

ಕ್ಯಾಂಪಸ್ ಜಾತಿ ತಾರತಮ್ಯ ವಿರುದ್ಧದ ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ರಾಜ್ಯ ಸಚಿವ ಸಂಪುಟ ಗುರುವಾರ (ಏ.16) ರಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ'ಗೆ ಅನುಮೋದನೆ ನೀಡಿತು. ಜೊತೆಗೆ, ಪ್ರಮುಖ ಮೂಲಸೌಕರ್ಯ ಮತ್ತು...