Homeಮುಖಪುಟಕೊರೋನಾ ಭೀತಿ: ರಾಜ್ಯ ಲಾಕ್‌ಡೌನ್ ಆದ್ರೆ ನಮ್ ಜೀವನ ಹೆಂಗೆ? ಆಟೋ ಚಾಲಕರ ಪ್ರಶ್ನೆ

ಕೊರೋನಾ ಭೀತಿ: ರಾಜ್ಯ ಲಾಕ್‌ಡೌನ್ ಆದ್ರೆ ನಮ್ ಜೀವನ ಹೆಂಗೆ? ಆಟೋ ಚಾಲಕರ ಪ್ರಶ್ನೆ

ಕೇರಳದಲ್ಲಿ ಎಲ್ಲರಿಗೂ ಅನುಕೂಲ ಮಾಡಿಕೊಟ್ಟೌರೆ. ಆಟೋದೋರು ಸಾಲ ಮಾಡಿದ್ರೆ ಸಾಲದ ಮೇಲಿನ ಸೇವಾ ಶುಲ್ಕ ರದ್ದು ಮಾಡಿದೆ. ಆದರೆ ನಮ್ಮ ರಾಜ್ಯದಲ್ಲಿ?

- Advertisement -
- Advertisement -

ಸರ್, ನಿಲ್ಲಿ ಅಂದ್ರು ಒಬ್ಬರು ಆಟೋ ಚಾಲಕರು. ಅವರು ನನಗೆ ಹಲವು ವರ್ಷಗಳಿಂದ ಪರಿಚಯಸ್ಥರು. ನೀವೇನೋ ಹೆಂಗೋ ಜೀವನ ನಡೆಸ್ತೀರ. ನಾವ್ ಹೆಂಗ್ ಮಾಡೋದೋ ಗೊತ್ತಾಗುತ್ತಿಲ್ಲ. ಒಂದಲ್ಲ, ಎರಡಲ್ಲ ಒಂದು ವಾರ್ ರಾಜ್ಯ ಲಾಕ್ ಡೌನ್ ಆಗುತ್ತಂತೆ. ನಮ್ಮ ದುಡಿಮೆಗೆ ಪೆಟ್ಟು ಬಿತ್ತು. ಅವೊತ್ತಿನ ದುಡಿಮೆಯಿಂದ ಅಂದು ಜೀವನ ನಡೆಸುತ್ತಿದ್ವಿ. ಈಗ ಮುಖ್ಯಮಂತ್ರಿ ನಾವೇನೂ ಮಾಡೋಕಾಗಲ್ಲ. ಲಾಕ್ ಡೌನ್ ಮಾಡ್ತೀವಿ ಅಂತಿದ್ದಾರೆ ಎಂದು ಅಳಲು ತೋಡಿಕೊಂಡರು. ಅವರ ಮುಖದಲ್ಲಿ ಆತಂಕ ಮನೆ ಮಾಡಿತ್ತು. ನೋವು ತೋಡಿಕೊಳ್ಳಲು ಅವರಿಗೆ ಒಬ್ಬರು ಬೇಕಿತ್ತು. ಅದೇ ಕಾರಣಕ್ಕೆ ನನ್ನ ಬಳಿ ಅಳಲು ತೋಡಿಕೊಂಡರು.

ನೋಡಿ ಸರ್, ಕೇರಳದಲ್ಲಿ ಎಲ್ಲರಿಗೂ ಅನುಕೂಲ ಮಾಡಿಕೊಟ್ಟೌರೆ. ಆಟೋದೋರು ಸಾಲ ಮಾಡಿದ್ರೆ ಸಾಲದ ಮೇಲಿನ ಸೇವಾ ಶುಲ್ಕ ರದ್ದು ಮಾಡಿದೆ. ಅಲ್ಲಿನ ಮುಖ್ಯಮಂತ್ರಿಗಳು ಬಡವರಿಗೆ ಎರಡು ತಿಂಗಳು ಮೊದಲೇ ದವಸ ಧಾನ್ಯ ಕೊಟ್ಟಿದ್ದಾರೆ. ಬಡವರಿಗೆ ಊಟ ಕೊಡ್ತಾರೆ. ನಮ್ಮಲ್ಲಿ ಮುಖ್ಯಮಂತ್ರಿಗಳು ಅಂತ ಕ್ರಮಗಳನ್ನು ಕೈಗೊಂಡಿಲ್ಲ. ಲಾಕ್ ಡೌನ್ ಅಂದ್ರ ಸುಮ್ನೆನೇ. ಆಟೋದವ್ರು ದುಡಿಮೆ ನಿಮಗೆ ಗೊತ್ತಲ್ಲ. ಮನೆ ಬಾಡಿಗೆ ಏನು ಮಾಡ್ಬೇಕು. ಸರ್, ಮನೆ ಓನರ್ ಎರಡು ತಿಂಗಳ ಬಾಡಿಗೆ ಮೊದ್ಲೇ ಹಾಕಿ ಅಂದ್ರು. ಹಾಕಿದೆ. ನಾನು ಮರು ಮಾತಾಡಲಿಲ್ಲ.ನಮ್ ಜೀವನ ನಡೆಯೋದು ಹೆಂಗೆ, ಏನೋ ನಮ್ ಗ್ರಹಚಾರ ಸರಿಯಿಲ್ಲ ಅಂದ್ರು.

ಇದು ಕೇವಲ ಒಬ್ಬ ಆಟೋ ಚಾಲಕರ ಪ್ರಶ್ನೆಯಲ್ಲ. ಎಲ್ಲಾ ಆಟೋ ಚಾಲಕರ ನೋವು ಆಗಿದೆ.  ನಗರದ ಜೀವ ದಂತೆ ಕೆಲಸ ಮಾಡುತ್ತಿದ್ದ ಆಟೋಗಳು ರಸ್ತೆಗೆ ಇಳಿಯುವಂತಿಲ್ಲ ಎಂಬ ಮಾತು ಕೇಳಿಬರುತ್ತಿರುವುದರಿಂದ ಆಟೋ ಚಾಲಕರ ಬದುಕು ಸಂಪೂರ್ಣ ಸ್ಥಬ್ದವಾಗಲಿದೆ. ದುಡಿಯುವವರು ಮನೆಯಲ್ಲಿ ಕೂತರೆ ಉಣ್ಣುವ ಕೈ ಏನು ಮಾಡಬೇಕು. ಮಕ್ಕಳ ಖರ್ಚು ವೆಚ್ಚ, ಮನೆ ಬಾಡಿಗೆ ಹೊಂದಿಸುವುದು ಹೇಗೆಂಬ ಪ್ರಶ್ನೆ ಬೃಹದಾಕಾರವಾಗಿ ಕಾಡತೊಡಗಿದೆ.

ನಾನುಗೌರಿ.ಕಾಮ್ ಜೊತೆ ಮಾತನಾಡಿದ ಸಿಪಿಎಂ ಮುಖಂಡ ಕೆ.ಎನ್.ಉಮೇಶ್, ಕೊರೊನ ವೈರಸ್ ಹರಡುತ್ತಿರುವುದರಿಂದ ಆಟೋಚಾಲಕರು ಸೇರಿದಂತೆ ಅಸಂಘಟಿತ ವಲಯದ ಕಾರ್ಮಿಕರ ಬದುಕು ದುಸ್ಥರ ವಾಗಲಿದೆ. ಹೀಗಾಗಿ ಆಟೋ ಚಾಲಕರ ಪ್ರತಿಯೊಬ್ಬರ ಖಾತೆಗೆ 6 ಸಾವಿರ ಹಣ ಹಾಕಬೇಕು. ಕಟ್ಟಬೇಕಾದ ಇಎಂಐಗಳನ್ನು ಮುಂದೂಡಬೇಕು. ಆಟೋಚಾಲಕರ ಬಡ್ಡಿ ಮನ್ನಾ ಮಾಡಬೇಕು. ಇದೆಲ್ಲವನ್ನೂ ಅಸಂಘಟಿತ ವಲಯದ ಭದ್ರತ ಮಂಡಳಿಯಿಂದ ಕೊಡಬೇಕು. ಆಟೋಚಾಲಕರು ಸೇರಿದಂತೆ ಎಲ್ಲಾ ಅಸಂಘಟಿತರಿಗೆ ಉಚಿತ ರೇಷನ್ ಕೊಡಬೇಕು. ಯುವಕರಿಗೆ ನಿರುದ್ಯೋಗ ಭತ್ಯ ಕೊಡಬೇಕು ಎಂದು ಒತ್ತಾಯಿಸಿದರು.

ಕೊರೊನ ರೋಗ ಹರಡುತ್ತಿರುವುದರಿಂದ ಅಸಂಘಟಿತ ಕಾರ್ಮಿಕರ ಬದುಕು ದಿಕ್ಕಾಪಾಲಾಗಿದೆ. ಬೀದಿಬದಿ ವ್ಯಾಪಾರಿಗಳು ಮೀಟರ್ ಬಡ್ಡಿಗೆ ಸಾಲ ತಂದು ವ್ಯಾಪಾರ ಮಾಡುತ್ತಾರೆ. ಆಟೋ ಚಾಲಕರು ಬಾಡಿಗೆ ಮೇಲೆ ಆಟೋವನ್ನು ರಸ್ತೆಗೆ ಇಳಿಸಿರುತ್ತಾರೆ. ಆಟೋ ರಸ್ತೆಗೆ ಇಳಿಯದಿದ್ದರೆ ಬಾಡಿಗೆ ಪಡೆಯುತ್ತಿದ್ದ ಚಾಲಕರು ಹೊಟ್ಟೆಗೆ ತಣ್ಣೀರು ಬಟ್ಟೆ ಹಾಕಿಕೊಳ್ಳುವಂತಹ ಪರಿಸ್ಥಿತಿ ನಿರ್ಮಾಣವಾಗಲಿದೆ. ಆಟೋಚಾಲಕರು ಹಲವು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಅವರಿಗೆ ಬೇರೆ ದುಡಿಯುವ ಮಾರ್ಗವಿಲ್ಲ. ಬೆಳಗಿನಿಂದ ಸಂಜೆಯವರೆಗೂ ಆಟೋ ಓಡಿಸಿಯೇ ಬದುಕಿನ ಬಂಡಿ ನಡೆಸಬೇಕು. ಇಲ್ಲದಿದ್ದರೆ ಅವರ ಪಾಡು ಹೇಳತೀರದು.

ಸಾಮಾನ್ಯ ಸಂದರ್ಭದಲ್ಲಿ ಒಂದು ದಿನ ನಡೆಯುವ ಮುಷ್ಕರ, ಬಂದ್‌ ಸಮಯದಲ್ಲೇ ಆಟೋ ಓಡಿಸದಿದ್ದರೆ ಸಂಕಷ್ಟಗಳನ್ನು ಎದುರಿಸುತ್ತೇವೆ. ಇನ್ನು ಒಂದು ವಾರ ಆಟೋಗಳನ್ನು ರಸ್ತೆಗೆ ಇಳಿಸದಿದ್ದರೆ ಬದುಕು ನಡೆಸುವುದು ಕಷ್ಟಕರ. ಕುಟುಂಬ ನಿರ್ವಹಣೆಗೆ ತೊಂದರೆಯಾಗಲಿದೆ. ನಗರಗಳಲ್ಲಿ ಪ್ರತಿನಿತ್ಯವೂ ಒಂದಲ್ಲ ಒಂದು ವಸ್ತುವನ್ನು ಕೊಳ್ಳಲೇಬೇಕು. ಅದಕ್ಕೆ ಹಣ ಬೇಕು. ದುಡಿಮೆ ಇಲ್ಲದಿದ್ದರೆ ದಿನಸಿ ವಸ್ತುಗಳನ್ನು ಖರೀದಿಸುವುದು ಹೇಗೆ? ಒಂದು ವಾರ ಆಟೋ ಇಳಿಯದಿದ್ದರೆ ಆಟೋಗಳು ಕೆಡುತ್ತವೆ ಎಂದು ಆಟೋಚಾಲಕ ಗಿರೀಶ್ ನೋವು ತೋಡಿಕೊಂಡರು.

ಸರ್ಕಾರಗಳು ಆರಂಭದಲ್ಲೇ ಮುನ್ನೆಚ್ಚರಿಕೆ ಕ್ರಮಗಳನ್ನು ವಹಿಸಬೇಕಿತ್ತು. ವಿದೇಶಗಳಿಂದ ಬರುತ್ತಿರುವವರನ್ನು ಮೊದಲೇ ಪ್ರತ್ಯೇಕವಾಗಿ ಇಡುವಂತಹ ವ್ಯವಸ್ಥೆ ಮಾಡಿದ್ದರೆ ಇಂತಹ ಸಮಸ್ಯೆ ಬರುತ್ತಿರಲಿಲ್ಲ. ಊರು ಹಾಳಾದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎನ್ನುವಂತೆ ದೇಶದಲ್ಲಿ ಕೊರೊನ ರೋಗ ಹರಡಿದ ಮೇಲೆ ಕ್ರಮ ಕೈಗೊಂಡರೆ ರೋಗವನ್ನು ನಿಯಂತ್ರಿಸಲು ಸಾಧ್ಯವೇ ಎಂಬ ಪ್ರಶ್ನೆಗಳು ಸಾರ್ವಜನಿಕರಿಂದ ಕೇಳಿಬರುತ್ತಿವೆ.

ಇದನ್ನೂ ಓದಿ:

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...