Homeನಿಜವೋ ಸುಳ್ಳೋFact Check: ಕೊರೊನಾ ರೋಗಿಯನ್ನೇ ಪ್ರೇಮಿಸಿ, ನಿಶ್ಚಿತಾರ್ಥವಾದ ಡಾಕ್ಟರ್?

Fact Check: ಕೊರೊನಾ ರೋಗಿಯನ್ನೇ ಪ್ರೇಮಿಸಿ, ನಿಶ್ಚಿತಾರ್ಥವಾದ ಡಾಕ್ಟರ್?

- Advertisement -
- Advertisement -

ಕೊರೊನಾ ಕಾರಣಕ್ಕೆ ಆಸ್ಪತ್ರೆಯಲ್ಲಿ ದಾಖಲಾದ ಹುಡುಗ ಮತ್ತು ಅಲ್ಲಿ ಕೆಲಸ ಮಾಡುವು ಡಾಕ್ಟರ್‌ ನಡುವೆ ಪ್ರೇಮಾಂಕುರವಾಗಿದೆ. ಕೊರೊನಾ ರೋಗಿಯನ್ನೇ ಪ್ರೇಮಿಸಿ, ನಿಶ್ಚಿತಾರ್ಥವಾದ ಡಾಕ್ಟರ್! ಎಂಬ ಶೀರ್ಷಿಕೆಯಡಿ ಹಲವು ಫೋಟೊಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿವೆ.

ಈಜಿಪ್ಟ್‌ನಲ್ಲಿ ಈ ಘಟನೆ ಜರುಗಿದೆ, ಅಲ್ಲದೇ ಎರಡು ತಿಂಗಳ ನಂತರ ಆ ಡಾಕ್ಟರ್‌ಗೆ ಆತ ಆಸ್ಪತ್ರೆಯಲ್ಲಿಯೇ ರಿಂಗ್ ತೊಡಿಸಿ ನಿಶ್ಚಿತಾರ್ಥವಾಗಿದ್ದಾರೆ. ಇದು ನಿಜವಾದ ಪ್ರೇಮ ಎಂದರೆ ಎಂಬುದಾಗಿ ಎಲ್ಲೆಡೆ ಸುದ್ದಿ ಹರಿಬಿಡಲಾಗಿದೆ.

ಅಫಕ್‌ ಖಾನ್‌ ಎಂಬುವವರು ಫೇಸ್‌ಬುಕ್‌ನಲ್ಲಿ ಇದನ್ನು ಹಾಕಿದರೆ ಪಂಜಾಬ್‌ ಕೇಸರಿ ಎಂಬ ಪತ್ರಿಕೆಯೂ ಇದೇ ಫೋಟೊಗಳನ್ನು ಬಳಸಿ ಲೇಖನ ಸಿದ್ದಪಡಿಸಿದೆ.

ವೈರಲ್‌ ಆದ ಹಲವು ಫೋಟೊಗಳಲ್ಲಿ ಒಂದರಲ್ಲಿ ರೋಗಿಯ ಬಟ್ಟೆ ಧರಿಸಿರುವ ವ್ಯಕ್ತಿಯು ಡಾಕ್ಟರ್‌ಗೆ ಉಂಗುರ ತೊಡಿಸಿತ್ತಿರುವುದು ಕಂಡರೆ, ಮತ್ತೊಂದರಲ್ಲಿ ಒಬ್ಬರನ್ನೊಬ್ಬರು ತದೇಕಚಿತ್ತದಿಂದ ನೋಡುವ ಫೋಟೊ ಕಾಣಸಿಗುತ್ತವೆ.

ಫ್ಯಾಕ್ಟ್‌ಚೆಕ್‌

ಈ ಚಿತ್ರಗಳ ಮೂಲ ಹಿಡಿದು ಹೊರಟಾಗ ಸಿಕ್ಕಿದ್ದು ಅರೇಬಿಕ್‌ ಭಾಷೆಯ ಫೇಸ್‌ಬುಕ್‌ ಪೋಸ್ಟ್‌ಗಳು. ಮೇ 25 ರಂದು ಮೊಹಮ್ಮದ್ ಸೇಲಿಮ್ ಎಂಬುವವರು ತೆಗೆದ ಫೋಟೊಗಳನ್ನು ಫೇಸ್‌ಬುಕ್‌ನಲ್ಲಿ ಹಂಚಿಕೊಂಡಿದ್ದಾರೆ. ಅದನ್ನು ಮೊಹಮ್ಮದ್‌ ಫಾಯ್ಮಿ ಮತ್ತು ಆಯಾ ಬೋಸ್ಬಾ ಎಂಬುವವರಿಗೆ ಟ್ಯಾಗ್‌ ಮಾಡಿದ್ದು ಅವರೇ ಆ ಚಿತ್ರದಲ್ಲಿರುವವರಾಗಿದ್ದಾರೆ. ಅವರಿಬ್ಬರೂ ಸಹ ವೈದ್ಯರಾಗಿದ್ದು, ಅವರಿಗೆ ಕೊರೊನಾ ಸೋಂಕು ತಗುಲಿಲ್ಲ ಎಂದು ದೃಢಪಟ್ಟಿದೆ.

#Discount 10 % & 20 %#Mohamed_Fahmy & #Aya_À_Mosbah#Photographer & #Editor :…

Posted by Mohamed Selim Photography on Sunday, May 24, 2020

ಆ ಇಬ್ಬರೂ ಜೋಡಿಗಳು 2018 ರಿಂದಲೂ ಪರಸ್ಪರ ಪ್ರೀತಿಸುತ್ತಿದ್ದಾರೆ. ಈ ಕೊರೊನಾ ಸಾಂಕ್ರಾಮಿಕ ಕಾಲದಲ್ಲಿ ಅವರು ಮದುವೆಯಾಗಿದ್ದು ಅದರ ಅದು ಪ್ರಿ ವೆಡ್ಡಿಂಗ್ ಫೋಟೊ ಶೂಟ್‌ನ ಫೋಟೊಗಳು ಇವಾಗಿವೆ. ಅವರು ಆಸ್ಪತ್ರೆಯಲ್ಲಿಯೂ ಸಹ ಫೋಟೊಶೂಟ್‌ ಮಾಡಿಸಿಕೊಂಡಿದ್ದು ಅದೇ ಫೋಟೊಗಳು ಕೊರೊನಾ ರೋಗಿಯ ಜೊತೆಗೆ ವೈದ್ಯರ ನಿಶ್ಚಿತಾರ್ಥ ಎಂಬ ತಪ್ಪು ಹೆಸರಿನಲ್ಲಿ ವೈರಲ್‌ ಆಗಿವೆ ಅಷ್ಟೇ.

ಇದನ್ನು ಫೋಟೊಗ್ರಾಫರ್‌ ಮೊಹಮ್ಮದ್ ಸೇಲಿಮ್ ಸ್ಪಷ್ಟಪಡಿಸಿದ್ದು, ಆ ಇಬ್ಬರೂ ಜೋಡಿಗಳು ಚೆನ್ನಾಗಿದ್ದಾರೆ. ಅವರಿಗೆ ಯಾವುದೇ ಸೋಂಕು ಇಲ್ಲ ಎಂದು ದೃಢಪಡಿಸಿದ್ದಾರೆ.


ಇದನ್ನೂ ಓದಿ: ಸುಪ್ರೀಂ ಕೋರ್ಟ್‌ನಲ್ಲಿ ಸುಳ್ಳು ವಾಟ್ಸಾಪ್ ಫಾರ್ವಾಡ್ ಸಂದೇಶವನ್ನು ಉಲ್ಲೇಖಿಸಿದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಟಿಎಂಸಿ ಹೆಸರು, ಚಿಹ್ನೆ ಫ್ರೀಜ್: ಮಮತಾ ಬ್ಯಾನರ್ಜಿಗೆ ‘ಫುಟ್‌ಬಾಲ್ ಪ್ಲೇಯರ್’, ಬಂಡಾಯ ಬಣಕ್ಕೆ ‘ಲಕೋಟೆ’ ಚಿಹ್ನೆ ನೀಡಿದ ಚುನಾವಣಾ ಆಯೋಗ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂಲ ಹೆಸರು ಮತ್ತು ಸಾಂಪ್ರದಾಯಿಕ 'ಹೂವು-ಹುಲ್ಲು' ಚಿಹ್ನೆಯನ್ನು ಮುಟ್ಟುಗೋಲು (ಫ್ರೀಜ್) ಹಾಕಿದ ನಂತರ, ಭಾರತೀಯ ಚುನಾವಣಾ ಆಯೋಗವು ಶುಕ್ರವಾರ ಎರಡೂ ಎದುರಾಳಿ ಬಣಗಳಿಗೆ ಪ್ರತ್ಯೇಕ ಮಧ್ಯಂತರ ಹೆಸರು...

‘ರೋಹಿತ್ ವೇಮುಲಾ ಸ್ಥಿತಿ ನನಗೆ ಬಾರದಿರಲಿ..’; ವಿದೇಶದಲ್ಲಿ ಕಷ್ಟಕ್ಕೆ ಸಿಲುಕಿದ ತಮಿಳುನಾಡಿನ ದಲಿತ ಸಂಶೋಧಕ

ಮಲೇಷ್ಯಾದಲ್ಲಿ ಪಿಎಚ್‌ಡಿ ವ್ಯಾಸಂಗ ಮಾಡುತ್ತಿರುವ ತಮಿಳುನಾಡಿನ ದಲಿತ ಸಂಶೋಧನಾ ವಿದ್ಯಾರ್ಥಿ ಭಾರತಿ ದಾಸನ್ ರಾಮನ್, ತಮಿಳುನಾಡು ಸರ್ಕಾರದ ಸಾಮಾಜಿಕ ನ್ಯಾಯ ಇಲಾಖೆಯು ನನ್ನನ್ನು ಗುರಿಯಾಗಿಸಿಕೊಂಡಿದೆ ಎಂದು ಆರೋಪಿಸಿದ್ದಾರೆ ಎಂದು 'ದಿ ನ್ಯೂಸ್‌ ಮಿನಿಟ್'...

DUSU ಚುನಾವಣೆ: ಮತದಾನ ಆರಂಭ; ವಿಜಯೋತ್ಸವ ಮೆರವಣಿಗೆಗೆ ದೆಹಲಿ ಹೈಕೋರ್ಟ್ ತಡೆ

ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘದ (DUSU) 2026-27ನೇ ಸಾಲಿನ ಚುನಾವಣೆಗೆ ಶುಕ್ರವಾರ (ಸೆ.18) ಮತದಾನ ಆರಂಭವಾಗಿದೆ. ಬೆಳಗಿನ ಅವಧಿಯ ಕಾಲೇಜುಗಳ ವಿದ್ಯಾರ್ಥಿಗಳಿಗೆ ಬೆಳಿಗ್ಗೆ 8:30ರಿಂದ ಮಧ್ಯಾಹ್ನ 1ರವರೆಗೆ ಹಾಗೂ ಸಂಜೆ ಕಾಲೇಜುಗಳ ವಿದ್ಯಾರ್ಥಿಗಳಿಗೆ...

ಕರಾವಳಿ ಇತಿಹಾಸದಲ್ಲೇ ಪ್ರಥಮ: ಮಂಗಳೂರಿನಲ್ಲಿ ಸಿಎಂ ‘ಡಿ.ಕೆ ಶಿವಕುಮಾರ್’ ನೇತೃತ್ವದಲ್ಲಿ ರಾಜ್ಯ ಸಚಿವ ಸಂಪುಟ ಸಭೆ

ಕರಾವಳಿ ಕರ್ನಾಟಕದ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ರಾಜ್ಯ ಸಚಿವ ಸಂಪುಟ (Cabinet) ಸಭೆಯು ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಪಡೀಲ್‌ನಲ್ಲಿರುವ ನೂತನ 'ಪ್ರಜಾ ಸೌಧ'ದಲ್ಲಿ (ಜಿಲ್ಲಾಡಳಿತ ಸೌಧ) ಶುಕ್ರವಾರ ವಿಜೃಂಭಣೆಯಿಂದ ಆರಂಭವಾಗಿದೆ....

ಟಿಎಂಸಿ ಹೆಸರು, ಚಿಹ್ನೆ ಬಳಕೆಗೆ ತಡೆ: ಚುನಾವಣಾ ಆಯೋಗದ ಆದೇಶ ‘ಕಾನೂನಿಗೆ ವಿರುದ್ಧ’ ಎಂದ ಮಮತಾ ಬಣ, ಆದೇಶ ಸ್ವಾಗತಿಸಿದ ಬಂಡಾಯ ಪಾಳಯ 

ಕೊಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತ ರಾಜಕಾರಣದಲ್ಲಿ ಪ್ರಮುಖ ಶಕ್ತಿಯಾಗಿರುವ ತೃಣಮೂಲ ಕಾಂಗ್ರೆಸ್‌ (ಟಿಎಂಸಿ)ಯ ಆಂತರಿಕ ಬಿಕ್ಕಟ್ಟು ಇದೀಗ ಪಕ್ಷದ ಹೆಸರು ಮತ್ತು ಚುನಾವಣಾ ಚಿಹ್ನೆಯ ಮೇಲಿನ ಹಕ್ಕಿನ ಸಂಘರ್ಷವಾಗಿ ತೀವ್ರಗೊಂಡಿದೆ. ಟಿಎಂಸಿಯ ಎರಡು...

ಅಕ್ರಮ ಕಲ್ಲು ಗಣಿಗಾರಿಕೆ ಆರೋಪ: ಸಚಿವ ರುದ್ರಪ್ಪ ಲಮಾಣಿಗೆ 3 ಕೋಟಿ ರೂ. ದಂಡ

ಕಲ್ಲು ಗಣಿಗಾರಿಕೆ ನಡೆಸುವ ವೇಳೆ ಸಾಲು ಸಾಲು ನಿಯಮಗಳನ್ನು ಉಲ್ಲಂಘಿಸಲಾಗಿದೆ ಎಂಬ ಗಂಭೀರ ಆರೋಪಕ್ಕೆ ಸಂಬಂಧಿಸಿದಂತೆ ಜವಳಿ ಮತ್ತು ಸಕ್ಕರೆ ಖಾತೆ ಸಚಿವ ಶ್ರೀ ರುದ್ರಪ್ಪ ಮಾನಪ್ಪ ಲಮಾಣಿ ಅವರಿಗೆ ಗಣಿ ಮತ್ತು...

ಪಶ್ಚಿಮ ಬಂಗಾಳ SIR: 38 ಲಕ್ಷ ಮೇಲ್ಮನವಿಗಳಲ್ಲಿ ವಿಲೇವಾರಿಯಾಗಿದ್ದು ಕೇವಲ 1 ಲಕ್ಷ

ಪಶ್ಚಿಮ ಬಂಗಾಳದಲ್ಲಿ ನಡೆದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (SIR) ಸಂಬಂಧಿಸಿದಂತೆ ಸಲ್ಲಿಕೆಯಾಗಿರುವ ಬೃಹತ್ ಪ್ರಮಾಣದ ಮೇಲ್ಮನವಿಗಳ ಪೈಕಿ ವಿಲೇವಾರಿಯಾದ ಅರ್ಜಿಗಳ ಸಂಖ್ಯೆ ತೀರಾ ಕನಿಷ್ಠ ಮಟ್ಟದಲ್ಲಿದೆ ಎಂಬ ಆಘಾತಕಾರಿ ಮಾಹಿತಿ...

ಕರ್ನಾಟಕ ಎಸ್‌ಐಆರ್: ತಡವಾಗಿ ತಲುಪಿದ ನೋಟಿಸ್‌ಗಳಿಂದ ವಿಚಾರಣಾ ಕೇಂದ್ರಗಳಲ್ಲಿ ಜನದಟ್ಟಣೆ; ಮತದಾರರಲ್ಲಿ ಗೊಂದಲ

ಬೆಂಗಳೂರು: ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ನೋಟಿಸ್‌ಗಳನ್ನು ಮತದಾರರಿಗೆ ತಲುಪಿಸುವಲ್ಲಿ ಉಂಟಾಗುತ್ತಿರುವ ವಿಳಂಬವು ಹಲವು ಕಡೆ ವಿಚಾರಣಾ ಕೇಂದ್ರಗಳಲ್ಲಿ ಜನದಟ್ಟಣೆ ಮತ್ತು ಗೊಂದಲಕ್ಕೆ ಕಾರಣವಾಗುತ್ತಿದೆ. ‘ನೋ-ಮ್ಯಾಪಿಂಗ್’...

ನಾಸಿಕ್‌| ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರು

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ನಿಫಾದ್ ನಗರ ಪಂಚಾಯತ್ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿಯನ್ನು ಖಂಡಿಸಿ ಮತ್ತು ಅಧಿಕಾರಿಗಳ ನಿರ್ಲಕ್ಷ್ಯವನ್ನು ಖಂಡಿಸಿದ ಪ್ರತಿಭಟನಾಕಾರರ ಗುಂಪೊಂದು ನಗರ ಪಂಚಾಯತ್ ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು...

ವಿವಾಹಿತೆ ಮೇಲೆ ಅತ್ಯಾಚಾರ ಆರೋಪ : ಬಿಜೆಪಿ ಮಾಜಿ ಶಾಸಕನ ವಿರುದ್ಧ ಎಫ್‌ಐಆರ್

ಗನ್‌ ಪಾಯಿಂಟ್‌ ಇಟ್ಟು ಬೆದರಿಸಿ 22 ವರ್ಷದ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಮಹಾರಾಷ್ಟ್ರದ ಬಿಜೆಪಿ ಮಾಜಿ ಶಾಸಕ ಮತ್ತು ವಜಾಗೊಂಡಿರುವ ಪೊಲೀಸ್ ಸಿಬ್ಬಂದಿಯೊಬ್ಬರ ವಿರುದ್ಧ ಗುರುವಾರ (ಸೆ.17)...