Homeಕರೋನಾ ತಲ್ಲಣಒಂದೇ ಕುಟುಂಬದ 16 ಜನರಿಗೆ ಕೊರೊನಾ: ಮನೆಯಲ್ಲಿದ್ದುಕೊಂಡೇ ಎಲ್ಲರೂ ಗುಣಮುಖ

ಒಂದೇ ಕುಟುಂಬದ 16 ಜನರಿಗೆ ಕೊರೊನಾ: ಮನೆಯಲ್ಲಿದ್ದುಕೊಂಡೇ ಎಲ್ಲರೂ ಗುಣಮುಖ

ಈ ಕುಟುಂಬದಲ್ಲಿ ಹತ್ತು ತಿಂಗಳ ಶಿಶು, ಮೂರು ವರ್ಷದ ಒಳಗಿನ ನಾಲ್ಕು ಮಕ್ಕಳು ಮತ್ತು 45 ವರ್ಷ ಮೇಲ್ಪಟ್ಟವರು ಸಹ ಗುಣಮುಖರಾಗಿದ್ದಾರೆ.

- Advertisement -
- Advertisement -

ಕೊರೊನಾ ಎರಡನೇ ಅಲೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಈ ವೇಳೆ ಹುಬ್ಬಳ್ಳಿ ತಾಲೂಕಿನ ಸುಳ್ಳ ಗ್ರಾಮದ ಒಂದೇ ಕುಟುಂಬದ 16 ಜನಕ್ಕೆ ಕೊರೊನಾ ಪಾಸಿಟಿವ್ ಆಗಿದ್ದು, ಹೋಮ್ ಐಸೋಲೇಷನ್‌ಗೆ ಒಳಪಟ್ಟು, ವೈದ್ಯರು ಮತ್ತು ಆಶಾ ಕಾರ್ಯಕರ್ತೆಯರು ಸೂಚಿಸಿದ ಔಷಧಿ ಸೇವಿಸಿ, ಅವರು ಹೇಳಿದ ಗೈಡ್‌ಲೈನ್ಸ್ ಪಾಲಿಸಿ ಕೊರೊನಾದಿಂದ ವಿಮುಕ್ತರಾಗಿದ್ದಾರೆ. ಒಂದನೇ ಅಲೆಯಲ್ಲಿ ಹೀಗೇ ಹಲವು ಕುಟುಂಬಗಳು ಮನೆಯಲ್ಲೇ ಇದ್ದು ಕೊರೊನಾ ಹಿಮ್ಮೆಟ್ಟಿಸಿದ್ದವು.

ಇಲ್ಲಿ ಒಟ್ಟು ಸಾರಾಂಶವೆಂದರೆ, ಈ ಕುಟುಂಬದ ಪಾಸಿಟಿವ್ ಪೀಡಿತ ಸದಸ್ಯರಾರು ಕೋವಿಡ್ ಕೇಂದ್ರಗಳಲ್ಲಿ ದಾಖಲಾಗಲಿಲ್ಲ. ವೈದ್ಯರು ಮತ್ತು ಆಶಾ ಕಾರ್ಯಕರ್ತರ ಸಕಹೆಗಳನ್ನು ಕಟ್ಟಾ ಪಾಲಿಸಿದರು. ಅವರು ಸೂಚಿಸಿದ ಮಾತ್ರೆ ಪಡೆದುಕೊಂಡರು.

ಆದರೆ ಇಲ್ಲಿ ಹತ್ತು ತಿಂಗಳ ಮಗು, 3 ವರ್ಷಕ್ಕಿಂತ ಕಡಿಮೆಯ ಮೂವರು ಮಕ್ಕಳು ಮತ್ತು 45 ದಾಟಿದ ಆದರೆ ಎರಡೂ ಲಸಿಕೆ ಪಡೆದ ಹಿರಿಯರೊಬ್ಬರಿಗೂ ಪಾಸಿಟಿವ್ ಆಗಿತ್ತು. ಈಗ ಎಲ್ಲರೂ ಆರೋಗ್ಯವಾಗಿದ್ದಾರೆ. ಆದರೆ ನಮ್ಮ ವೈದ್ಯರಿಗೆ ಇದು ಒಂದು ಕೇಸ್ ಸ್ಟಡಿಗೆ ಅವಕಾಶ ಒದಗಿಸಿದೆ.
ಏಕೆಂದರೆ, ಕೋವಿಡ್ ಕುರಿತಂತೆ ಇನ್ನೂ ನೂರಾರು ಗೊಂದಲ ಇರುವಾಗ ಈ ಪ್ರಕರಣ ಇಟ್ಟುಕೊಂಡು ಹುಬ್ಬಳ್ಳಿಯ ಕೆಎಂಸಿ (ಕಿಮ್ಸ್) ಕೂಡ ಒಂದು ಕೇಸ್ ಸ್ಟಡಿ ಮಾಡಬಹುದು ಅಲ್ಲವೇ?

ಒಂದಿಷ್ಟು ಪೂರ್ವ ವಿವರ

ಹುಬ್ಬಳ್ಳಿ ತಾಲೂಕಿನ ಸುಳ್ಳ ಗ್ರಾಮದ ಶಿವಳ್ಳಿ ಮಠ ಕುಟುಂಬದ 16 ಸದಸ್ಯರಿಗೆ ಈ ತಿಂಗಳು ಮೊದಲ ವಾರದ ಹೊತ್ತಿಗೆ ಪಾಸಿಟಿವ್ ದೃಢಪಟ್ಟಿತ್ತು. ಕಿಮ್ಸ್‌ನ ಒಬ್ಬ ವೈದ್ಯರು ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯರ ಸಲಹೆ ಮೇರೆಗೆ ಇವರೆಲ್ಲ ಹೋಮ್ ಐಸೋಲೇಷನ್‌ನಲ್ಲಿ ಇದ್ದುಕೊಂಡು ಚೇತರಿಸಿಕೊಂಡಿದ್ದಾರೆ.

ಸುಳ್ಳದ ಈ ಕುಟುಂಬದ ಸದಸ್ಯರಲ್ಲಿ ಒಬ್ಬರಾದ, ಪಾಸಿಟಿವ್‌ಗೆ ಒಳಗಾಗಿ ಈಗ ಗುಣಮುಖರಾದ, ಕಾಲೇಜೊಂದರ ಜರ್ನಲಿಸಂ ವಿಭಾಗದ ಅಧ್ಯಾಪಕರೂ ಆಗಿರುವ ಮಲ್ಲಿಕಾರ್ಜುನ್ ಅವರೊಂದಿಗೆ ನಾನುಗೌರಿ.ಕಾಂ ಮಾತನಾಡಿತು.

‘ವಿಜ್ಞಾನ, ವೈದ್ಯಕೀಯಗಳ ಆಚೆ ನಾವೆಂದೂ ನೋಡಲಿಲ್ಲ. ಎಲ್ಲರಿಗೂ ಮನೆಯಲ್ಲಿ ಧೈರ್ಯ ತುಂಬಿದೆವು. ಯಾವುದೇ ಮೂಢ ವಿಚಾರಗಳನ್ನು ಫಾಲೋ ಮಾಡಲಿಲ್ಲ. ಕಿಮ್ಸ್‌ನ ಹಿರಿಯ ವೈದ್ಯರು, ಇಲ್ಲೇ ಪಕ್ಕದ ಊರಲ್ಲಿರುವ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯರು ಮತ್ತು ಮನೆಗೇ ಬಂದು ಉಪಚಾರ ಮಾಡುವ ಆಶಾ ಕಾರ್ಯಕರ್ತೆಯರ ಸಲಹೆ ಪಾಲಿಸಿದೆವು. ಇಲ್ಲಿ ಆತ್ಮಸ್ಥೈರ್ಯವೇ ಮುಖ್ಯ ಅಷ್ಟೇ. ಒಂದು ಜ್ವರವನ್ನು ವಿಭಿನ್ನವಾಗಿ ಎದುರಿಸಲು ನಮಗೆ ಈಗ ವಿಜ್ಞಾನ ಮತ್ತು ವೈದ್ಯಕೀಯವಷ್ಟೇ ಮಾರ್ಗದರ್ಶಕ ಆಗಬೇಕು’ ಎಂದು ಗುಣಮುಖರಾದ ಮಲ್ಲಿಕಾರ್ಜುನ ನಮಗೆ ತಿಳಿಸಿದರು.

ಈ ಕುಟುಂಬದಲ್ಲಿ ಹತ್ತು ತಿಂಗಳ ಶಿಶು, ಮೂರು ವರ್ಷದ ಒಳಗಿನ ನಾಲ್ಕು ಮಕ್ಕಳು ಸಹ ಗುಣಮುಖರಾಗಿದ್ದಾರೆ. ಇದರಲ್ಲಿ 45 ವರ್ಷ ಮೇಲ್ಪಟ್ಟ 4 ಜನರು ಈ ಮೊದಲೇ ಎರಡನೆ ಡೋಸ್ ಲಸಿಕೆ ಪಡೆದಿದ್ದರು, ಅದರಲ್ಲಿ ಮೂವರಿಗೆ ನೆಗೆಟಿವ್ ರಿಪೋರ್ಟ್ ಬಂದಿತ್ತು. ಆದರೆ, ಎರಡು ಡೋಸ್‌ಗಳ ನಂತರವೂ ಪಾಸಿಟಿವ್ ರಿಪೋರ್ಟ್ ಪಡೆದಿದ್ದ 60 ವರ್ಷದ ಮಹಿಳೆಯಲ್ಲಿ ಯಾವ ಲಕ್ಷಣವೂ ಇರಲಿಲ್ಲ. ಅವರೂ ಈಗ ಗುಣಮುಖರಾಗಿದ್ದಾರೆ.

ಪ್ರಶ್ನೆ ಏನು ಅಂದರೆ ಮಕ್ಕಳಿಗೂ ಕೋವಿಡ್ ಕಾಟ ಶುರುವಾಗಿದೆಯಾ? ಇದು ಮೂರನೇ ಅಲೆಯ ಆರಂಭವೇ? ಎರಡು ಲಸಿಕೆ ಪಡೆದವರು ಇದನ್ನು ಎದುರಿಸಬಲ್ಲರು ಎಂದಾದರೆ, ಯಾಕೆ ತುರ್ತಾಗಿ ಮನೆಮನೆಗೆ ತೆರಳಿ ಲಸಿಕೆ ನೀಡುತ್ತಿಲ್ಲ? ನಮ್ಮ ಪಾಲಿಸಿಯೇ ತಪ್ಪಾಗಿದೆಯೇ?
ಈ ಕುರಿತು ಮಾತನಾಡಿದ ಧಾರವಾಡದ ಸರ್ಕಾರಿ ವೈದ್ಯ ಡಾ. ಸಂತೋಷ್, ‘ರೋಗ ನಿರೋಧಕ ಶಕ್ತಿ ಚೆನ್ನಾಗಿ ಇರುವವರಿಗೆ ಕೊರೊನಾ ತಟ್ಟುವುದು ಅಪರೂಪ. ದಿನವೂ ಹಲವು ರೋಗಿಗಳನ್ನು ನಾನು ಪರೀಕ್ಷೆ ಮಾಡುತ್ತೇನೆ. ಬಹುತೇಕರು ಶ್ರೀಮಂತ ಅಥವಾ ಮಧ್ಯಮ ವರ್ಗದವರೇ. ಇವರು ತುಂಬ ನಾಜೂಕಾದ ಜೀವನಶೈಲಿ ಅಳವಡಿಸಿಕೊಂಡ ಜನರು. ಇವರ ಜೀವನಶೈಲಿಯೇ ಅವರ ಪ್ರತಿರೋಧಕ ಶಕ್ತಿಯನ್ನು ಕಡಿಮೆ ಮಾಡಿದೆ. ಹುಬ್ಬಳ್ಳಿ-ಧಾರವಾಡದಲ್ಲಿ ಎಲ್ಲೋ ಮಲಗಿ ಜೀವನ ಸಾಗಿಸುವ ಭಿಕ್ಷುಕರು ನಮ್ಮ ಆಸ್ಪತ್ರೆಗಳತ್ತ ಬಂದೇ ಇಲ್ಲ. ಅವರು ಕೊರೊನಾಗೆ ಎಕ್ಸ್‌ಪೋಸ್‌ ಆಗಿದ್ದಾರೆ, ಅವರಿಗೆ ಈಗ ಕೊರೊನಾ ತಟ್ಟುವ ಸಂಭವವೂ ಕಡಿಮೆ’ ಎಂದರು.

‘ಈ ವಿಷಯದಲ್ಲಿ ಯಾವುದು ಅಂತಿಮವಲ್ಲವಾದರೂ, ಗಾಬರಿ ಬಿದ್ದು ಆಸ್ಪತ್ರೆ ಸೇರದೇ ಇರುವುದು, ವೈದ್ಯರ ಸಲಹೆ ಪಡೆದು ಮನೆಯಲ್ಲೇ ಐಸೋಲೇಷನ್ ಆಗುವುದು ಮುಖ್ಯ. ಎರಡನೇ ಅಲೆಯಲ್ಲಿ ಆಕ್ಸಿಜನ್ ಮಟ್ಟದ ಸಮಸ್ಯೆ ಬಂದಾಗ ಆಸ್ಪತ್ರೆಯ ಅಗತ್ಯ ಇದೆ. ಆದರೆ, ಯಾವುದಕ್ಕೂ ವೈದ್ಯರ ಸಲಹೆ ಪಡೆದೇ ಎಲ್ಲವನ್ನೂ ನಿಭಾಯಿಸಬೇಕು. ಸುಳ್ಳ ಗ್ರಾಮದ ಕುಟುಂಬ ಅದನ್ನು ಅನುಸರಿಸಿದ ಕಾರಣಕ್ಕೇ ಮನೆಯಲ್ಲೇ ಗುಣಮುಖ ಆಗಿರಬಹುದು’ ಎಂದು ಗದಗಿನ ವೈದ್ಯ ಡಾ. ಎಂ.ಡಿ ಸಾಮುದ್ರಿ ಹೇಳಿದರು.

‘ಕಳೆದ ತಿಂಗಳು 29ರಂದು ಸೋಂಕಿನ ಲಕ್ಷಣಗಳು ಕಾಣಿಸಿಕೊಂಡಾಗ ಕೊರೊನಾ ಟೆಸ್ಟ್ ಮಾಡಿಸಿಕೊಂಡು ಮನೆಯಲ್ಲಿಯೇ ಹೋಮ್ ಐಸೋಲೇಷನ್ ಆಗಿದ್ದೆವು ಹಾಗೂ ಪಾಸಿಟಿವ್ ರಿಪೋರ್ಟ್ ಬಂದಾಗ ಯಾವುದೇ ರೀತಿಯಲ್ಲೂ ಭಯಪಡದೆ ಆತ್ಮಸ್ಥೈರ್ಯದಿಂದ ಇದ್ದೆವು ಹಾಗೂ ಮನೆಯಲ್ಲಿನ ಸದಸ್ಯರಿಗೂ ಧೈರ್ಯ ತುಂಬಿ ವೈದ್ಯರ ಸಲಹೆ ಸೂಚನೆಗಳನ್ನು ತಪ್ಪದೆ ಪಾಲಿಸಿದೆವು’ ಎಂದು ಮನೆಯ ಹಿರಿಯ ಮಲ್ಲಯ್ಯ ಶಿವಳ್ಳಿಮಠ ಹೇಳಿದರು.

ಎಂಬಿಬಿಎಸ್ ವಿದ್ಯಾರ್ಥಿಗಳು ಈ ಬಗ್ಗೆ ಒಂದು ಕೇಸ್ ಸ್ಟಡಿ ಮಾಡಬಹುದು ಅನಿಸುತ್ತೆ.

  • ಪಿ.ಕೆ. ಮಲ್ಲನಗೌಡರ್

ಇದನ್ನೂ ಓದಿ: ಬ್ಲ್ಯಾಕ್ ಫಂಗಸ್ (ಮ್ಯುಕಾರ್ ಮೈಕೋಸಿಸ್ MucorMycosis) ಕುರಿತ ಪ್ರಶ್ನೆಗಳಿಗೆ ವೈದ್ಯರ ಸರಳ ಉತ್ತರಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...