Homeಮುಖಪುಟಕೊರೋನಾ ಭೀತಿ: ರಾಜ್ಯ ಲಾಕ್‌ಡೌನ್ ಆದ್ರೆ ನಮ್ ಜೀವನ ಹೆಂಗೆ? ಆಟೋ ಚಾಲಕರ ಪ್ರಶ್ನೆ

ಕೊರೋನಾ ಭೀತಿ: ರಾಜ್ಯ ಲಾಕ್‌ಡೌನ್ ಆದ್ರೆ ನಮ್ ಜೀವನ ಹೆಂಗೆ? ಆಟೋ ಚಾಲಕರ ಪ್ರಶ್ನೆ

ಕೇರಳದಲ್ಲಿ ಎಲ್ಲರಿಗೂ ಅನುಕೂಲ ಮಾಡಿಕೊಟ್ಟೌರೆ. ಆಟೋದೋರು ಸಾಲ ಮಾಡಿದ್ರೆ ಸಾಲದ ಮೇಲಿನ ಸೇವಾ ಶುಲ್ಕ ರದ್ದು ಮಾಡಿದೆ. ಆದರೆ ನಮ್ಮ ರಾಜ್ಯದಲ್ಲಿ?

- Advertisement -
- Advertisement -

ಸರ್, ನಿಲ್ಲಿ ಅಂದ್ರು ಒಬ್ಬರು ಆಟೋ ಚಾಲಕರು. ಅವರು ನನಗೆ ಹಲವು ವರ್ಷಗಳಿಂದ ಪರಿಚಯಸ್ಥರು. ನೀವೇನೋ ಹೆಂಗೋ ಜೀವನ ನಡೆಸ್ತೀರ. ನಾವ್ ಹೆಂಗ್ ಮಾಡೋದೋ ಗೊತ್ತಾಗುತ್ತಿಲ್ಲ. ಒಂದಲ್ಲ, ಎರಡಲ್ಲ ಒಂದು ವಾರ್ ರಾಜ್ಯ ಲಾಕ್ ಡೌನ್ ಆಗುತ್ತಂತೆ. ನಮ್ಮ ದುಡಿಮೆಗೆ ಪೆಟ್ಟು ಬಿತ್ತು. ಅವೊತ್ತಿನ ದುಡಿಮೆಯಿಂದ ಅಂದು ಜೀವನ ನಡೆಸುತ್ತಿದ್ವಿ. ಈಗ ಮುಖ್ಯಮಂತ್ರಿ ನಾವೇನೂ ಮಾಡೋಕಾಗಲ್ಲ. ಲಾಕ್ ಡೌನ್ ಮಾಡ್ತೀವಿ ಅಂತಿದ್ದಾರೆ ಎಂದು ಅಳಲು ತೋಡಿಕೊಂಡರು. ಅವರ ಮುಖದಲ್ಲಿ ಆತಂಕ ಮನೆ ಮಾಡಿತ್ತು. ನೋವು ತೋಡಿಕೊಳ್ಳಲು ಅವರಿಗೆ ಒಬ್ಬರು ಬೇಕಿತ್ತು. ಅದೇ ಕಾರಣಕ್ಕೆ ನನ್ನ ಬಳಿ ಅಳಲು ತೋಡಿಕೊಂಡರು.

ನೋಡಿ ಸರ್, ಕೇರಳದಲ್ಲಿ ಎಲ್ಲರಿಗೂ ಅನುಕೂಲ ಮಾಡಿಕೊಟ್ಟೌರೆ. ಆಟೋದೋರು ಸಾಲ ಮಾಡಿದ್ರೆ ಸಾಲದ ಮೇಲಿನ ಸೇವಾ ಶುಲ್ಕ ರದ್ದು ಮಾಡಿದೆ. ಅಲ್ಲಿನ ಮುಖ್ಯಮಂತ್ರಿಗಳು ಬಡವರಿಗೆ ಎರಡು ತಿಂಗಳು ಮೊದಲೇ ದವಸ ಧಾನ್ಯ ಕೊಟ್ಟಿದ್ದಾರೆ. ಬಡವರಿಗೆ ಊಟ ಕೊಡ್ತಾರೆ. ನಮ್ಮಲ್ಲಿ ಮುಖ್ಯಮಂತ್ರಿಗಳು ಅಂತ ಕ್ರಮಗಳನ್ನು ಕೈಗೊಂಡಿಲ್ಲ. ಲಾಕ್ ಡೌನ್ ಅಂದ್ರ ಸುಮ್ನೆನೇ. ಆಟೋದವ್ರು ದುಡಿಮೆ ನಿಮಗೆ ಗೊತ್ತಲ್ಲ. ಮನೆ ಬಾಡಿಗೆ ಏನು ಮಾಡ್ಬೇಕು. ಸರ್, ಮನೆ ಓನರ್ ಎರಡು ತಿಂಗಳ ಬಾಡಿಗೆ ಮೊದ್ಲೇ ಹಾಕಿ ಅಂದ್ರು. ಹಾಕಿದೆ. ನಾನು ಮರು ಮಾತಾಡಲಿಲ್ಲ.ನಮ್ ಜೀವನ ನಡೆಯೋದು ಹೆಂಗೆ, ಏನೋ ನಮ್ ಗ್ರಹಚಾರ ಸರಿಯಿಲ್ಲ ಅಂದ್ರು.

ಇದು ಕೇವಲ ಒಬ್ಬ ಆಟೋ ಚಾಲಕರ ಪ್ರಶ್ನೆಯಲ್ಲ. ಎಲ್ಲಾ ಆಟೋ ಚಾಲಕರ ನೋವು ಆಗಿದೆ.  ನಗರದ ಜೀವ ದಂತೆ ಕೆಲಸ ಮಾಡುತ್ತಿದ್ದ ಆಟೋಗಳು ರಸ್ತೆಗೆ ಇಳಿಯುವಂತಿಲ್ಲ ಎಂಬ ಮಾತು ಕೇಳಿಬರುತ್ತಿರುವುದರಿಂದ ಆಟೋ ಚಾಲಕರ ಬದುಕು ಸಂಪೂರ್ಣ ಸ್ಥಬ್ದವಾಗಲಿದೆ. ದುಡಿಯುವವರು ಮನೆಯಲ್ಲಿ ಕೂತರೆ ಉಣ್ಣುವ ಕೈ ಏನು ಮಾಡಬೇಕು. ಮಕ್ಕಳ ಖರ್ಚು ವೆಚ್ಚ, ಮನೆ ಬಾಡಿಗೆ ಹೊಂದಿಸುವುದು ಹೇಗೆಂಬ ಪ್ರಶ್ನೆ ಬೃಹದಾಕಾರವಾಗಿ ಕಾಡತೊಡಗಿದೆ.

ನಾನುಗೌರಿ.ಕಾಮ್ ಜೊತೆ ಮಾತನಾಡಿದ ಸಿಪಿಎಂ ಮುಖಂಡ ಕೆ.ಎನ್.ಉಮೇಶ್, ಕೊರೊನ ವೈರಸ್ ಹರಡುತ್ತಿರುವುದರಿಂದ ಆಟೋಚಾಲಕರು ಸೇರಿದಂತೆ ಅಸಂಘಟಿತ ವಲಯದ ಕಾರ್ಮಿಕರ ಬದುಕು ದುಸ್ಥರ ವಾಗಲಿದೆ. ಹೀಗಾಗಿ ಆಟೋ ಚಾಲಕರ ಪ್ರತಿಯೊಬ್ಬರ ಖಾತೆಗೆ 6 ಸಾವಿರ ಹಣ ಹಾಕಬೇಕು. ಕಟ್ಟಬೇಕಾದ ಇಎಂಐಗಳನ್ನು ಮುಂದೂಡಬೇಕು. ಆಟೋಚಾಲಕರ ಬಡ್ಡಿ ಮನ್ನಾ ಮಾಡಬೇಕು. ಇದೆಲ್ಲವನ್ನೂ ಅಸಂಘಟಿತ ವಲಯದ ಭದ್ರತ ಮಂಡಳಿಯಿಂದ ಕೊಡಬೇಕು. ಆಟೋಚಾಲಕರು ಸೇರಿದಂತೆ ಎಲ್ಲಾ ಅಸಂಘಟಿತರಿಗೆ ಉಚಿತ ರೇಷನ್ ಕೊಡಬೇಕು. ಯುವಕರಿಗೆ ನಿರುದ್ಯೋಗ ಭತ್ಯ ಕೊಡಬೇಕು ಎಂದು ಒತ್ತಾಯಿಸಿದರು.

ಕೊರೊನ ರೋಗ ಹರಡುತ್ತಿರುವುದರಿಂದ ಅಸಂಘಟಿತ ಕಾರ್ಮಿಕರ ಬದುಕು ದಿಕ್ಕಾಪಾಲಾಗಿದೆ. ಬೀದಿಬದಿ ವ್ಯಾಪಾರಿಗಳು ಮೀಟರ್ ಬಡ್ಡಿಗೆ ಸಾಲ ತಂದು ವ್ಯಾಪಾರ ಮಾಡುತ್ತಾರೆ. ಆಟೋ ಚಾಲಕರು ಬಾಡಿಗೆ ಮೇಲೆ ಆಟೋವನ್ನು ರಸ್ತೆಗೆ ಇಳಿಸಿರುತ್ತಾರೆ. ಆಟೋ ರಸ್ತೆಗೆ ಇಳಿಯದಿದ್ದರೆ ಬಾಡಿಗೆ ಪಡೆಯುತ್ತಿದ್ದ ಚಾಲಕರು ಹೊಟ್ಟೆಗೆ ತಣ್ಣೀರು ಬಟ್ಟೆ ಹಾಕಿಕೊಳ್ಳುವಂತಹ ಪರಿಸ್ಥಿತಿ ನಿರ್ಮಾಣವಾಗಲಿದೆ. ಆಟೋಚಾಲಕರು ಹಲವು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಅವರಿಗೆ ಬೇರೆ ದುಡಿಯುವ ಮಾರ್ಗವಿಲ್ಲ. ಬೆಳಗಿನಿಂದ ಸಂಜೆಯವರೆಗೂ ಆಟೋ ಓಡಿಸಿಯೇ ಬದುಕಿನ ಬಂಡಿ ನಡೆಸಬೇಕು. ಇಲ್ಲದಿದ್ದರೆ ಅವರ ಪಾಡು ಹೇಳತೀರದು.

ಸಾಮಾನ್ಯ ಸಂದರ್ಭದಲ್ಲಿ ಒಂದು ದಿನ ನಡೆಯುವ ಮುಷ್ಕರ, ಬಂದ್‌ ಸಮಯದಲ್ಲೇ ಆಟೋ ಓಡಿಸದಿದ್ದರೆ ಸಂಕಷ್ಟಗಳನ್ನು ಎದುರಿಸುತ್ತೇವೆ. ಇನ್ನು ಒಂದು ವಾರ ಆಟೋಗಳನ್ನು ರಸ್ತೆಗೆ ಇಳಿಸದಿದ್ದರೆ ಬದುಕು ನಡೆಸುವುದು ಕಷ್ಟಕರ. ಕುಟುಂಬ ನಿರ್ವಹಣೆಗೆ ತೊಂದರೆಯಾಗಲಿದೆ. ನಗರಗಳಲ್ಲಿ ಪ್ರತಿನಿತ್ಯವೂ ಒಂದಲ್ಲ ಒಂದು ವಸ್ತುವನ್ನು ಕೊಳ್ಳಲೇಬೇಕು. ಅದಕ್ಕೆ ಹಣ ಬೇಕು. ದುಡಿಮೆ ಇಲ್ಲದಿದ್ದರೆ ದಿನಸಿ ವಸ್ತುಗಳನ್ನು ಖರೀದಿಸುವುದು ಹೇಗೆ? ಒಂದು ವಾರ ಆಟೋ ಇಳಿಯದಿದ್ದರೆ ಆಟೋಗಳು ಕೆಡುತ್ತವೆ ಎಂದು ಆಟೋಚಾಲಕ ಗಿರೀಶ್ ನೋವು ತೋಡಿಕೊಂಡರು.

ಸರ್ಕಾರಗಳು ಆರಂಭದಲ್ಲೇ ಮುನ್ನೆಚ್ಚರಿಕೆ ಕ್ರಮಗಳನ್ನು ವಹಿಸಬೇಕಿತ್ತು. ವಿದೇಶಗಳಿಂದ ಬರುತ್ತಿರುವವರನ್ನು ಮೊದಲೇ ಪ್ರತ್ಯೇಕವಾಗಿ ಇಡುವಂತಹ ವ್ಯವಸ್ಥೆ ಮಾಡಿದ್ದರೆ ಇಂತಹ ಸಮಸ್ಯೆ ಬರುತ್ತಿರಲಿಲ್ಲ. ಊರು ಹಾಳಾದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎನ್ನುವಂತೆ ದೇಶದಲ್ಲಿ ಕೊರೊನ ರೋಗ ಹರಡಿದ ಮೇಲೆ ಕ್ರಮ ಕೈಗೊಂಡರೆ ರೋಗವನ್ನು ನಿಯಂತ್ರಿಸಲು ಸಾಧ್ಯವೇ ಎಂಬ ಪ್ರಶ್ನೆಗಳು ಸಾರ್ವಜನಿಕರಿಂದ ಕೇಳಿಬರುತ್ತಿವೆ.

ಇದನ್ನೂ ಓದಿ:

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...