Homeಕರೋನಾ ತಲ್ಲಣಒಂದೇ ಕುಟುಂಬದ 16 ಜನರಿಗೆ ಕೊರೊನಾ: ಮನೆಯಲ್ಲಿದ್ದುಕೊಂಡೇ ಎಲ್ಲರೂ ಗುಣಮುಖ

ಒಂದೇ ಕುಟುಂಬದ 16 ಜನರಿಗೆ ಕೊರೊನಾ: ಮನೆಯಲ್ಲಿದ್ದುಕೊಂಡೇ ಎಲ್ಲರೂ ಗುಣಮುಖ

ಈ ಕುಟುಂಬದಲ್ಲಿ ಹತ್ತು ತಿಂಗಳ ಶಿಶು, ಮೂರು ವರ್ಷದ ಒಳಗಿನ ನಾಲ್ಕು ಮಕ್ಕಳು ಮತ್ತು 45 ವರ್ಷ ಮೇಲ್ಪಟ್ಟವರು ಸಹ ಗುಣಮುಖರಾಗಿದ್ದಾರೆ.

- Advertisement -
- Advertisement -

ಕೊರೊನಾ ಎರಡನೇ ಅಲೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಈ ವೇಳೆ ಹುಬ್ಬಳ್ಳಿ ತಾಲೂಕಿನ ಸುಳ್ಳ ಗ್ರಾಮದ ಒಂದೇ ಕುಟುಂಬದ 16 ಜನಕ್ಕೆ ಕೊರೊನಾ ಪಾಸಿಟಿವ್ ಆಗಿದ್ದು, ಹೋಮ್ ಐಸೋಲೇಷನ್‌ಗೆ ಒಳಪಟ್ಟು, ವೈದ್ಯರು ಮತ್ತು ಆಶಾ ಕಾರ್ಯಕರ್ತೆಯರು ಸೂಚಿಸಿದ ಔಷಧಿ ಸೇವಿಸಿ, ಅವರು ಹೇಳಿದ ಗೈಡ್‌ಲೈನ್ಸ್ ಪಾಲಿಸಿ ಕೊರೊನಾದಿಂದ ವಿಮುಕ್ತರಾಗಿದ್ದಾರೆ. ಒಂದನೇ ಅಲೆಯಲ್ಲಿ ಹೀಗೇ ಹಲವು ಕುಟುಂಬಗಳು ಮನೆಯಲ್ಲೇ ಇದ್ದು ಕೊರೊನಾ ಹಿಮ್ಮೆಟ್ಟಿಸಿದ್ದವು.

ಇಲ್ಲಿ ಒಟ್ಟು ಸಾರಾಂಶವೆಂದರೆ, ಈ ಕುಟುಂಬದ ಪಾಸಿಟಿವ್ ಪೀಡಿತ ಸದಸ್ಯರಾರು ಕೋವಿಡ್ ಕೇಂದ್ರಗಳಲ್ಲಿ ದಾಖಲಾಗಲಿಲ್ಲ. ವೈದ್ಯರು ಮತ್ತು ಆಶಾ ಕಾರ್ಯಕರ್ತರ ಸಕಹೆಗಳನ್ನು ಕಟ್ಟಾ ಪಾಲಿಸಿದರು. ಅವರು ಸೂಚಿಸಿದ ಮಾತ್ರೆ ಪಡೆದುಕೊಂಡರು.

ಆದರೆ ಇಲ್ಲಿ ಹತ್ತು ತಿಂಗಳ ಮಗು, 3 ವರ್ಷಕ್ಕಿಂತ ಕಡಿಮೆಯ ಮೂವರು ಮಕ್ಕಳು ಮತ್ತು 45 ದಾಟಿದ ಆದರೆ ಎರಡೂ ಲಸಿಕೆ ಪಡೆದ ಹಿರಿಯರೊಬ್ಬರಿಗೂ ಪಾಸಿಟಿವ್ ಆಗಿತ್ತು. ಈಗ ಎಲ್ಲರೂ ಆರೋಗ್ಯವಾಗಿದ್ದಾರೆ. ಆದರೆ ನಮ್ಮ ವೈದ್ಯರಿಗೆ ಇದು ಒಂದು ಕೇಸ್ ಸ್ಟಡಿಗೆ ಅವಕಾಶ ಒದಗಿಸಿದೆ.
ಏಕೆಂದರೆ, ಕೋವಿಡ್ ಕುರಿತಂತೆ ಇನ್ನೂ ನೂರಾರು ಗೊಂದಲ ಇರುವಾಗ ಈ ಪ್ರಕರಣ ಇಟ್ಟುಕೊಂಡು ಹುಬ್ಬಳ್ಳಿಯ ಕೆಎಂಸಿ (ಕಿಮ್ಸ್) ಕೂಡ ಒಂದು ಕೇಸ್ ಸ್ಟಡಿ ಮಾಡಬಹುದು ಅಲ್ಲವೇ?

ಒಂದಿಷ್ಟು ಪೂರ್ವ ವಿವರ

ಹುಬ್ಬಳ್ಳಿ ತಾಲೂಕಿನ ಸುಳ್ಳ ಗ್ರಾಮದ ಶಿವಳ್ಳಿ ಮಠ ಕುಟುಂಬದ 16 ಸದಸ್ಯರಿಗೆ ಈ ತಿಂಗಳು ಮೊದಲ ವಾರದ ಹೊತ್ತಿಗೆ ಪಾಸಿಟಿವ್ ದೃಢಪಟ್ಟಿತ್ತು. ಕಿಮ್ಸ್‌ನ ಒಬ್ಬ ವೈದ್ಯರು ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯರ ಸಲಹೆ ಮೇರೆಗೆ ಇವರೆಲ್ಲ ಹೋಮ್ ಐಸೋಲೇಷನ್‌ನಲ್ಲಿ ಇದ್ದುಕೊಂಡು ಚೇತರಿಸಿಕೊಂಡಿದ್ದಾರೆ.

ಸುಳ್ಳದ ಈ ಕುಟುಂಬದ ಸದಸ್ಯರಲ್ಲಿ ಒಬ್ಬರಾದ, ಪಾಸಿಟಿವ್‌ಗೆ ಒಳಗಾಗಿ ಈಗ ಗುಣಮುಖರಾದ, ಕಾಲೇಜೊಂದರ ಜರ್ನಲಿಸಂ ವಿಭಾಗದ ಅಧ್ಯಾಪಕರೂ ಆಗಿರುವ ಮಲ್ಲಿಕಾರ್ಜುನ್ ಅವರೊಂದಿಗೆ ನಾನುಗೌರಿ.ಕಾಂ ಮಾತನಾಡಿತು.

‘ವಿಜ್ಞಾನ, ವೈದ್ಯಕೀಯಗಳ ಆಚೆ ನಾವೆಂದೂ ನೋಡಲಿಲ್ಲ. ಎಲ್ಲರಿಗೂ ಮನೆಯಲ್ಲಿ ಧೈರ್ಯ ತುಂಬಿದೆವು. ಯಾವುದೇ ಮೂಢ ವಿಚಾರಗಳನ್ನು ಫಾಲೋ ಮಾಡಲಿಲ್ಲ. ಕಿಮ್ಸ್‌ನ ಹಿರಿಯ ವೈದ್ಯರು, ಇಲ್ಲೇ ಪಕ್ಕದ ಊರಲ್ಲಿರುವ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯರು ಮತ್ತು ಮನೆಗೇ ಬಂದು ಉಪಚಾರ ಮಾಡುವ ಆಶಾ ಕಾರ್ಯಕರ್ತೆಯರ ಸಲಹೆ ಪಾಲಿಸಿದೆವು. ಇಲ್ಲಿ ಆತ್ಮಸ್ಥೈರ್ಯವೇ ಮುಖ್ಯ ಅಷ್ಟೇ. ಒಂದು ಜ್ವರವನ್ನು ವಿಭಿನ್ನವಾಗಿ ಎದುರಿಸಲು ನಮಗೆ ಈಗ ವಿಜ್ಞಾನ ಮತ್ತು ವೈದ್ಯಕೀಯವಷ್ಟೇ ಮಾರ್ಗದರ್ಶಕ ಆಗಬೇಕು’ ಎಂದು ಗುಣಮುಖರಾದ ಮಲ್ಲಿಕಾರ್ಜುನ ನಮಗೆ ತಿಳಿಸಿದರು.

ಈ ಕುಟುಂಬದಲ್ಲಿ ಹತ್ತು ತಿಂಗಳ ಶಿಶು, ಮೂರು ವರ್ಷದ ಒಳಗಿನ ನಾಲ್ಕು ಮಕ್ಕಳು ಸಹ ಗುಣಮುಖರಾಗಿದ್ದಾರೆ. ಇದರಲ್ಲಿ 45 ವರ್ಷ ಮೇಲ್ಪಟ್ಟ 4 ಜನರು ಈ ಮೊದಲೇ ಎರಡನೆ ಡೋಸ್ ಲಸಿಕೆ ಪಡೆದಿದ್ದರು, ಅದರಲ್ಲಿ ಮೂವರಿಗೆ ನೆಗೆಟಿವ್ ರಿಪೋರ್ಟ್ ಬಂದಿತ್ತು. ಆದರೆ, ಎರಡು ಡೋಸ್‌ಗಳ ನಂತರವೂ ಪಾಸಿಟಿವ್ ರಿಪೋರ್ಟ್ ಪಡೆದಿದ್ದ 60 ವರ್ಷದ ಮಹಿಳೆಯಲ್ಲಿ ಯಾವ ಲಕ್ಷಣವೂ ಇರಲಿಲ್ಲ. ಅವರೂ ಈಗ ಗುಣಮುಖರಾಗಿದ್ದಾರೆ.

ಪ್ರಶ್ನೆ ಏನು ಅಂದರೆ ಮಕ್ಕಳಿಗೂ ಕೋವಿಡ್ ಕಾಟ ಶುರುವಾಗಿದೆಯಾ? ಇದು ಮೂರನೇ ಅಲೆಯ ಆರಂಭವೇ? ಎರಡು ಲಸಿಕೆ ಪಡೆದವರು ಇದನ್ನು ಎದುರಿಸಬಲ್ಲರು ಎಂದಾದರೆ, ಯಾಕೆ ತುರ್ತಾಗಿ ಮನೆಮನೆಗೆ ತೆರಳಿ ಲಸಿಕೆ ನೀಡುತ್ತಿಲ್ಲ? ನಮ್ಮ ಪಾಲಿಸಿಯೇ ತಪ್ಪಾಗಿದೆಯೇ?
ಈ ಕುರಿತು ಮಾತನಾಡಿದ ಧಾರವಾಡದ ಸರ್ಕಾರಿ ವೈದ್ಯ ಡಾ. ಸಂತೋಷ್, ‘ರೋಗ ನಿರೋಧಕ ಶಕ್ತಿ ಚೆನ್ನಾಗಿ ಇರುವವರಿಗೆ ಕೊರೊನಾ ತಟ್ಟುವುದು ಅಪರೂಪ. ದಿನವೂ ಹಲವು ರೋಗಿಗಳನ್ನು ನಾನು ಪರೀಕ್ಷೆ ಮಾಡುತ್ತೇನೆ. ಬಹುತೇಕರು ಶ್ರೀಮಂತ ಅಥವಾ ಮಧ್ಯಮ ವರ್ಗದವರೇ. ಇವರು ತುಂಬ ನಾಜೂಕಾದ ಜೀವನಶೈಲಿ ಅಳವಡಿಸಿಕೊಂಡ ಜನರು. ಇವರ ಜೀವನಶೈಲಿಯೇ ಅವರ ಪ್ರತಿರೋಧಕ ಶಕ್ತಿಯನ್ನು ಕಡಿಮೆ ಮಾಡಿದೆ. ಹುಬ್ಬಳ್ಳಿ-ಧಾರವಾಡದಲ್ಲಿ ಎಲ್ಲೋ ಮಲಗಿ ಜೀವನ ಸಾಗಿಸುವ ಭಿಕ್ಷುಕರು ನಮ್ಮ ಆಸ್ಪತ್ರೆಗಳತ್ತ ಬಂದೇ ಇಲ್ಲ. ಅವರು ಕೊರೊನಾಗೆ ಎಕ್ಸ್‌ಪೋಸ್‌ ಆಗಿದ್ದಾರೆ, ಅವರಿಗೆ ಈಗ ಕೊರೊನಾ ತಟ್ಟುವ ಸಂಭವವೂ ಕಡಿಮೆ’ ಎಂದರು.

‘ಈ ವಿಷಯದಲ್ಲಿ ಯಾವುದು ಅಂತಿಮವಲ್ಲವಾದರೂ, ಗಾಬರಿ ಬಿದ್ದು ಆಸ್ಪತ್ರೆ ಸೇರದೇ ಇರುವುದು, ವೈದ್ಯರ ಸಲಹೆ ಪಡೆದು ಮನೆಯಲ್ಲೇ ಐಸೋಲೇಷನ್ ಆಗುವುದು ಮುಖ್ಯ. ಎರಡನೇ ಅಲೆಯಲ್ಲಿ ಆಕ್ಸಿಜನ್ ಮಟ್ಟದ ಸಮಸ್ಯೆ ಬಂದಾಗ ಆಸ್ಪತ್ರೆಯ ಅಗತ್ಯ ಇದೆ. ಆದರೆ, ಯಾವುದಕ್ಕೂ ವೈದ್ಯರ ಸಲಹೆ ಪಡೆದೇ ಎಲ್ಲವನ್ನೂ ನಿಭಾಯಿಸಬೇಕು. ಸುಳ್ಳ ಗ್ರಾಮದ ಕುಟುಂಬ ಅದನ್ನು ಅನುಸರಿಸಿದ ಕಾರಣಕ್ಕೇ ಮನೆಯಲ್ಲೇ ಗುಣಮುಖ ಆಗಿರಬಹುದು’ ಎಂದು ಗದಗಿನ ವೈದ್ಯ ಡಾ. ಎಂ.ಡಿ ಸಾಮುದ್ರಿ ಹೇಳಿದರು.

‘ಕಳೆದ ತಿಂಗಳು 29ರಂದು ಸೋಂಕಿನ ಲಕ್ಷಣಗಳು ಕಾಣಿಸಿಕೊಂಡಾಗ ಕೊರೊನಾ ಟೆಸ್ಟ್ ಮಾಡಿಸಿಕೊಂಡು ಮನೆಯಲ್ಲಿಯೇ ಹೋಮ್ ಐಸೋಲೇಷನ್ ಆಗಿದ್ದೆವು ಹಾಗೂ ಪಾಸಿಟಿವ್ ರಿಪೋರ್ಟ್ ಬಂದಾಗ ಯಾವುದೇ ರೀತಿಯಲ್ಲೂ ಭಯಪಡದೆ ಆತ್ಮಸ್ಥೈರ್ಯದಿಂದ ಇದ್ದೆವು ಹಾಗೂ ಮನೆಯಲ್ಲಿನ ಸದಸ್ಯರಿಗೂ ಧೈರ್ಯ ತುಂಬಿ ವೈದ್ಯರ ಸಲಹೆ ಸೂಚನೆಗಳನ್ನು ತಪ್ಪದೆ ಪಾಲಿಸಿದೆವು’ ಎಂದು ಮನೆಯ ಹಿರಿಯ ಮಲ್ಲಯ್ಯ ಶಿವಳ್ಳಿಮಠ ಹೇಳಿದರು.

ಎಂಬಿಬಿಎಸ್ ವಿದ್ಯಾರ್ಥಿಗಳು ಈ ಬಗ್ಗೆ ಒಂದು ಕೇಸ್ ಸ್ಟಡಿ ಮಾಡಬಹುದು ಅನಿಸುತ್ತೆ.

  • ಪಿ.ಕೆ. ಮಲ್ಲನಗೌಡರ್

ಇದನ್ನೂ ಓದಿ: ಬ್ಲ್ಯಾಕ್ ಫಂಗಸ್ (ಮ್ಯುಕಾರ್ ಮೈಕೋಸಿಸ್ MucorMycosis) ಕುರಿತ ಪ್ರಶ್ನೆಗಳಿಗೆ ವೈದ್ಯರ ಸರಳ ಉತ್ತರಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...