Homeಮುಖಪುಟಕೊರೋನಾ ಭೀತಿ: ರಾಜ್ಯ ಲಾಕ್‌ಡೌನ್ ಆದ್ರೆ ನಮ್ ಜೀವನ ಹೆಂಗೆ? ಆಟೋ ಚಾಲಕರ ಪ್ರಶ್ನೆ

ಕೊರೋನಾ ಭೀತಿ: ರಾಜ್ಯ ಲಾಕ್‌ಡೌನ್ ಆದ್ರೆ ನಮ್ ಜೀವನ ಹೆಂಗೆ? ಆಟೋ ಚಾಲಕರ ಪ್ರಶ್ನೆ

ಕೇರಳದಲ್ಲಿ ಎಲ್ಲರಿಗೂ ಅನುಕೂಲ ಮಾಡಿಕೊಟ್ಟೌರೆ. ಆಟೋದೋರು ಸಾಲ ಮಾಡಿದ್ರೆ ಸಾಲದ ಮೇಲಿನ ಸೇವಾ ಶುಲ್ಕ ರದ್ದು ಮಾಡಿದೆ. ಆದರೆ ನಮ್ಮ ರಾಜ್ಯದಲ್ಲಿ?

- Advertisement -
- Advertisement -

ಸರ್, ನಿಲ್ಲಿ ಅಂದ್ರು ಒಬ್ಬರು ಆಟೋ ಚಾಲಕರು. ಅವರು ನನಗೆ ಹಲವು ವರ್ಷಗಳಿಂದ ಪರಿಚಯಸ್ಥರು. ನೀವೇನೋ ಹೆಂಗೋ ಜೀವನ ನಡೆಸ್ತೀರ. ನಾವ್ ಹೆಂಗ್ ಮಾಡೋದೋ ಗೊತ್ತಾಗುತ್ತಿಲ್ಲ. ಒಂದಲ್ಲ, ಎರಡಲ್ಲ ಒಂದು ವಾರ್ ರಾಜ್ಯ ಲಾಕ್ ಡೌನ್ ಆಗುತ್ತಂತೆ. ನಮ್ಮ ದುಡಿಮೆಗೆ ಪೆಟ್ಟು ಬಿತ್ತು. ಅವೊತ್ತಿನ ದುಡಿಮೆಯಿಂದ ಅಂದು ಜೀವನ ನಡೆಸುತ್ತಿದ್ವಿ. ಈಗ ಮುಖ್ಯಮಂತ್ರಿ ನಾವೇನೂ ಮಾಡೋಕಾಗಲ್ಲ. ಲಾಕ್ ಡೌನ್ ಮಾಡ್ತೀವಿ ಅಂತಿದ್ದಾರೆ ಎಂದು ಅಳಲು ತೋಡಿಕೊಂಡರು. ಅವರ ಮುಖದಲ್ಲಿ ಆತಂಕ ಮನೆ ಮಾಡಿತ್ತು. ನೋವು ತೋಡಿಕೊಳ್ಳಲು ಅವರಿಗೆ ಒಬ್ಬರು ಬೇಕಿತ್ತು. ಅದೇ ಕಾರಣಕ್ಕೆ ನನ್ನ ಬಳಿ ಅಳಲು ತೋಡಿಕೊಂಡರು.

ನೋಡಿ ಸರ್, ಕೇರಳದಲ್ಲಿ ಎಲ್ಲರಿಗೂ ಅನುಕೂಲ ಮಾಡಿಕೊಟ್ಟೌರೆ. ಆಟೋದೋರು ಸಾಲ ಮಾಡಿದ್ರೆ ಸಾಲದ ಮೇಲಿನ ಸೇವಾ ಶುಲ್ಕ ರದ್ದು ಮಾಡಿದೆ. ಅಲ್ಲಿನ ಮುಖ್ಯಮಂತ್ರಿಗಳು ಬಡವರಿಗೆ ಎರಡು ತಿಂಗಳು ಮೊದಲೇ ದವಸ ಧಾನ್ಯ ಕೊಟ್ಟಿದ್ದಾರೆ. ಬಡವರಿಗೆ ಊಟ ಕೊಡ್ತಾರೆ. ನಮ್ಮಲ್ಲಿ ಮುಖ್ಯಮಂತ್ರಿಗಳು ಅಂತ ಕ್ರಮಗಳನ್ನು ಕೈಗೊಂಡಿಲ್ಲ. ಲಾಕ್ ಡೌನ್ ಅಂದ್ರ ಸುಮ್ನೆನೇ. ಆಟೋದವ್ರು ದುಡಿಮೆ ನಿಮಗೆ ಗೊತ್ತಲ್ಲ. ಮನೆ ಬಾಡಿಗೆ ಏನು ಮಾಡ್ಬೇಕು. ಸರ್, ಮನೆ ಓನರ್ ಎರಡು ತಿಂಗಳ ಬಾಡಿಗೆ ಮೊದ್ಲೇ ಹಾಕಿ ಅಂದ್ರು. ಹಾಕಿದೆ. ನಾನು ಮರು ಮಾತಾಡಲಿಲ್ಲ.ನಮ್ ಜೀವನ ನಡೆಯೋದು ಹೆಂಗೆ, ಏನೋ ನಮ್ ಗ್ರಹಚಾರ ಸರಿಯಿಲ್ಲ ಅಂದ್ರು.

ಇದು ಕೇವಲ ಒಬ್ಬ ಆಟೋ ಚಾಲಕರ ಪ್ರಶ್ನೆಯಲ್ಲ. ಎಲ್ಲಾ ಆಟೋ ಚಾಲಕರ ನೋವು ಆಗಿದೆ.  ನಗರದ ಜೀವ ದಂತೆ ಕೆಲಸ ಮಾಡುತ್ತಿದ್ದ ಆಟೋಗಳು ರಸ್ತೆಗೆ ಇಳಿಯುವಂತಿಲ್ಲ ಎಂಬ ಮಾತು ಕೇಳಿಬರುತ್ತಿರುವುದರಿಂದ ಆಟೋ ಚಾಲಕರ ಬದುಕು ಸಂಪೂರ್ಣ ಸ್ಥಬ್ದವಾಗಲಿದೆ. ದುಡಿಯುವವರು ಮನೆಯಲ್ಲಿ ಕೂತರೆ ಉಣ್ಣುವ ಕೈ ಏನು ಮಾಡಬೇಕು. ಮಕ್ಕಳ ಖರ್ಚು ವೆಚ್ಚ, ಮನೆ ಬಾಡಿಗೆ ಹೊಂದಿಸುವುದು ಹೇಗೆಂಬ ಪ್ರಶ್ನೆ ಬೃಹದಾಕಾರವಾಗಿ ಕಾಡತೊಡಗಿದೆ.

ನಾನುಗೌರಿ.ಕಾಮ್ ಜೊತೆ ಮಾತನಾಡಿದ ಸಿಪಿಎಂ ಮುಖಂಡ ಕೆ.ಎನ್.ಉಮೇಶ್, ಕೊರೊನ ವೈರಸ್ ಹರಡುತ್ತಿರುವುದರಿಂದ ಆಟೋಚಾಲಕರು ಸೇರಿದಂತೆ ಅಸಂಘಟಿತ ವಲಯದ ಕಾರ್ಮಿಕರ ಬದುಕು ದುಸ್ಥರ ವಾಗಲಿದೆ. ಹೀಗಾಗಿ ಆಟೋ ಚಾಲಕರ ಪ್ರತಿಯೊಬ್ಬರ ಖಾತೆಗೆ 6 ಸಾವಿರ ಹಣ ಹಾಕಬೇಕು. ಕಟ್ಟಬೇಕಾದ ಇಎಂಐಗಳನ್ನು ಮುಂದೂಡಬೇಕು. ಆಟೋಚಾಲಕರ ಬಡ್ಡಿ ಮನ್ನಾ ಮಾಡಬೇಕು. ಇದೆಲ್ಲವನ್ನೂ ಅಸಂಘಟಿತ ವಲಯದ ಭದ್ರತ ಮಂಡಳಿಯಿಂದ ಕೊಡಬೇಕು. ಆಟೋಚಾಲಕರು ಸೇರಿದಂತೆ ಎಲ್ಲಾ ಅಸಂಘಟಿತರಿಗೆ ಉಚಿತ ರೇಷನ್ ಕೊಡಬೇಕು. ಯುವಕರಿಗೆ ನಿರುದ್ಯೋಗ ಭತ್ಯ ಕೊಡಬೇಕು ಎಂದು ಒತ್ತಾಯಿಸಿದರು.

ಕೊರೊನ ರೋಗ ಹರಡುತ್ತಿರುವುದರಿಂದ ಅಸಂಘಟಿತ ಕಾರ್ಮಿಕರ ಬದುಕು ದಿಕ್ಕಾಪಾಲಾಗಿದೆ. ಬೀದಿಬದಿ ವ್ಯಾಪಾರಿಗಳು ಮೀಟರ್ ಬಡ್ಡಿಗೆ ಸಾಲ ತಂದು ವ್ಯಾಪಾರ ಮಾಡುತ್ತಾರೆ. ಆಟೋ ಚಾಲಕರು ಬಾಡಿಗೆ ಮೇಲೆ ಆಟೋವನ್ನು ರಸ್ತೆಗೆ ಇಳಿಸಿರುತ್ತಾರೆ. ಆಟೋ ರಸ್ತೆಗೆ ಇಳಿಯದಿದ್ದರೆ ಬಾಡಿಗೆ ಪಡೆಯುತ್ತಿದ್ದ ಚಾಲಕರು ಹೊಟ್ಟೆಗೆ ತಣ್ಣೀರು ಬಟ್ಟೆ ಹಾಕಿಕೊಳ್ಳುವಂತಹ ಪರಿಸ್ಥಿತಿ ನಿರ್ಮಾಣವಾಗಲಿದೆ. ಆಟೋಚಾಲಕರು ಹಲವು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಅವರಿಗೆ ಬೇರೆ ದುಡಿಯುವ ಮಾರ್ಗವಿಲ್ಲ. ಬೆಳಗಿನಿಂದ ಸಂಜೆಯವರೆಗೂ ಆಟೋ ಓಡಿಸಿಯೇ ಬದುಕಿನ ಬಂಡಿ ನಡೆಸಬೇಕು. ಇಲ್ಲದಿದ್ದರೆ ಅವರ ಪಾಡು ಹೇಳತೀರದು.

ಸಾಮಾನ್ಯ ಸಂದರ್ಭದಲ್ಲಿ ಒಂದು ದಿನ ನಡೆಯುವ ಮುಷ್ಕರ, ಬಂದ್‌ ಸಮಯದಲ್ಲೇ ಆಟೋ ಓಡಿಸದಿದ್ದರೆ ಸಂಕಷ್ಟಗಳನ್ನು ಎದುರಿಸುತ್ತೇವೆ. ಇನ್ನು ಒಂದು ವಾರ ಆಟೋಗಳನ್ನು ರಸ್ತೆಗೆ ಇಳಿಸದಿದ್ದರೆ ಬದುಕು ನಡೆಸುವುದು ಕಷ್ಟಕರ. ಕುಟುಂಬ ನಿರ್ವಹಣೆಗೆ ತೊಂದರೆಯಾಗಲಿದೆ. ನಗರಗಳಲ್ಲಿ ಪ್ರತಿನಿತ್ಯವೂ ಒಂದಲ್ಲ ಒಂದು ವಸ್ತುವನ್ನು ಕೊಳ್ಳಲೇಬೇಕು. ಅದಕ್ಕೆ ಹಣ ಬೇಕು. ದುಡಿಮೆ ಇಲ್ಲದಿದ್ದರೆ ದಿನಸಿ ವಸ್ತುಗಳನ್ನು ಖರೀದಿಸುವುದು ಹೇಗೆ? ಒಂದು ವಾರ ಆಟೋ ಇಳಿಯದಿದ್ದರೆ ಆಟೋಗಳು ಕೆಡುತ್ತವೆ ಎಂದು ಆಟೋಚಾಲಕ ಗಿರೀಶ್ ನೋವು ತೋಡಿಕೊಂಡರು.

ಸರ್ಕಾರಗಳು ಆರಂಭದಲ್ಲೇ ಮುನ್ನೆಚ್ಚರಿಕೆ ಕ್ರಮಗಳನ್ನು ವಹಿಸಬೇಕಿತ್ತು. ವಿದೇಶಗಳಿಂದ ಬರುತ್ತಿರುವವರನ್ನು ಮೊದಲೇ ಪ್ರತ್ಯೇಕವಾಗಿ ಇಡುವಂತಹ ವ್ಯವಸ್ಥೆ ಮಾಡಿದ್ದರೆ ಇಂತಹ ಸಮಸ್ಯೆ ಬರುತ್ತಿರಲಿಲ್ಲ. ಊರು ಹಾಳಾದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎನ್ನುವಂತೆ ದೇಶದಲ್ಲಿ ಕೊರೊನ ರೋಗ ಹರಡಿದ ಮೇಲೆ ಕ್ರಮ ಕೈಗೊಂಡರೆ ರೋಗವನ್ನು ನಿಯಂತ್ರಿಸಲು ಸಾಧ್ಯವೇ ಎಂಬ ಪ್ರಶ್ನೆಗಳು ಸಾರ್ವಜನಿಕರಿಂದ ಕೇಳಿಬರುತ್ತಿವೆ.

ಇದನ್ನೂ ಓದಿ:

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...