Homeಮುಖಪುಟಕೊರೋನಾ ಭೀತಿ: ರಾಜ್ಯ ಲಾಕ್‌ಡೌನ್ ಆದ್ರೆ ನಮ್ ಜೀವನ ಹೆಂಗೆ? ಆಟೋ ಚಾಲಕರ ಪ್ರಶ್ನೆ

ಕೊರೋನಾ ಭೀತಿ: ರಾಜ್ಯ ಲಾಕ್‌ಡೌನ್ ಆದ್ರೆ ನಮ್ ಜೀವನ ಹೆಂಗೆ? ಆಟೋ ಚಾಲಕರ ಪ್ರಶ್ನೆ

ಕೇರಳದಲ್ಲಿ ಎಲ್ಲರಿಗೂ ಅನುಕೂಲ ಮಾಡಿಕೊಟ್ಟೌರೆ. ಆಟೋದೋರು ಸಾಲ ಮಾಡಿದ್ರೆ ಸಾಲದ ಮೇಲಿನ ಸೇವಾ ಶುಲ್ಕ ರದ್ದು ಮಾಡಿದೆ. ಆದರೆ ನಮ್ಮ ರಾಜ್ಯದಲ್ಲಿ?

- Advertisement -
- Advertisement -

ಸರ್, ನಿಲ್ಲಿ ಅಂದ್ರು ಒಬ್ಬರು ಆಟೋ ಚಾಲಕರು. ಅವರು ನನಗೆ ಹಲವು ವರ್ಷಗಳಿಂದ ಪರಿಚಯಸ್ಥರು. ನೀವೇನೋ ಹೆಂಗೋ ಜೀವನ ನಡೆಸ್ತೀರ. ನಾವ್ ಹೆಂಗ್ ಮಾಡೋದೋ ಗೊತ್ತಾಗುತ್ತಿಲ್ಲ. ಒಂದಲ್ಲ, ಎರಡಲ್ಲ ಒಂದು ವಾರ್ ರಾಜ್ಯ ಲಾಕ್ ಡೌನ್ ಆಗುತ್ತಂತೆ. ನಮ್ಮ ದುಡಿಮೆಗೆ ಪೆಟ್ಟು ಬಿತ್ತು. ಅವೊತ್ತಿನ ದುಡಿಮೆಯಿಂದ ಅಂದು ಜೀವನ ನಡೆಸುತ್ತಿದ್ವಿ. ಈಗ ಮುಖ್ಯಮಂತ್ರಿ ನಾವೇನೂ ಮಾಡೋಕಾಗಲ್ಲ. ಲಾಕ್ ಡೌನ್ ಮಾಡ್ತೀವಿ ಅಂತಿದ್ದಾರೆ ಎಂದು ಅಳಲು ತೋಡಿಕೊಂಡರು. ಅವರ ಮುಖದಲ್ಲಿ ಆತಂಕ ಮನೆ ಮಾಡಿತ್ತು. ನೋವು ತೋಡಿಕೊಳ್ಳಲು ಅವರಿಗೆ ಒಬ್ಬರು ಬೇಕಿತ್ತು. ಅದೇ ಕಾರಣಕ್ಕೆ ನನ್ನ ಬಳಿ ಅಳಲು ತೋಡಿಕೊಂಡರು.

ನೋಡಿ ಸರ್, ಕೇರಳದಲ್ಲಿ ಎಲ್ಲರಿಗೂ ಅನುಕೂಲ ಮಾಡಿಕೊಟ್ಟೌರೆ. ಆಟೋದೋರು ಸಾಲ ಮಾಡಿದ್ರೆ ಸಾಲದ ಮೇಲಿನ ಸೇವಾ ಶುಲ್ಕ ರದ್ದು ಮಾಡಿದೆ. ಅಲ್ಲಿನ ಮುಖ್ಯಮಂತ್ರಿಗಳು ಬಡವರಿಗೆ ಎರಡು ತಿಂಗಳು ಮೊದಲೇ ದವಸ ಧಾನ್ಯ ಕೊಟ್ಟಿದ್ದಾರೆ. ಬಡವರಿಗೆ ಊಟ ಕೊಡ್ತಾರೆ. ನಮ್ಮಲ್ಲಿ ಮುಖ್ಯಮಂತ್ರಿಗಳು ಅಂತ ಕ್ರಮಗಳನ್ನು ಕೈಗೊಂಡಿಲ್ಲ. ಲಾಕ್ ಡೌನ್ ಅಂದ್ರ ಸುಮ್ನೆನೇ. ಆಟೋದವ್ರು ದುಡಿಮೆ ನಿಮಗೆ ಗೊತ್ತಲ್ಲ. ಮನೆ ಬಾಡಿಗೆ ಏನು ಮಾಡ್ಬೇಕು. ಸರ್, ಮನೆ ಓನರ್ ಎರಡು ತಿಂಗಳ ಬಾಡಿಗೆ ಮೊದ್ಲೇ ಹಾಕಿ ಅಂದ್ರು. ಹಾಕಿದೆ. ನಾನು ಮರು ಮಾತಾಡಲಿಲ್ಲ.ನಮ್ ಜೀವನ ನಡೆಯೋದು ಹೆಂಗೆ, ಏನೋ ನಮ್ ಗ್ರಹಚಾರ ಸರಿಯಿಲ್ಲ ಅಂದ್ರು.

ಇದು ಕೇವಲ ಒಬ್ಬ ಆಟೋ ಚಾಲಕರ ಪ್ರಶ್ನೆಯಲ್ಲ. ಎಲ್ಲಾ ಆಟೋ ಚಾಲಕರ ನೋವು ಆಗಿದೆ.  ನಗರದ ಜೀವ ದಂತೆ ಕೆಲಸ ಮಾಡುತ್ತಿದ್ದ ಆಟೋಗಳು ರಸ್ತೆಗೆ ಇಳಿಯುವಂತಿಲ್ಲ ಎಂಬ ಮಾತು ಕೇಳಿಬರುತ್ತಿರುವುದರಿಂದ ಆಟೋ ಚಾಲಕರ ಬದುಕು ಸಂಪೂರ್ಣ ಸ್ಥಬ್ದವಾಗಲಿದೆ. ದುಡಿಯುವವರು ಮನೆಯಲ್ಲಿ ಕೂತರೆ ಉಣ್ಣುವ ಕೈ ಏನು ಮಾಡಬೇಕು. ಮಕ್ಕಳ ಖರ್ಚು ವೆಚ್ಚ, ಮನೆ ಬಾಡಿಗೆ ಹೊಂದಿಸುವುದು ಹೇಗೆಂಬ ಪ್ರಶ್ನೆ ಬೃಹದಾಕಾರವಾಗಿ ಕಾಡತೊಡಗಿದೆ.

ನಾನುಗೌರಿ.ಕಾಮ್ ಜೊತೆ ಮಾತನಾಡಿದ ಸಿಪಿಎಂ ಮುಖಂಡ ಕೆ.ಎನ್.ಉಮೇಶ್, ಕೊರೊನ ವೈರಸ್ ಹರಡುತ್ತಿರುವುದರಿಂದ ಆಟೋಚಾಲಕರು ಸೇರಿದಂತೆ ಅಸಂಘಟಿತ ವಲಯದ ಕಾರ್ಮಿಕರ ಬದುಕು ದುಸ್ಥರ ವಾಗಲಿದೆ. ಹೀಗಾಗಿ ಆಟೋ ಚಾಲಕರ ಪ್ರತಿಯೊಬ್ಬರ ಖಾತೆಗೆ 6 ಸಾವಿರ ಹಣ ಹಾಕಬೇಕು. ಕಟ್ಟಬೇಕಾದ ಇಎಂಐಗಳನ್ನು ಮುಂದೂಡಬೇಕು. ಆಟೋಚಾಲಕರ ಬಡ್ಡಿ ಮನ್ನಾ ಮಾಡಬೇಕು. ಇದೆಲ್ಲವನ್ನೂ ಅಸಂಘಟಿತ ವಲಯದ ಭದ್ರತ ಮಂಡಳಿಯಿಂದ ಕೊಡಬೇಕು. ಆಟೋಚಾಲಕರು ಸೇರಿದಂತೆ ಎಲ್ಲಾ ಅಸಂಘಟಿತರಿಗೆ ಉಚಿತ ರೇಷನ್ ಕೊಡಬೇಕು. ಯುವಕರಿಗೆ ನಿರುದ್ಯೋಗ ಭತ್ಯ ಕೊಡಬೇಕು ಎಂದು ಒತ್ತಾಯಿಸಿದರು.

ಕೊರೊನ ರೋಗ ಹರಡುತ್ತಿರುವುದರಿಂದ ಅಸಂಘಟಿತ ಕಾರ್ಮಿಕರ ಬದುಕು ದಿಕ್ಕಾಪಾಲಾಗಿದೆ. ಬೀದಿಬದಿ ವ್ಯಾಪಾರಿಗಳು ಮೀಟರ್ ಬಡ್ಡಿಗೆ ಸಾಲ ತಂದು ವ್ಯಾಪಾರ ಮಾಡುತ್ತಾರೆ. ಆಟೋ ಚಾಲಕರು ಬಾಡಿಗೆ ಮೇಲೆ ಆಟೋವನ್ನು ರಸ್ತೆಗೆ ಇಳಿಸಿರುತ್ತಾರೆ. ಆಟೋ ರಸ್ತೆಗೆ ಇಳಿಯದಿದ್ದರೆ ಬಾಡಿಗೆ ಪಡೆಯುತ್ತಿದ್ದ ಚಾಲಕರು ಹೊಟ್ಟೆಗೆ ತಣ್ಣೀರು ಬಟ್ಟೆ ಹಾಕಿಕೊಳ್ಳುವಂತಹ ಪರಿಸ್ಥಿತಿ ನಿರ್ಮಾಣವಾಗಲಿದೆ. ಆಟೋಚಾಲಕರು ಹಲವು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಅವರಿಗೆ ಬೇರೆ ದುಡಿಯುವ ಮಾರ್ಗವಿಲ್ಲ. ಬೆಳಗಿನಿಂದ ಸಂಜೆಯವರೆಗೂ ಆಟೋ ಓಡಿಸಿಯೇ ಬದುಕಿನ ಬಂಡಿ ನಡೆಸಬೇಕು. ಇಲ್ಲದಿದ್ದರೆ ಅವರ ಪಾಡು ಹೇಳತೀರದು.

ಸಾಮಾನ್ಯ ಸಂದರ್ಭದಲ್ಲಿ ಒಂದು ದಿನ ನಡೆಯುವ ಮುಷ್ಕರ, ಬಂದ್‌ ಸಮಯದಲ್ಲೇ ಆಟೋ ಓಡಿಸದಿದ್ದರೆ ಸಂಕಷ್ಟಗಳನ್ನು ಎದುರಿಸುತ್ತೇವೆ. ಇನ್ನು ಒಂದು ವಾರ ಆಟೋಗಳನ್ನು ರಸ್ತೆಗೆ ಇಳಿಸದಿದ್ದರೆ ಬದುಕು ನಡೆಸುವುದು ಕಷ್ಟಕರ. ಕುಟುಂಬ ನಿರ್ವಹಣೆಗೆ ತೊಂದರೆಯಾಗಲಿದೆ. ನಗರಗಳಲ್ಲಿ ಪ್ರತಿನಿತ್ಯವೂ ಒಂದಲ್ಲ ಒಂದು ವಸ್ತುವನ್ನು ಕೊಳ್ಳಲೇಬೇಕು. ಅದಕ್ಕೆ ಹಣ ಬೇಕು. ದುಡಿಮೆ ಇಲ್ಲದಿದ್ದರೆ ದಿನಸಿ ವಸ್ತುಗಳನ್ನು ಖರೀದಿಸುವುದು ಹೇಗೆ? ಒಂದು ವಾರ ಆಟೋ ಇಳಿಯದಿದ್ದರೆ ಆಟೋಗಳು ಕೆಡುತ್ತವೆ ಎಂದು ಆಟೋಚಾಲಕ ಗಿರೀಶ್ ನೋವು ತೋಡಿಕೊಂಡರು.

ಸರ್ಕಾರಗಳು ಆರಂಭದಲ್ಲೇ ಮುನ್ನೆಚ್ಚರಿಕೆ ಕ್ರಮಗಳನ್ನು ವಹಿಸಬೇಕಿತ್ತು. ವಿದೇಶಗಳಿಂದ ಬರುತ್ತಿರುವವರನ್ನು ಮೊದಲೇ ಪ್ರತ್ಯೇಕವಾಗಿ ಇಡುವಂತಹ ವ್ಯವಸ್ಥೆ ಮಾಡಿದ್ದರೆ ಇಂತಹ ಸಮಸ್ಯೆ ಬರುತ್ತಿರಲಿಲ್ಲ. ಊರು ಹಾಳಾದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎನ್ನುವಂತೆ ದೇಶದಲ್ಲಿ ಕೊರೊನ ರೋಗ ಹರಡಿದ ಮೇಲೆ ಕ್ರಮ ಕೈಗೊಂಡರೆ ರೋಗವನ್ನು ನಿಯಂತ್ರಿಸಲು ಸಾಧ್ಯವೇ ಎಂಬ ಪ್ರಶ್ನೆಗಳು ಸಾರ್ವಜನಿಕರಿಂದ ಕೇಳಿಬರುತ್ತಿವೆ.

ಇದನ್ನೂ ಓದಿ:

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...