Homeಕರ್ನಾಟಕಕುರಿಗಾಹಿಗೆ ಕೊರೊನಾ - ಕುರಿಗಳಿಗೆ ಕ್ವಾರಂಟೈನ್! ಪ್ರಾಣಿಗಳಿಗೆ ಕೊರೊನಾ ಬರೋಲ್ಲವೆಂದ ಪಶುವೈದ್ಯ ಇಲಾಖೆ

ಕುರಿಗಾಹಿಗೆ ಕೊರೊನಾ – ಕುರಿಗಳಿಗೆ ಕ್ವಾರಂಟೈನ್! ಪ್ರಾಣಿಗಳಿಗೆ ಕೊರೊನಾ ಬರೋಲ್ಲವೆಂದ ಪಶುವೈದ್ಯ ಇಲಾಖೆ

- Advertisement -
- Advertisement -

ಕುರಿಗಾಹಿಗೆ ಕೊರೊನಾ ಬಂದ ಕಾರಣಕ್ಕೆ ಅವನ 45 ಕುರಿಗಳನ್ನು ಕ್ವಾರಂಟೈನ್ ಮಾಡಿರುವ ಅಪರೂಪದ ಪ್ರಸಂಗ ತುಮಕೂರು ಜಿಲ್ಲೆಯ ಚಿಕ್ಕನಾಯನಕಹಳ್ಳಿ ಗೋಡೆಕೆರೆ ಗೊಲ್ಲರಹಟ್ಟಿಯಲ್ಲಿ ನಡೆದಿದೆ. ಇದು ಅಕ್ಕಪಕ್ಕದ ಗೊಲ್ಲರಹಟ್ಟಿಗಳ ಜನರು ಆತಂಕಗೊಳ್ಳುವಂತೆ ಮಾಡಿದೆ. ಎತ್ತಿಗೆ ಜ್ವರ ಬಂದರೆ ಎಮ್ಮೆಗೆ ಬರೆ ಎಂಬಂತಿದೆ ಈ ಪ್ರಕರಣ. ಅಷ್ಟೇ ಅಲ್ಲದೇ ಸಚಿವ ಮಾಧುಸ್ವಾಮಿಯವರ ಆದೇಶ ಪಾಲನೆಗಾಗಿ ಜಿಲ್ಲಾ ಪಶುವೈದ್ಯ ಇಲಾಖೆಯ ಉಪ ನಿರ್ದೇಶಕರೂ ಗ್ರಾಮಕ್ಕೆ ತೆರಳಿ ಕುರಿಗಳ ಗಂಟಲು ಸ್ರಾವವನ್ನು ಪರೀಕ್ಷೆಗೆ ಕಳಿಸಲಾಗಿದೆ.

ಹೌದು! ಇದೊಂದು ವಿಶೇಷ ಪ್ರಕರಣ. ಗೋಡೆಕೆರೆ ಗೊಲ್ಲರಹಟ್ಟಿಯ ಕುರಿಗಾಹಿ ಯುವಕನಿಗೆ ಕೊರೊನ ಸೋಂಕು ದೃಢಪಟ್ಟು ಆತನನ್ನು ಜಿಲ್ಲಾಸ್ಪತ್ರೆಯ ಐಸೋಲೇಷನ್ ವಾರ್ಡಿನಲ್ಲಿ ಇಡಲಾಗಿದೆ. ಕುರಿಗಾಹಿಗೆ ಸೋಂಕು ಬಂದಮೇಲೆ ಕುರಿಗಳಿಗೂ ಅಂಟಿರಬಹುದೆಂದು ಜಿಲ್ಲಾಕೇಂದ್ರದಲ್ಲಿ ಕುಳಿತು ಸಚಿವರು ಕುರಿಗಳನ್ನು ಕ್ವಾರಂಟೈನ್ ಮಾಡುವಂತೆ ಆದೇಶಿಸಿದ್ದಾರೆ. ಹಾಗಾಗಿ 45 ಕುರಿಗಳನ್ನು ಪ್ರತ್ಯೇಕವಾಗಿ ಕೂಡಿಡಲಾಗಿದೆ.

ಸಚಿವರ ಆದೇಶ ಪಾಲನೆಗಾಗಿ ಜಿಲ್ಲಾ ಪಶುವೈದ್ಯಕೀಯ ಇಲಾಖೆಯ ಉಪನಿರ್ದೇಶಕ ಕೆ.ಜಿ.ನಂದೀಶ್ ತಂಡ ಗೋಡೆಕೆರೆ ಗೊಲ್ಲರಹಟ್ಟಿಗೆ ತೆರಳಿ ಕುರಿಗಳ ತಪಾಸಣೆ ನಡೆಸಿದ್ದಾರೆ. ಕುರಿಗಳ ಗಂಟಲು ಸ್ರಾವವನ್ನು ತೆಗೆದ ಪಶುವೈದ್ಯರ ತಂಡ ಭೂಫಾಲ್ ವೈರಾಲಜಿ ಸೆಂಟರ್ ಗೆ ಕಳಿಸಿಕೊಟ್ಟಿದೆ. ಇದರಿಂದ ಜನರೂ ಕೂಡ ಭೀತಿಗೆ ಒಳಗಾಗಿದ್ದು ಏನಾಗುವುದೋ ಏಂಬ ಆತಂಕ ಮನೆ ಮಾಡಿದೆ.

ನಾನುಗೌರಿ.ಕಾಂ ಜೊತೆ ಮೊಬೈಲ್ ನಲ್ಲಿ ಮಾತನಾಡಿದ ಜಿಲ್ಲಾ ಪಶುವೈದ್ಯಕೀಯ ಇಲಾಖೆಯ ಉಪನಿರ್ದೇಶಕ ಕೆ.ಜಿ.ನಂದೀಶ್ “ಪ್ರಾಣಿಗಳಿಗೆ ಕೊರೊನಾ ಸೋಂಕು ಹರಡುವುದಿಲ್ಲ. ಆದರೆ ನಾಲ್ಕು ಕುರಿಗಳು ಸತ್ತ ಹಿನ್ನೆಲೆಯಲ್ಲಿ ಜನರು ಭೀತರಾಗಿದ್ದರು. ಆದ್ದರಿಂದ ಕುರಿಗಳ ಸ್ರಾವವನ್ನು ಭೋಪಾಲ್ ಕೇಂದ್ರಕ್ಕೆ ಪರೀಕ್ಷೆಗೆ ಕಳಿಸಿದ್ದೇವೆ. ಬೆಂಗಳೂರಿಗೂ ಕಳಿಸಿದ್ದೇವೆ. ಕುರಿಗಳನ್ನು ಪ್ರತ್ಯೇಕವಾಗಿಡಲಾಗಿದೆ. ಸೋಂಕಿತ ಕುರಿಗಾಹಿ ತುಮಕೂರಿನಲ್ಲಿದ್ದರೆ ತಂದೆ ತಾಯಿ ತಾಲೂಕು ಆಸ್ಪತ್ರೆಯಲ್ಲಿ ಕ್ವಾರಂಟೈನಲ್ಲಿದ್ದಾರೆ.

ಸದ್ಯಕ್ಕೆ ಕುರಿ ನೋಡಿಕೊಳ್ಳಲು ಯಾರೂ ಇಲ್ಲ. ಜೊತೆಗೆ ಕುರಿ ಸಾವನ್ನಪ್ಪಿರುವುದರಿಂದ ಬೇರೆ ಪ್ರಾಣಿಗಳಿಗೆ ರೋಗ ಅಂಟಬಾರದು ಎಂಬ ಉದ್ದೇಶದಿಂದ ಕೊರೊನಾ ಸೋಂಕಿತ ವ್ಯಕ್ತಿಯ ಕುರಿಗಳನ್ನು ಪ್ರತ್ಯೇಕವಾಗಿ ಇರಿಸಿದ್ದೇವೆ. ಅದು ಕ್ವಾರಂಟೈನ್ ಅಲ್ಲ. ಜನರು ಕೂಡ ಸುಳ್ಳು ವದಂತಿಗಳಿಗೆ ಕಿವಿಗೊಡಬೇಡಿ ಎಂದು ಮನವಿ ಮಾಡಿದರು.

ಗೋಡೆಕೆರೆ ಗೊಲ್ಲರಹಟ್ಟಿಯಲ್ಲಿ ಕೊರೋನಾ ಸೋಂಕು ದೃಢಪಟ್ಟಿರುವುದು ಮತ್ತು ಕುರಿಗಳನ್ನು ಕ್ವಾರಂಟೈನ್ ಮಾಡುವ ವಿಷಯ ಜನರಲ್ಲಿ ಹಲವು ರೀತಿಯ ಗೊಂದಲ ಹುಟ್ಟುಹಾಕಿದೆ. ಈ ಕುರಿತು ನಾನುಗೌರಿ.ಕಾಂ ಜೊತೆ ಮಾತನಾಡಿದ ಯುವ ಮುಖಂಡ ಸಾಸಲು ಸತೀಶ್, ನಿಜವಾಗಿಯೂ ಕೊರೊನಾ ಸೋಂಕು ಬಂದಿರುವುದೇ ಬೇರೆ ಯುವಕನಿಗೆ. ಕುರಿಗಳು ಆ ಯುವಕನಿಗೆ ಸೇರಿದವಲ್ಲ. ಕುರಿಗಳನ್ನು ಕ್ವಾರಂಟೈನ್ ಮಾಡಿ ಎಂದು ಜಿಲ್ಲಾ ಉಸ್ತುವಾರಿ ಸಚಿವರು ಹೇಳುವ ಮೂಲಕ ಜನರಿಗೆ ತಪ್ಪು ಸಂದೇಶ ಹೋಗುವಂತೆ ಮಾಡಿದ್ದಾರೆ. ಕುರಿ ಮಾಲಿಕರ ಕುಟುಂಬವನ್ನು ಉಳಿದವರು ವಿಲನ್ ಅಂತೆ ನೋಡುವಂತಹ ಪರಿಸ್ಥಿತಿ ಸೃಷ್ಟಿ ಮಾಡಿದ್ದಾರೆ ಸೂಕ್ಷ್ಮ ವಿಚಾರಗಳನ್ನು ದೊಡ್ಡದು ಮಾಡುವ ಬದಲು ಗೊತ್ತಿಲ್ಲದೆ ಬಗೆಹರಿಸಬಹುದಿತ್ತು. ಸ್ಥಳಕ್ಕೆ ಬಂದು ನೋಡದ ಸಚಿವ ಮಾಧುಸ್ವಾಮಿ ಮತ್ತು ಜಿಲ್ಲಾಧಿಕಾರಿಗಳು ಹೀಗೆ ಆದೇಶ ಮಾಡುವುದು ಸರಿಯಾದ ಕ್ರಮವಲ್ಲ ಎಂದು ಬೇಸರ ವ್ಯಕ್ತಪಡಿಸಿದರು.


35,000 ಕ್ಕೂ ಹೆಚ್ಚು ಖಾಸಗಿ ಶಾಲಾ ಶಿಕ್ಷಕರು ವಜಾ: 8 ಅತಿಥಿ ಉಪನ್ಯಾಸಕರ ಆತ್ಮಹತ್ಯೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...