Homeಮುಖಪುಟಕೊರೋನಾ ಭೀತಿ: ರಾಜ್ಯ ಲಾಕ್‌ಡೌನ್ ಆದ್ರೆ ನಮ್ ಜೀವನ ಹೆಂಗೆ? ಆಟೋ ಚಾಲಕರ ಪ್ರಶ್ನೆ

ಕೊರೋನಾ ಭೀತಿ: ರಾಜ್ಯ ಲಾಕ್‌ಡೌನ್ ಆದ್ರೆ ನಮ್ ಜೀವನ ಹೆಂಗೆ? ಆಟೋ ಚಾಲಕರ ಪ್ರಶ್ನೆ

ಕೇರಳದಲ್ಲಿ ಎಲ್ಲರಿಗೂ ಅನುಕೂಲ ಮಾಡಿಕೊಟ್ಟೌರೆ. ಆಟೋದೋರು ಸಾಲ ಮಾಡಿದ್ರೆ ಸಾಲದ ಮೇಲಿನ ಸೇವಾ ಶುಲ್ಕ ರದ್ದು ಮಾಡಿದೆ. ಆದರೆ ನಮ್ಮ ರಾಜ್ಯದಲ್ಲಿ?

- Advertisement -
- Advertisement -

ಸರ್, ನಿಲ್ಲಿ ಅಂದ್ರು ಒಬ್ಬರು ಆಟೋ ಚಾಲಕರು. ಅವರು ನನಗೆ ಹಲವು ವರ್ಷಗಳಿಂದ ಪರಿಚಯಸ್ಥರು. ನೀವೇನೋ ಹೆಂಗೋ ಜೀವನ ನಡೆಸ್ತೀರ. ನಾವ್ ಹೆಂಗ್ ಮಾಡೋದೋ ಗೊತ್ತಾಗುತ್ತಿಲ್ಲ. ಒಂದಲ್ಲ, ಎರಡಲ್ಲ ಒಂದು ವಾರ್ ರಾಜ್ಯ ಲಾಕ್ ಡೌನ್ ಆಗುತ್ತಂತೆ. ನಮ್ಮ ದುಡಿಮೆಗೆ ಪೆಟ್ಟು ಬಿತ್ತು. ಅವೊತ್ತಿನ ದುಡಿಮೆಯಿಂದ ಅಂದು ಜೀವನ ನಡೆಸುತ್ತಿದ್ವಿ. ಈಗ ಮುಖ್ಯಮಂತ್ರಿ ನಾವೇನೂ ಮಾಡೋಕಾಗಲ್ಲ. ಲಾಕ್ ಡೌನ್ ಮಾಡ್ತೀವಿ ಅಂತಿದ್ದಾರೆ ಎಂದು ಅಳಲು ತೋಡಿಕೊಂಡರು. ಅವರ ಮುಖದಲ್ಲಿ ಆತಂಕ ಮನೆ ಮಾಡಿತ್ತು. ನೋವು ತೋಡಿಕೊಳ್ಳಲು ಅವರಿಗೆ ಒಬ್ಬರು ಬೇಕಿತ್ತು. ಅದೇ ಕಾರಣಕ್ಕೆ ನನ್ನ ಬಳಿ ಅಳಲು ತೋಡಿಕೊಂಡರು.

ನೋಡಿ ಸರ್, ಕೇರಳದಲ್ಲಿ ಎಲ್ಲರಿಗೂ ಅನುಕೂಲ ಮಾಡಿಕೊಟ್ಟೌರೆ. ಆಟೋದೋರು ಸಾಲ ಮಾಡಿದ್ರೆ ಸಾಲದ ಮೇಲಿನ ಸೇವಾ ಶುಲ್ಕ ರದ್ದು ಮಾಡಿದೆ. ಅಲ್ಲಿನ ಮುಖ್ಯಮಂತ್ರಿಗಳು ಬಡವರಿಗೆ ಎರಡು ತಿಂಗಳು ಮೊದಲೇ ದವಸ ಧಾನ್ಯ ಕೊಟ್ಟಿದ್ದಾರೆ. ಬಡವರಿಗೆ ಊಟ ಕೊಡ್ತಾರೆ. ನಮ್ಮಲ್ಲಿ ಮುಖ್ಯಮಂತ್ರಿಗಳು ಅಂತ ಕ್ರಮಗಳನ್ನು ಕೈಗೊಂಡಿಲ್ಲ. ಲಾಕ್ ಡೌನ್ ಅಂದ್ರ ಸುಮ್ನೆನೇ. ಆಟೋದವ್ರು ದುಡಿಮೆ ನಿಮಗೆ ಗೊತ್ತಲ್ಲ. ಮನೆ ಬಾಡಿಗೆ ಏನು ಮಾಡ್ಬೇಕು. ಸರ್, ಮನೆ ಓನರ್ ಎರಡು ತಿಂಗಳ ಬಾಡಿಗೆ ಮೊದ್ಲೇ ಹಾಕಿ ಅಂದ್ರು. ಹಾಕಿದೆ. ನಾನು ಮರು ಮಾತಾಡಲಿಲ್ಲ.ನಮ್ ಜೀವನ ನಡೆಯೋದು ಹೆಂಗೆ, ಏನೋ ನಮ್ ಗ್ರಹಚಾರ ಸರಿಯಿಲ್ಲ ಅಂದ್ರು.

ಇದು ಕೇವಲ ಒಬ್ಬ ಆಟೋ ಚಾಲಕರ ಪ್ರಶ್ನೆಯಲ್ಲ. ಎಲ್ಲಾ ಆಟೋ ಚಾಲಕರ ನೋವು ಆಗಿದೆ.  ನಗರದ ಜೀವ ದಂತೆ ಕೆಲಸ ಮಾಡುತ್ತಿದ್ದ ಆಟೋಗಳು ರಸ್ತೆಗೆ ಇಳಿಯುವಂತಿಲ್ಲ ಎಂಬ ಮಾತು ಕೇಳಿಬರುತ್ತಿರುವುದರಿಂದ ಆಟೋ ಚಾಲಕರ ಬದುಕು ಸಂಪೂರ್ಣ ಸ್ಥಬ್ದವಾಗಲಿದೆ. ದುಡಿಯುವವರು ಮನೆಯಲ್ಲಿ ಕೂತರೆ ಉಣ್ಣುವ ಕೈ ಏನು ಮಾಡಬೇಕು. ಮಕ್ಕಳ ಖರ್ಚು ವೆಚ್ಚ, ಮನೆ ಬಾಡಿಗೆ ಹೊಂದಿಸುವುದು ಹೇಗೆಂಬ ಪ್ರಶ್ನೆ ಬೃಹದಾಕಾರವಾಗಿ ಕಾಡತೊಡಗಿದೆ.

ನಾನುಗೌರಿ.ಕಾಮ್ ಜೊತೆ ಮಾತನಾಡಿದ ಸಿಪಿಎಂ ಮುಖಂಡ ಕೆ.ಎನ್.ಉಮೇಶ್, ಕೊರೊನ ವೈರಸ್ ಹರಡುತ್ತಿರುವುದರಿಂದ ಆಟೋಚಾಲಕರು ಸೇರಿದಂತೆ ಅಸಂಘಟಿತ ವಲಯದ ಕಾರ್ಮಿಕರ ಬದುಕು ದುಸ್ಥರ ವಾಗಲಿದೆ. ಹೀಗಾಗಿ ಆಟೋ ಚಾಲಕರ ಪ್ರತಿಯೊಬ್ಬರ ಖಾತೆಗೆ 6 ಸಾವಿರ ಹಣ ಹಾಕಬೇಕು. ಕಟ್ಟಬೇಕಾದ ಇಎಂಐಗಳನ್ನು ಮುಂದೂಡಬೇಕು. ಆಟೋಚಾಲಕರ ಬಡ್ಡಿ ಮನ್ನಾ ಮಾಡಬೇಕು. ಇದೆಲ್ಲವನ್ನೂ ಅಸಂಘಟಿತ ವಲಯದ ಭದ್ರತ ಮಂಡಳಿಯಿಂದ ಕೊಡಬೇಕು. ಆಟೋಚಾಲಕರು ಸೇರಿದಂತೆ ಎಲ್ಲಾ ಅಸಂಘಟಿತರಿಗೆ ಉಚಿತ ರೇಷನ್ ಕೊಡಬೇಕು. ಯುವಕರಿಗೆ ನಿರುದ್ಯೋಗ ಭತ್ಯ ಕೊಡಬೇಕು ಎಂದು ಒತ್ತಾಯಿಸಿದರು.

ಕೊರೊನ ರೋಗ ಹರಡುತ್ತಿರುವುದರಿಂದ ಅಸಂಘಟಿತ ಕಾರ್ಮಿಕರ ಬದುಕು ದಿಕ್ಕಾಪಾಲಾಗಿದೆ. ಬೀದಿಬದಿ ವ್ಯಾಪಾರಿಗಳು ಮೀಟರ್ ಬಡ್ಡಿಗೆ ಸಾಲ ತಂದು ವ್ಯಾಪಾರ ಮಾಡುತ್ತಾರೆ. ಆಟೋ ಚಾಲಕರು ಬಾಡಿಗೆ ಮೇಲೆ ಆಟೋವನ್ನು ರಸ್ತೆಗೆ ಇಳಿಸಿರುತ್ತಾರೆ. ಆಟೋ ರಸ್ತೆಗೆ ಇಳಿಯದಿದ್ದರೆ ಬಾಡಿಗೆ ಪಡೆಯುತ್ತಿದ್ದ ಚಾಲಕರು ಹೊಟ್ಟೆಗೆ ತಣ್ಣೀರು ಬಟ್ಟೆ ಹಾಕಿಕೊಳ್ಳುವಂತಹ ಪರಿಸ್ಥಿತಿ ನಿರ್ಮಾಣವಾಗಲಿದೆ. ಆಟೋಚಾಲಕರು ಹಲವು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಅವರಿಗೆ ಬೇರೆ ದುಡಿಯುವ ಮಾರ್ಗವಿಲ್ಲ. ಬೆಳಗಿನಿಂದ ಸಂಜೆಯವರೆಗೂ ಆಟೋ ಓಡಿಸಿಯೇ ಬದುಕಿನ ಬಂಡಿ ನಡೆಸಬೇಕು. ಇಲ್ಲದಿದ್ದರೆ ಅವರ ಪಾಡು ಹೇಳತೀರದು.

ಸಾಮಾನ್ಯ ಸಂದರ್ಭದಲ್ಲಿ ಒಂದು ದಿನ ನಡೆಯುವ ಮುಷ್ಕರ, ಬಂದ್‌ ಸಮಯದಲ್ಲೇ ಆಟೋ ಓಡಿಸದಿದ್ದರೆ ಸಂಕಷ್ಟಗಳನ್ನು ಎದುರಿಸುತ್ತೇವೆ. ಇನ್ನು ಒಂದು ವಾರ ಆಟೋಗಳನ್ನು ರಸ್ತೆಗೆ ಇಳಿಸದಿದ್ದರೆ ಬದುಕು ನಡೆಸುವುದು ಕಷ್ಟಕರ. ಕುಟುಂಬ ನಿರ್ವಹಣೆಗೆ ತೊಂದರೆಯಾಗಲಿದೆ. ನಗರಗಳಲ್ಲಿ ಪ್ರತಿನಿತ್ಯವೂ ಒಂದಲ್ಲ ಒಂದು ವಸ್ತುವನ್ನು ಕೊಳ್ಳಲೇಬೇಕು. ಅದಕ್ಕೆ ಹಣ ಬೇಕು. ದುಡಿಮೆ ಇಲ್ಲದಿದ್ದರೆ ದಿನಸಿ ವಸ್ತುಗಳನ್ನು ಖರೀದಿಸುವುದು ಹೇಗೆ? ಒಂದು ವಾರ ಆಟೋ ಇಳಿಯದಿದ್ದರೆ ಆಟೋಗಳು ಕೆಡುತ್ತವೆ ಎಂದು ಆಟೋಚಾಲಕ ಗಿರೀಶ್ ನೋವು ತೋಡಿಕೊಂಡರು.

ಸರ್ಕಾರಗಳು ಆರಂಭದಲ್ಲೇ ಮುನ್ನೆಚ್ಚರಿಕೆ ಕ್ರಮಗಳನ್ನು ವಹಿಸಬೇಕಿತ್ತು. ವಿದೇಶಗಳಿಂದ ಬರುತ್ತಿರುವವರನ್ನು ಮೊದಲೇ ಪ್ರತ್ಯೇಕವಾಗಿ ಇಡುವಂತಹ ವ್ಯವಸ್ಥೆ ಮಾಡಿದ್ದರೆ ಇಂತಹ ಸಮಸ್ಯೆ ಬರುತ್ತಿರಲಿಲ್ಲ. ಊರು ಹಾಳಾದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎನ್ನುವಂತೆ ದೇಶದಲ್ಲಿ ಕೊರೊನ ರೋಗ ಹರಡಿದ ಮೇಲೆ ಕ್ರಮ ಕೈಗೊಂಡರೆ ರೋಗವನ್ನು ನಿಯಂತ್ರಿಸಲು ಸಾಧ್ಯವೇ ಎಂಬ ಪ್ರಶ್ನೆಗಳು ಸಾರ್ವಜನಿಕರಿಂದ ಕೇಳಿಬರುತ್ತಿವೆ.

ಇದನ್ನೂ ಓದಿ:

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...

ಜಾರ್ಖಂಡ್| ವಾಮಾಚಾರ ಆಚರಣೆಗೆ ಅಪ್ರಾಪ್ತ ಬಾಲಕಿ ಬಲಿ; ತಾಯಿ ಸೇರಿದಂತೆ ಮೂವರ ಬಂಧನ

ಜಾರ್ಖಂಡ್‌ನ ಹಜಾರಿಬಾಗ್ ಬಳಿಕ ಕುಸುಂಭ ಗ್ರಾಮದಲ್ಲಿ ಬಲಿದಾನದ ಆಚರಣೆಯಲ್ಲಿ ಕತ್ತು ಹಿಸುಕಿ ಕೊಂದ ಹದಿಹರೆಯದ ಹುಡುಗಿಯ 35 ವರ್ಷದ ತಾಯಿಯನ್ನು ಪೊಲೀಸರು ಬುಧವಾರ ಬಂಧಿಸಿದ್ದಾರೆ. ಜೊತೆಗೆ, ಮಾಂತ್ರಿಕ ಮತ್ತು ಓರ್ವ ವ್ಯಕ್ತಿಯನ್ನು ಬಂಧಿಸಿರುವುದಾಗಿ...

ಪ. ಬಂಗಾಳ | ಎಸ್‌ಐಆರ್ ಕರ್ತವ್ಯದಲ್ಲಿದ್ದ ನ್ಯಾಯಾಧೀಶರನ್ನು ಒತ್ತೆಯಾಳಾಗಿಟ್ಟುಕೊಂಡ ಆರೋಪ : ತೀವ್ರ ಕಳವಳ ವ್ಯಕ್ತಪಡಿಸಿದ ಸುಪ್ರೀಂ ಕೋರ್ಟ್, ಕೇಂದ್ರ ಪಡೆಗಳ ನಿಯೋಜನೆಗೆ ನಿರ್ದೇಶನ

ನಿನ್ನೆ (ಏ.1) ಮಧ್ಯಾಹ್ನದಿಂದ ಮಧ್ಯರಾತ್ರಿಯವರೆಗೆ ಪಶ್ಚಿಮ ಬಂಗಾಳದಲ್ಲಿ ನಡೆದ ಪ್ರತಿಭಟನೆಯ ವೇಳೆ, ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಕಾರ್ಯದಲ್ಲಿ ತೊಡಗಿದ್ದ ನ್ಯಾಯಾಂಗ ಅಧಿಕಾರಿಗಳನ್ನು ಪ್ರತಿಭಟನಾಕಾರರು ಒತ್ತೆಯಾಳಾಗಿ ಇರಿಸಿಕೊಂಡಿದ್ದರು ಎಂದು ಆರೋಪಿಸಲಾಗಿದೆ....

ಉತ್ತರ ಪ್ರದೇಶ| ಮುಸ್ಲಿಂ ಯುವಕನನ್ನು ಥಳಿಸಿ ದರೋಡೆ ಮಾಡಿದ ಗುಂಪು; ಹಿಂದೂ ಶ್ಲೋಕ ಪಠಿಸುವಂತೆ ಒತ್ತಾಯ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯಲ್ಲಿ ಹಿಂದುತ್ವವಾದಿ ಗುಂಪೊಂದು ಮುಸ್ಲಿಂ ಯುವಕನನ್ನು ನಿರ್ದಯವಾಗಿ ಥಳಿಸಿ, ಅವಮಾನಿಸಿ, ಹಿಂದುತ್ವ ಶ್ಲೋಕಗಳನ್ನು ಪಠಿಸುವಂತೆ ಒತ್ತಾಯಿಸಿದೆ ಎಂದು ಪೊಲೀಸರನ್ನು ಉಲ್ಲೇಖಿಸಿ 'ಕ್ಲಾರಿಯನ್ ಇಂಡಿಯಾ' ವರದಿ ಮಾಡಿದೆ. ಮಾರ್ಚ್ 28...

‘ಇರಾನ್‌ಗೆ ಅಮೆರಿಕನ್ನರ ವಿರುದ್ಧ ಯಾವುದೇ ದ್ವೇಷವಿಲ್ಲ’: ಅಮೆರಿಕದ ಸಾರ್ವಜನಿಕರಿಗೆ ‘ಮುಕ್ತ ಪತ್ರ’ ಬರೆದ ಇರಾನ್ ಅಧ್ಯಕ್ಷ ಪೆಜೆಶ್ಕಿಯಾನ್

ಪಶ್ಚಿಮ ಏಷ್ಯಾ ಸಂಘರ್ಷ ತೀವ್ರವಾಗುತ್ತಿರುವಾಗಲೇ ಅಮೆರಿಕ ಸಾರ್ವಜನಿಕರನ್ನು ಉದ್ದೇಶಿಸಿ ದೀರ್ಘ ಪತ್ರ ಬರೆದಿರುವ ಇರಾನ್ ಅಧ್ಯಕ್ಷ ಮಸೌದ್ ಪಜೆಶ್ಕಿಯಾನ್, ಅಮೆರಿಕನ್ನರ ವಿರುದ್ಧ ಇರಾನ್ ಯಾವುದೇ ದ್ವೇಷವನ್ನು ಹೊಂದಿಲ್ಲ ಎಂದು ಹೇಳಿದ್ದಾರೆ. ಆದರೆ  ಜಾಗತಿಕ ನಿರೂಪಣೆಗಳಲ್ಲಿ...

ಬಿಜು ಪಟ್ನಾಯಕ್ ವಿರುದ್ಧ ಹೇಳಿಕೆ : ಬೇಷರತ್ ಕ್ಷಮೆಯಾಚಿಸಿದ ಬಿಜೆಪಿ ಸಂಸದ ನಿಶಿಕಾಂತ್ ದುಬೆ

ಒಡಿಶಾದ ಮಾಜಿ ಮುಖ್ಯಮಂತ್ರಿ ಬಿಜು ಪಟ್ನಾಯಕ್ ಅವರ ಕುರಿತು ನೀಡಿದ ಹೇಳಿಕೆ ವಿರುದ್ದ ದೇಶದಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾದ ಹಿನ್ನೆಲೆ, ಬಿಜೆಪಿ ಸಂಸದ ನಿಶಿಕಾಂತ್ ದುಬೆ ಬುಧವಾರ (ಏ.1) ಬೇಷರತ್ ಕ್ಷಮೆಯಾಚಿಸಿದ್ದಾರೆ. "ಬಿಜು ಬಾಬು...