Homeಕರೋನಾ ತಲ್ಲಣಕೊರೊನಾ ರೋಗಕ್ಕೆ ‘ಮಹಾಮಾರಿ’ ಎಂದು ಕರೆಯುವವರು ಮೂರ್ಖರು..

ಕೊರೊನಾ ರೋಗಕ್ಕೆ ‘ಮಹಾಮಾರಿ’ ಎಂದು ಕರೆಯುವವರು ಮೂರ್ಖರು..

ಯಾವುದೇ ಔಷಧಿ ಕೊಡದೇ ಶೇ.60 ಸೋಂಕಿತರಲ್ಲಿ ತನ್ನಿಂದ ತಾನೇ ಗುಣಾವಾಗುವ ಕೊರೊನಾ ರೋಗಕ್ಕೆ ‘ಮಹಾಮಾರಿ’ ಎಂದು ಮೂರ್ಖ ಹೆಸರು ಇಟ್ಟಿರುವುದು ಹಾಸ್ಯಾಸ್ಪದ ಅಲ್ಲವೇ!  

- Advertisement -
- Advertisement -

ಕೊರೊನಾ ಕಾಲದಲ್ಲಿ ಬೀರಬಲ್ಲನ ಈ ಕಥೆ ತುಂಬಾ ಪ್ರಸ್ತುತ. ಒಮ್ಮೆ ಅಕ್ಬರನ ಆಸ್ಥಾನದಲ್ಲಿ ಬೀರಬಲ್ಲ ನೆಲದ ಮೇಲೆ ಒಂದು ಗೆರೆ ಎಳೆದು– ಈ ಗೆರೆ ಉದ್ದವಿದೆಯೋ ಅಥವಾ ಗಿಡ್ಡವಿದೆಯೋ ಎಂದು ಕೇಳಿದ. ಕೆಲವರು ಅದು ‘ಉದ್ದ ಗೆರೆ’ ಎಂದರೆ ಕೆಲವರು ಅದು ‘ಗಿಡ್ಡ ಗೆರೆ’ ಎಂದು ಹೇಳಿದರು. ಆಗ ಬೀರಬಲ್ಲ ಆ ಗೆರೆಯ ಪಕ್ಕದಲ್ಲಿ ಅದಕ್ಕಿಂತ ಚಿಕ್ಕ ಇನ್ನೊಂದು ಗೆರೆ ಎಳೆದು ಕೇಳಿದನಂತೆ ಈಗ ಹೇಳಿ ಮೊದಲಿನ ಗೆರೆ ಉದ್ದವೋ ಅಥವಾ ಗಿಡ್ಡವೋ ಎಂದು. ಆಗ ಎಲ್ಲರೂ ಒಮ್ಮತದಿಂದ ಅದು ಉದ್ದ ಗೆರೆ ಎಂದು ಹೇಳಿದರು. ಆನಂತರ ಬೀರಬಲ್ಲ ಆ ಗೆರೆಯ ಇನ್ನೊಂದು ಪಕ್ಕದಲ್ಲಿ ಅದಕ್ಕಿಂತ ಉದ್ದ ಗೆರೆ ಎಳೆದು ಕೇಳಿದನಂತೆ – ಈಗ ಹೇಳಿ ಮೊದಲಿನ ಗೆರೆ ಉದ್ದವೋ ಗಿಡ್ಡವೋ ಎಂದು. ಆಗ ಎಲ್ಲರೂ ಒಮ್ಮತದಿಂದ ಮೊದಲಿನ ಗೆರೆ ಗಿಡ್ಡ ಗೆರೆ ಎಂದು ಹೇಳಿದರು.  ಆಗ ಬೀರಬಲ್ಲ ಕೇಳಿದ- ಅದೇ ಗೆರೆಯನ್ನು ನೀವೆಲ್ಲಾ ಉದ್ದ ಗೆರೆ ಎಂದು ಮೊದಲು ಒಮ್ಮತದಿಂದ ಹೇಳಿದ್ದೀರಿ, ಆದರೆ ಈಗ ಅದೇ ಗೆರೆಯನ್ನು ಗಿಡ್ಡ ಗೆರೆ ಎಂದು ಹೇಳಿತ್ತಿರುವಿರಿ, ಅದು ಹೇಗೆ ಒಂದೇ ಗೆರೆ ಉದ್ದವೂ ಗಿಡ್ಡವೂ ಎರಡೂ ಆಗಿರಲು ಸಾಧ್ಯ?  ಆಗ ಸಭಿಕರು ಹೇಳಿದರು- ಅದು ಹೋಲಿಕೆಯಿಂದ ಮಾತ್ರ ಸಾಧ್ಯವಾಗಿದ್ದು ಎಂದು.

ಈಗ ಕೊರೊನಾ ವಿಷಯದಲ್ಲೂ ಅದೇ ಹೋಲಿಕೆ ಆಗಬೇಕಿದೆ. ಅಂದರೆ ಕೊರೊನಾದ ದೈನಂದಿನ ಅಂಕಿ ಸಂಖ್ಯೆಗಳೊಂದಿಗೆ ಇತರ ಸೋಂಕು ರೋಗಗಳ ಅಂಕಿಸಂಖ್ಯೆಯನ್ನೂ ಹೋಲಿಕೆ ಮಾಡಿ ಪತ್ರಿಕೆಗಳಲ್ಲಿ ಪ್ರಕಟಿಸಬೇಕು. ಆಗ ಜನರಿಗೆ ಗೊತ್ತಾಗುತ್ತದೆ- ಕೊರೊನಾ ಎಂಬ ಒಂದು ಸಾಧಾರಣ ನೆಗಡಿ ಜ್ವರವನ್ನು ಸುಮ್ಮನೆ ಮಹಾಮಾರಿ ಎಂದು ಹೇಳಿ ಇಡೀ ವಿಶ್ವವನ್ನೇ ಹೆದರಿಸಲಾಗಿದೆ ಎಂಬುದು. ಕೊರೋನಾದಿಂದ ಆಗಿರುವ ಸೋಂಕು, ಮರಣ, ಗುಣಮುಖ ಇವುಗಳ ಸಂಖ್ಯೆಯನ್ನು ಇತರ ಇಂತಹದ್ದೇ ಸೋಂಕು ರೋಗಗಳ ಅಂಕಿಸಂಖ್ಯೆಗಳೊಂದಿಗೆ ಹೊಲಿಸಿದರೆ ಮಾತ್ರ ಕೊರೋನಾವು ಕಾಳಿಂಗ ಹಾವೋ ಅಥವಾ ಒಂದು ನಿಷ್ಪಾಪ ಕೇರೇ ಹಾವೋ ಎಂದು ಗೊತ್ತಾಗಲು ಸಾಧ್ಯ.

ನಮ್ಮ ದೇಶದ ಆರೋಗ್ಯ ಇಲಾಖೆಯ ಅಂಕಿ ಅಂಶಗಳ ಪ್ರಕಾರ ಪ್ರತಿವರ್ಷ ನಮ್ಮ ದೇಶದಲ್ಲಿ ತೊಂಬತ್ತು ಲಕ್ಷಕ್ಕೂ ಹೆಚ್ಚು ಜನ ಸಾಯುತ್ತಾರೆ (ಮರಣ ಪ್ರಮಾಣ ಶೇ.0.73). ಅಂದರೆ ಪ್ರತಿದಿನ 25000 ಕ್ಕೂ ಹೆಚ್ಚು ಜನ ಸಾಯುತ್ತಾರೆ. ಅದರಲ್ಲಿ ಕನಿಷ್ಠ 15000 ಜನರಾದರೂ ಸಾಧಾರಣ ಸೋಂಕು ರೋಗಗಳಾದ ಮಲೇರಿಯಾ, ಡೆಂಗೀ, ಹಕ್ಕಿಜ್ವರ, ಎಬೋಲ, ಹೆಪಿಟೈಸ್ ಮುಂತಾದ ಸಾಂಕ್ರಾಮಿಕ ರೋಗಗಳಿಂದ ಸಾಯುತ್ತಾರೆ. ಈ 15000 ಜನರಲ್ಲಿ ಕೇವಲ 500 ಜನರು ಮಾತ್ರ ಕೊರೋನಾ ದಿಂದ ಸತ್ತರೆ ಅದು ಭಯಾನಕ ರೋಗ ಎಂದು ಕರೆಯುವುದು ಸರಿಯೇ? ಹಾಗಾದರೆ ಉಳಿದ 14 ಸಾವಿರ ಜನರನ್ನು ದಿನಾಲೂ ಕೊಲ್ಲುವ ಇತರ ಸಾಂಕ್ರಾಮಿಕ ರೋಗಗಳು ಮಾಹಾಮಾರಿ ಯಾಕಲ್ಲ? ಮೇಲಾಗಿ ಕೊರೊನಾ ಯಾರನ್ನೂ ಒಂಟಿಯಾಗಿ ಕೊಲ್ಲುವ ಸಾಮರ್ಥ್ಯ ಹೊಂದಿಲ್ಲ. ಅದು ಕೇವಲ ಮಧುಮೇಹ, ಬಿ‌ಪಿ, ಆಸ್ತಮಾ, ಕಿಡ್ನಿ ತೊಂದರೆ ಇದ್ದವರಿಗೆ ಮಾತ್ರ ಮಾರಕ ಆಗಬಲ್ಲದು. ಇಲ್ಲದಿದ್ದರೆ ಕೊರೋನಾ ಪೂರ್ಣ ನಿರುಪದ್ರವಿ.

ಹಾಗಾಗಿ ಬೀರಬಲ್ಲನ ಗೆರೆಯ ಕಥೆಯಂತೆ ಹೋಲಿಕೆ ಮಾಡಲು ದಿನಾಲೂ ಎಲ್ಲಾ ತರದ ಸೋಂಕು ರೋಗಗಳ ತುಲಾನಾತ್ಮಕ ಸಂಖ್ಯೆಯ ಚಾರ್ಟನ್ನು (ಹೊಸ ಸೋಂಕು, ಒಟ್ಟು ಸೋಂಕು, ಈ ದಿನದ ಮರಣ, ಒಟ್ಟು ಮರಣ, ಒಟ್ಟು ಗುಣಮುಖರಾದವರು) ಸರಕಾರವೇ ಪ್ರಕಟಿಸಿದರೆ ಜನರಿಗೆ ಕೊರೋನಾದ ನಾಟಕ ಸುಲಭವಾಗಿ ಅರ್ಥವಾಗುತ್ತದೆ, ಅದರಲ್ಲೂ “ಯಾವುದೇ ಔಷಧವಿಲ್ಲದೆ ಎಷ್ಟು ಕೊರೋನಾ ಸೋಂಕಿತರು ಗುಣಮುಖರಾದರು” ಎಂಬುದನ್ನೂ ತಪ್ಪದೇ ಬರೆಯಬೇಕು. ಕೊರೋನಾ ಸೋಂಕಿತರಲ್ಲಿ ಕೇವಲ ಶೇ.2 ಜನ ಮಾತ್ರ ಸಾಯುತ್ತಾರೆ ಹಾಗೂ ಶೇ.98 ಸೋಂಕಿತರು ಸುಲಭವಾಗಿ ಗುಣಮುಖರಾಗುತ್ತಾರೆ ಎಂಬ ಸತ್ಯವನ್ನು ಮಾಧ್ಯಮಗಳು ಉದ್ದೇಶಪೂರ್ವಕವಾಗಿ ಪ್ರಕಟಿಸುತ್ತಿಲ್ಲ. ಇದಕ್ಕೆ ಹೋಲಿಸಿದರೆ ಇತರ ಸೋಂಕು ರೋಗಗಳಿಂದ ಶೇ.10 ರಿಂದ 15  ಸೋಂಕಿತರು ಸಾಯುತ್ತಾರೆ. ಜನರನ್ನು ಮೂರ್ಖರನ್ನಾಗಿಸಲು “ಏಸಿಂಪ್ಟೋಮ್ಯಟಿಕ್” (ಗುಣಲಕ್ಷಣ ರಹಿತ ರೋಗ) ಎಂಬ ಪಾರಿಭಾಷಿಕ ಶಬ್ಧವನ್ನು ಹುಟ್ಟು ಹಾಕಲಾಗಿದೆ. ಇದರಿಂದಾಗಿ ಸೈಕಲ್ ನಿಂದ ಬಿದ್ದು ಆದ ಸಣ್ಣ ಗಾಯಕ್ಕೆ ಬ್ಯಾಂಡೇಜ್ ಮಾಡಲು ಡಾಕ್ಟರರಲ್ಲಿ ಹೋದರೂ ಅವರು ಜಬರ್ದಸ್ತಿ ಕೊರೋನಾ ಟೆಸ್ಟ್ ಮಾಡಿಸಿ ಭಾರಿ ಬಿಲ್ ಹಾಕುತ್ತಾರೆ.
ಕೊರೋನಾ ಹೊಸ ರೋಗವಾದರೆ 25 ವರ್ಷಗಳಿಂದಲೂ ಡೆಟ್ಟಾಲ್ ಬಾಟಲ್ ಮೇಲೆ ಬರೆಯುತ್ತಿರುವ ರೋಗಗಳ ಲಿಸ್ಟ್ ನಲ್ಲಿ ಕೊರೋನಾ ವೈರಸ್ ಹೆಸರು ಹೇಗೆ ಬಂತು? ಚೀನಾದಲ್ಲಿ ಈ ರೋಗ ಹುಟ್ಟಿದ್ದರೆ ಚೀನಿ ಹೆಸರಿನ ಬದಲು ಇಂಗ್ಲಿಷ್ ಹೆಸರು ಯಾಕಿದೆ?

ಕಳೆದ ವರ್ಷ ಜುಲೈ ತಿಂಗಳಲ್ಲಿಯೇ ನನ್ನ 82 ವರ್ಷದ ಮಾವ ಮೊದಲು ಶೀತ ಜ್ವರ ಆಗಿ ನಂತರ ಅದು ನಿಮೋನಿಯಾಕ್ಕೆ ತಿರುಗಿ ಅವರು ತೀರಿಕೊಂಡರು. ನಮ್ಮ ಹಳ್ಳಿಯ ಮನೆಯ ಎದುರಿನ ಗದ್ದೆಯಲ್ಲಿಯೇ ಅವರ ಅಂತ್ಯಕ್ರಿಯೆ ಮಾಡಲಾಯಿತು.  ಒಂದು ವೇಳೆ ಅವರು ಈ ವರ್ಷ ತೀರಿಕೊಳ್ಳುತ್ತಿದ್ದರೆ ಆಗ ಜಿಲ್ಲಾಡಳಿತ ಮತ್ತು ಹಳ್ಳಿಯ ಜನ ಎಷ್ಟು ನಾಟಕ ಆಡುತ್ತಿದ್ದರೋ ಏನೋ!?  ಪೊಲೀಸರು ಇಡೀ ಹಳ್ಳಿಯನ್ನೇ ಸೀಲ್ ಡೌನ್ ಮಾಡುತ್ತಿದ್ದರು. ಎಲ್ಲರಿಗೂ ಕ್ವಾರಂಟೈನ್ ಮಾಡುತ್ತಿದ್ದರು. ಎಲ್ಲಕ್ಕಿಂತ ಮಿಗಿಲಾಗಿ ಮನೆಯ ಮುಂದಿನ ಗದ್ದೆಯಲ್ಲಿ ಅವರ ಶವ ಸುಡುವುದಕ್ಕೆ ಸ್ವಕುಟುಂಬದವರ ಸಹಿತ ಹಳ್ಳಿಯವರೆಲ್ಲಾ ಆಕ್ಷೇಪ ಎತ್ತಿ ರಂಪ ಮಾಡುತ್ತಿದ್ದರು. ಶವವನ್ನು ದುಬಾರಿ ಪ್ಲಾಸ್ಟಿಕ್ ನಲ್ಲಿ ಸುತ್ತಿ ಜೆ‌ಸಿ‌ಬಿ ಯಲ್ಲಿ ಕೊಂಡೊಯ್ದು ಹತ್ತು ಅಡಿ ಆಳದಲ್ಲಿ ಹೂಳುತ್ತಿದ್ದರು.  ಶೀತ ಜ್ವರ, ವೈರಲ್ ಫೀವರ್, ನಿಮೋನಿಯಾದಿಂದ ಹಿಂದಿನ 10 ವರ್ಷಗಳಿಂದ ಎಷ್ಟು ಜನ ಸತ್ತಿದ್ದಾರೆ ಎಂದು ಸರಕಾರ ಅಂಕಿಸಂಖ್ಯೆ ಪ್ರಕಟಿಸಿದರೆ ಗೊತ್ತಾಗುತ್ತದೆ – ಈ ಕೊರೋನಾ ಹೊಸ ರೋಗ ಅಲ್ಲ ಅದು ಹಿಂದಿನ ಅನೇಕ ವರ್ಷಗಳಿಂದ ನಮ್ಮನ್ನು ಪೀಡಿಸುತ್ತಿದೆ ಹಾಗೂ ಈ ವರ್ಷಕ್ಕಿಂತ ಹೆಚ್ಚು ಜನರನ್ನು ಅದು ಹಿಂದಿನ ವರ್ಷಗಳಲ್ಲಿ ಆಹುತಿ ಪಡೆದಿದೆ ಎಂಬುದು!.

ಏಪ್ರಿಲ್ ಲಾಕ್ ಡೌನ್ ಮುಗಿದ ನಂತರ ಲಕ್ಷಾಂತರ ವಲಸೆ ಕಾರ್ಮಿಕರು ಕಾಲ್ನಡಿಗೆಯಲ್ಲಿಯೇ ಮುಂಬೈ ಮತ್ತು ಗುಜರಾತ್ ನಿಂದ ಬಿಹಾರಕ್ಕೆ ಹೋದರು. ಮುಂಬೈ ಮತ್ತು ಗುಜರಾತ್ ಕೊರೋನಾ ಹಾಟ್ ಸ್ಪಾಟ್ ಆಗಿದ್ದರೂ ಈ ಲಕ್ಷಾಂತರ ವಲಸೆ ಕಾರ್ಮಿಕರಲ್ಲಿ ಯಾರಿಗೂ ಯಾಕೆ ಕೊರೋನಾ ಸೋಂಕು ಇದ್ದ ಸುದ್ದಿ ಬರಲಿಲ್ಲ ಗೊತ್ತೇ?  ಯಾಕೆಂದರೆ ಬಡ ಕಾರ್ಮಿಕರಲ್ಲಿ ಸುಲಿಯಲು ಹಣ ಇಲ್ಲ ಎಂದು ಡಾಕ್ಟರ್ ಗಳಿಗೆ ಗೊತ್ತಿತ್ತು! ಹಾಗಾಗಿ ಅವರೆಲ್ಲಾ ಕೊರೋನಾ ನೆಗೆಟಿವ್ ಆದರು. ಯಾವುದೇ ಔಷಧಿ ಕೊಡದೇ ಶೇ.60 ಸೋಂಕಿತರಲ್ಲಿ ತನ್ನಿಂದ ತಾನೇ ಗುಣಾವಾಗುವ ಕೊರೊನಾ ರೋಗಕ್ಕೆ ‘ಮಹಾಮಾರಿ’ ಎಂದು ಮೂರ್ಖ ಹೆಸರು ಇಟ್ಟಿರುವುದು ಹಾಸ್ಯಾಸ್ಪದ ಅಲ್ಲವೇ!

ಬೇರೆ ದಿನಗಳಲ್ಲಿ 12 ಗಂಟೆ ಅಂಗಡಿಗಳು ತೆರೆದಿರುವುದರಿಂದ ದಿನಸಿ ಸಾಮಾನು ಕೊಳ್ಳಲು ಜನ ಮುಗಿಬೀಳುವುದಿಲ್ಲ. ಹಾಗಾಗಿ ಸೋಂಕು ಹರಡುವುದಿಲ್ಲ. ಆದರೆ ಲಾಕ್ ಡೌನ್ ಹೇರಿದಾಗ ಕೇವಲ ಮೂರು ಗಂಟೆ ತೆರೆದಿರುವ ಅಂಗಡಿಗೆ ಸಾಮಾನು ಕೊಳ್ಳಲು ಜನರು ಮುಗಿಬೀಳುವುದರಿಂದ ಸೋಂಕು ಹರಡುವ ಸಾಧ್ಯತೆ ಹತ್ತು ಪಟ್ಟು ಹೆಚ್ಚುತ್ತದೆ ಎಂಬುದನ್ನೂ ಆರೋಗ್ಯ ತಜ್ಞರೇ ಖಚಿತ ಪಡಿಸಿದ್ದಾರೆ. ಹಾಗಾದರೆ ಲಾಕ್ ಡೌನ್ ಯಾವ ಕರ್ಮಕ್ಕೆ?  ಲಾಕ್ ಡೌನ್ ಕೇವಲ ನಮ್ಮ ದೇಶದ ಆರ್ಥಿಕತೆಯನ್ನು ಕೊಂದಿದ್ದು ನಿಜ. ಅರೆಸಾಕ್ಷರರೇ ನಮ್ಮ ದೇಶವನ್ನು ಆಳುತ್ತಿರುವಾಗ ಇಂತಹಾ ಘೋರ ತಪ್ಪುಗಳು ಸ್ವಾಭಾವಿಕ.

ಪ್ರವೀಣ್ ಎಸ್ ಶೆಟ್ಟಿ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...