Homeಕರ್ನಾಟಕಕುರಿಗಾಹಿಗೆ ಕೊರೊನಾ - ಕುರಿಗಳಿಗೆ ಕ್ವಾರಂಟೈನ್! ಪ್ರಾಣಿಗಳಿಗೆ ಕೊರೊನಾ ಬರೋಲ್ಲವೆಂದ ಪಶುವೈದ್ಯ ಇಲಾಖೆ

ಕುರಿಗಾಹಿಗೆ ಕೊರೊನಾ – ಕುರಿಗಳಿಗೆ ಕ್ವಾರಂಟೈನ್! ಪ್ರಾಣಿಗಳಿಗೆ ಕೊರೊನಾ ಬರೋಲ್ಲವೆಂದ ಪಶುವೈದ್ಯ ಇಲಾಖೆ

- Advertisement -
- Advertisement -

ಕುರಿಗಾಹಿಗೆ ಕೊರೊನಾ ಬಂದ ಕಾರಣಕ್ಕೆ ಅವನ 45 ಕುರಿಗಳನ್ನು ಕ್ವಾರಂಟೈನ್ ಮಾಡಿರುವ ಅಪರೂಪದ ಪ್ರಸಂಗ ತುಮಕೂರು ಜಿಲ್ಲೆಯ ಚಿಕ್ಕನಾಯನಕಹಳ್ಳಿ ಗೋಡೆಕೆರೆ ಗೊಲ್ಲರಹಟ್ಟಿಯಲ್ಲಿ ನಡೆದಿದೆ. ಇದು ಅಕ್ಕಪಕ್ಕದ ಗೊಲ್ಲರಹಟ್ಟಿಗಳ ಜನರು ಆತಂಕಗೊಳ್ಳುವಂತೆ ಮಾಡಿದೆ. ಎತ್ತಿಗೆ ಜ್ವರ ಬಂದರೆ ಎಮ್ಮೆಗೆ ಬರೆ ಎಂಬಂತಿದೆ ಈ ಪ್ರಕರಣ. ಅಷ್ಟೇ ಅಲ್ಲದೇ ಸಚಿವ ಮಾಧುಸ್ವಾಮಿಯವರ ಆದೇಶ ಪಾಲನೆಗಾಗಿ ಜಿಲ್ಲಾ ಪಶುವೈದ್ಯ ಇಲಾಖೆಯ ಉಪ ನಿರ್ದೇಶಕರೂ ಗ್ರಾಮಕ್ಕೆ ತೆರಳಿ ಕುರಿಗಳ ಗಂಟಲು ಸ್ರಾವವನ್ನು ಪರೀಕ್ಷೆಗೆ ಕಳಿಸಲಾಗಿದೆ.

ಹೌದು! ಇದೊಂದು ವಿಶೇಷ ಪ್ರಕರಣ. ಗೋಡೆಕೆರೆ ಗೊಲ್ಲರಹಟ್ಟಿಯ ಕುರಿಗಾಹಿ ಯುವಕನಿಗೆ ಕೊರೊನ ಸೋಂಕು ದೃಢಪಟ್ಟು ಆತನನ್ನು ಜಿಲ್ಲಾಸ್ಪತ್ರೆಯ ಐಸೋಲೇಷನ್ ವಾರ್ಡಿನಲ್ಲಿ ಇಡಲಾಗಿದೆ. ಕುರಿಗಾಹಿಗೆ ಸೋಂಕು ಬಂದಮೇಲೆ ಕುರಿಗಳಿಗೂ ಅಂಟಿರಬಹುದೆಂದು ಜಿಲ್ಲಾಕೇಂದ್ರದಲ್ಲಿ ಕುಳಿತು ಸಚಿವರು ಕುರಿಗಳನ್ನು ಕ್ವಾರಂಟೈನ್ ಮಾಡುವಂತೆ ಆದೇಶಿಸಿದ್ದಾರೆ. ಹಾಗಾಗಿ 45 ಕುರಿಗಳನ್ನು ಪ್ರತ್ಯೇಕವಾಗಿ ಕೂಡಿಡಲಾಗಿದೆ.

ಸಚಿವರ ಆದೇಶ ಪಾಲನೆಗಾಗಿ ಜಿಲ್ಲಾ ಪಶುವೈದ್ಯಕೀಯ ಇಲಾಖೆಯ ಉಪನಿರ್ದೇಶಕ ಕೆ.ಜಿ.ನಂದೀಶ್ ತಂಡ ಗೋಡೆಕೆರೆ ಗೊಲ್ಲರಹಟ್ಟಿಗೆ ತೆರಳಿ ಕುರಿಗಳ ತಪಾಸಣೆ ನಡೆಸಿದ್ದಾರೆ. ಕುರಿಗಳ ಗಂಟಲು ಸ್ರಾವವನ್ನು ತೆಗೆದ ಪಶುವೈದ್ಯರ ತಂಡ ಭೂಫಾಲ್ ವೈರಾಲಜಿ ಸೆಂಟರ್ ಗೆ ಕಳಿಸಿಕೊಟ್ಟಿದೆ. ಇದರಿಂದ ಜನರೂ ಕೂಡ ಭೀತಿಗೆ ಒಳಗಾಗಿದ್ದು ಏನಾಗುವುದೋ ಏಂಬ ಆತಂಕ ಮನೆ ಮಾಡಿದೆ.

ನಾನುಗೌರಿ.ಕಾಂ ಜೊತೆ ಮೊಬೈಲ್ ನಲ್ಲಿ ಮಾತನಾಡಿದ ಜಿಲ್ಲಾ ಪಶುವೈದ್ಯಕೀಯ ಇಲಾಖೆಯ ಉಪನಿರ್ದೇಶಕ ಕೆ.ಜಿ.ನಂದೀಶ್ “ಪ್ರಾಣಿಗಳಿಗೆ ಕೊರೊನಾ ಸೋಂಕು ಹರಡುವುದಿಲ್ಲ. ಆದರೆ ನಾಲ್ಕು ಕುರಿಗಳು ಸತ್ತ ಹಿನ್ನೆಲೆಯಲ್ಲಿ ಜನರು ಭೀತರಾಗಿದ್ದರು. ಆದ್ದರಿಂದ ಕುರಿಗಳ ಸ್ರಾವವನ್ನು ಭೋಪಾಲ್ ಕೇಂದ್ರಕ್ಕೆ ಪರೀಕ್ಷೆಗೆ ಕಳಿಸಿದ್ದೇವೆ. ಬೆಂಗಳೂರಿಗೂ ಕಳಿಸಿದ್ದೇವೆ. ಕುರಿಗಳನ್ನು ಪ್ರತ್ಯೇಕವಾಗಿಡಲಾಗಿದೆ. ಸೋಂಕಿತ ಕುರಿಗಾಹಿ ತುಮಕೂರಿನಲ್ಲಿದ್ದರೆ ತಂದೆ ತಾಯಿ ತಾಲೂಕು ಆಸ್ಪತ್ರೆಯಲ್ಲಿ ಕ್ವಾರಂಟೈನಲ್ಲಿದ್ದಾರೆ.

ಸದ್ಯಕ್ಕೆ ಕುರಿ ನೋಡಿಕೊಳ್ಳಲು ಯಾರೂ ಇಲ್ಲ. ಜೊತೆಗೆ ಕುರಿ ಸಾವನ್ನಪ್ಪಿರುವುದರಿಂದ ಬೇರೆ ಪ್ರಾಣಿಗಳಿಗೆ ರೋಗ ಅಂಟಬಾರದು ಎಂಬ ಉದ್ದೇಶದಿಂದ ಕೊರೊನಾ ಸೋಂಕಿತ ವ್ಯಕ್ತಿಯ ಕುರಿಗಳನ್ನು ಪ್ರತ್ಯೇಕವಾಗಿ ಇರಿಸಿದ್ದೇವೆ. ಅದು ಕ್ವಾರಂಟೈನ್ ಅಲ್ಲ. ಜನರು ಕೂಡ ಸುಳ್ಳು ವದಂತಿಗಳಿಗೆ ಕಿವಿಗೊಡಬೇಡಿ ಎಂದು ಮನವಿ ಮಾಡಿದರು.

ಗೋಡೆಕೆರೆ ಗೊಲ್ಲರಹಟ್ಟಿಯಲ್ಲಿ ಕೊರೋನಾ ಸೋಂಕು ದೃಢಪಟ್ಟಿರುವುದು ಮತ್ತು ಕುರಿಗಳನ್ನು ಕ್ವಾರಂಟೈನ್ ಮಾಡುವ ವಿಷಯ ಜನರಲ್ಲಿ ಹಲವು ರೀತಿಯ ಗೊಂದಲ ಹುಟ್ಟುಹಾಕಿದೆ. ಈ ಕುರಿತು ನಾನುಗೌರಿ.ಕಾಂ ಜೊತೆ ಮಾತನಾಡಿದ ಯುವ ಮುಖಂಡ ಸಾಸಲು ಸತೀಶ್, ನಿಜವಾಗಿಯೂ ಕೊರೊನಾ ಸೋಂಕು ಬಂದಿರುವುದೇ ಬೇರೆ ಯುವಕನಿಗೆ. ಕುರಿಗಳು ಆ ಯುವಕನಿಗೆ ಸೇರಿದವಲ್ಲ. ಕುರಿಗಳನ್ನು ಕ್ವಾರಂಟೈನ್ ಮಾಡಿ ಎಂದು ಜಿಲ್ಲಾ ಉಸ್ತುವಾರಿ ಸಚಿವರು ಹೇಳುವ ಮೂಲಕ ಜನರಿಗೆ ತಪ್ಪು ಸಂದೇಶ ಹೋಗುವಂತೆ ಮಾಡಿದ್ದಾರೆ. ಕುರಿ ಮಾಲಿಕರ ಕುಟುಂಬವನ್ನು ಉಳಿದವರು ವಿಲನ್ ಅಂತೆ ನೋಡುವಂತಹ ಪರಿಸ್ಥಿತಿ ಸೃಷ್ಟಿ ಮಾಡಿದ್ದಾರೆ ಸೂಕ್ಷ್ಮ ವಿಚಾರಗಳನ್ನು ದೊಡ್ಡದು ಮಾಡುವ ಬದಲು ಗೊತ್ತಿಲ್ಲದೆ ಬಗೆಹರಿಸಬಹುದಿತ್ತು. ಸ್ಥಳಕ್ಕೆ ಬಂದು ನೋಡದ ಸಚಿವ ಮಾಧುಸ್ವಾಮಿ ಮತ್ತು ಜಿಲ್ಲಾಧಿಕಾರಿಗಳು ಹೀಗೆ ಆದೇಶ ಮಾಡುವುದು ಸರಿಯಾದ ಕ್ರಮವಲ್ಲ ಎಂದು ಬೇಸರ ವ್ಯಕ್ತಪಡಿಸಿದರು.


35,000 ಕ್ಕೂ ಹೆಚ್ಚು ಖಾಸಗಿ ಶಾಲಾ ಶಿಕ್ಷಕರು ವಜಾ: 8 ಅತಿಥಿ ಉಪನ್ಯಾಸಕರ ಆತ್ಮಹತ್ಯೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಿಬಿಎಸ್‌ಇ ಹಿಂದಿ ಹೇರಿಕೆಯು ತ್ರಿಭಾಷಾ ಸೂತ್ರ ಜಾರಿಯ ‘ರಹಸ್ಯ ಕಾರ್ಯವಿಧಾನ’: ಸ್ಟಾಲಿನ್ ಆರೋಪ

ಸಿಬಿಎಸ್‌ಇ ಇತ್ತೀಚೆಗೆ ಅನಾವರಣಗೊಳಿಸಿದ ಪಠ್ಯಕ್ರಮ ಚೌಕಟ್ಟಿನ ಕುರಿತು ಮಾತನಾಡಿದ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್, "ಮೂರು ಭಾಷಾ ಸೂತ್ರ ಎಂದು ಕರೆಯಲ್ಪಡುವುದು ವಾಸ್ತವದಲ್ಲಿ ಹಿಂದಿ ಮಾತನಾಡದ ಪ್ರದೇಶಗಳಿಗೆ ಹಿಂದಿ ವಿಸ್ತರಿಸುವ ರಹಸ್ಯ ಕಾರ್ಯವಿಧಾನವಾಗಿದೆ"...

‘ತಿಂದ ಮನೆಗೆ ಕನ್ನ ಹಾಕುವುದು ತರವಲ್ಲ, ನಿಮ್ಮ ಅಧಿಕ ಪ್ರಸಂಗ ಕರ್ನಾಟಕದ ಜನತೆ ಒಪ್ಪುವುದಿಲ್ಲ’ : ರಾಜ್ಯಪಾಲರ ವಿರುದ್ಧ ಕರವೇ ಕಿಡಿ

ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ತೃತೀಯ ಭಾಷೆಗೆ ಗ್ರೇಡಿಂಗ್ ನೀಡುವ ಸರ್ಕಾರದ ನಿರ್ಧಾರವನ್ನು ಮರುಪರಿಶೀಲಿಸುವಂತೆ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ರಾಜ್ಯಾಧ್ಯಕ್ಷ...

‘ತಪ್ಪಾಗಿದೆ’ : ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್‌ ವಿಧೇಯಕದ ಕುರಿತ ಟೀಕೆಗಳನ್ನು ಕೈಬಿಟ್ಟ ರಾಜಸ್ಥಾನ ಹೈಕೋರ್ಟ್

ಟ್ರಾನ್ಸ್‌ಜೆಂಡರ್ ಕಾಯ್ದೆ, 2019ರಲ್ಲಿ ಬದಲಾವಣೆಗಳನ್ನು ತರಲಿರುವ ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ವಿಧೇಯ, 2026ರ ಕುರಿತು ಈ ಹಿಂದೆ ಮಾಡಿದ್ದ ವಿಮರ್ಶಾತ್ಮಕ ಟಿಪ್ಪಣಿಗಳನ್ನು ರಾಜಸ್ಥಾನ ಹೈಕೋರ್ಟ್ ತೆಗೆದುಹಾಕಿದೆ ಎಂದು...

ಯುಸಿಸಿ ಜಾರಿ ನಂತರ ‘ಜನಸಂಖ್ಯಾ ನಿಯಂತ್ರಣ’ ಕಾನೂನಿಗೆ ಮುಂದಾದ ಉತ್ತರಾಖಂಡ ಬಿಜೆಪಿ ಸರ್ಕಾರ

ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತಂದ ನಂತರ, ಉತ್ತರಾಖಂಡ ಸರ್ಕಾರ ಈಗ ಜನಸಂಖ್ಯಾ ನಿಯಂತ್ರಣ ಕಾನೂನನ್ನು ತರುವ ಬಗ್ಗೆ ಯೋಚಿಸುತ್ತಿದೆ ಎಂದು ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಶುಕ್ರವಾರ ಸೂಚಿಸಿದ್ದಾರೆ. ಪ್ರಸ್ತಾವಿತ ಕ್ರಮದ...

ಪಶ್ಚಿಮ ಬಂಗಾಳ| ಟಿಎಂಸಿ ನಾಯಕರ ಭದ್ರತೆಗೆ ಭಾರೀ ಪೊಲೀಸ್ ನಿಯೋಜನೆ; ಇಸಿಐ ಆಕ್ಷೇಪ

ರಾಜ್ಯದ ವಿವಿಧ ಹಂತಗಳಲ್ಲಿ ತೃಣಮೂಲ ಕಾಂಗ್ರೆಸ್ ನಾಯಕರಿಗೆ ವೈಯಕ್ತಿಕ ಭದ್ರತೆ ಒದಗಿಸಲು ಪಶ್ಚಿಮ ಬಂಗಾಳ ಪೊಲೀಸರು ಮತ್ತು ಕೋಲ್ಕತ್ತಾ ಪೊಲೀಸರು ನಿಯೋಜಿಸಿರುವ ಹೆಚ್ಚಿನ ಸಂಖ್ಯೆಯ ಸಿಬ್ಬಂದಿಯನ್ನು ಭಾರತೀಯ ಚುನಾವಣಾ ಆಯೋಗ (ಇಸಿಐ) ಗಂಭೀರವಾಗಿ...

ಅಮೆರಿಕದ ಕದನ ವಿರಾಮ ಪ್ರಸ್ತಾವನೆ ತಿರಸ್ಕರಿಸಿದ ಇರಾನ್ : ಪಶ್ಚಿಮ ಏಷ್ಯಾ ಸಂಘರ್ಷ ಉಲ್ಬಣ

ಅಲ್ಪಾವಧಿಯ ಕದನ ವಿರಾಮಕ್ಕಾಗಿ ಅಮೆರಿಕ ಮುಂದಿಟ್ಟಿದ್ದ ಪ್ರಸ್ತಾವನೆಯನ್ನು ಇರಾನ್ ತಿರಸ್ಕರಿಸಿದೆ ಎಂದು ವರದಿಯಾಗಿದೆ. ಏಪ್ರಿಲ್ 1, 2026ರ ಬುಧವಾರದಂದು ಅಮೆರಿಕವು ಅನಾಮಧೇಯ ಮಧ್ಯಸ್ಥಿಕೆ ರಾಷ್ಟ್ರದ ಮೂಲಕ ಇರಾನ್‌ಗೆ 48 ಗಂಟೆಗಳ ತಾತ್ಕಾಲಿಕ ಕದನ ವಿರಾಮದ ಆಫರ್...

ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನರಿಗೆ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿ

ಹಿರಿಯ ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನ ಹಿರಿಯ ಸಾಧಕರು 2026ನೇ ಸಾಲಿನ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರಾಯಚೂರು ಜಿಲ್ಲೆಯ ಹಿರಿಯ ದಲಿತ ಹೋರಾಟಗಾರ...

ಗಾಜಾ; ಗೊಂಬೆಯೊಂದಿಗೆ ‘ಅಂತ್ಯಕ್ರಿಯೆ’ ಆಟ ಆಡುವ ಎಳೆಯ ಮಕ್ಕಳ ವಿಡಿಯೋ ವೈರಲ್; ಸುತ್ತಲಿನ ಘಟನೆಯನ್ನು ಪುನರಾವರ್ತಿಸುವ ಮಕ್ಕಳು

ಅಕ್ಟೋಬರ್ 2023 ರಲ್ಲಿ ಇಸ್ರೇಲಿ ಮಿಲಿಟರಿ ದಾಳಿಯನ್ನು ಪ್ರಾರಂಭಿಸಿದ ನಂತರ ಗಾಜಾದಿಂದ ದುಃಖಕರ ದೃಶ್ಯಗಳು ಹೊರಹೊಮ್ಮುತ್ತಿವೆ. ಇತ್ತೀಚಿನ ಒಂದು ಘಟನೆಯಲ್ಲಿ, ಚಿಕ್ಕ ಮಕ್ಕಳು ಅಂತ್ಯಕ್ರಿಯೆಗಾಗಿ ಗೊಂಬೆಯನ್ನು ಹೊತ್ತುಕೊಂಡು ಹೋಗುವುದನ್ನು ಕಾಣಬಹುದು - ಇದು ಅವರು...

ದೆಹಲಿ| ಆಳವಾದ ಚರಂಡಿಗೆ ಬಿದ್ದು ನೈರ್ಮಲ್ಯ ಕಾರ್ಮಿಕ ಸಾವು; ನ್ಯಾಯಕ್ಕೆ ಆಗ್ರಹಿಸಿದ ಮೃತನ ಕುಟುಂಬ

ಮಾರ್ಚ್ 30 ರಂದು ಪೂರ್ವ ದೆಹಲಿಯ ದಿಲ್ಶಾದ್ ಗಾರ್ಡನ್ ಪ್ರದೇಶದಲ್ಲಿ ಸುರಕ್ಷತಾ ಸಾಧನಗಳಿಲ್ಲದೆ ಆಳವಾದ ಚರಂಡಿ ಸ್ವಚ್ಛಗೊಳಿಸುವ ಸಮಯದಲ್ಲಿ ಯುವ ನೈರ್ಮಲ್ಯ ಕಾರ್ಮಿಕ ರಾಹುಲ್ ಎಂಬುವವರು ಸಾವನ್ನಪ್ಪಿದ್ದಾರೆ. ಮಧ್ಯಾಹ್ನ 2:00 ರ ಸುಮಾರಿಗೆ...

ನಿವೃತ್ತ ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ ಆಸ್ಪತ್ರೆಗೆ ದಾಖಲು; ಕಾರ್ಯಕ್ರಮದಲ್ಲಿ ಏಕಾಏಕಿ ಕುಸಿದು ಬಿದ್ದು ಅಸ್ವಸ್ಥ

ಬೆಂಗಳೂರು: ಕರ್ನಾಟಕದ ನಿವೃತ್ತ ಲೋಕಾಯುಕ್ತ ಎನ್‌.ಸಂತೋಷ್‌ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಭಾಷಣದ ವೇಳೆ ಕುಸಿದು ಬಿದ್ದು ಅಸ್ವಸ್ಥರಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಏಪ್ರಿಲ್ 4ರ, ಶುಕ್ರವಾರ ಬೆಂಗಳೂರಿನ ಕೊಂಡಜಿ ಬಸಪ್ಪ ಸಭಾಂಗಣದಲ್ಲಿ...