Homeಕರ್ನಾಟಕಕುರಿಗಾಹಿಗೆ ಕೊರೊನಾ - ಕುರಿಗಳಿಗೆ ಕ್ವಾರಂಟೈನ್! ಪ್ರಾಣಿಗಳಿಗೆ ಕೊರೊನಾ ಬರೋಲ್ಲವೆಂದ ಪಶುವೈದ್ಯ ಇಲಾಖೆ

ಕುರಿಗಾಹಿಗೆ ಕೊರೊನಾ – ಕುರಿಗಳಿಗೆ ಕ್ವಾರಂಟೈನ್! ಪ್ರಾಣಿಗಳಿಗೆ ಕೊರೊನಾ ಬರೋಲ್ಲವೆಂದ ಪಶುವೈದ್ಯ ಇಲಾಖೆ

- Advertisement -
- Advertisement -

ಕುರಿಗಾಹಿಗೆ ಕೊರೊನಾ ಬಂದ ಕಾರಣಕ್ಕೆ ಅವನ 45 ಕುರಿಗಳನ್ನು ಕ್ವಾರಂಟೈನ್ ಮಾಡಿರುವ ಅಪರೂಪದ ಪ್ರಸಂಗ ತುಮಕೂರು ಜಿಲ್ಲೆಯ ಚಿಕ್ಕನಾಯನಕಹಳ್ಳಿ ಗೋಡೆಕೆರೆ ಗೊಲ್ಲರಹಟ್ಟಿಯಲ್ಲಿ ನಡೆದಿದೆ. ಇದು ಅಕ್ಕಪಕ್ಕದ ಗೊಲ್ಲರಹಟ್ಟಿಗಳ ಜನರು ಆತಂಕಗೊಳ್ಳುವಂತೆ ಮಾಡಿದೆ. ಎತ್ತಿಗೆ ಜ್ವರ ಬಂದರೆ ಎಮ್ಮೆಗೆ ಬರೆ ಎಂಬಂತಿದೆ ಈ ಪ್ರಕರಣ. ಅಷ್ಟೇ ಅಲ್ಲದೇ ಸಚಿವ ಮಾಧುಸ್ವಾಮಿಯವರ ಆದೇಶ ಪಾಲನೆಗಾಗಿ ಜಿಲ್ಲಾ ಪಶುವೈದ್ಯ ಇಲಾಖೆಯ ಉಪ ನಿರ್ದೇಶಕರೂ ಗ್ರಾಮಕ್ಕೆ ತೆರಳಿ ಕುರಿಗಳ ಗಂಟಲು ಸ್ರಾವವನ್ನು ಪರೀಕ್ಷೆಗೆ ಕಳಿಸಲಾಗಿದೆ.

ಹೌದು! ಇದೊಂದು ವಿಶೇಷ ಪ್ರಕರಣ. ಗೋಡೆಕೆರೆ ಗೊಲ್ಲರಹಟ್ಟಿಯ ಕುರಿಗಾಹಿ ಯುವಕನಿಗೆ ಕೊರೊನ ಸೋಂಕು ದೃಢಪಟ್ಟು ಆತನನ್ನು ಜಿಲ್ಲಾಸ್ಪತ್ರೆಯ ಐಸೋಲೇಷನ್ ವಾರ್ಡಿನಲ್ಲಿ ಇಡಲಾಗಿದೆ. ಕುರಿಗಾಹಿಗೆ ಸೋಂಕು ಬಂದಮೇಲೆ ಕುರಿಗಳಿಗೂ ಅಂಟಿರಬಹುದೆಂದು ಜಿಲ್ಲಾಕೇಂದ್ರದಲ್ಲಿ ಕುಳಿತು ಸಚಿವರು ಕುರಿಗಳನ್ನು ಕ್ವಾರಂಟೈನ್ ಮಾಡುವಂತೆ ಆದೇಶಿಸಿದ್ದಾರೆ. ಹಾಗಾಗಿ 45 ಕುರಿಗಳನ್ನು ಪ್ರತ್ಯೇಕವಾಗಿ ಕೂಡಿಡಲಾಗಿದೆ.

ಸಚಿವರ ಆದೇಶ ಪಾಲನೆಗಾಗಿ ಜಿಲ್ಲಾ ಪಶುವೈದ್ಯಕೀಯ ಇಲಾಖೆಯ ಉಪನಿರ್ದೇಶಕ ಕೆ.ಜಿ.ನಂದೀಶ್ ತಂಡ ಗೋಡೆಕೆರೆ ಗೊಲ್ಲರಹಟ್ಟಿಗೆ ತೆರಳಿ ಕುರಿಗಳ ತಪಾಸಣೆ ನಡೆಸಿದ್ದಾರೆ. ಕುರಿಗಳ ಗಂಟಲು ಸ್ರಾವವನ್ನು ತೆಗೆದ ಪಶುವೈದ್ಯರ ತಂಡ ಭೂಫಾಲ್ ವೈರಾಲಜಿ ಸೆಂಟರ್ ಗೆ ಕಳಿಸಿಕೊಟ್ಟಿದೆ. ಇದರಿಂದ ಜನರೂ ಕೂಡ ಭೀತಿಗೆ ಒಳಗಾಗಿದ್ದು ಏನಾಗುವುದೋ ಏಂಬ ಆತಂಕ ಮನೆ ಮಾಡಿದೆ.

ನಾನುಗೌರಿ.ಕಾಂ ಜೊತೆ ಮೊಬೈಲ್ ನಲ್ಲಿ ಮಾತನಾಡಿದ ಜಿಲ್ಲಾ ಪಶುವೈದ್ಯಕೀಯ ಇಲಾಖೆಯ ಉಪನಿರ್ದೇಶಕ ಕೆ.ಜಿ.ನಂದೀಶ್ “ಪ್ರಾಣಿಗಳಿಗೆ ಕೊರೊನಾ ಸೋಂಕು ಹರಡುವುದಿಲ್ಲ. ಆದರೆ ನಾಲ್ಕು ಕುರಿಗಳು ಸತ್ತ ಹಿನ್ನೆಲೆಯಲ್ಲಿ ಜನರು ಭೀತರಾಗಿದ್ದರು. ಆದ್ದರಿಂದ ಕುರಿಗಳ ಸ್ರಾವವನ್ನು ಭೋಪಾಲ್ ಕೇಂದ್ರಕ್ಕೆ ಪರೀಕ್ಷೆಗೆ ಕಳಿಸಿದ್ದೇವೆ. ಬೆಂಗಳೂರಿಗೂ ಕಳಿಸಿದ್ದೇವೆ. ಕುರಿಗಳನ್ನು ಪ್ರತ್ಯೇಕವಾಗಿಡಲಾಗಿದೆ. ಸೋಂಕಿತ ಕುರಿಗಾಹಿ ತುಮಕೂರಿನಲ್ಲಿದ್ದರೆ ತಂದೆ ತಾಯಿ ತಾಲೂಕು ಆಸ್ಪತ್ರೆಯಲ್ಲಿ ಕ್ವಾರಂಟೈನಲ್ಲಿದ್ದಾರೆ.

ಸದ್ಯಕ್ಕೆ ಕುರಿ ನೋಡಿಕೊಳ್ಳಲು ಯಾರೂ ಇಲ್ಲ. ಜೊತೆಗೆ ಕುರಿ ಸಾವನ್ನಪ್ಪಿರುವುದರಿಂದ ಬೇರೆ ಪ್ರಾಣಿಗಳಿಗೆ ರೋಗ ಅಂಟಬಾರದು ಎಂಬ ಉದ್ದೇಶದಿಂದ ಕೊರೊನಾ ಸೋಂಕಿತ ವ್ಯಕ್ತಿಯ ಕುರಿಗಳನ್ನು ಪ್ರತ್ಯೇಕವಾಗಿ ಇರಿಸಿದ್ದೇವೆ. ಅದು ಕ್ವಾರಂಟೈನ್ ಅಲ್ಲ. ಜನರು ಕೂಡ ಸುಳ್ಳು ವದಂತಿಗಳಿಗೆ ಕಿವಿಗೊಡಬೇಡಿ ಎಂದು ಮನವಿ ಮಾಡಿದರು.

ಗೋಡೆಕೆರೆ ಗೊಲ್ಲರಹಟ್ಟಿಯಲ್ಲಿ ಕೊರೋನಾ ಸೋಂಕು ದೃಢಪಟ್ಟಿರುವುದು ಮತ್ತು ಕುರಿಗಳನ್ನು ಕ್ವಾರಂಟೈನ್ ಮಾಡುವ ವಿಷಯ ಜನರಲ್ಲಿ ಹಲವು ರೀತಿಯ ಗೊಂದಲ ಹುಟ್ಟುಹಾಕಿದೆ. ಈ ಕುರಿತು ನಾನುಗೌರಿ.ಕಾಂ ಜೊತೆ ಮಾತನಾಡಿದ ಯುವ ಮುಖಂಡ ಸಾಸಲು ಸತೀಶ್, ನಿಜವಾಗಿಯೂ ಕೊರೊನಾ ಸೋಂಕು ಬಂದಿರುವುದೇ ಬೇರೆ ಯುವಕನಿಗೆ. ಕುರಿಗಳು ಆ ಯುವಕನಿಗೆ ಸೇರಿದವಲ್ಲ. ಕುರಿಗಳನ್ನು ಕ್ವಾರಂಟೈನ್ ಮಾಡಿ ಎಂದು ಜಿಲ್ಲಾ ಉಸ್ತುವಾರಿ ಸಚಿವರು ಹೇಳುವ ಮೂಲಕ ಜನರಿಗೆ ತಪ್ಪು ಸಂದೇಶ ಹೋಗುವಂತೆ ಮಾಡಿದ್ದಾರೆ. ಕುರಿ ಮಾಲಿಕರ ಕುಟುಂಬವನ್ನು ಉಳಿದವರು ವಿಲನ್ ಅಂತೆ ನೋಡುವಂತಹ ಪರಿಸ್ಥಿತಿ ಸೃಷ್ಟಿ ಮಾಡಿದ್ದಾರೆ ಸೂಕ್ಷ್ಮ ವಿಚಾರಗಳನ್ನು ದೊಡ್ಡದು ಮಾಡುವ ಬದಲು ಗೊತ್ತಿಲ್ಲದೆ ಬಗೆಹರಿಸಬಹುದಿತ್ತು. ಸ್ಥಳಕ್ಕೆ ಬಂದು ನೋಡದ ಸಚಿವ ಮಾಧುಸ್ವಾಮಿ ಮತ್ತು ಜಿಲ್ಲಾಧಿಕಾರಿಗಳು ಹೀಗೆ ಆದೇಶ ಮಾಡುವುದು ಸರಿಯಾದ ಕ್ರಮವಲ್ಲ ಎಂದು ಬೇಸರ ವ್ಯಕ್ತಪಡಿಸಿದರು.


35,000 ಕ್ಕೂ ಹೆಚ್ಚು ಖಾಸಗಿ ಶಾಲಾ ಶಿಕ್ಷಕರು ವಜಾ: 8 ಅತಿಥಿ ಉಪನ್ಯಾಸಕರ ಆತ್ಮಹತ್ಯೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...