Homeಕರೋನಾ ತಲ್ಲಣಪ್ರಯೋಗಾರ್ಥ ಕೊರೊನಾ ಲಸಿಕೆ ತೆಗೆದುಕೊಂಡಿದ್ದ ಹರಿಯಾಣ ಆರೋಗ್ಯ ಸಚಿವನಿಗೆ ಕೊರೊನಾ ಪಾಸಿಟಿವ್!

ಪ್ರಯೋಗಾರ್ಥ ಕೊರೊನಾ ಲಸಿಕೆ ತೆಗೆದುಕೊಂಡಿದ್ದ ಹರಿಯಾಣ ಆರೋಗ್ಯ ಸಚಿವನಿಗೆ ಕೊರೊನಾ ಪಾಸಿಟಿವ್!

ಮೂರನೇ ಹಂತದ ಪ್ರಯೋಗಕ್ಕೆ ಸ್ವಯಂ ಪ್ರೇರಿತರಾಗಿ ಮುಂದಾಗಿರುವ ಹರಿಯಾಣ ಆರೋಗ್ಯ ಸಚಿವ ಅನಿಲ್ ವಿಜ್ ಅವರಿಗೆ ಮೊದಲ ಡೋಸೇಜ್ ಮಾತ್ರ ನೀಡಲಾಗಿದೆ

- Advertisement -
- Advertisement -

ಕೊರೊನಾ ಲಸಿಕೆ ಕೊವಾಕ್ಸಿನ್ ಪ್ರಯೋಗದಲ್ಲಿ ಭಾಗವಹಿಸಿದ್ದ ಹರಿಯಾಣ ಆರೋಗ್ಯ ಸಚಿವ ಅನಿಲ್ ವಿಜ್ ಅವರಿಗೆ ಕೊರೊನಾ ಪಾಸಿಟಿವ್ ಆಗಿದ್ದಾರೆ. ಅವರು ನವೆಂಬರ್ 20 ರಂದು ಕೊರೊನಾ ಲಸಿಕೆ ಕೋವಾಕ್ಸಿನ್ ಪ್ರಯೋಗದಲ್ಲಿ ಭಾಗವಹಿಸಿದ್ದರು.

ಈ ಬಗ್ಗೆ ಟ್ವಿಟ್ಟರ್‌‌ನಲ್ಲಿ ಮಾಹಿತಿ ನೀಡಿರುವ ಅನಿಲ್ ವಿಜ್, ತನ್ನೊಂದಿಗೆ ನಿಕಟ ಸಂಪರ್ಕಕ್ಕೆ ಬಂದವರು ತಮ್ಮನ್ನು ತಾವು ಕೊರೊನಾ ವೈರಸ್ ಪರೀಕ್ಷೆಗೆ ಒಳಪಡುವಂತೆ ಸೂಚಿಸಿದ್ದಾರೆ. ಪ್ರಸ್ತುತ ಅವರು ಅಂಬಾಲಾ ಕ್ಯಾಂಟ್‌ನ ಸಿವಿಲ್ ಆಸ್ಪತ್ರೆಗೆ ದಾಖಲಾಗಿದ್ದೇನೆ ಎಂದು ಅನಿಲ್ ವಿಜ್ ಮಾಹಿತಿ ನೀಡಿದ್ದು, ನವೆಂಬರ್ 20 ರಂದು ಅದೇ ಆಸ್ಪತ್ರೆಯಲ್ಲಿ ಅವರು ಕೋವಾಕ್ಸಿನ್ ವಿಚಾರಣೆಯಲ್ಲಿ ಭಾಗವಹಿಸಿದ್ದರು.

ಇದನ್ನೂ ಓದಿ: ಕೊರೊನಾ ಲಸಿಕೆಯ ಬಳಕೆಗೆ ಅನುಮತಿ ನೀಡಿದ ಬ್ರಿಟನ್! 

ಈ ಬಗ್ಗೆ ಸ್ಪಷ್ಟನೆ ನೀಡಿರುವ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯವು “ಕೋವಾಕ್ಸಿನ್ ಎರಡು ಡೋಸ್ ಆಂಟಿ-ಕೊರೊನಾವೈರಸ್ ಲಸಿಕೆಯಿದ್ದು, ಅದರ ಮೂರನೇ ಹಂತದ ಪ್ರಯೋಗಕ್ಕೆ ಸ್ವಯಂ ಪ್ರೇರಿತರಾಗಿ ಮುಂದಾಗಿರುವ ಹರಿಯಾಣ ಆರೋಗ್ಯ ಸಚಿವ ಅನಿಲ್ ವಿಜ್ ಅವರಿಗೆ ಮೊದಲ ಡೋಸೇಜ್ ಮಾತ್ರ ನೀಡಲಾಗಿದೆ” ಎಂದು ಹೇಳಿದೆ.

ಇದನ್ನೂ ಓದಿ: ಇಡೀ ದೇಶದ ಜನರಿಗೆ ಲಸಿಕೆ ಹಾಕುವುದಾಗಿ ಸರ್ಕಾರ ಎಂದೂ ಹೇಳಿಲ್ಲ: ಉಲ್ಟಾ ಹೊಡೆದ ಆರೋಗ್ಯ ಸಚಿವಾಲಯ

ಈ ಮೊದಲು, ಅನಿಲ್ ವಿಜ್ ಸಂಭಾವ್ಯ ಕೊರೊನಾ ವೈರಸ್ ಲಸಿಕೆ ಕೊವಾಕ್ಸಿನ್‌ಗಾಗಿ ಮೂರನೇ ಹಂತದ ಪ್ರಯೋಗಗಳಲ್ಲಿ ಮೊದಲ ಸ್ವಯಂಸೇವಕರಾಗಲು ಮುಂದಾಗಿದ್ದಾರೆ. ಇದು ಕೊರೊನಾ ವೈರಸ್ ಲಸಿಕೆಗಾಗಿ ಭಾರತದ 3 ನೇ ಹಂತ ಪರಿಣಾಮಕಾರಿತ್ವ ಅಧ್ಯಯನವಾಗಿದೆ ಮತ್ತು ಇದುವರೆಗೆ ನಡೆಸಿದ ಅತಿದೊಡ್ಡ 3 ನೇ  ಹಂತದ  ಪರಿಣಾಮಕಾರಿತ್ವ ಪ್ರಯೋಗವಾಗಿದೆ.

ಘಟನೆಯ ಬಗ್ಗೆ ಕೊವಾಕ್ಸಿನ್ ತಯಾರಕರಾದ ಭಾರತ್ ಬಯೋಟೆಕ್ ಪ್ರತಿಕ್ರಿಯಿಸಿದ್ದು, “ಕೊವಾಕ್ಸಿನ್ ಕ್ಲಿನಿಕಲ್ ಪ್ರಯೋಗಗಳು 2-ಡೋಸ್ ವೇಳಾಪಟ್ಟಿಯನ್ನು ಆಧರಿಸಿವೆ, ಇದನ್ನು 28 ದಿನಗಳ ಅಂತರದಲ್ಲಿ ನೀಡಲಾಗುತ್ತದೆ. 2 ನೇ ಡೋಸ್ ನೀಡಿದ 14 ದಿನಗಳ ನಂತರ ಲಸಿಕೆ ಪರಿಣಾಮಕಾರಿತ್ವವನ್ನು ನಿರ್ಧರಿಸಲಾಗುತ್ತದೆ. ಎರಡೂ ಡೋಸೇಜ್‌ಗಳನ್ನು ಪಡೆದಾಗ ಅದು ಪರಿಣಾಮ ಬೀರುವಂತೆ ಕೋವಾಕ್ಸಿನ್ ಅನ್ನು ರೂಪಿಸಲಾಗಿದೆ” ಎಂದು ಭಾರತ್ ಬಯೋಟೆಕ್ ಹೇಳಿದೆ.

“ಹಂತ 3 ಪ್ರಯೋಗವು ಡಬಲ್-ಬ್ಲೈಂಡ್ ಅಧ್ಯಯನವಾಗಿದ್ದು, ಅಲ್ಲಿ ಸ್ವಯಂಸೇವಕರು ಲಸಿಕೆ ಪಡೆಯುವ 50% ಅವಕಾಶವನ್ನು ಹೊಂದಿರುತ್ತಾರೆ” ಎಂದು ಭಾರತ್ ಬಯೋಟೆಕ್ ಹೇಳಿದೆ.

ಇದನ್ನೂ ಓದಿ: ಲಸಿಕೆ ಬರುವವರೆಗೂ ದೆಹಲಿಯಲ್ಲಿ ಶಾಲೆ ಆರಂಭವಿಲ್ಲ- ಮನೀಶ್ ಸಿಸೋಡಿಯಾ

ಕೊರೊನಾ ವೈರಸ್ ವಿರುದ್ಧದ ಸಂಭಾವ್ಯ ಲಸಿಕೆ ಕೋವಾಕ್ಸಿನ್ ಅನ್ನು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್) ಜೊತೆಗೆ ಭಾರತ್ ಬಯೋಟೆಕ್ ಸ್ಥಳೀಯವಾಗಿ ಅಭಿವೃದ್ಧಿಪಡಿಸುತ್ತಿದೆ.

ಲಸಿಕೆ ತಯಾರಕರು ಈ ಹಂತ 1 ಮತ್ತು 2 ಪ್ರಯೋಗಗಳ ಮಧ್ಯಂತರ ವಿಶ್ಲೇಷಣೆಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ್ದಾರೆ ಮತ್ತು 3 ನೇ ಹಂತದ ಪ್ರಯೋಗಗಳಲ್ಲಿ ಕೆಲಸ ಮಾಡುತ್ತಿದ್ದೇವೆ ಎಂದು ಈ ಹಿಂದೆ ಘೋಷಿಸಿದ್ದರು.

ಇದನ್ನೂ ಓದಿ: ಉಚಿತ ಕೊರೊನಾ ಲಸಿಕೆ ವಿವಾದ: ಬಿಹಾರೇತರ ರಾಜ್ಯದವರು ಬಾಂಗ್ಲಾದೇಶದವರೇ- ಶಿವಸೇನೆ ಪ್ರಶ್ನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...