Homeಮುಖಪುಟಕೊರೋನಾ ಭೀತಿ: ರಾಜ್ಯ ಲಾಕ್‌ಡೌನ್ ಆದ್ರೆ ನಮ್ ಜೀವನ ಹೆಂಗೆ? ಆಟೋ ಚಾಲಕರ ಪ್ರಶ್ನೆ

ಕೊರೋನಾ ಭೀತಿ: ರಾಜ್ಯ ಲಾಕ್‌ಡೌನ್ ಆದ್ರೆ ನಮ್ ಜೀವನ ಹೆಂಗೆ? ಆಟೋ ಚಾಲಕರ ಪ್ರಶ್ನೆ

ಕೇರಳದಲ್ಲಿ ಎಲ್ಲರಿಗೂ ಅನುಕೂಲ ಮಾಡಿಕೊಟ್ಟೌರೆ. ಆಟೋದೋರು ಸಾಲ ಮಾಡಿದ್ರೆ ಸಾಲದ ಮೇಲಿನ ಸೇವಾ ಶುಲ್ಕ ರದ್ದು ಮಾಡಿದೆ. ಆದರೆ ನಮ್ಮ ರಾಜ್ಯದಲ್ಲಿ?

- Advertisement -
- Advertisement -

ಸರ್, ನಿಲ್ಲಿ ಅಂದ್ರು ಒಬ್ಬರು ಆಟೋ ಚಾಲಕರು. ಅವರು ನನಗೆ ಹಲವು ವರ್ಷಗಳಿಂದ ಪರಿಚಯಸ್ಥರು. ನೀವೇನೋ ಹೆಂಗೋ ಜೀವನ ನಡೆಸ್ತೀರ. ನಾವ್ ಹೆಂಗ್ ಮಾಡೋದೋ ಗೊತ್ತಾಗುತ್ತಿಲ್ಲ. ಒಂದಲ್ಲ, ಎರಡಲ್ಲ ಒಂದು ವಾರ್ ರಾಜ್ಯ ಲಾಕ್ ಡೌನ್ ಆಗುತ್ತಂತೆ. ನಮ್ಮ ದುಡಿಮೆಗೆ ಪೆಟ್ಟು ಬಿತ್ತು. ಅವೊತ್ತಿನ ದುಡಿಮೆಯಿಂದ ಅಂದು ಜೀವನ ನಡೆಸುತ್ತಿದ್ವಿ. ಈಗ ಮುಖ್ಯಮಂತ್ರಿ ನಾವೇನೂ ಮಾಡೋಕಾಗಲ್ಲ. ಲಾಕ್ ಡೌನ್ ಮಾಡ್ತೀವಿ ಅಂತಿದ್ದಾರೆ ಎಂದು ಅಳಲು ತೋಡಿಕೊಂಡರು. ಅವರ ಮುಖದಲ್ಲಿ ಆತಂಕ ಮನೆ ಮಾಡಿತ್ತು. ನೋವು ತೋಡಿಕೊಳ್ಳಲು ಅವರಿಗೆ ಒಬ್ಬರು ಬೇಕಿತ್ತು. ಅದೇ ಕಾರಣಕ್ಕೆ ನನ್ನ ಬಳಿ ಅಳಲು ತೋಡಿಕೊಂಡರು.

ನೋಡಿ ಸರ್, ಕೇರಳದಲ್ಲಿ ಎಲ್ಲರಿಗೂ ಅನುಕೂಲ ಮಾಡಿಕೊಟ್ಟೌರೆ. ಆಟೋದೋರು ಸಾಲ ಮಾಡಿದ್ರೆ ಸಾಲದ ಮೇಲಿನ ಸೇವಾ ಶುಲ್ಕ ರದ್ದು ಮಾಡಿದೆ. ಅಲ್ಲಿನ ಮುಖ್ಯಮಂತ್ರಿಗಳು ಬಡವರಿಗೆ ಎರಡು ತಿಂಗಳು ಮೊದಲೇ ದವಸ ಧಾನ್ಯ ಕೊಟ್ಟಿದ್ದಾರೆ. ಬಡವರಿಗೆ ಊಟ ಕೊಡ್ತಾರೆ. ನಮ್ಮಲ್ಲಿ ಮುಖ್ಯಮಂತ್ರಿಗಳು ಅಂತ ಕ್ರಮಗಳನ್ನು ಕೈಗೊಂಡಿಲ್ಲ. ಲಾಕ್ ಡೌನ್ ಅಂದ್ರ ಸುಮ್ನೆನೇ. ಆಟೋದವ್ರು ದುಡಿಮೆ ನಿಮಗೆ ಗೊತ್ತಲ್ಲ. ಮನೆ ಬಾಡಿಗೆ ಏನು ಮಾಡ್ಬೇಕು. ಸರ್, ಮನೆ ಓನರ್ ಎರಡು ತಿಂಗಳ ಬಾಡಿಗೆ ಮೊದ್ಲೇ ಹಾಕಿ ಅಂದ್ರು. ಹಾಕಿದೆ. ನಾನು ಮರು ಮಾತಾಡಲಿಲ್ಲ.ನಮ್ ಜೀವನ ನಡೆಯೋದು ಹೆಂಗೆ, ಏನೋ ನಮ್ ಗ್ರಹಚಾರ ಸರಿಯಿಲ್ಲ ಅಂದ್ರು.

ಇದು ಕೇವಲ ಒಬ್ಬ ಆಟೋ ಚಾಲಕರ ಪ್ರಶ್ನೆಯಲ್ಲ. ಎಲ್ಲಾ ಆಟೋ ಚಾಲಕರ ನೋವು ಆಗಿದೆ.  ನಗರದ ಜೀವ ದಂತೆ ಕೆಲಸ ಮಾಡುತ್ತಿದ್ದ ಆಟೋಗಳು ರಸ್ತೆಗೆ ಇಳಿಯುವಂತಿಲ್ಲ ಎಂಬ ಮಾತು ಕೇಳಿಬರುತ್ತಿರುವುದರಿಂದ ಆಟೋ ಚಾಲಕರ ಬದುಕು ಸಂಪೂರ್ಣ ಸ್ಥಬ್ದವಾಗಲಿದೆ. ದುಡಿಯುವವರು ಮನೆಯಲ್ಲಿ ಕೂತರೆ ಉಣ್ಣುವ ಕೈ ಏನು ಮಾಡಬೇಕು. ಮಕ್ಕಳ ಖರ್ಚು ವೆಚ್ಚ, ಮನೆ ಬಾಡಿಗೆ ಹೊಂದಿಸುವುದು ಹೇಗೆಂಬ ಪ್ರಶ್ನೆ ಬೃಹದಾಕಾರವಾಗಿ ಕಾಡತೊಡಗಿದೆ.

ನಾನುಗೌರಿ.ಕಾಮ್ ಜೊತೆ ಮಾತನಾಡಿದ ಸಿಪಿಎಂ ಮುಖಂಡ ಕೆ.ಎನ್.ಉಮೇಶ್, ಕೊರೊನ ವೈರಸ್ ಹರಡುತ್ತಿರುವುದರಿಂದ ಆಟೋಚಾಲಕರು ಸೇರಿದಂತೆ ಅಸಂಘಟಿತ ವಲಯದ ಕಾರ್ಮಿಕರ ಬದುಕು ದುಸ್ಥರ ವಾಗಲಿದೆ. ಹೀಗಾಗಿ ಆಟೋ ಚಾಲಕರ ಪ್ರತಿಯೊಬ್ಬರ ಖಾತೆಗೆ 6 ಸಾವಿರ ಹಣ ಹಾಕಬೇಕು. ಕಟ್ಟಬೇಕಾದ ಇಎಂಐಗಳನ್ನು ಮುಂದೂಡಬೇಕು. ಆಟೋಚಾಲಕರ ಬಡ್ಡಿ ಮನ್ನಾ ಮಾಡಬೇಕು. ಇದೆಲ್ಲವನ್ನೂ ಅಸಂಘಟಿತ ವಲಯದ ಭದ್ರತ ಮಂಡಳಿಯಿಂದ ಕೊಡಬೇಕು. ಆಟೋಚಾಲಕರು ಸೇರಿದಂತೆ ಎಲ್ಲಾ ಅಸಂಘಟಿತರಿಗೆ ಉಚಿತ ರೇಷನ್ ಕೊಡಬೇಕು. ಯುವಕರಿಗೆ ನಿರುದ್ಯೋಗ ಭತ್ಯ ಕೊಡಬೇಕು ಎಂದು ಒತ್ತಾಯಿಸಿದರು.

ಕೊರೊನ ರೋಗ ಹರಡುತ್ತಿರುವುದರಿಂದ ಅಸಂಘಟಿತ ಕಾರ್ಮಿಕರ ಬದುಕು ದಿಕ್ಕಾಪಾಲಾಗಿದೆ. ಬೀದಿಬದಿ ವ್ಯಾಪಾರಿಗಳು ಮೀಟರ್ ಬಡ್ಡಿಗೆ ಸಾಲ ತಂದು ವ್ಯಾಪಾರ ಮಾಡುತ್ತಾರೆ. ಆಟೋ ಚಾಲಕರು ಬಾಡಿಗೆ ಮೇಲೆ ಆಟೋವನ್ನು ರಸ್ತೆಗೆ ಇಳಿಸಿರುತ್ತಾರೆ. ಆಟೋ ರಸ್ತೆಗೆ ಇಳಿಯದಿದ್ದರೆ ಬಾಡಿಗೆ ಪಡೆಯುತ್ತಿದ್ದ ಚಾಲಕರು ಹೊಟ್ಟೆಗೆ ತಣ್ಣೀರು ಬಟ್ಟೆ ಹಾಕಿಕೊಳ್ಳುವಂತಹ ಪರಿಸ್ಥಿತಿ ನಿರ್ಮಾಣವಾಗಲಿದೆ. ಆಟೋಚಾಲಕರು ಹಲವು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಅವರಿಗೆ ಬೇರೆ ದುಡಿಯುವ ಮಾರ್ಗವಿಲ್ಲ. ಬೆಳಗಿನಿಂದ ಸಂಜೆಯವರೆಗೂ ಆಟೋ ಓಡಿಸಿಯೇ ಬದುಕಿನ ಬಂಡಿ ನಡೆಸಬೇಕು. ಇಲ್ಲದಿದ್ದರೆ ಅವರ ಪಾಡು ಹೇಳತೀರದು.

ಸಾಮಾನ್ಯ ಸಂದರ್ಭದಲ್ಲಿ ಒಂದು ದಿನ ನಡೆಯುವ ಮುಷ್ಕರ, ಬಂದ್‌ ಸಮಯದಲ್ಲೇ ಆಟೋ ಓಡಿಸದಿದ್ದರೆ ಸಂಕಷ್ಟಗಳನ್ನು ಎದುರಿಸುತ್ತೇವೆ. ಇನ್ನು ಒಂದು ವಾರ ಆಟೋಗಳನ್ನು ರಸ್ತೆಗೆ ಇಳಿಸದಿದ್ದರೆ ಬದುಕು ನಡೆಸುವುದು ಕಷ್ಟಕರ. ಕುಟುಂಬ ನಿರ್ವಹಣೆಗೆ ತೊಂದರೆಯಾಗಲಿದೆ. ನಗರಗಳಲ್ಲಿ ಪ್ರತಿನಿತ್ಯವೂ ಒಂದಲ್ಲ ಒಂದು ವಸ್ತುವನ್ನು ಕೊಳ್ಳಲೇಬೇಕು. ಅದಕ್ಕೆ ಹಣ ಬೇಕು. ದುಡಿಮೆ ಇಲ್ಲದಿದ್ದರೆ ದಿನಸಿ ವಸ್ತುಗಳನ್ನು ಖರೀದಿಸುವುದು ಹೇಗೆ? ಒಂದು ವಾರ ಆಟೋ ಇಳಿಯದಿದ್ದರೆ ಆಟೋಗಳು ಕೆಡುತ್ತವೆ ಎಂದು ಆಟೋಚಾಲಕ ಗಿರೀಶ್ ನೋವು ತೋಡಿಕೊಂಡರು.

ಸರ್ಕಾರಗಳು ಆರಂಭದಲ್ಲೇ ಮುನ್ನೆಚ್ಚರಿಕೆ ಕ್ರಮಗಳನ್ನು ವಹಿಸಬೇಕಿತ್ತು. ವಿದೇಶಗಳಿಂದ ಬರುತ್ತಿರುವವರನ್ನು ಮೊದಲೇ ಪ್ರತ್ಯೇಕವಾಗಿ ಇಡುವಂತಹ ವ್ಯವಸ್ಥೆ ಮಾಡಿದ್ದರೆ ಇಂತಹ ಸಮಸ್ಯೆ ಬರುತ್ತಿರಲಿಲ್ಲ. ಊರು ಹಾಳಾದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎನ್ನುವಂತೆ ದೇಶದಲ್ಲಿ ಕೊರೊನ ರೋಗ ಹರಡಿದ ಮೇಲೆ ಕ್ರಮ ಕೈಗೊಂಡರೆ ರೋಗವನ್ನು ನಿಯಂತ್ರಿಸಲು ಸಾಧ್ಯವೇ ಎಂಬ ಪ್ರಶ್ನೆಗಳು ಸಾರ್ವಜನಿಕರಿಂದ ಕೇಳಿಬರುತ್ತಿವೆ.

ಇದನ್ನೂ ಓದಿ:

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...