Homeಮುಖಪುಟಬೆಂಗಳೂರು: ಒಂದೇ ಶಾಲೆಯಲ್ಲಿ 60 ವಿದ್ಯಾರ್ಥಿಗಳಿಗೆ ಕೊರೊನಾ ಪಾಸಿಟಿವ್‌‌

ಬೆಂಗಳೂರು: ಒಂದೇ ಶಾಲೆಯಲ್ಲಿ 60 ವಿದ್ಯಾರ್ಥಿಗಳಿಗೆ ಕೊರೊನಾ ಪಾಸಿಟಿವ್‌‌

- Advertisement -
- Advertisement -

ಸುಮಾರು 60 ವಿದ್ಯಾರ್ಥಿಗಳು ಒಂದೇ ಶಾಲೆಯಲ್ಲಿ ಕೋವಿಡ್‌-19 ಸೋಂಕಿಗೆ ಒಳಗಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಎಲ್ಲೆಡೆ ಕೊರೊನಾ ಸೋಂಕು ಇಳಿಮುಖವಾಗುತ್ತಿದ್ದರೆ, ಬೆಂಗಳೂರಿನಲ್ಲಿ ಹೆಚ್ಚಾಗುವ ಸೂಚನೆಗಳು ಕಂಡು ಬರುತ್ತಿವೆ.

ಬೆಂಗಳೂರಿನ ಎಲೆಕ್ಟ್ರಾನಿಕ್‌ಸಿಟಿಯ ರೆಸಿಡೆನ್ಸಿಯಲ್‌ ಶಾಲೆಯಲ್ಲಿ 60 ಮಕ್ಕಳು ಕೋವಿಡ್‌ ಪಾಸಿಟಿವ್‌ ಆಗಿದ್ದಾರೆ. ಅದರಲ್ಲಿ ಒಬ್ಬ ವಿದ್ಯಾರ್ಥಿ ತೀವ್ರ ಜ್ವರದಿಂದ ಬಳಲುತ್ತಿದ್ದು, ಲೇಡಿ ಕರ್ಜನ್‌ ಹಾಗೂ ಬೋರಿಂಗ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮತ್ತೊಬ್ಬ ವಿದ್ಯಾರ್ಥಿ ಹೋಮ್‌ ಕ್ವಾರಂಟೈನ್‌ನಲ್ಲಿದ್ದಾರೆ.

ಚೈತನ್ಯ ವಸತಿ ಶಾಲೆಯ ವಿದ್ಯಾರ್ಥಿಗಳಿಗೆ ಎಸಿಮ್ಟಾಮ್ಯಾಟಿಕ್‌‌ ಇದ್ದ ಕಾರಣ ಶಾಲಾ ಆವರಣದಲ್ಲೇ ಕ್ವಾರಂಟೈನ್‌ ಮಾಡಲಾಗಿದೆ. ಖಾಸಗಿ ಆರೋಗ್ಯ ಸೌಲಭ್ಯಗಳ ಮೂಲಕ ಶಾಲೆಯ ಸಿಬ್ಬಂದಿಯೇ ಮಕ್ಕಳ ಆರೋಗ್ಯ ಸುಧಾರಿಸಲು ಕ್ರಮ ಕೈಗೊಂಡಿದ್ದಾರೆ. ಶಾಲೆ ಸದ್ಯಕ್ಕೆ ಮುಚ್ಚಿದ್ದು, ಅಕ್ಟೋಬರ್‌‌ 20ರಂದು ತೆರೆಯಬಹುದು ಎನ್ನನಲಾಗಿದೆ.

ಸೆಪ್ಟೆಂಬರ್ 5ರಂದು ಶಾಲೆಯ ಹಿರಿಯ ವಿದ್ಯಾರ್ಥಿಗಳಿಗೆ ದೈಹಿಕ ತರಗತಿಗಳನ್ನು ಪುನರಾರಂಭಿಸಲಾಗಿತ್ತು. 22 ಶಿಕ್ಷಕರು, 57 ಸಿಬ್ಬಂದಿ ಲಸಿಕೆ ಹಾಕಿಸಿಕೊಂಡಿದ್ದರು. 485 ವಿದ್ಯಾರ್ಥಿಗಳು ಹಾಜರಾಗಿದ್ದರು. ಸೆಪ್ಟೆಂಬರ್ 26ರಂದು, ಬಳ್ಳಾರಿಯಿಂದ ಬಂದ ಒಬ್ಬ ವಿದ್ಯಾರ್ಥಿನಿಗೆ ಜ್ವರ, ವಾಂತಿ ಮತ್ತು ಅತಿಸಾರದಂತಹ ಲಕ್ಷಣಗಳು ಕಾಣಿಸಿಕೊಳ್ಳಲಾರಂಭಿಸಿದವು. ವಿದ್ಯಾರ್ಥಿನಿಯು ಸೋಂಕಿಗೆ ಒಳಗಾಗಿದ್ದಳು.

ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆಯ ಪ್ರಕಾರ, ರ್‍ಯಾಪಿಡ್ ಆಂಟಿಜನ್‌ ಪರೀಕ್ಷೆ ಮಾಡಿದಾಗ ಸುಮಾರು 27ರಿಂದ 105 ವಿದ್ಯಾರ್ಥಿಗಳು ಸೋಂಕಿಗೆ ತುತ್ತಾಗಿರುವುದು ಕಂಡು ಬಂದಿದೆ.

“ಯಾವುದೇ ಆತಂಕಪಡುವ ಅಗತ್ಯವಿಲ್ಲ. ಅಕ್ಟೋಬರ್‌ 20ರಂದು ಮತ್ತೆ ವಿದ್ಯಾರ್ಥಿಗಳನ್ನು ಮರುಪರೀಕ್ಷೆಗೆ ಒಳಪಡಿಸಲಾಗುವುದು. ಸೋಂಕಿಗೆ ಒಳಗಾಗ ವಿದ್ಯಾರ್ಥಿಗಳಲ್ಲಿ 14 ವಿದ್ಯಾರ್ಥಿಗಳು ತಮಿಳುನಾಡಿನವರಾಗಿದ್ದು, ರಾಜ್ಯದ ವಿವಿಧ ಜಿಲ್ಲೆಗಳಿಂದ ಬಂದಿದ್ದ ವಿದ್ಯಾರ್ಥಿಗಳೂ ಇದ್ದಾರೆ” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜೆ.ಮಂಜುನಾಥ್‌ ತಿಳಿಸಿದ್ದಾರೆ.

 ಇದನ್ನೂ ಓದಿ: ಕೋವಿಡ್‌ ನಿರ್ಬಂಧ ತೆರವು: ದೊಡ್ಡ ಆಲದ ಮರಕ್ಕೆ ಪ್ರವಾಸಿಗರ ದಂಡು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...