Homeಕರ್ನಾಟಕಕುರಿಗಾಹಿಗೆ ಕೊರೊನಾ - ಕುರಿಗಳಿಗೆ ಕ್ವಾರಂಟೈನ್! ಪ್ರಾಣಿಗಳಿಗೆ ಕೊರೊನಾ ಬರೋಲ್ಲವೆಂದ ಪಶುವೈದ್ಯ ಇಲಾಖೆ

ಕುರಿಗಾಹಿಗೆ ಕೊರೊನಾ – ಕುರಿಗಳಿಗೆ ಕ್ವಾರಂಟೈನ್! ಪ್ರಾಣಿಗಳಿಗೆ ಕೊರೊನಾ ಬರೋಲ್ಲವೆಂದ ಪಶುವೈದ್ಯ ಇಲಾಖೆ

- Advertisement -
- Advertisement -

ಕುರಿಗಾಹಿಗೆ ಕೊರೊನಾ ಬಂದ ಕಾರಣಕ್ಕೆ ಅವನ 45 ಕುರಿಗಳನ್ನು ಕ್ವಾರಂಟೈನ್ ಮಾಡಿರುವ ಅಪರೂಪದ ಪ್ರಸಂಗ ತುಮಕೂರು ಜಿಲ್ಲೆಯ ಚಿಕ್ಕನಾಯನಕಹಳ್ಳಿ ಗೋಡೆಕೆರೆ ಗೊಲ್ಲರಹಟ್ಟಿಯಲ್ಲಿ ನಡೆದಿದೆ. ಇದು ಅಕ್ಕಪಕ್ಕದ ಗೊಲ್ಲರಹಟ್ಟಿಗಳ ಜನರು ಆತಂಕಗೊಳ್ಳುವಂತೆ ಮಾಡಿದೆ. ಎತ್ತಿಗೆ ಜ್ವರ ಬಂದರೆ ಎಮ್ಮೆಗೆ ಬರೆ ಎಂಬಂತಿದೆ ಈ ಪ್ರಕರಣ. ಅಷ್ಟೇ ಅಲ್ಲದೇ ಸಚಿವ ಮಾಧುಸ್ವಾಮಿಯವರ ಆದೇಶ ಪಾಲನೆಗಾಗಿ ಜಿಲ್ಲಾ ಪಶುವೈದ್ಯ ಇಲಾಖೆಯ ಉಪ ನಿರ್ದೇಶಕರೂ ಗ್ರಾಮಕ್ಕೆ ತೆರಳಿ ಕುರಿಗಳ ಗಂಟಲು ಸ್ರಾವವನ್ನು ಪರೀಕ್ಷೆಗೆ ಕಳಿಸಲಾಗಿದೆ.

ಹೌದು! ಇದೊಂದು ವಿಶೇಷ ಪ್ರಕರಣ. ಗೋಡೆಕೆರೆ ಗೊಲ್ಲರಹಟ್ಟಿಯ ಕುರಿಗಾಹಿ ಯುವಕನಿಗೆ ಕೊರೊನ ಸೋಂಕು ದೃಢಪಟ್ಟು ಆತನನ್ನು ಜಿಲ್ಲಾಸ್ಪತ್ರೆಯ ಐಸೋಲೇಷನ್ ವಾರ್ಡಿನಲ್ಲಿ ಇಡಲಾಗಿದೆ. ಕುರಿಗಾಹಿಗೆ ಸೋಂಕು ಬಂದಮೇಲೆ ಕುರಿಗಳಿಗೂ ಅಂಟಿರಬಹುದೆಂದು ಜಿಲ್ಲಾಕೇಂದ್ರದಲ್ಲಿ ಕುಳಿತು ಸಚಿವರು ಕುರಿಗಳನ್ನು ಕ್ವಾರಂಟೈನ್ ಮಾಡುವಂತೆ ಆದೇಶಿಸಿದ್ದಾರೆ. ಹಾಗಾಗಿ 45 ಕುರಿಗಳನ್ನು ಪ್ರತ್ಯೇಕವಾಗಿ ಕೂಡಿಡಲಾಗಿದೆ.

ಸಚಿವರ ಆದೇಶ ಪಾಲನೆಗಾಗಿ ಜಿಲ್ಲಾ ಪಶುವೈದ್ಯಕೀಯ ಇಲಾಖೆಯ ಉಪನಿರ್ದೇಶಕ ಕೆ.ಜಿ.ನಂದೀಶ್ ತಂಡ ಗೋಡೆಕೆರೆ ಗೊಲ್ಲರಹಟ್ಟಿಗೆ ತೆರಳಿ ಕುರಿಗಳ ತಪಾಸಣೆ ನಡೆಸಿದ್ದಾರೆ. ಕುರಿಗಳ ಗಂಟಲು ಸ್ರಾವವನ್ನು ತೆಗೆದ ಪಶುವೈದ್ಯರ ತಂಡ ಭೂಫಾಲ್ ವೈರಾಲಜಿ ಸೆಂಟರ್ ಗೆ ಕಳಿಸಿಕೊಟ್ಟಿದೆ. ಇದರಿಂದ ಜನರೂ ಕೂಡ ಭೀತಿಗೆ ಒಳಗಾಗಿದ್ದು ಏನಾಗುವುದೋ ಏಂಬ ಆತಂಕ ಮನೆ ಮಾಡಿದೆ.

ನಾನುಗೌರಿ.ಕಾಂ ಜೊತೆ ಮೊಬೈಲ್ ನಲ್ಲಿ ಮಾತನಾಡಿದ ಜಿಲ್ಲಾ ಪಶುವೈದ್ಯಕೀಯ ಇಲಾಖೆಯ ಉಪನಿರ್ದೇಶಕ ಕೆ.ಜಿ.ನಂದೀಶ್ “ಪ್ರಾಣಿಗಳಿಗೆ ಕೊರೊನಾ ಸೋಂಕು ಹರಡುವುದಿಲ್ಲ. ಆದರೆ ನಾಲ್ಕು ಕುರಿಗಳು ಸತ್ತ ಹಿನ್ನೆಲೆಯಲ್ಲಿ ಜನರು ಭೀತರಾಗಿದ್ದರು. ಆದ್ದರಿಂದ ಕುರಿಗಳ ಸ್ರಾವವನ್ನು ಭೋಪಾಲ್ ಕೇಂದ್ರಕ್ಕೆ ಪರೀಕ್ಷೆಗೆ ಕಳಿಸಿದ್ದೇವೆ. ಬೆಂಗಳೂರಿಗೂ ಕಳಿಸಿದ್ದೇವೆ. ಕುರಿಗಳನ್ನು ಪ್ರತ್ಯೇಕವಾಗಿಡಲಾಗಿದೆ. ಸೋಂಕಿತ ಕುರಿಗಾಹಿ ತುಮಕೂರಿನಲ್ಲಿದ್ದರೆ ತಂದೆ ತಾಯಿ ತಾಲೂಕು ಆಸ್ಪತ್ರೆಯಲ್ಲಿ ಕ್ವಾರಂಟೈನಲ್ಲಿದ್ದಾರೆ.

ಸದ್ಯಕ್ಕೆ ಕುರಿ ನೋಡಿಕೊಳ್ಳಲು ಯಾರೂ ಇಲ್ಲ. ಜೊತೆಗೆ ಕುರಿ ಸಾವನ್ನಪ್ಪಿರುವುದರಿಂದ ಬೇರೆ ಪ್ರಾಣಿಗಳಿಗೆ ರೋಗ ಅಂಟಬಾರದು ಎಂಬ ಉದ್ದೇಶದಿಂದ ಕೊರೊನಾ ಸೋಂಕಿತ ವ್ಯಕ್ತಿಯ ಕುರಿಗಳನ್ನು ಪ್ರತ್ಯೇಕವಾಗಿ ಇರಿಸಿದ್ದೇವೆ. ಅದು ಕ್ವಾರಂಟೈನ್ ಅಲ್ಲ. ಜನರು ಕೂಡ ಸುಳ್ಳು ವದಂತಿಗಳಿಗೆ ಕಿವಿಗೊಡಬೇಡಿ ಎಂದು ಮನವಿ ಮಾಡಿದರು.

ಗೋಡೆಕೆರೆ ಗೊಲ್ಲರಹಟ್ಟಿಯಲ್ಲಿ ಕೊರೋನಾ ಸೋಂಕು ದೃಢಪಟ್ಟಿರುವುದು ಮತ್ತು ಕುರಿಗಳನ್ನು ಕ್ವಾರಂಟೈನ್ ಮಾಡುವ ವಿಷಯ ಜನರಲ್ಲಿ ಹಲವು ರೀತಿಯ ಗೊಂದಲ ಹುಟ್ಟುಹಾಕಿದೆ. ಈ ಕುರಿತು ನಾನುಗೌರಿ.ಕಾಂ ಜೊತೆ ಮಾತನಾಡಿದ ಯುವ ಮುಖಂಡ ಸಾಸಲು ಸತೀಶ್, ನಿಜವಾಗಿಯೂ ಕೊರೊನಾ ಸೋಂಕು ಬಂದಿರುವುದೇ ಬೇರೆ ಯುವಕನಿಗೆ. ಕುರಿಗಳು ಆ ಯುವಕನಿಗೆ ಸೇರಿದವಲ್ಲ. ಕುರಿಗಳನ್ನು ಕ್ವಾರಂಟೈನ್ ಮಾಡಿ ಎಂದು ಜಿಲ್ಲಾ ಉಸ್ತುವಾರಿ ಸಚಿವರು ಹೇಳುವ ಮೂಲಕ ಜನರಿಗೆ ತಪ್ಪು ಸಂದೇಶ ಹೋಗುವಂತೆ ಮಾಡಿದ್ದಾರೆ. ಕುರಿ ಮಾಲಿಕರ ಕುಟುಂಬವನ್ನು ಉಳಿದವರು ವಿಲನ್ ಅಂತೆ ನೋಡುವಂತಹ ಪರಿಸ್ಥಿತಿ ಸೃಷ್ಟಿ ಮಾಡಿದ್ದಾರೆ ಸೂಕ್ಷ್ಮ ವಿಚಾರಗಳನ್ನು ದೊಡ್ಡದು ಮಾಡುವ ಬದಲು ಗೊತ್ತಿಲ್ಲದೆ ಬಗೆಹರಿಸಬಹುದಿತ್ತು. ಸ್ಥಳಕ್ಕೆ ಬಂದು ನೋಡದ ಸಚಿವ ಮಾಧುಸ್ವಾಮಿ ಮತ್ತು ಜಿಲ್ಲಾಧಿಕಾರಿಗಳು ಹೀಗೆ ಆದೇಶ ಮಾಡುವುದು ಸರಿಯಾದ ಕ್ರಮವಲ್ಲ ಎಂದು ಬೇಸರ ವ್ಯಕ್ತಪಡಿಸಿದರು.


35,000 ಕ್ಕೂ ಹೆಚ್ಚು ಖಾಸಗಿ ಶಾಲಾ ಶಿಕ್ಷಕರು ವಜಾ: 8 ಅತಿಥಿ ಉಪನ್ಯಾಸಕರ ಆತ್ಮಹತ್ಯೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಂಬೈ| ನಿರ್ದೇಶಕ ರೋಹಿತ್ ಶೆಟ್ಟಿ ಮನೆಯ ಹೊರಗೆ 4 ಸುತ್ತು ಗುಂಡು ಹಾರಿಸಿದ ಅಪರಿಚಿತರು

ಶನಿವಾರ ತಡರಾತ್ರಿ, ಬಾಲಿವುಡ್ ನಿರ್ದೇಶಕ ರೋಹಿತ್ ಶೆಟ್ಟಿ ಅವರ ಮುಂಬೈನ ಜುಹು ನಿವಾಸದ ಹೊರಗೆ ನಾಲ್ಕು ಸುತ್ತು ಗುಂಡು ಹಾರಿಸಲಾಗಿದ್ದು, ಘಟನೆಯಲ್ಲಿ ಯಾವುದೇ ಗಾಯಗಳಾಗಿಲ್ಲ ಎಂದು ವರದಿಯಾಗಿದೆ. ಚಿತ್ರ ನಿರ್ಮಾಪಕ-ನಿರ್ದೇಶಕರ ಕಟ್ಟಡದ ಬಳಿ ಅಪರಿಚಿತ...

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...