Homeಕರೋನಾ ತಲ್ಲಣಒಂದೇ ಕುಟುಂಬದ 16 ಜನರಿಗೆ ಕೊರೊನಾ: ಮನೆಯಲ್ಲಿದ್ದುಕೊಂಡೇ ಎಲ್ಲರೂ ಗುಣಮುಖ

ಒಂದೇ ಕುಟುಂಬದ 16 ಜನರಿಗೆ ಕೊರೊನಾ: ಮನೆಯಲ್ಲಿದ್ದುಕೊಂಡೇ ಎಲ್ಲರೂ ಗುಣಮುಖ

ಈ ಕುಟುಂಬದಲ್ಲಿ ಹತ್ತು ತಿಂಗಳ ಶಿಶು, ಮೂರು ವರ್ಷದ ಒಳಗಿನ ನಾಲ್ಕು ಮಕ್ಕಳು ಮತ್ತು 45 ವರ್ಷ ಮೇಲ್ಪಟ್ಟವರು ಸಹ ಗುಣಮುಖರಾಗಿದ್ದಾರೆ.

- Advertisement -
- Advertisement -

ಕೊರೊನಾ ಎರಡನೇ ಅಲೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಈ ವೇಳೆ ಹುಬ್ಬಳ್ಳಿ ತಾಲೂಕಿನ ಸುಳ್ಳ ಗ್ರಾಮದ ಒಂದೇ ಕುಟುಂಬದ 16 ಜನಕ್ಕೆ ಕೊರೊನಾ ಪಾಸಿಟಿವ್ ಆಗಿದ್ದು, ಹೋಮ್ ಐಸೋಲೇಷನ್‌ಗೆ ಒಳಪಟ್ಟು, ವೈದ್ಯರು ಮತ್ತು ಆಶಾ ಕಾರ್ಯಕರ್ತೆಯರು ಸೂಚಿಸಿದ ಔಷಧಿ ಸೇವಿಸಿ, ಅವರು ಹೇಳಿದ ಗೈಡ್‌ಲೈನ್ಸ್ ಪಾಲಿಸಿ ಕೊರೊನಾದಿಂದ ವಿಮುಕ್ತರಾಗಿದ್ದಾರೆ. ಒಂದನೇ ಅಲೆಯಲ್ಲಿ ಹೀಗೇ ಹಲವು ಕುಟುಂಬಗಳು ಮನೆಯಲ್ಲೇ ಇದ್ದು ಕೊರೊನಾ ಹಿಮ್ಮೆಟ್ಟಿಸಿದ್ದವು.

ಇಲ್ಲಿ ಒಟ್ಟು ಸಾರಾಂಶವೆಂದರೆ, ಈ ಕುಟುಂಬದ ಪಾಸಿಟಿವ್ ಪೀಡಿತ ಸದಸ್ಯರಾರು ಕೋವಿಡ್ ಕೇಂದ್ರಗಳಲ್ಲಿ ದಾಖಲಾಗಲಿಲ್ಲ. ವೈದ್ಯರು ಮತ್ತು ಆಶಾ ಕಾರ್ಯಕರ್ತರ ಸಕಹೆಗಳನ್ನು ಕಟ್ಟಾ ಪಾಲಿಸಿದರು. ಅವರು ಸೂಚಿಸಿದ ಮಾತ್ರೆ ಪಡೆದುಕೊಂಡರು.

ಆದರೆ ಇಲ್ಲಿ ಹತ್ತು ತಿಂಗಳ ಮಗು, 3 ವರ್ಷಕ್ಕಿಂತ ಕಡಿಮೆಯ ಮೂವರು ಮಕ್ಕಳು ಮತ್ತು 45 ದಾಟಿದ ಆದರೆ ಎರಡೂ ಲಸಿಕೆ ಪಡೆದ ಹಿರಿಯರೊಬ್ಬರಿಗೂ ಪಾಸಿಟಿವ್ ಆಗಿತ್ತು. ಈಗ ಎಲ್ಲರೂ ಆರೋಗ್ಯವಾಗಿದ್ದಾರೆ. ಆದರೆ ನಮ್ಮ ವೈದ್ಯರಿಗೆ ಇದು ಒಂದು ಕೇಸ್ ಸ್ಟಡಿಗೆ ಅವಕಾಶ ಒದಗಿಸಿದೆ.
ಏಕೆಂದರೆ, ಕೋವಿಡ್ ಕುರಿತಂತೆ ಇನ್ನೂ ನೂರಾರು ಗೊಂದಲ ಇರುವಾಗ ಈ ಪ್ರಕರಣ ಇಟ್ಟುಕೊಂಡು ಹುಬ್ಬಳ್ಳಿಯ ಕೆಎಂಸಿ (ಕಿಮ್ಸ್) ಕೂಡ ಒಂದು ಕೇಸ್ ಸ್ಟಡಿ ಮಾಡಬಹುದು ಅಲ್ಲವೇ?

ಒಂದಿಷ್ಟು ಪೂರ್ವ ವಿವರ

ಹುಬ್ಬಳ್ಳಿ ತಾಲೂಕಿನ ಸುಳ್ಳ ಗ್ರಾಮದ ಶಿವಳ್ಳಿ ಮಠ ಕುಟುಂಬದ 16 ಸದಸ್ಯರಿಗೆ ಈ ತಿಂಗಳು ಮೊದಲ ವಾರದ ಹೊತ್ತಿಗೆ ಪಾಸಿಟಿವ್ ದೃಢಪಟ್ಟಿತ್ತು. ಕಿಮ್ಸ್‌ನ ಒಬ್ಬ ವೈದ್ಯರು ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯರ ಸಲಹೆ ಮೇರೆಗೆ ಇವರೆಲ್ಲ ಹೋಮ್ ಐಸೋಲೇಷನ್‌ನಲ್ಲಿ ಇದ್ದುಕೊಂಡು ಚೇತರಿಸಿಕೊಂಡಿದ್ದಾರೆ.

ಸುಳ್ಳದ ಈ ಕುಟುಂಬದ ಸದಸ್ಯರಲ್ಲಿ ಒಬ್ಬರಾದ, ಪಾಸಿಟಿವ್‌ಗೆ ಒಳಗಾಗಿ ಈಗ ಗುಣಮುಖರಾದ, ಕಾಲೇಜೊಂದರ ಜರ್ನಲಿಸಂ ವಿಭಾಗದ ಅಧ್ಯಾಪಕರೂ ಆಗಿರುವ ಮಲ್ಲಿಕಾರ್ಜುನ್ ಅವರೊಂದಿಗೆ ನಾನುಗೌರಿ.ಕಾಂ ಮಾತನಾಡಿತು.

‘ವಿಜ್ಞಾನ, ವೈದ್ಯಕೀಯಗಳ ಆಚೆ ನಾವೆಂದೂ ನೋಡಲಿಲ್ಲ. ಎಲ್ಲರಿಗೂ ಮನೆಯಲ್ಲಿ ಧೈರ್ಯ ತುಂಬಿದೆವು. ಯಾವುದೇ ಮೂಢ ವಿಚಾರಗಳನ್ನು ಫಾಲೋ ಮಾಡಲಿಲ್ಲ. ಕಿಮ್ಸ್‌ನ ಹಿರಿಯ ವೈದ್ಯರು, ಇಲ್ಲೇ ಪಕ್ಕದ ಊರಲ್ಲಿರುವ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯರು ಮತ್ತು ಮನೆಗೇ ಬಂದು ಉಪಚಾರ ಮಾಡುವ ಆಶಾ ಕಾರ್ಯಕರ್ತೆಯರ ಸಲಹೆ ಪಾಲಿಸಿದೆವು. ಇಲ್ಲಿ ಆತ್ಮಸ್ಥೈರ್ಯವೇ ಮುಖ್ಯ ಅಷ್ಟೇ. ಒಂದು ಜ್ವರವನ್ನು ವಿಭಿನ್ನವಾಗಿ ಎದುರಿಸಲು ನಮಗೆ ಈಗ ವಿಜ್ಞಾನ ಮತ್ತು ವೈದ್ಯಕೀಯವಷ್ಟೇ ಮಾರ್ಗದರ್ಶಕ ಆಗಬೇಕು’ ಎಂದು ಗುಣಮುಖರಾದ ಮಲ್ಲಿಕಾರ್ಜುನ ನಮಗೆ ತಿಳಿಸಿದರು.

ಈ ಕುಟುಂಬದಲ್ಲಿ ಹತ್ತು ತಿಂಗಳ ಶಿಶು, ಮೂರು ವರ್ಷದ ಒಳಗಿನ ನಾಲ್ಕು ಮಕ್ಕಳು ಸಹ ಗುಣಮುಖರಾಗಿದ್ದಾರೆ. ಇದರಲ್ಲಿ 45 ವರ್ಷ ಮೇಲ್ಪಟ್ಟ 4 ಜನರು ಈ ಮೊದಲೇ ಎರಡನೆ ಡೋಸ್ ಲಸಿಕೆ ಪಡೆದಿದ್ದರು, ಅದರಲ್ಲಿ ಮೂವರಿಗೆ ನೆಗೆಟಿವ್ ರಿಪೋರ್ಟ್ ಬಂದಿತ್ತು. ಆದರೆ, ಎರಡು ಡೋಸ್‌ಗಳ ನಂತರವೂ ಪಾಸಿಟಿವ್ ರಿಪೋರ್ಟ್ ಪಡೆದಿದ್ದ 60 ವರ್ಷದ ಮಹಿಳೆಯಲ್ಲಿ ಯಾವ ಲಕ್ಷಣವೂ ಇರಲಿಲ್ಲ. ಅವರೂ ಈಗ ಗುಣಮುಖರಾಗಿದ್ದಾರೆ.

ಪ್ರಶ್ನೆ ಏನು ಅಂದರೆ ಮಕ್ಕಳಿಗೂ ಕೋವಿಡ್ ಕಾಟ ಶುರುವಾಗಿದೆಯಾ? ಇದು ಮೂರನೇ ಅಲೆಯ ಆರಂಭವೇ? ಎರಡು ಲಸಿಕೆ ಪಡೆದವರು ಇದನ್ನು ಎದುರಿಸಬಲ್ಲರು ಎಂದಾದರೆ, ಯಾಕೆ ತುರ್ತಾಗಿ ಮನೆಮನೆಗೆ ತೆರಳಿ ಲಸಿಕೆ ನೀಡುತ್ತಿಲ್ಲ? ನಮ್ಮ ಪಾಲಿಸಿಯೇ ತಪ್ಪಾಗಿದೆಯೇ?
ಈ ಕುರಿತು ಮಾತನಾಡಿದ ಧಾರವಾಡದ ಸರ್ಕಾರಿ ವೈದ್ಯ ಡಾ. ಸಂತೋಷ್, ‘ರೋಗ ನಿರೋಧಕ ಶಕ್ತಿ ಚೆನ್ನಾಗಿ ಇರುವವರಿಗೆ ಕೊರೊನಾ ತಟ್ಟುವುದು ಅಪರೂಪ. ದಿನವೂ ಹಲವು ರೋಗಿಗಳನ್ನು ನಾನು ಪರೀಕ್ಷೆ ಮಾಡುತ್ತೇನೆ. ಬಹುತೇಕರು ಶ್ರೀಮಂತ ಅಥವಾ ಮಧ್ಯಮ ವರ್ಗದವರೇ. ಇವರು ತುಂಬ ನಾಜೂಕಾದ ಜೀವನಶೈಲಿ ಅಳವಡಿಸಿಕೊಂಡ ಜನರು. ಇವರ ಜೀವನಶೈಲಿಯೇ ಅವರ ಪ್ರತಿರೋಧಕ ಶಕ್ತಿಯನ್ನು ಕಡಿಮೆ ಮಾಡಿದೆ. ಹುಬ್ಬಳ್ಳಿ-ಧಾರವಾಡದಲ್ಲಿ ಎಲ್ಲೋ ಮಲಗಿ ಜೀವನ ಸಾಗಿಸುವ ಭಿಕ್ಷುಕರು ನಮ್ಮ ಆಸ್ಪತ್ರೆಗಳತ್ತ ಬಂದೇ ಇಲ್ಲ. ಅವರು ಕೊರೊನಾಗೆ ಎಕ್ಸ್‌ಪೋಸ್‌ ಆಗಿದ್ದಾರೆ, ಅವರಿಗೆ ಈಗ ಕೊರೊನಾ ತಟ್ಟುವ ಸಂಭವವೂ ಕಡಿಮೆ’ ಎಂದರು.

‘ಈ ವಿಷಯದಲ್ಲಿ ಯಾವುದು ಅಂತಿಮವಲ್ಲವಾದರೂ, ಗಾಬರಿ ಬಿದ್ದು ಆಸ್ಪತ್ರೆ ಸೇರದೇ ಇರುವುದು, ವೈದ್ಯರ ಸಲಹೆ ಪಡೆದು ಮನೆಯಲ್ಲೇ ಐಸೋಲೇಷನ್ ಆಗುವುದು ಮುಖ್ಯ. ಎರಡನೇ ಅಲೆಯಲ್ಲಿ ಆಕ್ಸಿಜನ್ ಮಟ್ಟದ ಸಮಸ್ಯೆ ಬಂದಾಗ ಆಸ್ಪತ್ರೆಯ ಅಗತ್ಯ ಇದೆ. ಆದರೆ, ಯಾವುದಕ್ಕೂ ವೈದ್ಯರ ಸಲಹೆ ಪಡೆದೇ ಎಲ್ಲವನ್ನೂ ನಿಭಾಯಿಸಬೇಕು. ಸುಳ್ಳ ಗ್ರಾಮದ ಕುಟುಂಬ ಅದನ್ನು ಅನುಸರಿಸಿದ ಕಾರಣಕ್ಕೇ ಮನೆಯಲ್ಲೇ ಗುಣಮುಖ ಆಗಿರಬಹುದು’ ಎಂದು ಗದಗಿನ ವೈದ್ಯ ಡಾ. ಎಂ.ಡಿ ಸಾಮುದ್ರಿ ಹೇಳಿದರು.

‘ಕಳೆದ ತಿಂಗಳು 29ರಂದು ಸೋಂಕಿನ ಲಕ್ಷಣಗಳು ಕಾಣಿಸಿಕೊಂಡಾಗ ಕೊರೊನಾ ಟೆಸ್ಟ್ ಮಾಡಿಸಿಕೊಂಡು ಮನೆಯಲ್ಲಿಯೇ ಹೋಮ್ ಐಸೋಲೇಷನ್ ಆಗಿದ್ದೆವು ಹಾಗೂ ಪಾಸಿಟಿವ್ ರಿಪೋರ್ಟ್ ಬಂದಾಗ ಯಾವುದೇ ರೀತಿಯಲ್ಲೂ ಭಯಪಡದೆ ಆತ್ಮಸ್ಥೈರ್ಯದಿಂದ ಇದ್ದೆವು ಹಾಗೂ ಮನೆಯಲ್ಲಿನ ಸದಸ್ಯರಿಗೂ ಧೈರ್ಯ ತುಂಬಿ ವೈದ್ಯರ ಸಲಹೆ ಸೂಚನೆಗಳನ್ನು ತಪ್ಪದೆ ಪಾಲಿಸಿದೆವು’ ಎಂದು ಮನೆಯ ಹಿರಿಯ ಮಲ್ಲಯ್ಯ ಶಿವಳ್ಳಿಮಠ ಹೇಳಿದರು.

ಎಂಬಿಬಿಎಸ್ ವಿದ್ಯಾರ್ಥಿಗಳು ಈ ಬಗ್ಗೆ ಒಂದು ಕೇಸ್ ಸ್ಟಡಿ ಮಾಡಬಹುದು ಅನಿಸುತ್ತೆ.

  • ಪಿ.ಕೆ. ಮಲ್ಲನಗೌಡರ್

ಇದನ್ನೂ ಓದಿ: ಬ್ಲ್ಯಾಕ್ ಫಂಗಸ್ (ಮ್ಯುಕಾರ್ ಮೈಕೋಸಿಸ್ MucorMycosis) ಕುರಿತ ಪ್ರಶ್ನೆಗಳಿಗೆ ವೈದ್ಯರ ಸರಳ ಉತ್ತರಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...