Homeಕರೋನಾ ತಲ್ಲಣಒಂದೇ ಕುಟುಂಬದ 16 ಜನರಿಗೆ ಕೊರೊನಾ: ಮನೆಯಲ್ಲಿದ್ದುಕೊಂಡೇ ಎಲ್ಲರೂ ಗುಣಮುಖ

ಒಂದೇ ಕುಟುಂಬದ 16 ಜನರಿಗೆ ಕೊರೊನಾ: ಮನೆಯಲ್ಲಿದ್ದುಕೊಂಡೇ ಎಲ್ಲರೂ ಗುಣಮುಖ

ಈ ಕುಟುಂಬದಲ್ಲಿ ಹತ್ತು ತಿಂಗಳ ಶಿಶು, ಮೂರು ವರ್ಷದ ಒಳಗಿನ ನಾಲ್ಕು ಮಕ್ಕಳು ಮತ್ತು 45 ವರ್ಷ ಮೇಲ್ಪಟ್ಟವರು ಸಹ ಗುಣಮುಖರಾಗಿದ್ದಾರೆ.

- Advertisement -
- Advertisement -

ಕೊರೊನಾ ಎರಡನೇ ಅಲೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಈ ವೇಳೆ ಹುಬ್ಬಳ್ಳಿ ತಾಲೂಕಿನ ಸುಳ್ಳ ಗ್ರಾಮದ ಒಂದೇ ಕುಟುಂಬದ 16 ಜನಕ್ಕೆ ಕೊರೊನಾ ಪಾಸಿಟಿವ್ ಆಗಿದ್ದು, ಹೋಮ್ ಐಸೋಲೇಷನ್‌ಗೆ ಒಳಪಟ್ಟು, ವೈದ್ಯರು ಮತ್ತು ಆಶಾ ಕಾರ್ಯಕರ್ತೆಯರು ಸೂಚಿಸಿದ ಔಷಧಿ ಸೇವಿಸಿ, ಅವರು ಹೇಳಿದ ಗೈಡ್‌ಲೈನ್ಸ್ ಪಾಲಿಸಿ ಕೊರೊನಾದಿಂದ ವಿಮುಕ್ತರಾಗಿದ್ದಾರೆ. ಒಂದನೇ ಅಲೆಯಲ್ಲಿ ಹೀಗೇ ಹಲವು ಕುಟುಂಬಗಳು ಮನೆಯಲ್ಲೇ ಇದ್ದು ಕೊರೊನಾ ಹಿಮ್ಮೆಟ್ಟಿಸಿದ್ದವು.

ಇಲ್ಲಿ ಒಟ್ಟು ಸಾರಾಂಶವೆಂದರೆ, ಈ ಕುಟುಂಬದ ಪಾಸಿಟಿವ್ ಪೀಡಿತ ಸದಸ್ಯರಾರು ಕೋವಿಡ್ ಕೇಂದ್ರಗಳಲ್ಲಿ ದಾಖಲಾಗಲಿಲ್ಲ. ವೈದ್ಯರು ಮತ್ತು ಆಶಾ ಕಾರ್ಯಕರ್ತರ ಸಕಹೆಗಳನ್ನು ಕಟ್ಟಾ ಪಾಲಿಸಿದರು. ಅವರು ಸೂಚಿಸಿದ ಮಾತ್ರೆ ಪಡೆದುಕೊಂಡರು.

ಆದರೆ ಇಲ್ಲಿ ಹತ್ತು ತಿಂಗಳ ಮಗು, 3 ವರ್ಷಕ್ಕಿಂತ ಕಡಿಮೆಯ ಮೂವರು ಮಕ್ಕಳು ಮತ್ತು 45 ದಾಟಿದ ಆದರೆ ಎರಡೂ ಲಸಿಕೆ ಪಡೆದ ಹಿರಿಯರೊಬ್ಬರಿಗೂ ಪಾಸಿಟಿವ್ ಆಗಿತ್ತು. ಈಗ ಎಲ್ಲರೂ ಆರೋಗ್ಯವಾಗಿದ್ದಾರೆ. ಆದರೆ ನಮ್ಮ ವೈದ್ಯರಿಗೆ ಇದು ಒಂದು ಕೇಸ್ ಸ್ಟಡಿಗೆ ಅವಕಾಶ ಒದಗಿಸಿದೆ.
ಏಕೆಂದರೆ, ಕೋವಿಡ್ ಕುರಿತಂತೆ ಇನ್ನೂ ನೂರಾರು ಗೊಂದಲ ಇರುವಾಗ ಈ ಪ್ರಕರಣ ಇಟ್ಟುಕೊಂಡು ಹುಬ್ಬಳ್ಳಿಯ ಕೆಎಂಸಿ (ಕಿಮ್ಸ್) ಕೂಡ ಒಂದು ಕೇಸ್ ಸ್ಟಡಿ ಮಾಡಬಹುದು ಅಲ್ಲವೇ?

ಒಂದಿಷ್ಟು ಪೂರ್ವ ವಿವರ

ಹುಬ್ಬಳ್ಳಿ ತಾಲೂಕಿನ ಸುಳ್ಳ ಗ್ರಾಮದ ಶಿವಳ್ಳಿ ಮಠ ಕುಟುಂಬದ 16 ಸದಸ್ಯರಿಗೆ ಈ ತಿಂಗಳು ಮೊದಲ ವಾರದ ಹೊತ್ತಿಗೆ ಪಾಸಿಟಿವ್ ದೃಢಪಟ್ಟಿತ್ತು. ಕಿಮ್ಸ್‌ನ ಒಬ್ಬ ವೈದ್ಯರು ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯರ ಸಲಹೆ ಮೇರೆಗೆ ಇವರೆಲ್ಲ ಹೋಮ್ ಐಸೋಲೇಷನ್‌ನಲ್ಲಿ ಇದ್ದುಕೊಂಡು ಚೇತರಿಸಿಕೊಂಡಿದ್ದಾರೆ.

ಸುಳ್ಳದ ಈ ಕುಟುಂಬದ ಸದಸ್ಯರಲ್ಲಿ ಒಬ್ಬರಾದ, ಪಾಸಿಟಿವ್‌ಗೆ ಒಳಗಾಗಿ ಈಗ ಗುಣಮುಖರಾದ, ಕಾಲೇಜೊಂದರ ಜರ್ನಲಿಸಂ ವಿಭಾಗದ ಅಧ್ಯಾಪಕರೂ ಆಗಿರುವ ಮಲ್ಲಿಕಾರ್ಜುನ್ ಅವರೊಂದಿಗೆ ನಾನುಗೌರಿ.ಕಾಂ ಮಾತನಾಡಿತು.

‘ವಿಜ್ಞಾನ, ವೈದ್ಯಕೀಯಗಳ ಆಚೆ ನಾವೆಂದೂ ನೋಡಲಿಲ್ಲ. ಎಲ್ಲರಿಗೂ ಮನೆಯಲ್ಲಿ ಧೈರ್ಯ ತುಂಬಿದೆವು. ಯಾವುದೇ ಮೂಢ ವಿಚಾರಗಳನ್ನು ಫಾಲೋ ಮಾಡಲಿಲ್ಲ. ಕಿಮ್ಸ್‌ನ ಹಿರಿಯ ವೈದ್ಯರು, ಇಲ್ಲೇ ಪಕ್ಕದ ಊರಲ್ಲಿರುವ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯರು ಮತ್ತು ಮನೆಗೇ ಬಂದು ಉಪಚಾರ ಮಾಡುವ ಆಶಾ ಕಾರ್ಯಕರ್ತೆಯರ ಸಲಹೆ ಪಾಲಿಸಿದೆವು. ಇಲ್ಲಿ ಆತ್ಮಸ್ಥೈರ್ಯವೇ ಮುಖ್ಯ ಅಷ್ಟೇ. ಒಂದು ಜ್ವರವನ್ನು ವಿಭಿನ್ನವಾಗಿ ಎದುರಿಸಲು ನಮಗೆ ಈಗ ವಿಜ್ಞಾನ ಮತ್ತು ವೈದ್ಯಕೀಯವಷ್ಟೇ ಮಾರ್ಗದರ್ಶಕ ಆಗಬೇಕು’ ಎಂದು ಗುಣಮುಖರಾದ ಮಲ್ಲಿಕಾರ್ಜುನ ನಮಗೆ ತಿಳಿಸಿದರು.

ಈ ಕುಟುಂಬದಲ್ಲಿ ಹತ್ತು ತಿಂಗಳ ಶಿಶು, ಮೂರು ವರ್ಷದ ಒಳಗಿನ ನಾಲ್ಕು ಮಕ್ಕಳು ಸಹ ಗುಣಮುಖರಾಗಿದ್ದಾರೆ. ಇದರಲ್ಲಿ 45 ವರ್ಷ ಮೇಲ್ಪಟ್ಟ 4 ಜನರು ಈ ಮೊದಲೇ ಎರಡನೆ ಡೋಸ್ ಲಸಿಕೆ ಪಡೆದಿದ್ದರು, ಅದರಲ್ಲಿ ಮೂವರಿಗೆ ನೆಗೆಟಿವ್ ರಿಪೋರ್ಟ್ ಬಂದಿತ್ತು. ಆದರೆ, ಎರಡು ಡೋಸ್‌ಗಳ ನಂತರವೂ ಪಾಸಿಟಿವ್ ರಿಪೋರ್ಟ್ ಪಡೆದಿದ್ದ 60 ವರ್ಷದ ಮಹಿಳೆಯಲ್ಲಿ ಯಾವ ಲಕ್ಷಣವೂ ಇರಲಿಲ್ಲ. ಅವರೂ ಈಗ ಗುಣಮುಖರಾಗಿದ್ದಾರೆ.

ಪ್ರಶ್ನೆ ಏನು ಅಂದರೆ ಮಕ್ಕಳಿಗೂ ಕೋವಿಡ್ ಕಾಟ ಶುರುವಾಗಿದೆಯಾ? ಇದು ಮೂರನೇ ಅಲೆಯ ಆರಂಭವೇ? ಎರಡು ಲಸಿಕೆ ಪಡೆದವರು ಇದನ್ನು ಎದುರಿಸಬಲ್ಲರು ಎಂದಾದರೆ, ಯಾಕೆ ತುರ್ತಾಗಿ ಮನೆಮನೆಗೆ ತೆರಳಿ ಲಸಿಕೆ ನೀಡುತ್ತಿಲ್ಲ? ನಮ್ಮ ಪಾಲಿಸಿಯೇ ತಪ್ಪಾಗಿದೆಯೇ?
ಈ ಕುರಿತು ಮಾತನಾಡಿದ ಧಾರವಾಡದ ಸರ್ಕಾರಿ ವೈದ್ಯ ಡಾ. ಸಂತೋಷ್, ‘ರೋಗ ನಿರೋಧಕ ಶಕ್ತಿ ಚೆನ್ನಾಗಿ ಇರುವವರಿಗೆ ಕೊರೊನಾ ತಟ್ಟುವುದು ಅಪರೂಪ. ದಿನವೂ ಹಲವು ರೋಗಿಗಳನ್ನು ನಾನು ಪರೀಕ್ಷೆ ಮಾಡುತ್ತೇನೆ. ಬಹುತೇಕರು ಶ್ರೀಮಂತ ಅಥವಾ ಮಧ್ಯಮ ವರ್ಗದವರೇ. ಇವರು ತುಂಬ ನಾಜೂಕಾದ ಜೀವನಶೈಲಿ ಅಳವಡಿಸಿಕೊಂಡ ಜನರು. ಇವರ ಜೀವನಶೈಲಿಯೇ ಅವರ ಪ್ರತಿರೋಧಕ ಶಕ್ತಿಯನ್ನು ಕಡಿಮೆ ಮಾಡಿದೆ. ಹುಬ್ಬಳ್ಳಿ-ಧಾರವಾಡದಲ್ಲಿ ಎಲ್ಲೋ ಮಲಗಿ ಜೀವನ ಸಾಗಿಸುವ ಭಿಕ್ಷುಕರು ನಮ್ಮ ಆಸ್ಪತ್ರೆಗಳತ್ತ ಬಂದೇ ಇಲ್ಲ. ಅವರು ಕೊರೊನಾಗೆ ಎಕ್ಸ್‌ಪೋಸ್‌ ಆಗಿದ್ದಾರೆ, ಅವರಿಗೆ ಈಗ ಕೊರೊನಾ ತಟ್ಟುವ ಸಂಭವವೂ ಕಡಿಮೆ’ ಎಂದರು.

‘ಈ ವಿಷಯದಲ್ಲಿ ಯಾವುದು ಅಂತಿಮವಲ್ಲವಾದರೂ, ಗಾಬರಿ ಬಿದ್ದು ಆಸ್ಪತ್ರೆ ಸೇರದೇ ಇರುವುದು, ವೈದ್ಯರ ಸಲಹೆ ಪಡೆದು ಮನೆಯಲ್ಲೇ ಐಸೋಲೇಷನ್ ಆಗುವುದು ಮುಖ್ಯ. ಎರಡನೇ ಅಲೆಯಲ್ಲಿ ಆಕ್ಸಿಜನ್ ಮಟ್ಟದ ಸಮಸ್ಯೆ ಬಂದಾಗ ಆಸ್ಪತ್ರೆಯ ಅಗತ್ಯ ಇದೆ. ಆದರೆ, ಯಾವುದಕ್ಕೂ ವೈದ್ಯರ ಸಲಹೆ ಪಡೆದೇ ಎಲ್ಲವನ್ನೂ ನಿಭಾಯಿಸಬೇಕು. ಸುಳ್ಳ ಗ್ರಾಮದ ಕುಟುಂಬ ಅದನ್ನು ಅನುಸರಿಸಿದ ಕಾರಣಕ್ಕೇ ಮನೆಯಲ್ಲೇ ಗುಣಮುಖ ಆಗಿರಬಹುದು’ ಎಂದು ಗದಗಿನ ವೈದ್ಯ ಡಾ. ಎಂ.ಡಿ ಸಾಮುದ್ರಿ ಹೇಳಿದರು.

‘ಕಳೆದ ತಿಂಗಳು 29ರಂದು ಸೋಂಕಿನ ಲಕ್ಷಣಗಳು ಕಾಣಿಸಿಕೊಂಡಾಗ ಕೊರೊನಾ ಟೆಸ್ಟ್ ಮಾಡಿಸಿಕೊಂಡು ಮನೆಯಲ್ಲಿಯೇ ಹೋಮ್ ಐಸೋಲೇಷನ್ ಆಗಿದ್ದೆವು ಹಾಗೂ ಪಾಸಿಟಿವ್ ರಿಪೋರ್ಟ್ ಬಂದಾಗ ಯಾವುದೇ ರೀತಿಯಲ್ಲೂ ಭಯಪಡದೆ ಆತ್ಮಸ್ಥೈರ್ಯದಿಂದ ಇದ್ದೆವು ಹಾಗೂ ಮನೆಯಲ್ಲಿನ ಸದಸ್ಯರಿಗೂ ಧೈರ್ಯ ತುಂಬಿ ವೈದ್ಯರ ಸಲಹೆ ಸೂಚನೆಗಳನ್ನು ತಪ್ಪದೆ ಪಾಲಿಸಿದೆವು’ ಎಂದು ಮನೆಯ ಹಿರಿಯ ಮಲ್ಲಯ್ಯ ಶಿವಳ್ಳಿಮಠ ಹೇಳಿದರು.

ಎಂಬಿಬಿಎಸ್ ವಿದ್ಯಾರ್ಥಿಗಳು ಈ ಬಗ್ಗೆ ಒಂದು ಕೇಸ್ ಸ್ಟಡಿ ಮಾಡಬಹುದು ಅನಿಸುತ್ತೆ.

  • ಪಿ.ಕೆ. ಮಲ್ಲನಗೌಡರ್

ಇದನ್ನೂ ಓದಿ: ಬ್ಲ್ಯಾಕ್ ಫಂಗಸ್ (ಮ್ಯುಕಾರ್ ಮೈಕೋಸಿಸ್ MucorMycosis) ಕುರಿತ ಪ್ರಶ್ನೆಗಳಿಗೆ ವೈದ್ಯರ ಸರಳ ಉತ್ತರಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಸಿಕ್‌| ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರು

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ನಿಫಾದ್ ನಗರ ಪಂಚಾಯತ್ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿಯನ್ನು ಖಂಡಿಸಿ ಮತ್ತು ಅಧಿಕಾರಿಗಳ ನಿರ್ಲಕ್ಷ್ಯವನ್ನು ಖಂಡಿಸಿದ ಪ್ರತಿಭಟನಾಕಾರರ ಗುಂಪೊಂದು ನಗರ ಪಂಚಾಯತ್ ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು...

ವಿವಾಹಿತೆ ಮೇಲೆ ಅತ್ಯಾಚಾರ ಆರೋಪ : ಬಿಜೆಪಿ ಮಾಜಿ ಶಾಸಕನ ವಿರುದ್ಧ ಎಫ್‌ಐಆರ್

ಗನ್‌ ಪಾಯಿಂಟ್‌ ಇಟ್ಟು ಬೆದರಿಸಿ 22 ವರ್ಷದ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಮಹಾರಾಷ್ಟ್ರದ ಬಿಜೆಪಿ ಮಾಜಿ ಶಾಸಕ ಮತ್ತು ವಜಾಗೊಂಡಿರುವ ಪೊಲೀಸ್ ಸಿಬ್ಬಂದಿಯೊಬ್ಬರ ವಿರುದ್ಧ ಗುರುವಾರ (ಸೆ.17)...

ಬ್ರಿಕ್ಸ್ ಶೃಂಗಸಭೆಯಲ್ಲಿ ಸಂಪೂರ್ಣ ಸಸ್ಯಹಾರಿ ಮೆನು; ಶಿವಸೇನೆ ತೀವ್ರ ವಾಗ್ದಾಳಿ

ದೆಹಲಿಯಲ್ಲಿ ನಡೆದ 18ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ವಿದೇಶಿ ಪ್ರತಿನಿಧಿಗಳಿಗೆ ಕೇವಲ ಸಸ್ಯಹಾರಿ ಆಹಾರವನ್ನು ಬಡಿಸಿರುವುದನ್ನು ಖಂಡಿಸಿರುವ ಶಿವಸೇನೆ (ಯುಬಿಟಿ) ಗುರುವಾರ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಇದು ಅಂತರರಾಷ್ಟ್ರೀಯ ಅತಿಥಿಗಳ ಮೇಲೆ...

ದೆಹಲಿ ಎಸ್‌ಐಆರ್: ಮತದಾರರ ಪಟ್ಟಿಯಿಂದ ಹೆಸರುಗಳ ಡಿಲೀಟ್ ಪ್ರಶ್ನಿಸಿ ಅರ್ಜಿ; ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ದೆಹಲಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅಭಿಯಾನದಡಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 21ರಂದು ನಡೆಸಲು ಸುಪ್ರೀಂ ಕೋರ್ಟ್ ಗುರುವಾರ ಒಪ್ಪಿಗೆ ಸೂಚಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್...

ಕೇರಳ | ಮಿತಿಗಿಂತ ಹೆಚ್ಚು ಮದ್ಯ ಸಂಗ್ರಹ ಆರೋಪ : ರಿಪೋರ್ಟರ್ ಟಿವಿ ಎಂಡಿ ಆಂಟೋ ಆಗಸ್ಟಿನ್ ಬಂಧನ

ಕೇರಳ ಅಬಕಾರಿ ಇಲಾಖೆಯು ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಆಂಟೋ ಆಗಸ್ಟಿನ್ ಅವರನ್ನು ಗುರುವಾರ (ಸೆ.17) ಮುಂಜಾನೆ ಬಂಧಿಸಿದೆ. ಎರ್ನಾಕುಲಂನಲ್ಲಿರುವ ಸುದ್ದಿ ವಾಹಿನಿಯ ಕಚೇರಿಯಿಂದ ಮುಂಜಾನೆ ಸುಮಾರು...

ದೆಹಲಿ: ಜಾಮೀನು ಸಿಕ್ಕ ಬೆನ್ನಲ್ಲೇ ಸ್ವತಂತ್ರ ಭಾರದ್ವಾಜ್ ವಿಡಿಯೋ ವೈರಲ್; ಷರತ್ತು ಉಲ್ಲಂಘನೆ ಆರೋಪ!

ಜಂತರ್ ಮಂತರ್‌ನಲ್ಲಿ ದಲಿತ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಜಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಂಧಿತರಾಗಿದ್ದ ಹಿಂದುತ್ವ ಪ್ರಭಾವಿ ಸ್ವತಂತ್ರ ಭಾರದ್ವಾಜ್ ಅವರಿಗೆ ದೆಹಲಿ ನ್ಯಾಯಾಲಯ ಮೂರು ವಾರಗಳ ಮಧ್ಯಂತರ...

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...