Homeಕರ್ನಾಟಕಕೊರೊನಾದಿಂದ ಮೃತಪಟ್ಟವರ ಜಮೀನಿನಲ್ಲೇ ಮೃತರ ಅಂತ್ಯ ಸಂಸ್ಕಾರಕ್ಕೆ ಅನುಮತಿ

ಕೊರೊನಾದಿಂದ ಮೃತಪಟ್ಟವರ ಜಮೀನಿನಲ್ಲೇ ಮೃತರ ಅಂತ್ಯ ಸಂಸ್ಕಾರಕ್ಕೆ ಅನುಮತಿ

- Advertisement -
- Advertisement -

ರಾಜ್ಯದಲ್ಲಿ ಕೊರೊನಾ ಉಲ್ಬಣ ಜಾಸ್ತಿಯಾಗಿದ್ದು, ಕೊರೊನಾಗೆ ಬಲಿಯಾಗುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಿದೆ. ಮೃತಪಟ್ಟವರ ಅಂತ್ಯಕ್ರಿಯೆ ನಡೆಸಲು ಚಿತಾಗಾರಗಳ ಬಳಿ ಸಾಲುಗಟ್ಟಿ ನಿಲ್ಲುವಂತಾಗಿದೆ. ಇಂತಹ ಸ್ಥಿತಿಯಲ್ಲಿ ಮೃತರ ಜಮೀನನಲ್ಲೇ ಶವಸಂಸ್ಕಾರಕ್ಕೆ ರಾಜ್ಯ ಸರ್ಕಾರ ಅವಕಾಶ ನೀಡಿದೆ.

ಕೊರೊನಾ ಎರಡನೇ ಅಲೆಯಲ್ಲಿ ಸಾವಿನ ಸಂಖ್ಯೆ ಹೆಚ್ಚಾಗಿದ್ದು, ಚಿತಾಗಾರಗಳ ಬಳಿ ದಟ್ಟನೆ ಹೆಚ್ಚಾಗಿದೆ. ಚಿತಾಗಾರಗಳ ಬಳಿ ಶವಸಂಸ್ಕಾರಕ್ಕೂ ಪರದಾಡುವಂತಾಗಿದೆ. ಹೀಗಾಗಿ ರಾಜ್ಯ ಸರ್ಕಾರವು  ಕೊರೊನಾದಿಂದ ಮೃತಪಟ್ಟವರ ಶವಗಳನ್ನು ಮೃತಪಟ್ಟವರ ಸಂಬಂಧಿಕರ ಒಡೆತನದ ಖಾಸಗಿ ಭೂಮಿಯಲ್ಲಿ ಹೂಳಲು ಅಥವಾ ಸುಡಲು ಅನುಮತಿ ನೀಡಿದೆ.

ಶವಸಂಸ್ಕಾರ ಮಾಡಲು ಕೊರೊನಾ ಮಾರ್ಗಸೂಚಿಗಳನ್ನು ಅನುಸರಿಸಬೇಕು. ಡಿಹೆಚ್‌ಒ ಯಿಂದ ಅನುಮತಿ ಪಡೆದು ಸಂಸ್ಕಾರ ನಡೆಸಬೇಕು. ಸಂಸ್ಕಾರದ ವೇಳೆ ಮಾರ್ಗಸೂಚಿ ಉಲ್ಲಂಘಿಸುವಂತಿಲ್ಲ. ಪ್ರೋಟೋಕಾಲ್ ಪ್ರಕಾರವೇ ಶವಸಂಸ್ಕಾರ ಮಾಡಬಹುದು. ಜಮೀನು, ತೋಟಗಳಲ್ಲಿ‌ ಅಂತ್ಯಸಂಸ್ಕಾರ ನಡೆಸಬಹುದು ಎಂದು ಕಂದಾಯ ಸಚಿವ ಆರ್‌. ಅಶೋಕ್ ಹೇಳಿದ್ದಾರೆ.

ಇದನ್ನೂ ಓದಿ: ಮೃತರ ಗೌರವಯುತ ವಿದಾಯಕ್ಕೂ ಅವಕಾಶ ಮಾಡದ ಯಾವ ಸೀಮೆಯ ಸರ್ಕಾರವಿದು: ಡಿ.ಕೆ.ಶಿವಕುಮಾರ್‌ ಆಕ್ರೋಶ

ಇದರ ಜೊತೆಗೆ ಕೊರೊನಾ ಸೋಂಕಿನಿಂದ ಮೃತ ಪಟ್ಟವರ ಅಂತ್ಯಸಂಸ್ಕಾರಕ್ಕಾಗಿ ಬೆಂಗಳೂರು ನಗರದ ವ್ಯಾಪ್ತಿಯಲ್ಲಿ ಆರು ಕಡೆಗಳಲ್ಲಿ ಜಮೀನು ಗುರುತಿಸಲಾಗಿದೆ ಎಂದು ಸಚಿವ ಅಶೋಕ್ ಹೇಳಿದ್ದಾರೆ.

ತಾವರೆಕೆರೆಯಲ್ಲಿ 4 ಎಕರೆ ಜಮೀನು ಗುರುತಿಸಲಾಗಿದೆ. ಸಾಂಪ್ರದಾಯಿಕವಾಗ ಶವಸಂಸ್ಕಾರಕ್ಕೆ ಸಿದ್ಧತೆ ನಡೆಸಲಾಗಿದೆ. ಇನ್ನೂ ಐದು ಕಡೆ ವ್ಯವಸ್ಥೆ ಮಾಡಲಾಗುವುದು. ಅಲ್ಲಿ ತೆರೆದ ಸ್ಥಳದಲ್ಲಿ ಅಂತ್ಯಸಂಸ್ಕಾರಕ್ಕೆ ಅವಕಾಶ ಕಲ್ಪಿಸಲಾಗುವುದು ಎಂದು ಕಂದಾಯ ಸಚಿವ ಆರ್‌.ಅಶೋಕ್ ಹೇಳಿದ್ದಾರೆ.


ಇದನ್ನೂ ಓದಿ: ಬಿಜೆಪಿ ನಾಯಕರು ಚುನಾವಣೆ ಬಗ್ಗೆ ಮಾತ್ರ ಚಿಂತಿತರಾಗಿದ್ದಾರೆ, ಆಡಳಿತದ ಬಗ್ಗೆ ಅಲ್ಲ: ಸಿದ್ದರಾಮಯ್ಯ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...