Homeಕರ್ನಾಟಕಕುರಿಗಾಹಿಗೆ ಕೊರೊನಾ - ಕುರಿಗಳಿಗೆ ಕ್ವಾರಂಟೈನ್! ಪ್ರಾಣಿಗಳಿಗೆ ಕೊರೊನಾ ಬರೋಲ್ಲವೆಂದ ಪಶುವೈದ್ಯ ಇಲಾಖೆ

ಕುರಿಗಾಹಿಗೆ ಕೊರೊನಾ – ಕುರಿಗಳಿಗೆ ಕ್ವಾರಂಟೈನ್! ಪ್ರಾಣಿಗಳಿಗೆ ಕೊರೊನಾ ಬರೋಲ್ಲವೆಂದ ಪಶುವೈದ್ಯ ಇಲಾಖೆ

- Advertisement -
- Advertisement -

ಕುರಿಗಾಹಿಗೆ ಕೊರೊನಾ ಬಂದ ಕಾರಣಕ್ಕೆ ಅವನ 45 ಕುರಿಗಳನ್ನು ಕ್ವಾರಂಟೈನ್ ಮಾಡಿರುವ ಅಪರೂಪದ ಪ್ರಸಂಗ ತುಮಕೂರು ಜಿಲ್ಲೆಯ ಚಿಕ್ಕನಾಯನಕಹಳ್ಳಿ ಗೋಡೆಕೆರೆ ಗೊಲ್ಲರಹಟ್ಟಿಯಲ್ಲಿ ನಡೆದಿದೆ. ಇದು ಅಕ್ಕಪಕ್ಕದ ಗೊಲ್ಲರಹಟ್ಟಿಗಳ ಜನರು ಆತಂಕಗೊಳ್ಳುವಂತೆ ಮಾಡಿದೆ. ಎತ್ತಿಗೆ ಜ್ವರ ಬಂದರೆ ಎಮ್ಮೆಗೆ ಬರೆ ಎಂಬಂತಿದೆ ಈ ಪ್ರಕರಣ. ಅಷ್ಟೇ ಅಲ್ಲದೇ ಸಚಿವ ಮಾಧುಸ್ವಾಮಿಯವರ ಆದೇಶ ಪಾಲನೆಗಾಗಿ ಜಿಲ್ಲಾ ಪಶುವೈದ್ಯ ಇಲಾಖೆಯ ಉಪ ನಿರ್ದೇಶಕರೂ ಗ್ರಾಮಕ್ಕೆ ತೆರಳಿ ಕುರಿಗಳ ಗಂಟಲು ಸ್ರಾವವನ್ನು ಪರೀಕ್ಷೆಗೆ ಕಳಿಸಲಾಗಿದೆ.

ಹೌದು! ಇದೊಂದು ವಿಶೇಷ ಪ್ರಕರಣ. ಗೋಡೆಕೆರೆ ಗೊಲ್ಲರಹಟ್ಟಿಯ ಕುರಿಗಾಹಿ ಯುವಕನಿಗೆ ಕೊರೊನ ಸೋಂಕು ದೃಢಪಟ್ಟು ಆತನನ್ನು ಜಿಲ್ಲಾಸ್ಪತ್ರೆಯ ಐಸೋಲೇಷನ್ ವಾರ್ಡಿನಲ್ಲಿ ಇಡಲಾಗಿದೆ. ಕುರಿಗಾಹಿಗೆ ಸೋಂಕು ಬಂದಮೇಲೆ ಕುರಿಗಳಿಗೂ ಅಂಟಿರಬಹುದೆಂದು ಜಿಲ್ಲಾಕೇಂದ್ರದಲ್ಲಿ ಕುಳಿತು ಸಚಿವರು ಕುರಿಗಳನ್ನು ಕ್ವಾರಂಟೈನ್ ಮಾಡುವಂತೆ ಆದೇಶಿಸಿದ್ದಾರೆ. ಹಾಗಾಗಿ 45 ಕುರಿಗಳನ್ನು ಪ್ರತ್ಯೇಕವಾಗಿ ಕೂಡಿಡಲಾಗಿದೆ.

ಸಚಿವರ ಆದೇಶ ಪಾಲನೆಗಾಗಿ ಜಿಲ್ಲಾ ಪಶುವೈದ್ಯಕೀಯ ಇಲಾಖೆಯ ಉಪನಿರ್ದೇಶಕ ಕೆ.ಜಿ.ನಂದೀಶ್ ತಂಡ ಗೋಡೆಕೆರೆ ಗೊಲ್ಲರಹಟ್ಟಿಗೆ ತೆರಳಿ ಕುರಿಗಳ ತಪಾಸಣೆ ನಡೆಸಿದ್ದಾರೆ. ಕುರಿಗಳ ಗಂಟಲು ಸ್ರಾವವನ್ನು ತೆಗೆದ ಪಶುವೈದ್ಯರ ತಂಡ ಭೂಫಾಲ್ ವೈರಾಲಜಿ ಸೆಂಟರ್ ಗೆ ಕಳಿಸಿಕೊಟ್ಟಿದೆ. ಇದರಿಂದ ಜನರೂ ಕೂಡ ಭೀತಿಗೆ ಒಳಗಾಗಿದ್ದು ಏನಾಗುವುದೋ ಏಂಬ ಆತಂಕ ಮನೆ ಮಾಡಿದೆ.

ನಾನುಗೌರಿ.ಕಾಂ ಜೊತೆ ಮೊಬೈಲ್ ನಲ್ಲಿ ಮಾತನಾಡಿದ ಜಿಲ್ಲಾ ಪಶುವೈದ್ಯಕೀಯ ಇಲಾಖೆಯ ಉಪನಿರ್ದೇಶಕ ಕೆ.ಜಿ.ನಂದೀಶ್ “ಪ್ರಾಣಿಗಳಿಗೆ ಕೊರೊನಾ ಸೋಂಕು ಹರಡುವುದಿಲ್ಲ. ಆದರೆ ನಾಲ್ಕು ಕುರಿಗಳು ಸತ್ತ ಹಿನ್ನೆಲೆಯಲ್ಲಿ ಜನರು ಭೀತರಾಗಿದ್ದರು. ಆದ್ದರಿಂದ ಕುರಿಗಳ ಸ್ರಾವವನ್ನು ಭೋಪಾಲ್ ಕೇಂದ್ರಕ್ಕೆ ಪರೀಕ್ಷೆಗೆ ಕಳಿಸಿದ್ದೇವೆ. ಬೆಂಗಳೂರಿಗೂ ಕಳಿಸಿದ್ದೇವೆ. ಕುರಿಗಳನ್ನು ಪ್ರತ್ಯೇಕವಾಗಿಡಲಾಗಿದೆ. ಸೋಂಕಿತ ಕುರಿಗಾಹಿ ತುಮಕೂರಿನಲ್ಲಿದ್ದರೆ ತಂದೆ ತಾಯಿ ತಾಲೂಕು ಆಸ್ಪತ್ರೆಯಲ್ಲಿ ಕ್ವಾರಂಟೈನಲ್ಲಿದ್ದಾರೆ.

ಸದ್ಯಕ್ಕೆ ಕುರಿ ನೋಡಿಕೊಳ್ಳಲು ಯಾರೂ ಇಲ್ಲ. ಜೊತೆಗೆ ಕುರಿ ಸಾವನ್ನಪ್ಪಿರುವುದರಿಂದ ಬೇರೆ ಪ್ರಾಣಿಗಳಿಗೆ ರೋಗ ಅಂಟಬಾರದು ಎಂಬ ಉದ್ದೇಶದಿಂದ ಕೊರೊನಾ ಸೋಂಕಿತ ವ್ಯಕ್ತಿಯ ಕುರಿಗಳನ್ನು ಪ್ರತ್ಯೇಕವಾಗಿ ಇರಿಸಿದ್ದೇವೆ. ಅದು ಕ್ವಾರಂಟೈನ್ ಅಲ್ಲ. ಜನರು ಕೂಡ ಸುಳ್ಳು ವದಂತಿಗಳಿಗೆ ಕಿವಿಗೊಡಬೇಡಿ ಎಂದು ಮನವಿ ಮಾಡಿದರು.

ಗೋಡೆಕೆರೆ ಗೊಲ್ಲರಹಟ್ಟಿಯಲ್ಲಿ ಕೊರೋನಾ ಸೋಂಕು ದೃಢಪಟ್ಟಿರುವುದು ಮತ್ತು ಕುರಿಗಳನ್ನು ಕ್ವಾರಂಟೈನ್ ಮಾಡುವ ವಿಷಯ ಜನರಲ್ಲಿ ಹಲವು ರೀತಿಯ ಗೊಂದಲ ಹುಟ್ಟುಹಾಕಿದೆ. ಈ ಕುರಿತು ನಾನುಗೌರಿ.ಕಾಂ ಜೊತೆ ಮಾತನಾಡಿದ ಯುವ ಮುಖಂಡ ಸಾಸಲು ಸತೀಶ್, ನಿಜವಾಗಿಯೂ ಕೊರೊನಾ ಸೋಂಕು ಬಂದಿರುವುದೇ ಬೇರೆ ಯುವಕನಿಗೆ. ಕುರಿಗಳು ಆ ಯುವಕನಿಗೆ ಸೇರಿದವಲ್ಲ. ಕುರಿಗಳನ್ನು ಕ್ವಾರಂಟೈನ್ ಮಾಡಿ ಎಂದು ಜಿಲ್ಲಾ ಉಸ್ತುವಾರಿ ಸಚಿವರು ಹೇಳುವ ಮೂಲಕ ಜನರಿಗೆ ತಪ್ಪು ಸಂದೇಶ ಹೋಗುವಂತೆ ಮಾಡಿದ್ದಾರೆ. ಕುರಿ ಮಾಲಿಕರ ಕುಟುಂಬವನ್ನು ಉಳಿದವರು ವಿಲನ್ ಅಂತೆ ನೋಡುವಂತಹ ಪರಿಸ್ಥಿತಿ ಸೃಷ್ಟಿ ಮಾಡಿದ್ದಾರೆ ಸೂಕ್ಷ್ಮ ವಿಚಾರಗಳನ್ನು ದೊಡ್ಡದು ಮಾಡುವ ಬದಲು ಗೊತ್ತಿಲ್ಲದೆ ಬಗೆಹರಿಸಬಹುದಿತ್ತು. ಸ್ಥಳಕ್ಕೆ ಬಂದು ನೋಡದ ಸಚಿವ ಮಾಧುಸ್ವಾಮಿ ಮತ್ತು ಜಿಲ್ಲಾಧಿಕಾರಿಗಳು ಹೀಗೆ ಆದೇಶ ಮಾಡುವುದು ಸರಿಯಾದ ಕ್ರಮವಲ್ಲ ಎಂದು ಬೇಸರ ವ್ಯಕ್ತಪಡಿಸಿದರು.


35,000 ಕ್ಕೂ ಹೆಚ್ಚು ಖಾಸಗಿ ಶಾಲಾ ಶಿಕ್ಷಕರು ವಜಾ: 8 ಅತಿಥಿ ಉಪನ್ಯಾಸಕರ ಆತ್ಮಹತ್ಯೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...