Homeಕರೋನಾ ತಲ್ಲಣಈ ಊರಿನಲ್ಲಿ ಮರವೇ ಕೊರೊನಾ ಕೇಂದ್ರ, ಕೊಂಬೆಗಳಲ್ಲಿ ನೇತಾಡುತ್ತವೆ ಗ್ಲೂಕೋಸ್ ಬಾಟಲ್‌ಗಳು!

ಈ ಊರಿನಲ್ಲಿ ಮರವೇ ಕೊರೊನಾ ಕೇಂದ್ರ, ಕೊಂಬೆಗಳಲ್ಲಿ ನೇತಾಡುತ್ತವೆ ಗ್ಲೂಕೋಸ್ ಬಾಟಲ್‌ಗಳು!

- Advertisement -
- Advertisement -

ಮರದ ಕೆಳಗೆ ಹಾಸಿಗೆಯ ಮೇಲೆ ಮಲಗಿರುವ ಕೊರೊನಾ ಸೋಂಕಿತ ರೋಗಿಗಳು, ಮರದ ಕೊಂಬೆಯಿಂದ ನೇತಾಡುವ ಗ್ಲೂಕೋಸ್ ಬಾಟಲ್‌ಗಳು, ಸುತ್ತಲೂ ಮೇಯುತ್ತಿರುವ ಹಸುಗಳು, ನೆಲದ ಮೇಲೆ ಅಲ್ಲಲ್ಲಿ ಬಿದ್ದಿರುವ ಸಿರಂಜ್‌ಗಳು ಮತ್ತು ಖಾಲಿ ಔಷಧಿ ಬಾಟಲ್‌ಗಳು…ಇಂತಹ ಒಂದು ದೃಶ್ಯಕ್ಕೆ ಸಾಕ್ಷಿಯಾಗಿರುವುದು ಉತ್ತರ ಪ್ರದೇಶದ ಹಳ್ಳಿ.

ಕೊರೊನಾ ತೀವ್ರವಾಗಿ ಆವರಿಸಿರುವ ಉತ್ತರ ಪ್ರದೇಶದಲ್ಲಿ ಹಳ್ಳಿಗಳ ಸ್ಥಿತಿ ನಿಜಕ್ಕೂ ದಾರುಣವಾಗಿದೆ. ರಾಷ್ಟ್ರ ರಾಜಧಾನಿ ದೆಹಲಿಯಿಂದ 90 ನಿಮಿಷಗಳ ಪ್ರಯಾಣದ ದೂರವಿರುವ ಮೇವ್ಲಾ ಗೋಪಾಲ್‌ಗಢದಲ್ಲಿ ವೈದ್ಯರು ಮತ್ತು ಆರೋಗ್ಯ ಸೌಲಭ್ಯ ಯಾವುದೂ ಇಲ್ಲ.

ಈ ಹಳ್ಳಿಗೆ ಹತ್ತಿರದಲ್ಲಿ ಸರ್ಕಾರಿ ಆಸ್ಪತ್ರೆ ಇದೆ ಆದರೆ ಅದರಲ್ಲಿ ಕೊರೊನಾ ಸೋಂಕಿತರಿಗೆ ಹಾಸಿಗೆಗಳು ಲಭ್ಯವಿಲ್ಲ ಎನ್ನಲಾಗಿದೆ. ಇತ್ತ ಹಳ್ಳಿಯ ಗ್ರಾಮಸ್ಥರು ಖಾಸಗಿ ಆಸ್ಪತ್ರೆಗಳಿಗೆ ಹೋಗಿ ಚಿಕಿತ್ಸೆ ಪಡೆಯುವಷ್ಟು ತಾವು ಆರ್ಥಿಕವಾಗಿ ಗಟ್ಟಿಯಾಗಿಲ್ಲ ಎಂದು ಹೇಳುತ್ತಾರೆ.

ಇದನ್ನೂ ಓದಿ: ಉತ್ತರ ಪ್ರದೇಶ: ಒಂದೇ ಹಳ್ಳಿಯಲ್ಲಿ ತಿಂಗಳಲ್ಲಿ 60ಕ್ಕೂ ಹೆಚ್ಚು ಸಾವು, ಕಡೆ ಪಕ್ಷ ಕೊರೊನಾ ಟೆಸ್ಟ್ ಕೂಡ ಮಾಡಿಸದ ಅಧಿಕಾರಿಗಳು!

ಸರ್ಕಾರಿ ವೈದ್ಯರು ಇಲ್ಲ, ಖಾಸಗಿ ಆಸ್ಪತ್ರೆಗಳಿಗೆ ಹೋಗಲು ಆಗದ ಇಲ್ಲಿನ ಜನರಿಗೆ ಹಳ್ಳಿಯ ವೈದ್ಯರೇ ತೆರೆದ ಚಿಕಿತ್ಸಾಲಯವನ್ನು (open-air clinic) ಸ್ಥಾಪಿಸಿದ್ದಾರೆ. ಅಲ್ಲಿ ಈ ವೈದ್ಯರು ಕೊರೊನಾ ರೋಗಲಕ್ಷಣಗಳನ್ನು ಹೊಂದಿರುವ ರೋಗಿಗಳಿಗೆ ಗ್ಲೂಕೋಸ್ ಮತ್ತು ಇತರ ಚಿಕಿತ್ಸೆಗಳನ್ನು ನೀಡುತ್ತಾರೆ.

ಔಷಧೀಯ ಗುಣಗಳಿಗೆ ಹೆಸರುವಾಸಿಯಾದ ಬೇವಿನ ಮರದ ಕೆಳಗೆ ಮಲಗಿರುವುದು ಆಮ್ಲಜನಕದ ಮಟ್ಟವನ್ನು ಹೆಚ್ಚಿಸುತ್ತದೆ ಎಂದು ಗ್ರಾಮಸ್ಥರು ನಂಬುತ್ತಾರೆ. ಈ ನಂಬಿಕೆಗೆ ಅಥವಾ ಇತರ ಕೆಲವು ಪರಿಹಾರಗಳಿಗೆ ಯಾವುದೇ ವೈಜ್ಞಾನಿಕ ಆಧಾರಗಳಿಲ್ಲ.

In Village's New Hospital, Glucose Drips Hanging from Neem Trees for COVID  Patients Below - The Wire Science

ಇದನ್ನೂ ಓದಿ: ‘ಭಾರತದಲ್ಲಿ ಕೊರೊನಾ ಇಳಿಮುಖ’- ಅಂಕಿ ಅಂಶ ವಿಶ್ವಾಸಾರ್ಹವಲ್ಲವೆಂದ WHO ವಿಜ್ಞಾನಿ

ಕೆಲವು ದಿನಗಳ ಹಿಂದೆ ಜ್ವರದಿಂದ ತಮ್ಮ 74 ವರ್ಷದ ತಂದೆಯನ್ನು ಕಳೆದುಕೊಂಡಿರುವ ಗ್ರಾಮಸ್ಥ ಸಂಜಯ್ ಸಿಂಗ್, ತನ್ನ ತಂದೆಗೆ ಕೊರೊನಾ ಟೆಸ್ಟ್ ಮಾಡಲಿಲ್ಲ. ಜ್ವರ ಬಂದು ಎರಡು ದಿನಗಳಲ್ಲಿ ನಿಧನರಾದರು. ಜನರು ಸಾಯುತ್ತಿದ್ದಾರೆ. ಆದರೆ, ನಮ್ಮನ್ನು ನೋಡಿಕೊಳ್ಳಲು ಇಲ್ಲಿ ಯಾರೂ ಇಲ್ಲ” ಎಂದು ಹೇಳಿದ್ದಾರೆ.

“ಸತ್ಯವೇನೆಂದರೇ, ಹಳ್ಳಿಯಲ್ಲಿ ಯಾವುದೇ ಕೊರೊನಾ ಪರೀಕ್ಷೆ ನಡೆದಿಲ್ಲ. ನಾವು ಟೆಸ್ಟ್ ಮಾಡಿಸಲು ಪ್ರಯತ್ನಿಸಿದ್ದೇವೆ. ಆದರೆ ಅಧಿಕಾರಿಗಳು ಸಾಕಷ್ಟು ಸಿಬ್ಬಂದಿ ಇಲ್ಲ ಎಂದು ನಮಗೆ ತಿಳಿಸಿದ್ದಾರೆ” ಎಂದು ಗ್ರಾಮದ ಮಾಜಿ ಮುಖ್ಯಸ್ಥ 48 ವರ್ಷದ ಯೋಗೇಶ್ ತಲನ್ ಮಾಹಿತಿ ನೀಡಿದ್ದಾರೆ.

ಕೊರೊನಾ ಎರಡನೇ ಅಲೆ ನಿಯಂತ್ರಣಕ್ಕೆ ಸಿದ್ಧತೆ ನಡೆಸುವಲ್ಲಿ ವಿಫಲರಾಗಿದ್ದಾರೆ ಎಂಬ ಟೀಕೆಗಳನ್ನು ಎದುರಿಸುತ್ತಿರುವ ಪ್ರಧಾನಿ ನರೇಂದ್ರ ಮೋದಿ ಕಳೆದ ವಾರ ಮಾಡಿದ ಭಾಷಣದಲ್ಲಿ ಗ್ರಾಮಗಳಲ್ಲಿ ಸಾಂಕ್ರಾಮಿಕ ರೋಗ ಹರಡುತ್ತಿದೆ ಮತ್ತು ರೋಗಲಕ್ಷಣಗಳನ್ನು ನಿರ್ಲಕ್ಷಿಸಬೇಡಿ ಎಂದು ಜನರನ್ನು ಒತ್ತಾಯಿಸಿದ್ದಾರೆ.


ಇದನ್ನೂ ಓದಿ: ಕೊರೊನಾ ರೋಗಿಗಳ ಅಂತ್ಯಸಂಸ್ಕಾರ ಕಾಣಿಸದಂತೆ ಸ್ಮಶಾನಕ್ಕೆ ಶೀಟ್ ಗೋಡೆ ಹಾಕಿಸಿದ ಉತ್ತರ ಪ್ರದೇಶ ಸರ್ಕಾರ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....

‘ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆ..’; ಕೇಂದ್ರದ ಯುಜಿಸಿ ನಿಯಮಗಳನ್ನು ಪ್ರಶಂಸಿದ ಸಿಎಂ ಸ್ಟಾಲಿನ್

ಯುಜಿಸಿ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಈಕ್ವಿಟಿ ಪ್ರಚಾರ) ನಿಯಮಗಳು, 2026 "ಆಳವಾಗಿ ಬೇರೂರಿರುವ ತಾರತಮ್ಯ ಮತ್ತು ಸಾಂಸ್ಥಿಕ ನಿರಾಸಕ್ತಿಯಿಂದ ಬಳಲುತ್ತಿರುವ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುವಲ್ಲಿ ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆಯಾಗಿದೆ" ಎಂದು ತಮಿಳುನಾಡು...

ಹಿರಿಯ ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್ ನಿಧನ

ಕಳೆದ ನಾಲ್ಕು ದಶಕಗಳಿಂದ ಸಾರಿಗೆ ಕ್ಷೇತ್ರದ ಕಾರ್ಮಿಕರ ಪರವಾಗಿ ಧ್ವನಿ ಎತ್ತುತ್ತಿದ್ದ, ಕಾರ್ಮಿಕರ ಹಿತರಕ್ಷಣೆಗಾಗಿ ನಿರಂತರ ಹೋರಾಟ ನಡೆಸುತ್ತಿದ್ದ ಹಿರಿಯ ಕಾರ್ಮಿಕ ಮುಖಂಡ ಎಚ್‌.ವಿ ಅನಂತ ಸುಬ್ಬರಾವ್ ಅವರು ಜನವರಿ 28ರಂದು, ನಿಧನರಾಗಿದ್ದಾರೆ....

ಮುಡಾ ಪ್ರಕರಣ: ಸಿದ್ದರಾಮಯ್ಯಗೆ ಬಿಗ್ ರಿಲೀಫ್, ಲೋಕಾಯುಕ್ತ ಬಿ ರಿಪೋರ್ಟ್ ಪುರಸ್ಕರಿಸಿದ ಕೋರ್ಟ್

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಕುಟುಂಬದ ವಿರುದ್ಧ ಪುರಾವೆಗಳಿಲ್ಲ ಎಂದು ಹೇಳಿ ‘ಕ್ಲೀನ್ ಚೀಟ್’ ನೀಡಿ ‘ಬಿ’ ರಿಪೋರ್ಟ್ ಅನ್ನು ಸಲ್ಲಿಸಿತ್ತು....

ಪಿಟಿಸಿಎಲ್‌ ಕಾಯ್ದೆ ತಿದ್ದುಪಡಿ- ಕೋರ್ಟ್‌ಗಳಲ್ಲಿ ದಲಿತರಿಗೆ ಆಗುತ್ತಿರುವ ಅನ್ಯಾಯ ಖಂಡಿಸಿ ರಾಜ್ಯದಾದ್ಯಂತ ಪ್ರತಿಭಟನೆ

ಪಿಟಿಸಿಎಲ್‌ ಕಾಯ್ದೆ, 1978ರ 2023ರ ತಿದ್ದುಪಡಿ ಕಾಯ್ದೆಯ ವಿರೋಧಿಸಿ ಹಾಗೂ ಕಂದಾಯ ಇಲಾಖೆಯ ಎಸಿ, ಡಿಸಿ ನ್ಯಾಯಾಲಯಗಳು ಹಾಗೂ ಹೈಕೋರ್ಟ್, ಸುಪ್ರೀಂ ಕೋರ್ಟ್‌ಗಳಲ್ಲಿ ಆಗುತ್ತಿರುವ ಅನ್ಯಾಯವನ್ನು ಖಂಡಿಸಿ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ...

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್‌ಗೆ ಜಾಮೀನು

ಪತ್ತನಂತಿಟ್ಟ: ಈ ತಿಂಗಳ ಆರಂಭದಲ್ಲಿ ಬಂಧಿಸಲ್ಪಟ್ಟ ಮೂರನೇ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್ ಅವರಿಗೆ ಕೇರಳ ನ್ಯಾಯಾಲಯ ಬುಧವಾರ ಜಾಮೀನು ನೀಡಿದೆ. ಶಾಸಕರು ಸಲ್ಲಿಸಿದ್ದ ಮೇಲ್ಮನವಿಯನ್ನು ಪರಿಗಣಿಸಿದ್ದ ಪತ್ತನಂತಿಟ್ಟ...